ವಿಷಯಕ್ಕೆ ಹೋಗಿ

ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಕಾಂಕ್ರೀಟ್ ರಸ್ತೆ ರಸ್ತೆ ನಿರ್ಮಾಣದಲ್ಲಿ ಅವ್ಯವಹಾರ

ಮುಂಚೆಯಿದ್ದ ಕಲ್ಲುಚಪ್ಪಡಿ ಮಾರಿ ಲಕ್ಷಾಂತರ ರೂಪಾಯಿ ಗುಳುಂ:

ಮಾಜಿ ಉಪಾಧ್ಯಕ್ಷ ಸೈಯದ್ ಜಹೀರ್ ಸಾಬ್ ಆರೋಪ

ಹುಳಿಯಾರು:ಪಟ್ಟಣದ ಐದನೇ ಬ್ಲಾಕ್ ಸೇರಿದಂತೆ ಹಲವೆಡೆ ಉದ್ಯೋಗ ಖಾತ್ರಿ ಯೋಜನೆಯಡಿ ಕಲ್ಲು ಪಿಚ್ಚಿಂಗ್ ಆಗಿದ್ದ ರಸ್ತೆಯಲ್ಲಿ ಮಾತ್ರವೇ ಕಾಂಕ್ರೀಟ್ ರಸ್ತೆ ನಿರ್ಮಿಸಿದ್ದು ಅಲ್ಲಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ ಕಲ್ಲುಚಪ್ಪಡಿಗಳನ್ನು ದುರ್ಬಳಕೆ ಮಾಡಿಕೊಂಡಿದ್ದು ಈ ಕೂಡಲೆ ಕಲ್ಲುಚಪ್ಪಡಿಗಳನ್ನು ಪಂಚಾಯ್ತಿ ಆವರಣಕ್ಕೆ ತಂದಿಡಿಸಬೇಕೆಂದು ಮಾಜಿ ಗ್ರಾಮಪಂಚಾಯ್ತಿ ಉಪಾಧ್ಯಕ್ಷ ಸೈಯದ್ ಜಹೀರ್ ಸಾಬ್ ಒತ್ತಾಯಿಸಿದ್ದಾರೆ.

           ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಹತ್ತುಹಲವಾರು ಕಾಮಗಾರಿಗಳು ನಡೆದಿರುವುದಾಗಿ ಕೇವಲ ದಾಖಲೆಯಲ್ಲಿ ಇದೆಯೇ ಹೊರತು ಕಾಮಗಾರಿ ನಡೆದಿರುವ ಕುರುಹುಗಳೇ ಇಲ್ಲಾ.ಸ್ಕೇರ್ಸಿಟಿಯಲ್ಲಿ ಲಕ್ಷಾಂತರ ರೂಪಾಯಿ ಪಂಚಾಯ್ತಿಗೆ ಬಂದಿದೆ.ಅಲ್ಲದೆ ೨೦೧೫-೧೬,೧೬-೧೭ ನೇ ಸಾಲಿನಲ್ಲಿ ೫೦ಲಕ್ಷ ರೂಗಳಿಗೂ ಹೆಚ್ಚು ಅನುದಾನ ಬಿಡುಗಡೆಯಾಗಿದ್ದು ಹಣ ಮಾತ್ರ ಪೂರಾ ಬಳಕೆಯಾಗಿದೆಯೇ ಹೊರತು ಕಾಮಗಾರಿ ಮಾತ್ರ ಕಾಣುತ್ತಿಲ್ಲ.ಹಣದಲ್ಲಿ ಯಾವ ಕಾಮಗಾರಿಗಳು ನಡೆದಿವೆ,ಏನಕ್ಕೆ ಬಳಕೆ ಮಾಡಿದ್ದಾರೆ ಎಂದು ಯಾವೊಬ್ಬ ಅಧಿಕಾರಿಯೂ ಮಾಹಿತಿ ನೀಡುತ್ತಿಲ್ಲ.ಈಬಗ್ಗೆ ತನಿಖೆಯಾಗಬೇಕೆಂದು ಒತ್ತಾಯಿಸಿದರು.
                 4, 5 ನೇ ವಾರ್ಡಿಗೆ ಸಂಬಂಧಿಸಿದಂತೆ ದುರ್ಗಮ್ಮನ ಗುಡಿಬೀದಿ,ಕೇಶವ ಸ್ಕೂಲ್ ಮುಂಭಾಗ,ಚಿಕ್ಕಬಿದರೆ ಕ್ವಾಟ್ರಸ್ ನಲ್ಲಿ ಈ ಹಿಂದೆ ಕಲ್ಲುಪಿಚ್ಚಿಂಗ್ ರಸ್ತೆಯಿದ್ದು ಅದನ್ನು ಕಾಂಕ್ರೀಟ್ ರಸ್ತೆ ಮಾಡಿದ್ದಾರೆ.ಕಲ್ಲುಪಿಚ್ಚಿಂಗ್ ರಸ್ತೆಯಲ್ಲಿ ಹಾಕಲಾಗಿದ್ದ ಚಪ್ಪಡಿಕಲ್ಲು ಅಡಿಗೆ ೫೦ ರೂ ನಂತೆಯಿದ್ದು ಲಕ್ಷಾಂತರ ರೂಪಾಯಿ ಬಾಳುವ ಕಲ್ಲು ಮಾಯವಾಗಿದೆ.ಕೆಲವರು ಸ್ವಂತದ್ದೆಂಬಂತೆ ಕಲ್ಲನ್ನು ಮಾರಾಟ ಮಾಡಿದ್ದು ಇದರ ಬಗ್ಗೆ ತನಿಖೆಯಾಗಬೇಕೆಂದರು.
          ಕಾಮಗಾರಿ ಪರಿಶೀಲಿಸದೆ ಹಣ ಬಿಡುಗಡೆ ಮಾಡಿರುವ ಪಿಡಿಓ ಹಾಗೂ ಅಧ್ಯಕ್ಷರು ಇದಕ್ಕೆ ಹೊಣೆಯಾಗಿದ್ದು ಕೂಡಲೇ ಖಾತ್ರಿ ಯೋಜನೆಯ ಹಣ ತಡೆಹಿಡಿಯಬೇಕೆಂದರು.
        ಪಿಡಿಓ ಕೇಳಿದರೆ ನನ್ನ ಗಮನಕ್ಕೆ ಬಂದಿಲ್ಲ,ಪರಿಶೀಲಿಸಿ ಆ ಕಲ್ಲುಗಳನ್ನು ತರಿಸುವೆ ಎಂದು ಹೇಳಿ ಕಾಲಹರಣ ಮಾಡುತ್ತಿದ್ದಾರೆ.ಸಂಬಂಧಪಟ್ಟ ಇಂಜಿನೀಯರ್ ಕೂಡ ಈ ಬಗ್ಗೆ ಮೌನವಹಿಸಿದ್ದು ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ಈ ಬಗ್ಗೆ ದೂರು ಸಲ್ಲಿಸಿರುವುದಾಗಿ ಹೇಳಿದರು.
-----------------
ಪಂಚಾಯ್ತಿ ಸ್ವತ್ತು ಸಾರ್ವಜನಿಕರ ಸ್ವತ್ತಾಗಿದ್ದು ಪಂಚಾಯ್ತಿಯಲ್ಲಿ ಪ್ರತಿಯೊಂದು ಕಾಮಗಾರಿಯ ಬಗ್ಗೆ ವಿವರವಾದ ರೆಸಲ್ಯೂಷನ್ ಆಗಿರಬೇಕು.ಕಾಮಗಾರಿ ನಡೆದಿರುವ ಬಗ್ಗೆ ಇಂಜಿನೀಯರ್ ಸ್ಥಳ ತನಿಖೆ ಮಾಡಬೇಕು,ಕಾಮಗಾರಿಯ ಗುಣಮಟ್ಟ ಪರೀಕ್ಷಿಸಬೇಕು.ಆದರೆ ಇಲ್ಲಿ ಇಂಜಿನೀಯರ್ ಬಾರದೆ,ಪರಿಶೀಲನೆ ನಡೆಸದೆ,ಹಳೆಯ ವಸ್ತುಗಳು ಏನಾದವೆಂದು ನೋಡದೆ,ಹಣ ಬಿಡುಗಡೆ ಮಾಡಲಾಗಿದೆ.ಈ ಕೂಡಲೇ ಉದ್ಯೋಗ ಖಾತ್ರಿಯ ಕೂಲಿ ಹಣವನ್ನು ತಡೆಹಿಡಿಯಬೇಕು.ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು.

------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...