ವಿಷಯಕ್ಕೆ ಹೋಗಿ

ಶಕ್ತಿ ಪೀಠವಾಗಿ ಯಾತ್ರಾಸ್ಥಳವಾಗಲಿರುವ ಹುಳಿಯಾರು

ಹುಳಿಯಾರು:ಪಟ್ಟಣದ ಕೋಡಿಪಾಳ್ಯದಲ್ಲಿ ನಿರ್ಮಾಣವಾಗುತ್ತಿರುವ ಜಗನ್ಮಾತೆ ಕಂಕಾಳಿ ಹಾಗೂ ಏಳು ಶಕ್ತಿ ಪೀಠಗಳಲ್ಲಿ ಒಂದಾಗಿರುವ ತುಳುಜಾ ಭವಾನಿ ಮಾತೆಯರ ದೇವಸ್ಥಾನ ಮತ್ತು ೬೧ ಅಡಿಎತ್ತರದ ಭಾರತದಲ್ಲಿಯೇ ಪ್ರಥಮವಾದ ಅನಂತಪದ್ಮನಾಭನ ಮೂರ್ತಿಯು ಮುಕ್ತಾಯ ಹಂತದಲ್ಲಿದ್ದು ಇದರ ಲೋಕಾರ್ಪಣೆಗೆ ರಾಷ್ಟ್ರಪತಿಗಳು ಸೇರಿದಂತೆ ಪ್ರತಿಷ್ಟಿತ ಗಣ್ಯರು ಆಗಮಿಸಲಿದ್ದು ಈ ಸ್ಥಳ ಪವಿತ್ರಾ ಯಾತ್ರಾಸ್ಥಳವಾಗಿ ರೂಪುಗೊಳ್ಳಲಿದೆ ಎಂದು ದೇವಾಲಯದ ಪ್ರಧಾನ ಟ್ರಸ್ಟಿ ಗಂಗಾಧರ ಆಶಯ ವ್ಯಕ್ತಪಡಿಸಿದರು.

        ದೇವಸ್ಥಾನದ ಆವರಣದಲ್ಲಿ ಶುಕ್ರವಾರ ಆಗಮಿಸಿದ ವಿವಿಧ ದೇವರುಗಳ ಬೃಹತ್ ಶಿಲಾಮೂರ್ತಿಗಳ ಜಲಾಧಿವಾಸದ ನಿಮ್ಮಿತ್ತವಾಗಿ ನಡೆದ ಕಾರ್ಯಕ್ರಮದಲ್ಲ್ಲಿ ಮಾತನಾಡಿದ ಅವರು ಮೇ ೩ರಂದು ಪ್ರತಿಷ್ಟಾಪನಾ ಮಹೋತ್ಸವ ಹಮ್ಮಿಕೊಳ್ಳಲಾಗಿದ್ದು ಮನುಕುಲದ ಅಧಿದೇವತೆ ಕಂಕಾಳಿ ಹಾಗು ತುಳುಜಾ ಭವಾನಿ ಮಾತೆಯರನ್ನು ಒಂದೇ ಪೀಠದಲ್ಲಿ ಪ್ರತಿಷ್ಟಾಪಿಸಲಾಗುವುದರ ಜೊತೆಗೆ ಪಿರಮಿಡ್ ಧ್ಯಾನಮಂದಿರ, ಸೇವಾಲಾಲ್ ಸಾಂಸ್ಕೃತಿಕ ಸದನ,ಶ್ರೀ ಮಾತಾ ಯಾತ್ರಿ ನಿವಾಸ,ಬಲಮುರಿ ಗಣಪತಿ ದೇವಸ್ಥಾನ,ಮರಿಯಮ್ಮ ದೇವಿ ದೇವಸ್ಥಾನವನ್ನು ಸಹ ಅಂದು ಲೋಕಾರ್ಪಣೆ ಮಾಡಲಾಗುವುದು ಎಂದರು.
      ಮುಂದುವರಿದು ಮಾತನಾಡಿದ ಅವರು ದೇವಾಲಯಗಳ ಶಿಲಾಮೂರ್ತಿಯನ್ನು ಶಿಲ್ಪಕಲಾಕೃತಿಗಳಿಗೆ ಹೆಸರಾದ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಶಿವಾರಪಟ್ಟಣದ ಶಿಲ್ಪಿಗಳಿಂದಲೇ ಸುಂದರವಾಗಿ ಕೆತ್ತಿಸಲಾಗಿದೆ ಎಂದರು.
      ಇದಕ್ಕೂ ಮುನ್ನ ಲಾರಿಯಲ್ಲಿ ಅಗಮಿಸಿದ ಶಿಲಾಮೂರ್ತಿಗಳನ್ನು ಕ್ರೇನ್ ಮುಖಾಂತರ ಇಳಿಸಿಕೊಳ್ಳಲಾಯಿತು.ಜಗನ್ಮಾತೆ ಕಂಕಾಳಿ ,ತುಳುಜಾ ಭವಾನಿ,ಬಲಮುರಿ ಗಣಪತಿ,ಮರಿಯಮ್ಮ ದೇವಿ,ದ್ವಾರಪಾಲಕಿಯರು,ಅನಂತಪದ್ಮನಾಭ ದೇವರುಗಳ ಮೂರ್ತಿಯನ್ನು ಭಕ್ತರ ಜಯಘೋಷದೊಂದಿಗೆ ಪೂಜೆ ಸಲ್ಲಿಸಲಾಯಿತು. ಧಾರ್ಮಿಕ ಕಾರ್ಯಗಳಲ್ಲಿ ಒಂದಾದ ೪೮ ದಿನಗಳ ಜಲಾಧಿವಾಸಕ್ಕಾಗಿ ಈ ಎಲ್ಲಾ ಮೂರ್ತಿಗಳನ್ನು ಇದಕ್ಕೆಂದೆ ನಿರ್ಮಿಸಲಾದ ತೊಟ್ಟಿಯಲ್ಲಿಟ್ಟು ಅರ್ಚಕ ವೆಂಕಟೇಶ್ ಭಾರದ್ವಾಜ್ ಪೂಜೆ ಸಲ್ಲಿಸಿದ ನಂತರ ಜಲದಲ್ಲಿ ಮುಳುಗಿಸಲಾಯಿತು.

