ವಿಷಯಕ್ಕೆ ಹೋಗಿ

ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ನೌಕರರಿಗೆ ಪಗಾರವಿಲ್ಲದೆ ಕಂಗಾಲು

       ಜಿಲ್ಲೆಯಲ್ಲಿಯೇ ಅತಿದೊಡ್ದ ಪಂಚಾಯ್ತಿಯೆಂಬ ಹೆಗ್ಗಳಿಕೆ ಹೊಂದಿರುವ ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಸಂಬಳ ಕೊಟ್ಟು ಮೂರು ತಿಂಗಳಾಗಿದ್ದು ವರ್ಷಾವಧಿ ಹಬ್ಬ ಯುಗಾದಿ ಕೆಲವೇದಿನ ಉಳಿದಿದ್ದು ಪಗಾರವಿಲ್ಲದೆ ಹಬ್ಬ ಆಚರಣೆ ಹೇಗೆಂಬ ಆತಂಕ ಅವರಲ್ಲಿ ಮನೆಮಾಡಿದೆ.
ಹುಳಿಯಾರು ಗ್ರಾಮ ಪಂಚಾಯ್ತಿ 
      ೩೯ ಮಂದಿ ಸದಸ್ಯರನ್ನು ಹೊಂದಿರುವ ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಸರಿಸುಮಾರು ೪೩ ಮಂದಿ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ.ಬಿಲ್ ಕಲೆಕ್ಟರ್,ವಾಟರ್ ಮೆನ್ ,ಎಲೆಕ್ಟ್ರೀಷಿಯನ್, ಜವಾನರು,ಕಂಪ್ಯೂಟರ್ ಆಪರೇಟರ್,ಪೌರ ಕಾರ್ಮಿಕರು ಹೀಗೆ ಹಲವು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಪ್ರತಿತಿಂಗಳು ಸಂಬಳ ಅನ್ನುವುದು ಮರೀಚಿಕೆಯಾಗಿದ್ದು ಮೂರ್ನಾಲ್ಕು ತಿಗಳಿಗೊಮ್ಮೆ ಸಂಬಳ ಪಾವತಿಸುವುದು ರೂಢಿಯಲ್ಲಿದೆ.
      ಅದುಕೂಡ ಯಾವುದಾದರೂ ಅನುದಾನದಲ್ಲಿ ಹಣ ಬಿಡುಗಡೆಯಾದಲ್ಲಿ ಮಾತ್ರ.ಇಲ್ಲದಿದ್ದಲ್ಲಿ ಇವರುಗಳು ಕರ ವಸೂಲಿ ಮಾಡಿಕೊಂಡೆ ಸಂಬಳ ಪಡೆಯಬೇಕಾಗಿದ್ದು ಸಂಗ್ರಹವಾಗುವ ವಸೂಲಾತಿಗೂ ಪಾವತಿಸಬೇಕಾದ ಸಂಬಳಕ್ಕೂ ಅಜಗಜಾಂತರ ವ್ಯತ್ಯಾಸವಾಗಿ ಕೆಲವರಿಗಷ್ಟೆ ಸಂಬಳ ಸಿಕ್ಕರೆ ಇನ್ನುಳಿದವರಿಗೆ ಮತ್ತೆ ಮುಂದಿನ ತಿಂಗಳೆ ಗಟ್ಟಿ ಎನ್ನುವ ಪರಿಸ್ಥಿತಿ ಇದೆ.
