ವಿಷಯಕ್ಕೆ ಹೋಗಿ

ನೋಟ್ ಬ್ಯಾನ್ ನಿಂದ ಉದ್ಯಮಿಗಳಿಗೆ ಅನುಕೂಲ ಕಲ್ಪಿಸಿದ ಮೋದಿ :ಸಾಸಲು ಸತೀಶ್

ನೋಟು ಅಮಾನ್ಯೀಕರಣದಿಂದ ನಿಯಂತ್ರಣವಾಗದ ಕಪ್ಪುಹಣ

ಹುಳಿಯಾರು: ನೋಟು ಅಮಾನ್ಯೀಕರಣದಿಂದ ಕಪ್ಪುಹಣ ಇನ್ನಿಲ್ಲದಂತಾಗಿ ಜನಸಾಮಾನ್ಯರ ಬದುಕು ಬದಲಾಗುತ್ತದೆಂದು ದೇಶದ ಜನ ತಿಳಿದು ಇದರ ಸಮಸ್ಯೆಯನ್ನು ಸಹಿಸಿಕೊಂಡಿದ್ದರು. ಆದರೆ ಇದರಿಂದ ಯಾವುದೇ ಅನುಕೂಲ ಸಾಮಾನ್ಯ ಜನರಿಗಾಗದೆ, ರೈತರ,ಮಧ್ಯಮ ವರ್ಗದವರ,ಸಣ್ಣಪುಟ್ಟ ವ್ಯಾಪಾರಸ್ಥರ ಬದುಕು ಇನ್ನಷ್ಟು ದುಸ್ತರವಾಗಿದೆ ಎಂದು ಚಿಕ್ಕನಾಯಕನಹಳ್ಳಿ ಕಾಂಗ್ರೆಸ್ ಮುಖಂಡ ಸಾಸಲು ಸತೀಶ್ ದೂರಿದರು.

