ವಿಷಯಕ್ಕೆ ಹೋಗಿ

ನೋಟ್ ಬ್ಯಾನ್ ನಿಂದ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಿದ ಮೋದಿ :ಸಾಸಲು ಸತೀಶ್

ನೋಟು ಅಮಾನ್ಯೀಕರಣದಿಂದ ನಿಯಂತ್ರಣವಾಗದ ಕಪ್ಪುಹಣ

ಹುಳಿಯಾರು: ನೋಟು ಅಮಾನ್ಯೀಕರಣದಿಂದ ಕಪ್ಪುಹಣ ಇನ್ನಿಲ್ಲದಂತಾಗಿ ಜನಸಾಮಾನ್ಯರ ಬದುಕು ಬದಲಾಗುತ್ತದೆಂದು ದೇಶದ ಜನ ತಿಳಿದು ಇದರ ಸಮಸ್ಯೆಯನ್ನು ಸಹಿಸಿಕೊಂಡಿದ್ದರು. ಆದರೆ ಇದರಿಂದ ಯಾವುದೇ ಅನುಕೂಲ ಸಾಮಾನ್ಯ ಜನರಿಗಾಗದೆ, ರೈತರ,ಮಧ್ಯಮ ವರ್ಗದವರ,ಸಣ್ಣಪುಟ್ಟ ವ್ಯಾಪಾರಸ್ಥರ ಬದುಕು ಇನ್ನಷ್ಟು ದುಸ್ತರವಾಗಿದೆ ಎಂದು ಚಿಕ್ಕನಾಯಕನಹಳ್ಳಿ ಕಾಂಗ್ರೆಸ್ ಮುಖಂಡ ಸಾಸಲು ಸತೀಶ್ ದೂರಿದರು.

       ಹುಳಿಯಾರಿನಲ್ಲಿ ಮಂಗಳವಾರ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಜನವೇದನ ಸಭೆಯಲ್ಲಿ ಮಾತನಾಡಿದ ಅವರು ನೋಟು ಅಮಾನ್ಯೀಕರಣದಿಂದ ಆರ್ಥಿಕ ಸುಧಾರಣೆ ಆಗುವ ಬದಲು ಬಡವರ ಹೊಟ್ಟೆಗೆ ಭಾರಿ ಹೊಡೆತ ಬಿದಿದ್ದು ಕಾರ್ಪೊರೇಟ್ ವಲಯದ ಹಿತ ಕಾಪಾಡಿದಂತಾಗಿದೆ ಎಂದರು.ಚುನಾವಣೆಗೂ ಮುಂಚೆ ಘೋಷಣೆ ಮಾಡಿದ್ದ ಕಪ್ಪುಹಣ ನಿಯಂತ್ರಣ,ಅಚ್ಚೆದಿನ್,ಉದ್ಯೋಗ ಸೃಷ್ಠಿ ಎಂಬ ಮಾತುಗಳು ಸುಳ್ಳಾಗಿದೆ ಎಂದರು.
        ಅಮಾನ್ಯೀಕರಣದಿಂದ ಬಾರಿ ಬದಲಾವಣೆಯಾಗಲಿದೆ, ಕಪ್ಪು ಹಣ ನಿಯಂತ್ರಣ, ಭಯೋತ್ಪಾದನೆ ನಿರ್ಮೂಲನೆ ಆಗಲಿದೆ ಎಂದು ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆದರೆ ನೋಟು ಅಮಾನ್ಯೀಕರಣದಿಂದ ಆದ ಅನುಕೂಲವೇನು ಹಾಗೂ ಕ್ಯಾಶ್ ಲೆಸ್ ವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಯೇನೆಂದು ಈಗ ಪ್ರತಿಯೊಬ್ಬರಿಗೂ ಮನವರಿಕೆಯಾಗಿದ್ದು ಮೋದಿಯವರ ಸರ್ವಾಧಿಕಾರಿ ಧೋರಣೆ ಬಗ್ಗೆ ಜನ ಕಿಡಿಕಾರುತ್ತಿದ್ದು ಸ್ವಚ್ಛ ಭಾರತ ಹೆಸರಿನಲ್ಲಿ ಪೊರಕೆ ಹಿಡಿದುಕೊಂಡು ಬೀದಿಯಲ್ಲಿ ಕಸ ಗುಡಿಸಿ ಕೇವಲ ಪ್ರಚಾರಕ್ಕಾಗಿ ಭಾಷಣ ಮಾಡಿದ್ದಷ್ಟೆ ಮೋದಿಯವರ ಸಾಧನೆ ಎಂದು ಟೀಕಿಸಿದರು.
         ಹುಳಿಯಾರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಮಾತನಾಡಿ ಕೇಂದ್ರ ಸರ್ಕಾರ ನಾನಾ ತೆರಿಗೆ ವಿಧಿಸುವ ಮೂಲಕ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದೆ. ಜನರಿಗೆ ಇದನ್ನು ತಿಳಿಸಲು,ಜನರ ಕಷ್ಟಕ್ಕೆ ಸ್ಪಂದಿಸಲು ಕಾಂಗ್ರೆಸ್ ಜನವೇದನಾ ಸಭೆ ಹಮ್ಮಿಕೊಂಡಿದೆ.ದೇಶದ ಉತ್ತಮ ಮುಖ್ಯಮಂತ್ರಿ ಎಂಬ ಪ್ರಶಾಸ್ತಿಗೆ ಭಾಜನರಾಗಿರುವ ಸಿದ್ದರಾಮಯ್ಯ ತಮ್ಮ ನಾಲ್ಕು ವರ್ಷದ ಆಡಳಿತದಲ್ಲಿ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು..
             ಮೋದಿ ಅವರ ಡಿಜಿಟಲೀಕರಣ, ನಗದು ರಹಿತ ವ್ಯವಹಾರ ಯಶಸ್ಸು ಕಂಡಿಲ್ಲ.ಪ್ರಧಾನಿ ಮೋದಿ ಏಕಾಏಕಿ ನೋಟು ಅಮಾನ್ಯ ಮಾಡಿದ್ದರಿಂದ ಗ್ರಾಮೀಣ ಜನರ ಪರದಾಟ ಇನ್ನೂ ತಪ್ಪಿಲ್ಲ.ಬ್ಯಾಂಕ್‌ನಲ್ಲಿ ನಮ್ಮ ಹಣ ಪಡೆಯಲೂ ಸಾಕಷ್ಟು ಕಷ್ಟಪಡುವ ಪರಿಸ್ಥಿತಿ ಈಗಲೂ ಇದೆ ಎಂದರು.

              ಈ ಸಂದರ್ಭದಲ್ಲಿ ಜಿಲ್ಲಾಪಂಚಾಯ್ತಿ ಸದಸ್ಯ ವೈ.ಸಿ.ಸಿದ್ಧರಾಮಯ್ಯ,ಹಿರಿಯ ಕಾಂಗ್ರೆಸ್ ಮುಖಂಡ ಮಹ್ಮದ್ ಜಾಫರ್ ಸಾಬ್,ಗ್ರಾಪಂ ಸದಸ್ಯರುಗಳಾದ ಎಲ್.ಆರ್.ಚಂದ್ರಶೇಖರ್, ವೆಂಕಟೇಶ್ ಹಾಗೂ ದಯಾನಂದ್,ಕೆಂಕೆರೆ ಶಿವಕುಮಾರ್,ಪ್ರದೀಪ್,ಕುಮಾರ್,ರಹಮತ್ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...