         ಸದ್ಯ ಅಲ್ಪ ಸಂಬಳಕ್ಕೆ ಕೆಲಸ ಮಾಡುತ್ತಿರುವ ಇವರುಗಳಿಗೆ ನಿಗದಿತ ದಿನದಂದು ಹಣ ಪಾವತಿಯಾಗದೆ ಸಂಸಾರ ನಿರ್ವಹಿಸುವುದೇ ದುಸ್ತರವಾಗಿದೆ.ತಿಂಗಳಿಗೊಮ್ಮೆ ರೇಷನ್,ಹಾಲಿಗೆ, ಪೇಪರಿಗೆ,ಓಡಾಡಲು ಪೆಟ್ರೋಲಿಗೆ ಹೀಗೆ ಅವಶ್ಯ ಖರ್ಚುಗಳಿಗೂ ಹಣವಿಲ್ಲದೆ ಕೊಡುವವರಿಗೆ ಸಬೂಬು ಹೇಳುವಂತಾಗಿದೆ.ಗಟ್ಟಿಯಾಗಿ ಕೇಳಿದಲ್ಲಿ ನೌಕರಿಗೆಲ್ಲಿ ಕುತ್ತು ಬರುತ್ತದೋ ಎಂಬ ಭಯದ ವಾತವರಣದಿಂದ ಮೌನವಾಗಿ ಅನುಭವಿಸುತ್ತಿದ್ದಾರೆ.
      ಸಧ್ಯ ಬರಗಾಲ ಪರಿಸ್ಥಿತಿಯಲ್ಲಿ ಎಲ್ಲರಿಗೂ ಹಣಹೊಂಚುವುದೆ ದುಸ್ತರವಾಗಿದ್ದು ಇದೀಗ ಕರ ವಸೂಲಾತಿ ಮಾಡಿಯೇ ಸಂಬಳ ಪಡೆದುಕೊಳ್ಳಿ ಎಂದು ಅಧ್ಯಕ್ಷರು ಸೂಚಿಸಿರುವುದು ಇವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
       ಬೆಳಗ್ಗಿನಿಂದ ಕಚೇರಿ ಕೆಲಸ ಮಾಡಿ ನಂತರ ವಸೂಲಾತಿಗೆ ಹೊರಟಲ್ಲಿ ಮನೆಗಳಲ್ಲಿ ಯಾರು ಸಿಗುವುದಿಲ್ಲ.ಸಿಕ್ಕರೂ ಸಹ ಸರಿಯಾಗಿ ನೀರೇ ಬಿಡುವುದಿಲ್ಲ,ವಸೂಲಿಗೆ ಬಂದಿದ್ದೀರಾ ಎಂದು ಹರಿಹಾಯ್ದು ವಾಪಸ್ಸು ಕಳುಹಿಸುತ್ತಾರೆ.ತಿಂಗಳೆಲ್ಲಾ ಕಷ್ಟಬಿದ್ದು ವಸೂಲಿ ಮಾಡಿದರೂ ಇಂದಿನ ಸ್ಥಿತಿಯಲ್ಲಿ ವಸೂಲಾತಿ ಒಂದು ಲಕ್ಷವೂ ಮೀರುವುದಿಲ್ಲ.ಪಾವತಿಸಬೇಕಾದ ಸಂಬಳ ತಿಂಗಳಿಗೆ ಎರಡೂವರೆ ಲಕ್ಷ .ಉಳಿಕೆ ಹಣಕ್ಕೇನು ಮಾಡುವುದು ಎನ್ನುತ್ತಾರೆ ಬಿಲ್ ಕಲೆಕ್ಟರ್ ಗಳು.
        ಸದ್ಯ ಮೂರು ತಿಂಗಳ ಸಂಬಳ ಕೊಡಬೇಕಿದ್ದು ಯುಗಾದಿ ಬೋನಸ್ ಎಂದು ಇದುವರೆಗೂ ಕೊಡುತ್ತಿದ್ದ ಬಟ್ಟೆಯೂ ಸೇರಿ ಸುಮಾರು ಎಳೆಂಟು ಲಕ್ಷ ಹಣದ ಅವಶ್ಯಕತೆಯಿದೆ.ಗ್ರಾಮಪಂಚಾಯ್ತಿಯಲ್ಲಿ ನೀರಿನ ಸಮಸ್ಯೆ ನಿವಾರಿಸಲು ಹೆಣಗಾಡುತ್ತಿದ್ದು ಅದಕ್ಕೆ ಹಣದ ಕೊರತೆ ಎದುರಾಗಿರುವಾಗ ಇವರ ಸಮಸ್ಯೆ ಪರಿಹರಿಸುವುದು ಕಷ್ಟ ಸಾಧ್ಯ ಎನ್ನುವಂತಾಗಿದೆ.

        ಒಟ್ಟಾರೆ ಹಬ್ಬದ ಹಿನ್ನಲೆಯಲ್ಲಿ ನೌಕರರಿಗೆ ಪಗಾರವಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದ್ದು ಹಬ್ಬ ಮಾಡುವುದು ಹೇಗೆಂಬ ಚಿಂತೆ ಮನೆ ಮಾಡುವಂತೆ ಮಾಡಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...