       ಹುಳಿಯಾರಿನಲ್ಲಿ ಮಂಗಳವಾರ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಜನವೇದನ ಸಭೆಯಲ್ಲಿ ಮಾತನಾಡಿದ ಅವರು ನೋಟು ಅಮಾನ್ಯೀಕರಣದಿಂದ ಆರ್ಥಿಕ ಸುಧಾರಣೆ ಆಗುವ ಬದಲು ಬಡವರ ಹೊಟ್ಟೆಗೆ ಭಾರಿ ಹೊಡೆತ ಬಿದಿದ್ದು ಕಾರ್ಪೊರೇಟ್ ವಲಯದ ಹಿತ ಕಾಪಾಡಿದಂತಾಗಿದೆ ಎಂದರು.ಚುನಾವಣೆಗೂ ಮುಂಚೆ ಘೋಷಣೆ ಮಾಡಿದ್ದ ಕಪ್ಪುಹಣ ನಿಯಂತ್ರಣ,ಅಚ್ಚೆದಿನ್,ಉದ್ಯೋಗ ಸೃಷ್ಠಿ ಎಂಬ ಮಾತುಗಳು ಸುಳ್ಳಾಗಿದೆ ಎಂದರು.
        ಅಮಾನ್ಯೀಕರಣದಿಂದ ಬಾರಿ ಬದಲಾವಣೆಯಾಗಲಿದೆ, ಕಪ್ಪು ಹಣ ನಿಯಂತ್ರಣ, ಭಯೋತ್ಪಾದನೆ ನಿರ್ಮೂಲನೆ ಆಗಲಿದೆ ಎಂದು ಪ್ರಧಾನಿ ಸೇರಿದಂತೆ ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆದರೆ ನೋಟು ಅಮಾನ್ಯೀಕರಣದಿಂದ ಆದ ಅನುಕೂಲವೇನು ಹಾಗೂ ಕ್ಯಾಶ್ ಲೆಸ್ ವ್ಯವಸ್ಥೆಯಿಂದ ಆಗುತ್ತಿರುವ ಸಮಸ್ಯೆಯೇನೆಂದು ಈಗ ಪ್ರತಿಯೊಬ್ಬರಿಗೂ ಮನವರಿಕೆಯಾಗಿದ್ದು ಮೋದಿಯವರ ಸರ್ವಾಧಿಕಾರಿ ಧೋರಣೆ ಬಗ್ಗೆ ಜನ ಕಿಡಿಕಾರುತ್ತಿದ್ದು ಸ್ವಚ್ಛ ಭಾರತ ಹೆಸರಿನಲ್ಲಿ ಪೊರಕೆ ಹಿಡಿದುಕೊಂಡು ಬೀದಿಯಲ್ಲಿ ಕಸ ಗುಡಿಸಿ ಕೇವಲ ಪ್ರಚಾರಕ್ಕಾಗಿ ಭಾಷಣ ಮಾಡಿದ್ದಷ್ಟೆ ಮೋದಿಯವರ ಸಾಧನೆ ಎಂದು ಟೀಕಿಸಿದರು.
         ಹುಳಿಯಾರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ಮಾತನಾಡಿ ಕೇಂದ್ರ ಸರ್ಕಾರ ನಾನಾ ತೆರಿಗೆ ವಿಧಿಸುವ ಮೂಲಕ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದೆ. ಜನರಿಗೆ ಇದನ್ನು ತಿಳಿಸಲು,ಜನರ ಕಷ್ಟಕ್ಕೆ ಸ್ಪಂದಿಸಲು ಕಾಂಗ್ರೆಸ್ ಜನವೇದನಾ ಸಭೆ ಹಮ್ಮಿಕೊಂಡಿದೆ.ದೇಶದ ಉತ್ತಮ ಮುಖ್ಯಮಂತ್ರಿ ಎಂಬ ಪ್ರಶಾಸ್ತಿಗೆ ಭಾಜನರಾಗಿರುವ ಸಿದ್ದರಾಮಯ್ಯ ತಮ್ಮ ನಾಲ್ಕು ವರ್ಷದ ಆಡಳಿತದಲ್ಲಿ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ನೀಡಿದ್ದಾರೆ ಎಂದರು..
             ಮೋದಿ ಅವರ ಡಿಜಿಟಲೀಕರಣ, ನಗದು ರಹಿತ ವ್ಯವಹಾರ ಯಶಸ್ಸು ಕಂಡಿಲ್ಲ.ಪ್ರಧಾನಿ ಮೋದಿ ಏಕಾಏಕಿ ನೋಟು ಅಮಾನ್ಯ ಮಾಡಿದ್ದರಿಂದ ಗ್ರಾಮೀಣ ಜನರ ಪರದಾಟ ಇನ್ನೂ ತಪ್ಪಿಲ್ಲ.ಬ್ಯಾಂಕ್‌ನಲ್ಲಿ ನಮ್ಮ ಹಣ ಪಡೆಯಲೂ ಸಾಕಷ್ಟು ಕಷ್ಟಪಡುವ ಪರಿಸ್ಥಿತಿ ಈಗಲೂ ಇದೆ ಎಂದರು.

              ಈ ಸಂದರ್ಭದಲ್ಲಿ ಜಿಲ್ಲಾಪಂಚಾಯ್ತಿ ಸದಸ್ಯ ವೈ.ಸಿ.ಸಿದ್ಧರಾಮಯ್ಯ,ಹಿರಿಯ ಕಾಂಗ್ರೆಸ್ ಮುಖಂಡ ಮಹ್ಮದ್ ಜಾಫರ್ ಸಾಬ್,ಗ್ರಾಪಂ ಸದಸ್ಯರುಗಳಾದ ಎಲ್.ಆರ್.ಚಂದ್ರಶೇಖರ್, ವೆಂಕಟೇಶ್ ಹಾಗೂ ದಯಾನಂದ್,ಕೆಂಕೆರೆ ಶಿವಕುಮಾರ್,ಪ್ರದೀಪ್,ಕುಮಾರ್,ರಹಮತ್ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.