      ಈ ಸಂದರ್ಭದಲ್ಲಿ ಶಿಲ್ಪಿ ನರೇಂದ್ರ ಶರ್ಮ ವಿಶ್ವಕರ್ಮ,ದೇವಾಲಯದ ಟ್ರಸ್ಟ್ ನ ಉಪಾಧ್ಯಕ್ಷ ಜಯರಾಂ ನಾಯಕ್,ಕಾರ್ಯದರ್ಶಿ ಉಮೇಶ್ ನಾಯಕ್, ಬ್ಯಾಂಕ್ ಮರುಳಪ್ಪ, ಹುಳಿಯಾರು ಗ್ರಾಪಂ ಉಪಾಧ್ಯಕ್ಷ ಗಣೇಶ್,ಆರ್ಯವೈಶ್ಯ ಮಂಡಳಿಯ ನಟರಾಜ್ ಗುಪ್ತಾ,ದುರ್ಗಾಪರಮೇಶ್ವರಿ ದೇವಾಲಯದ ಕನ್ವೀನರ್ ಹು.ಕೃ.ವಿಶ್ವನಾಥ್,ಹುಳಿಯಾರಮ್ಮ ದೇವಾಲಯದ ಕಾರ್ಯದರ್ಶಿ ದುರ್ಗಪ್ಪ,ಆಂಜನೇಯ ಸ್ವಾಮಿ ದೇವಾಲಯದ ಅಧ್ಯಕ್ಷ ಟಿ.ಎಸ್.ರಾಮನಾಥ್,ಕಾರ್ಯದರ್ಶಿ ಧನಂಜಯ ಮೂರ್ತಿ,ಹಿಂದೂಜಾಗರಣ ವೇದಿಕೆಯ ಬಡಗಿರಾಮಣ್ಣ, ರೈತಸಂಘದ ಕೆಂಕೆರೆ ಸತೀಶ್,ಕೆಂಕೆರೆ ಗ್ರಾಮಪಂಚಾಯ್ತಿ ಸದಸ್ಯ ನಾಗಣ್ಣ,ಮೀಸೆ ರಂಗಪ್ಪ,ಕೆಇಬಿ ಉಮೇಶ್ ನಾಯ್ಕ್ ಹಾಗೂ ಮೂರ್ತಿ ಮೊದಲಾದವರಿದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...