ವಿಷಯಕ್ಕೆ ಹೋಗಿ

ಯಳನಾಡು ಗ್ರಾಮಪಂಚಾಯ್ತಿಯಲ್ಲಿ ನಿಯಮ ಗಾಳಿಗೆ ತೂರಿ ಗ್ರಾಮ ಸಭೆ

ಗ್ರಾಮ ಸಭೆ ರದ್ದು ಮಾಡಿ ಮತ್ತೊಂದು ಸಭೆ ಕರೆಯಲು ನೋಡಲ್ ಅಧಿಕಾರಿ ಸೂಚನೆ
--------------------------------
ಹುಳಿಯಾರು : ಗ್ರಾಮಸಭೆಯ ನಿಯಮಗಳನ್ನು ಪಾಲಿಸದೆ ಬೇಕಾಬಿಟ್ಟಿಯಾಗಿ ನಡೆಯುತ್ತಿದ್ದ ಗ್ರಾಮ ಸಭೆಗೆ ಲಂಚಮುಕ್ತ ವೇದಿಕೆಯ ಕಾರ್ಯಕರ್ತರ ಪ್ರವೇಶಿಸಿ ಪ್ರಶ್ನೆಮಾಡಿದ್ದರಿಂದ ತಬ್ಬಿಬ್ಬಾದ ಅಧಿಕಾರಿಗಳು ಸಭೆಯನ್ನೆ ರದ್ದು ಮಾಡಿ ಮತ್ತೊಂದು ದಿನಕ್ಕೆ ಮುಂದೂಡಿದ ಘಟನೆ ಹುಳಿಯಾರು ಹೋಬಳಿಯ ಯಳನಾಡು ಗ್ರಾಪಂನಲ್ಲಿ ಜರುಗಿದೆ.
ಹುಳಿಯಾರು ಹೋಬಳಿಯ ಯಳನಾಡುವಿನಲ್ಲಿ ನಿಯಮ ಪಾಲಿಸದೆ ನಡೆಯುತ್ತಿದ್ದ ಗ್ರಾಮಸಭೆ ಬಗ್ಗೆ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಸದಸ್ಯರು ಪ್ರಶ್ನಿಸಿದ್ದರಿಂದ ಗ್ರಾಮಸಭೆಯನ್ನು ಅರ್ಧಕ್ಕೆ ರದ್ದುಪಡಿಸಿ ಮುಂದೂಡಲಾಯಿತು.
           ಯಳನಾಡು ಗ್ರಾಮ ಪಂಚಾಯ್ತಿಯಿಂದ ಉದ್ಯೋಗಖಾತ್ರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನ ಸಭೆಯನ್ನು ಕಛೇರಿ ಆವರಣದಲ್ಲಿ ಕರೆಯಲಾಗಿತ್ತು. ಆದರೆ ಗ್ರಾಮ ಸಭೆಯ ಕನಿಷ್ಠ ನಿಯಮಗಳನ್ನು ಪಾಲಿಸಲು ಮುಂದಾಗದೆ ಕೇವಲ ದಾಖಲೆಗಷ್ಟೆ ಎನ್ನುವಂತೆ ಸಭೆ ನಡೆಸುತ್ತಿದ್ದರು. ನೆರೆದಿದ್ದ ಸಾರ್ವಜನಿಕರೂ ಸಹ ಮರುಪ್ರಶ್ನೆ ಕೇಳದೆ ಅಧಿಕಾರಿಗಳು ಹೇಳಿದ್ದನ್ನೇ ಕೇಳುತ್ತ ಮೂಕ ಪ್ರೇಕ್ಷಕರಾಗಿ ಕುಳಿತಿದ್ದರು. ಇದಕ್ಕೂ ಮೀರಿ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಮುಂಚೆಯೇ ಅನುಮೋದನೆ ಪುಸ್ತಕಕ್ಕೆ ಸಾರ್ವಜನಿಕರ ಸಹಿ ಸಂಗ್ರಹಿಸುತ್ತಿದ್ದರು.
