ವಿಷಯಕ್ಕೆ ಹೋಗಿ

ಹುಳಿಯಾರು: ಯುಗಾದಿಗೆ ಸಿದ್ಧತೆ ಬಲು ಜೋರು


ಹುಳಿಯಾರು:ಬೆಲೆ ಏರಿಕೆ ನಡುವೆಯೂ ಪಟ್ಟಣದಲ್ಲಿ ಯುಗಾದಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಿದ್ದತೆ ನಡೆದಿದ್ದು ಹಬ್ಬದ ಗೌಜು, ಗದ್ದಲದ ಮಧ್ಯೆ ಮಂಗಳವಾರ ನಡೆದ ಹಬ್ಬದ ಸಂತೆಯಲ್ಲಿ ಅಗತ್ಯ ವಸ್ತುಗಳಖರೀದಿ ಭರಾಟೆ ಜೋರಾಗಿ ಸಾಗಿತ್ತು.
ಹುಳಿಯಾರಿನಲ್ಲಿ ನಡೆದ ಹಬ್ಬದ ಸಂತೆಯಲ್ಲಿ ಯುಗಾದಿ ಹಬ್ಬಕ್ಕೆ ಬೇಕಾದ ದಿನಸಿ ಕೊಳ್ಳಲು ಮುಗಿಬಿದ್ದ ಜನತೆ
         ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದರೂ ಸಹ ಹಬ್ಬಕ್ಕೆ ಬೇಕಾದ ದಿನಸಿ,ತರಕಾರಿ,ಹೂವು,ಹಣ್ಣು ಮೊದಲಾದವುಗಳನ್ನು ಕೊಳ್ಳಲು ಸಾಕಷ್ಟು ಜನ ಜಮಾಯಿಸಿದ್ದು ಸಂತೆ ಜನರಿಂದ ಗಿಜಗುಡುತಿತ್ತು.
        ಪಟ್ಟಣದ ಗಾಂಧಿಪೇಟೆ,  ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಸಂತೆ ಸೇರಿದ್ದು ಎಲ್ಲಿ ಕಣ್ಣು ಹಾಯಿಸಿದರೂ ಜನರೇ ಕಾಣಿಸುತ್ತಿದ್ದರು. ಸಂತೆಯಲ್ಲಿನ ದಿನಸಿ ಅಂಗಡಿಗಳು, ಬಟ್ಟೆ ಅಂಗಡಿಗಳ ಬಳಿ ಹೆಚ್ಚು ಜನ ಜಮಾಯಿಸಿದ್ದರಲ್ಲದೆ, ತರಕಾರಿ ಅಂಗಡಿ, ಹಣ್ಣು, ಹೂ ಅಂಗಡಿಗಳಲ್ಲೂ ಸಹ ಮಾರಾಟ ಜೋರಾಗಿತ್ತು. ಯುಗಾದಿ ಹಬ್ಬದಂದು ಹೊಸಬಟ್ಟೆ ತೊಡುವ ಸಂಪ್ರದಾಯ ಗ್ರಾಮೀಣ ಭಾಗದಲ್ಲಿ ಆಚರಣೆಯಲ್ಲಿದ್ದು ಕಡೇಪಕ್ಷ ಹಬ್ಬದ ದಿನ ಉಡುದಾರವನ್ನಾದರೂ ತೊಡಬೇಕೆನ್ನುವ ಆಚರಣಿಯಿಂದಾಗಿ ಉಡುದಾರ ಮಾರುವವರಿಗೂ ಬೇಡಿಕೆ ಹೆಚ್ಚಾಗಿತ್ತು.
ಯುಗಾದಿ ಉಡುದಾರ : ಹಬ್ಬದ ಅಂಗವಾಗಿ ಉಡುದಾರದ ವ್ಯಾಪಾರ ತಕ್ಕಮಟ್ಟಿಗಿದ್ದು, ಕೆಂಪು ಹಾಗೂ ಕಪ್ಪು ಬಣ್ಣದ ಉಡುದಾರ ಮಾರಿಗೆ ೫ ರೂ ನಂತೆ ಮಾರಾಟ ಮಾಡುತ್ತಿದ್ದರು. ಸಂತೆ ಸೇರಿದಂತೆ ಪಟ್ಟಣದ ಬಸ್ ನಿಲ್ದಾಣ ಹಾಗೂ ಪ್ರಮುಖ ಬೀದಿಗಳಲ್ಲಿ ಯುಗಾದಿ ಉಡುದಾರ ಎಂದು ಕೂಗುತ್ತಾ ವ್ಯಾಪಾರ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
         ಯುಗಾದಿಗೆ ಹೊಸಬಟ್ಟೆ ತರುವ ಪರಿಪಾಠವಿರುವುದರಿಂದ ಬಟ್ಟೆ ಅಂಗಡಿಗಳಲ್ಲಿ ಜನ ಜಂಗುಳಿ ಕಂಡುಬಂತು. ರಸ್ತೆಗಳಲ್ಲಿಯೇ ರಾಶಿ ರಾಶಿ ಬಟ್ಟೆಗಳ ಖರೀದಿ ಸಹ ಭರ್ಜರಿಯಾಗಿ ನಡೆಯುತ್ತಿತ್ತು. ರಂಗನಾಥಸ್ವಾಮಿ ದೇವಾಲಯ ರಸ್ತೆ,ಬಸ್ ನಿಲ್ದಾಣದಲ್ಲಿ,ಆಸ್ಪತ್ರೆ ರಸ್ತೆಯಲ್ಲಿ ಭರ್ಜರಿ ಬಟ್ಟೆ ವ್ಯಾಪಾರ ನಡೆಯುತ್ತಿದ್ದು ಬಟ್ಟೆ ಖರೀದಿಗೆ ಜನ ಮುಗಿಬಿದ್ದ ದೃಶ್ಯ ಕಂಡುಬಂತು.

