ವಿಷಯಕ್ಕೆ ಹೋಗಿ

ಹುಳಿಯಾರು: ಯುಗಾದಿಗೆ ಸಿದ್ಧತೆ ಬಲು ಜೋರು


ಹುಳಿಯಾರು:ಬೆಲೆ ಏರಿಕೆ ನಡುವೆಯೂ ಪಟ್ಟಣದಲ್ಲಿ ಯುಗಾದಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಿದ್ದತೆ ನಡೆದಿದ್ದು ಹಬ್ಬದ ಗೌಜು, ಗದ್ದಲದ ಮಧ್ಯೆ ಮಂಗಳವಾರ ನಡೆದ ಹಬ್ಬದ ಸಂತೆಯಲ್ಲಿ ಅಗತ್ಯ ವಸ್ತುಗಳಖರೀದಿ ಭರಾಟೆ ಜೋರಾಗಿ ಸಾಗಿತ್ತು.
ಹುಳಿಯಾರಿನಲ್ಲಿ ನಡೆದ ಹಬ್ಬದ ಸಂತೆಯಲ್ಲಿ ಯುಗಾದಿ ಹಬ್ಬಕ್ಕೆ ಬೇಕಾದ ದಿನಸಿ ಕೊಳ್ಳಲು ಮುಗಿಬಿದ್ದ ಜನತೆ
         ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದರೂ ಸಹ ಹಬ್ಬಕ್ಕೆ ಬೇಕಾದ ದಿನಸಿ,ತರಕಾರಿ,ಹೂವು,ಹಣ್ಣು ಮೊದಲಾದವುಗಳನ್ನು ಕೊಳ್ಳಲು ಸಾಕಷ್ಟು ಜನ ಜಮಾಯಿಸಿದ್ದು ಸಂತೆ ಜನರಿಂದ ಗಿಜಗುಡುತಿತ್ತು.
        ಪಟ್ಟಣದ ಗಾಂಧಿಪೇಟೆ,  ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಸಂತೆ ಸೇರಿದ್ದು ಎಲ್ಲಿ ಕಣ್ಣು ಹಾಯಿಸಿದರೂ ಜನರೇ ಕಾಣಿಸುತ್ತಿದ್ದರು. ಸಂತೆಯಲ್ಲಿನ ದಿನಸಿ ಅಂಗಡಿಗಳು, ಬಟ್ಟೆ ಅಂಗಡಿಗಳ ಬಳಿ ಹೆಚ್ಚು ಜನ ಜಮಾಯಿಸಿದ್ದರಲ್ಲದೆ, ತರಕಾರಿ ಅಂಗಡಿ, ಹಣ್ಣು, ಹೂ ಅಂಗಡಿಗಳಲ್ಲೂ ಸಹ ಮಾರಾಟ ಜೋರಾಗಿತ್ತು. ಯುಗಾದಿ ಹಬ್ಬದಂದು ಹೊಸಬಟ್ಟೆ ತೊಡುವ ಸಂಪ್ರದಾಯ ಗ್ರಾಮೀಣ ಭಾಗದಲ್ಲಿ ಆಚರಣೆಯಲ್ಲಿದ್ದು ಕಡೇಪಕ್ಷ ಹಬ್ಬದ ದಿನ ಉಡುದಾರವನ್ನಾದರೂ ತೊಡಬೇಕೆನ್ನುವ ಆಚರಣಿಯಿಂದಾಗಿ ಉಡುದಾರ ಮಾರುವವರಿಗೂ ಬೇಡಿಕೆ ಹೆಚ್ಚಾಗಿತ್ತು.
ಯುಗಾದಿ ಉಡುದಾರ : ಹಬ್ಬದ ಅಂಗವಾಗಿ ಉಡುದಾರದ ವ್ಯಾಪಾರ ತಕ್ಕಮಟ್ಟಿಗಿದ್ದು, ಕೆಂಪು ಹಾಗೂ ಕಪ್ಪು ಬಣ್ಣದ ಉಡುದಾರ ಮಾರಿಗೆ ೫ ರೂ ನಂತೆ ಮಾರಾಟ ಮಾಡುತ್ತಿದ್ದರು. ಸಂತೆ ಸೇರಿದಂತೆ ಪಟ್ಟಣದ ಬಸ್ ನಿಲ್ದಾಣ ಹಾಗೂ ಪ್ರಮುಖ ಬೀದಿಗಳಲ್ಲಿ ಯುಗಾದಿ ಉಡುದಾರ ಎಂದು ಕೂಗುತ್ತಾ ವ್ಯಾಪಾರ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
         ಯುಗಾದಿಗೆ ಹೊಸಬಟ್ಟೆ ತರುವ ಪರಿಪಾಠವಿರುವುದರಿಂದ ಬಟ್ಟೆ ಅಂಗಡಿಗಳಲ್ಲಿ ಜನ ಜಂಗುಳಿ ಕಂಡುಬಂತು. ರಸ್ತೆಗಳಲ್ಲಿಯೇ ರಾಶಿ ರಾಶಿ ಬಟ್ಟೆಗಳ ಖರೀದಿ ಸಹ ಭರ್ಜರಿಯಾಗಿ ನಡೆಯುತ್ತಿತ್ತು. ರಂಗನಾಥಸ್ವಾಮಿ ದೇವಾಲಯ ರಸ್ತೆ,ಬಸ್ ನಿಲ್ದಾಣದಲ್ಲಿ,ಆಸ್ಪತ್ರೆ ರಸ್ತೆಯಲ್ಲಿ ಭರ್ಜರಿ ಬಟ್ಟೆ ವ್ಯಾಪಾರ ನಡೆಯುತ್ತಿದ್ದು ಬಟ್ಟೆ ಖರೀದಿಗೆ ಜನ ಮುಗಿಬಿದ್ದ ದೃಶ್ಯ ಕಂಡುಬಂತು.