          ಇಲ್ಲಿನ ಭ್ರಷ್ಟಾಚಾರದ ಬಗ್ಗೆ ಅರಿತಿದ್ದ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಜಿಲ್ಲಾ ಸಂಘಟಕ ತಮ್ಮಡಿಹಳ್ಳಿ ಮಲ್ಲಿಕಾರ್ಜುನ್ ನೇತೃತ್ವದ ಲಂಚ ಮುಕ್ತ ವೇದಿಕೆಯ ಕಾರ್ಯಕರ್ತರು ಗ್ರಾಮ ಸಭೆ ಪ್ರವೇಶಿಸಿ ಅಲ್ಲಿನ ಆಗುಹೋಗುಗಳ ಬಗ್ಗೆ ಪ್ರಶ್ನಿಸಿದರು.ಸಾರ್ವಜನಿಕರಿಗೆ ಸರಿಯಾಗಿ ಮಾಹಿತಿ ನೀಡದೆ ಗ್ರಾಮ ಸಭೆ ನಡೆಸುತ್ತಿದ್ದರ ಔಚಿತ್ಯದ ಬಗ್ಗೆ ಪ್ರಶ್ನಿಸಿದರು.ಇದೇ ವಿಚಾರವಾಗಿ ಈ ಹಿಂದೆಯೇ ಸಾಕಷ್ಠು ವಿವಾದಳಿಗೆ ಕಾರಣವಾಗಿದ್ದ ಉದ್ಯೋಗ ಖಾತ್ರಿ ಯೋಜನೆಯ ಸಾಮಾಜಿಕ ಲೆಖ್ಖ ಪರಿಶೋದನಾ ವರದಿಯನ್ನು ಗ್ರಾಮ ಸಭೆಯಲ್ಲಿ ನಿಯಮಾನುಸಾರ 7 ದಿನಗಳ ಮುಂಚೆ ಮಾಹಿತಿ ನೀಡದೇ ,ಸಂಬಧಿಸಿದ ಯಾವುದೇ ಇಲಾಖೆಗಳ ಅಧಿಕಾರಿಗಳಿಗೂ ಮಾಹಿತಿಯನ್ನೂ ನೀಡದೇ ಆರಂಭಿಸಿರುವುದನ್ನು ವೇದಿಕೆಯ ಸದಸ್ಯರು ತೀವ್ರವಾಗಿ ಖಂಡಿಸಿದರು. ಯೋಜನೆಯ ಮಾಹಿತಿ ಬಗ್ಗೆ ಸಾರ್ವಜನಿಕರನ್ನು ಕತ್ತಲಲ್ಲಿಟ್ಟು ಗ್ರಾಮ ಸಭೆ ನಡೆಸ ಹೊರಟಿರುವುದು ಸರಿಯಲ್ಲವೆಂದು ಖಂಡಿಸಿದರು.
.   ವೇದಿಕೆಯಲ್ಲಿದ್ದ ಅಧಿಕಾರಿಗಳಿಗೆ ತಾವೇ ಸರ್ಕಾರಿ ಅಧಿಕಾರಿಗಳು ಎನ್ನುವುದಕ್ಕೆ ಗುರುತಿನ ಪತ್ರ ತೋರಿಸಿ ಎಂದು ಅಧಿಕಾರಿಗಳ ಲೋಪದೋಷಗಳನ್ನು ಎತ್ತಿಹಿಡಿದು ಅಧಿಕಾರಿಗಳಿಗೆ ಬೆವರಿಳಿಸಿದರು.ಗ್ರಾಮ ಸಭೆಯ ವಿಚಾರವಾಗಿ ಸಾರ್ವಜನಿಕರಿಗೆ ಪ್ರಚಾರ ಮಾಡಲೋಸುಗ ಹೊರಡಿಸಿರುವ ಕರಪತ್ರ ಕೊಡಿ ಎಂದರು.
