ವಿಷಯಕ್ಕೆ ಹೋಗಿ

ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ನೌಕರರಿಗೆ ಪಗಾರವಿಲ್ಲದೆ ಕಂಗಾಲು

       ಜಿಲ್ಲೆಯಲ್ಲಿಯೇ ಅತಿದೊಡ್ದ ಪಂಚಾಯ್ತಿಯೆಂಬ ಹೆಗ್ಗಳಿಕೆ ಹೊಂದಿರುವ ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ಸಂಬಳ ಕೊಟ್ಟು ಮೂರು ತಿಂಗಳಾಗಿದ್ದು ವರ್ಷಾವಧಿ ಹಬ್ಬ ಯುಗಾದಿ ಕೆಲವೇದಿನ ಉಳಿದಿದ್ದು ಪಗಾರವಿಲ್ಲದೆ ಹಬ್ಬ ಆಚರಣೆ ಹೇಗೆಂಬ ಆತಂಕ ಅವರಲ್ಲಿ ಮನೆಮಾಡಿದೆ.
ಹುಳಿಯಾರು ಗ್ರಾಮ ಪಂಚಾಯ್ತಿ 
      ೩೯ ಮಂದಿ ಸದಸ್ಯರನ್ನು ಹೊಂದಿರುವ ಹುಳಿಯಾರು ಗ್ರಾಮಪಂಚಾಯ್ತಿಯಲ್ಲಿ ಸರಿಸುಮಾರು ೪೩ ಮಂದಿ ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ.ಬಿಲ್ ಕಲೆಕ್ಟರ್,ವಾಟರ್ ಮೆನ್ ,ಎಲೆಕ್ಟ್ರೀಷಿಯನ್, ಜವಾನರು,ಕಂಪ್ಯೂಟರ್ ಆಪರೇಟರ್,ಪೌರ ಕಾರ್ಮಿಕರು ಹೀಗೆ ಹಲವು ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಪ್ರತಿತಿಂಗಳು ಸಂಬಳ ಅನ್ನುವುದು ಮರೀಚಿಕೆಯಾಗಿದ್ದು ಮೂರ್ನಾಲ್ಕು ತಿಗಳಿಗೊಮ್ಮೆ ಸಂಬಳ ಪಾವತಿಸುವುದು ರೂಢಿಯಲ್ಲಿದೆ.
      ಅದುಕೂಡ ಯಾವುದಾದರೂ ಅನುದಾನದಲ್ಲಿ ಹಣ ಬಿಡುಗಡೆಯಾದಲ್ಲಿ ಮಾತ್ರ.ಇಲ್ಲದಿದ್ದಲ್ಲಿ ಇವರುಗಳು ಕರ ವಸೂಲಿ ಮಾಡಿಕೊಂಡೆ ಸಂಬಳ ಪಡೆಯಬೇಕಾಗಿದ್ದು ಸಂಗ್ರಹವಾಗುವ ವಸೂಲಾತಿಗೂ ಪಾವತಿಸಬೇಕಾದ ಸಂಬಳಕ್ಕೂ ಅಜಗಜಾಂತರ ವ್ಯತ್ಯಾಸವಾಗಿ ಕೆಲವರಿಗಷ್ಟೆ ಸಂಬಳ ಸಿಕ್ಕರೆ ಇನ್ನುಳಿದವರಿಗೆ ಮತ್ತೆ ಮುಂದಿನ ತಿಂಗಳೆ ಗಟ್ಟಿ ಎನ್ನುವ ಪರಿಸ್ಥಿತಿ ಇದೆ.
         ಸದ್ಯ ಅಲ್ಪ ಸಂಬಳಕ್ಕೆ ಕೆಲಸ ಮಾಡುತ್ತಿರುವ ಇವರುಗಳಿಗೆ ನಿಗದಿತ ದಿನದಂದು ಹಣ ಪಾವತಿಯಾಗದೆ ಸಂಸಾರ ನಿರ್ವಹಿಸುವುದೇ ದುಸ್ತರವಾಗಿದೆ.ತಿಂಗಳಿಗೊಮ್ಮೆ ರೇಷನ್,ಹಾಲಿಗೆ, ಪೇಪರಿಗೆ,ಓಡಾಡಲು ಪೆಟ್ರೋಲಿಗೆ ಹೀಗೆ ಅವಶ್ಯ ಖರ್ಚುಗಳಿಗೂ ಹಣವಿಲ್ಲದೆ ಕೊಡುವವರಿಗೆ ಸಬೂಬು ಹೇಳುವಂತಾಗಿದೆ.ಗಟ್ಟಿಯಾಗಿ ಕೇಳಿದಲ್ಲಿ ನೌಕರಿಗೆಲ್ಲಿ ಕುತ್ತು ಬರುತ್ತದೋ ಎಂಬ ಭಯದ ವಾತವರಣದಿಂದ ಮೌನವಾಗಿ ಅನುಭವಿಸುತ್ತಿದ್ದಾರೆ.