         ಯುಗಾದಿಯೆಂದರೆ ಒಬ್ಬಟ್ಟಿನ ಹಬ್ಬವಾಗಿದ್ದು ಬೆಲ್ಲ, ಬೇಳೆಗಳ ಬೆಲೆ ದುಪ್ಪಟ್ಟಾಗಿದ್ದರೂ ಸಹ ದಿನಸಿಅಂಗಡಿಗಳಲ್ಲಿ ಜನ ಸಾಲುಗಟ್ಟಿನಿಂತಿದ್ದರು.ಸಂತೆಯಲ್ಲಿ ಹೂವಿನ ವ್ಯಾಪಾರ ಜೋರಾಗಿದ್ದು ಮಾರು ಹೂವಿಗೆ ೫೦ ರಿಂದ ೬೦ ರೂ ಬೆಲೆಯಿತ್ತು. ಹಣ್ಣು ತರಕಾರಿ ಖರೀದಿ ಸುಮಾರಿಗಿತ್ತು.
           ಪ್ರತಿವರ್ಷವೂ ಹಬ್ಬದ ಹಿಂದಿನ ದಿನ ಬೆಂಗಳೂರಿನಲ್ಲಿ ಕೆಲಸದಲ್ಲಿ ತೊಡಗಿಕೊಂಡಿರುವವರು ಹಬ್ಬಕ್ಕೆ ಎರಡುಮೂರು ದಿನ ರಜಾ ಹಾಕಿ ಬರುವುದಿದ್ದು ಆದರೆ ಈ ಬಾರಿ ಹಬ್ಬ ಬುಧವಾರ ಬಂದಿರುವುದರಿಂದ ಪಟ್ಟಣದಲ್ಲಿ ಉದ್ಯೋಗದಲ್ಲಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸದಿರುವುದರಿಂದ ಬಸ್ ಗಳಲ್ಲಿ ಅಂತಹ ರಶ್ ಕಂಡುಬರಲಿಲ್ಲ.
ಹುಳಿಯಾರಿನಲ್ಲಿ ಯುಗಾದಿ ಹಬ್ಬಕ್ಕಾಗಿ ನಡೆದಿರುವ ಹೂವಿನ ಭರ್ಜರಿ ವ್ಯಾಪಾರ.
         ಯುಗಾದಿ ಎಂದರೆ ಎಣ್ಣೆ ಸ್ನಾನಮಾಡುವುದು ಸಂಪ್ರದಾಯವಾಗಿದ್ದು ಈ ಬಾರಿ ಹಬ್ಬಕ್ಕೆಂದೆ ಎಲ್ಲಾ ರಾಜಕೀಯ ಪಕ್ಷಗಳವರು ಕಳೆದ ಎರಡುಮೂರು ದಿನಗಳಿಂದಲೂ ಟ್ಯಾಂಕರ್ ಗಳಲ್ಲಿ ನೀರು ಪೂರೈಸುತ್ತಿದಿದ್ದು ನೀರಿನ ಸಮಸ್ಯೆ ಅಷ್ಟಾಗಿ ಬಾಧಿಸಲಿಲ್ಲ.
---------------------------


ದಿನೆದಿನೇ ಉಡುದಾರದ ವ್ಯಾಪಾರ ಇಳಿಮುಖವಾಗುತ್ತಿದ್ದು ಹಬ್ಬದ ದಿನದಲ್ಲಿ ದಿನಕ್ಕೆ ಮೂರ್ನಾಲ್ಕು ಸಾವಿರ ವ್ಯಾಪಾರ ಮಾಡುತ್ತಿದ್ದವರು ಇಂದು ಸಾವಿರ ರೂಪಾಯಿ ಮಾಡುವುದು ಕಷ್ಟಕರವಾಗಿದೆ. ಲಾಭವೋ, ಲುಕ್ಸಾನೋ ಹಿಂದಿನಿಂದ ಮಾಡಿಕೊಂಡು ಬಂದಿರುವ ಪದ್ದತಿ ಬಿಡಬಾರದೆಂದು ಉಡುದಾರದ ವ್ಯಾಪಾರ ಮುಂದುವರಿಸಿಕೊಂಡು ಬರುತ್ತಿದ್ದೆವೆ:ಕಂಚೀಪುರದ ರಾಜಣ್ಣ,ಉಡುದಾರ ವ್ಯಾಪಾರಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.