         ಯುಗಾದಿಯೆಂದರೆ ಒಬ್ಬಟ್ಟಿನ ಹಬ್ಬವಾಗಿದ್ದು ಬೆಲ್ಲ, ಬೇಳೆಗಳ ಬೆಲೆ ದುಪ್ಪಟ್ಟಾಗಿದ್ದರೂ ಸಹ ದಿನಸಿಅಂಗಡಿಗಳಲ್ಲಿ ಜನ ಸಾಲುಗಟ್ಟಿನಿಂತಿದ್ದರು.ಸಂತೆಯಲ್ಲಿ ಹೂವಿನ ವ್ಯಾಪಾರ ಜೋರಾಗಿದ್ದು ಮಾರು ಹೂವಿಗೆ ೫೦ ರಿಂದ ೬೦ ರೂ ಬೆಲೆಯಿತ್ತು. ಹಣ್ಣು ತರಕಾರಿ ಖರೀದಿ ಸುಮಾರಿಗಿತ್ತು.
           ಪ್ರತಿವರ್ಷವೂ ಹಬ್ಬದ ಹಿಂದಿನ ದಿನ ಬೆಂಗಳೂರಿನಲ್ಲಿ ಕೆಲಸದಲ್ಲಿ ತೊಡಗಿಕೊಂಡಿರುವವರು ಹಬ್ಬಕ್ಕೆ ಎರಡುಮೂರು ದಿನ ರಜಾ ಹಾಕಿ ಬರುವುದಿದ್ದು ಆದರೆ ಈ ಬಾರಿ ಹಬ್ಬ ಬುಧವಾರ ಬಂದಿರುವುದರಿಂದ ಪಟ್ಟಣದಲ್ಲಿ ಉದ್ಯೋಗದಲ್ಲಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸದಿರುವುದರಿಂದ ಬಸ್ ಗಳಲ್ಲಿ ಅಂತಹ ರಶ್ ಕಂಡುಬರಲಿಲ್ಲ.
ಹುಳಿಯಾರಿನಲ್ಲಿ ಯುಗಾದಿ ಹಬ್ಬಕ್ಕಾಗಿ ನಡೆದಿರುವ ಹೂವಿನ ಭರ್ಜರಿ ವ್ಯಾಪಾರ.
         ಯುಗಾದಿ ಎಂದರೆ ಎಣ್ಣೆ ಸ್ನಾನಮಾಡುವುದು ಸಂಪ್ರದಾಯವಾಗಿದ್ದು ಈ ಬಾರಿ ಹಬ್ಬಕ್ಕೆಂದೆ ಎಲ್ಲಾ ರಾಜಕೀಯ ಪಕ್ಷಗಳವರು ಕಳೆದ ಎರಡುಮೂರು ದಿನಗಳಿಂದಲೂ ಟ್ಯಾಂಕರ್ ಗಳಲ್ಲಿ ನೀರು ಪೂರೈಸುತ್ತಿದಿದ್ದು ನೀರಿನ ಸಮಸ್ಯೆ ಅಷ್ಟಾಗಿ ಬಾಧಿಸಲಿಲ್ಲ.
---------------------------


ದಿನೆದಿನೇ ಉಡುದಾರದ ವ್ಯಾಪಾರ ಇಳಿಮುಖವಾಗುತ್ತಿದ್ದು ಹಬ್ಬದ ದಿನದಲ್ಲಿ ದಿನಕ್ಕೆ ಮೂರ್ನಾಲ್ಕು ಸಾವಿರ ವ್ಯಾಪಾರ ಮಾಡುತ್ತಿದ್ದವರು ಇಂದು ಸಾವಿರ ರೂಪಾಯಿ ಮಾಡುವುದು ಕಷ್ಟಕರವಾಗಿದೆ. ಲಾಭವೋ, ಲುಕ್ಸಾನೋ ಹಿಂದಿನಿಂದ ಮಾಡಿಕೊಂಡು ಬಂದಿರುವ ಪದ್ದತಿ ಬಿಡಬಾರದೆಂದು ಉಡುದಾರದ ವ್ಯಾಪಾರ ಮುಂದುವರಿಸಿಕೊಂಡು ಬರುತ್ತಿದ್ದೆವೆ:ಕಂಚೀಪುರದ ರಾಜಣ್ಣ,ಉಡುದಾರ ವ್ಯಾಪಾರಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...