      ಸಧ್ಯ ಬರಗಾಲ ಪರಿಸ್ಥಿತಿಯಲ್ಲಿ ಎಲ್ಲರಿಗೂ ಹಣಹೊಂಚುವುದೆ ದುಸ್ತರವಾಗಿದ್ದು ಇದೀಗ ಕರ ವಸೂಲಾತಿ ಮಾಡಿಯೇ ಸಂಬಳ ಪಡೆದುಕೊಳ್ಳಿ ಎಂದು ಅಧ್ಯಕ್ಷರು ಸೂಚಿಸಿರುವುದು ಇವರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.
       ಬೆಳಗ್ಗಿನಿಂದ ಕಚೇರಿ ಕೆಲಸ ಮಾಡಿ ನಂತರ ವಸೂಲಾತಿಗೆ ಹೊರಟಲ್ಲಿ ಮನೆಗಳಲ್ಲಿ ಯಾರು ಸಿಗುವುದಿಲ್ಲ.ಸಿಕ್ಕರೂ ಸಹ ಸರಿಯಾಗಿ ನೀರೇ ಬಿಡುವುದಿಲ್ಲ,ವಸೂಲಿಗೆ ಬಂದಿದ್ದೀರಾ ಎಂದು ಹರಿಹಾಯ್ದು ವಾಪಸ್ಸು ಕಳುಹಿಸುತ್ತಾರೆ.ತಿಂಗಳೆಲ್ಲಾ ಕಷ್ಟಬಿದ್ದು ವಸೂಲಿ ಮಾಡಿದರೂ ಇಂದಿನ ಸ್ಥಿತಿಯಲ್ಲಿ ವಸೂಲಾತಿ ಒಂದು ಲಕ್ಷವೂ ಮೀರುವುದಿಲ್ಲ.ಪಾವತಿಸಬೇಕಾದ ಸಂಬಳ ತಿಂಗಳಿಗೆ ಎರಡೂವರೆ ಲಕ್ಷ .ಉಳಿಕೆ ಹಣಕ್ಕೇನು ಮಾಡುವುದು ಎನ್ನುತ್ತಾರೆ ಬಿಲ್ ಕಲೆಕ್ಟರ್ ಗಳು.
        ಸದ್ಯ ಮೂರು ತಿಂಗಳ ಸಂಬಳ ಕೊಡಬೇಕಿದ್ದು ಯುಗಾದಿ ಬೋನಸ್ ಎಂದು ಇದುವರೆಗೂ ಕೊಡುತ್ತಿದ್ದ ಬಟ್ಟೆಯೂ ಸೇರಿ ಸುಮಾರು ಎಳೆಂಟು ಲಕ್ಷ ಹಣದ ಅವಶ್ಯಕತೆಯಿದೆ.ಗ್ರಾಮಪಂಚಾಯ್ತಿಯಲ್ಲಿ ನೀರಿನ ಸಮಸ್ಯೆ ನಿವಾರಿಸಲು ಹೆಣಗಾಡುತ್ತಿದ್ದು ಅದಕ್ಕೆ ಹಣದ ಕೊರತೆ ಎದುರಾಗಿರುವಾಗ ಇವರ ಸಮಸ್ಯೆ ಪರಿಹರಿಸುವುದು ಕಷ್ಟ ಸಾಧ್ಯ ಎನ್ನುವಂತಾಗಿದೆ.

        ಒಟ್ಟಾರೆ ಹಬ್ಬದ ಹಿನ್ನಲೆಯಲ್ಲಿ ನೌಕರರಿಗೆ ಪಗಾರವಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದ್ದು ಹಬ್ಬ ಮಾಡುವುದು ಹೇಗೆಂಬ ಚಿಂತೆ ಮನೆ ಮಾಡುವಂತೆ ಮಾಡಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...