          ಇದು ಎನ್‌ಆರ್‌ಇಜಿ ಗ್ರಾಮ ಸಭೆ ಆಗಿರುವುದರಿಂದ ತೋಟಗಾರಿಕೆ, ಅರಣ್ಯ, ಕೃಷಿ ಹೀಗೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಬೇಕಿದ್ದು ಯಾರೊಬ್ಬರೂ ಬಾರದಿದ್ದ ಮೇಲೆ ಗ್ರಾಮಸ್ಥರಿಗೆ ಮಾಹಿತಿ ಕೊಡುವವರು ಯಾರು ಪ್ರಶ್ನಿಸಿದರು. ಒಂದು ವಾರದ ಮುಂಚೆ ನೋಟೀಸ್ ನೀಡಬೇಕಿದ್ದರೂ ಸದಸ್ಯರಿಗೆ ಎರಡು ದಿನಗಳ ಹಿಂದಷ್ಟೆ ನೀಡಿದ್ದೀರಿ. ಇನ್ನೂ ಶುದ್ಧ ಕುಡಿಯುವ ನೀರು, ಕೂಲಿಕಾರರಿಗೆ ಆಹ್ವಾನ ಪತ್ರಿಕೆ, ಕಾಮಗಾರಿಯ ಲೋಪದೋಷ, ದಂಡ ವಸೂಲಿ ವಿವರ ಹೀಗೆ ಯಾವುದೂ ಇಲ್ಲದೆ ಗ್ರಾಮ ಸಭೆ ಮಾಡುವುದು ಸರಿಯೆ ಎಂದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.
         ಕೊನೆಗೆ ಗ್ರಾಮ ಸಭೆಯನ್ನು ರದ್ದು ಮಾಡಿ ಮುಂದಿನ ಗ್ರಾಮ ಸಭೆಯನ್ನು ಮಾ.೯ ಕ್ಕೆ ನಿಗದಿಮಾಡಿ ಅಷ್ಟರಲ್ಲಿ ಎಲ್ಲಾ ಅಧಿಕಾರಿಗಳನ್ನೂ ಆಹ್ವಾನಿಸಿ, ಕರಪತ್ರ ಹಾಗೂ ಪತ್ರಿಕಾ ಪ್ರಕಟಣೆ ಮೂಲಕ ಒಂದು ವಾರದ ಮುಂಚೆ ಮಾಹಿತಿ ಕೊಟ್ಟು ಎಲ್ಲಾ ದಾಖಲಾತಿ ಸಹಿತ ಸಭೆ ಮಾಡತಕ್ಕದೆಂದು ನೋಡಲ್ ಅಧಿಕಾರಿಗಳಾಗಿ ಆಗಮಿಸಿದ್ದ ಸಿಡಿಪಿಓ ತಿಮ್ಮಯ್ಯ ಆದೇಶಿಸಿದರು.

        ಗ್ರಾ.ಪಂ. ಅಧ್ಯಕ್ಷ ಬಸವರಾಜು, ಉಪಾಧ್ಯಕ್ಷೆ ಶ್ವೇತಾ, ಪಿಡಿಓ ರೇವಣ್ಣ, ಉದ್ಯೋಗಖಾತ್ರಿ ಯೋಜನೆಯ ಸಂಯೋಜಕಿ ಹೇಮಾವತಿ ಹಾಗೂ ಗ್ರಾಪಂ ಸದಸ್ಯರುಗಳು ಸೇರಿದಂತೆ ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಹಿರಿಯೂರು ತಾಲ್ಲೋಕು ಘಟಕ ಉಮೇಶ್, ಮೈಸೂರು ಜಿಲ್ಲಾ ಘಟಕದ ರಾಮೇಗೌಡರು ಹಾಗೂ ರಾಜ್ಯಸಮಿತಿ ಸದಸ್ಯರಾದ ಉದಯಸಿಂಹ ಮತ್ತು ನರಸಿಂಹಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.