ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಏಪ್ರಿಲ್, 2017 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕೋಡಿಪಾಳ್ಯದಲ್ಲಿ ಮೇ ೩ ರಿಂದ ಕಂಕಾಳಿನೂತನ ಮತ್ತು ತುಳುಜಾ ಭವಾನಿ ದೇವಾಲಯದ ಉದ್ಘಾಟನೆ

ನಾಗಾಸಾಧುಗಳ ಉಪಸ್ಥಿತಿ:ಖ್ಯಾತ ಕಲಾವಿದರಿಂದ ಸಾಂಸ್ಕೃತಿಕಕಾರ್ಯಕ್ರಮ ಹುಳಿಯಾರು :ಪಟ್ಟಣದ ಕೋಡಿಪಾಳ್ಯದಲ್ಲಿ ಶ್ರೀ ಮಾತಾ ಚಾರಿಟಲ್ ಟ್ರಸ್ಟ್ ವತಿಯಿಂದ ನೂತನವಾಗಿ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಕಂಕಾಳಿ ಮಾತೆ, ಶ್ರೀ ತುಳಜಾ ಭವಾನಿ, ಶ್ರೀ ಮರಿಯಮ್ಮ, ಶ್ರೀ ಬಲಮುರಿ ಗಣಪತಿ, ಶ್ರೀ ನವಗ್ರಹ ದೇವತೆಗಳು ಹಾಗೂ ಶ್ರೀ ಅನಂತ ಪದ್ಮನಾಭ ಸ್ವಾಮಿ ಮೂರ್ತಿಗಳ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಸಹಸ್ರ ಕುಂಭಾಭಿಷೇಕ ಮಹೋತ್ಸವವು ಮೇ ೩ ರಿಂದ ೫ರವರೆಗೆ ಜರುಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಗಂಗಾಧರ್ ತಿಳಿಸಿದರು.            ನೂತನ ದೇವಾಲಯ ಆವರಣದಲ್ಲಿನ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ಭಾನುವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ದೇವಾಲಯದ ಲೋಕಾರ್ಪಣೆ ಕುರಿತಂತೆ ಮಾತನಾಡಿದ ಅವರು ಮೇ ೩,೪ ಹಾಗೂ ೫ ರಂದು ದೇವಾಲಯಗಳ ಪ್ರಾರಂಭೋತ್ಸವವನ್ನು ಆಗಮ ಶಾಸ್ತ್ರದಂತೆ ನಡೆಸಲಾಗುವುದು ಎಂದರು.ಈ ನೂತನ ದೇವಾಲಯವನ್ನು ಸುಮಾರು ೩೦ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ೫ ಎಕರೆ ಜಾಗದಲ್ಲಿ ದೇವಾಲಯ ಸೇರಿದಂತೆ,ಸೇವಾಲಾಲ್ ಸಾಂಸ್ಕೃತಿಕ ಸದನ, ಪಿರಮಿಡ್ ಆಕಾರದ ೨೦೦ ಮಂದಿ ಧ್ಯಾನ ಮಾಡಬಹುದಾದ ಧ್ಯಾನ ಮಂದಿರವನ್ನು ಕೂಡಾ ನಿರ್ಮಿಸಲಾಗಿದ್ದು ಪ್ರತಿಷ್ಟಾಪನೆಗೆ ಹಿಮಾಲಯದಲ್ಲಿ ತಪಸ್ಸು ನಿರತರಾಗಿರುವ ನಾಗಸಾಧುಗಳು ಆಗಮಿಸಲಿದ್ದಾರೆ ಎಂದರು.ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಗಳಿಂದ ಭಕ್ತಾದಿಗಳು ಬರುವ ನಿರೀ

ಹುಳಿಯಾರಿನಲ್ಲಿ ಅದುರಿದ ಭೂಮಿ:ಭಯಭೀತರಾದ ಜನ

ಹುಳಿಯಾರು ಸೇರಿದಂತೆ ಗಡಿಭಾಗದ ಹೊಸದುರ್ಗ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ಬೆಳಿಗ್ಗೆ ಅಲ್ಪ ತೀವ್ರತೆಯ ಭೂ ಕಂಪವಾಗಿದ್ದು,ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲಾಗಿದೆ. ಮೇಲನಹಳ್ಳಿಯ ಗ್ರಾಮದಲ್ಲಿ ಮನೆಯಿಂದ ಭಯಭೀತರಾಗಿ ಆಚೆ ಓಡಿಬಂದ ಜನ ಭೂಕಂಪನದ ಬಗ್ಗೆ ಚರ್ಚಿಸುತ್ತಿರುವುದು. ಇಂದು ಮುಂಜಾನೆ ೬.೪೦ರ ಸಮಯದಲ್ಲಿ ಹುಳಿಯಾರು ಮತ್ತಿತರ ಕೆಲ ಗ್ರಾಮಗಳಲ್ಲಿ ಐದಾರು ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿದ್ದು ಮನೆಯಲ್ಲಿದ್ದವರು ಇದರ ತೀವ್ರತೆಗೆ ಭಯಭೀತರಾಗಿ ಆಚೆ ಓಡಿಬಂದಿದ್ದಾರೆ. ಮನೆಯಲ್ಲಿ ಮಲಗಿದ್ದವರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು ,ಗಾಬರಿಯಿಂದ ಏನಾಗಿದೆ ಎತ್ತಾಗಿದೆ ಎಂದು ತಿಳಿಯದೆ ಆಚೆ ಓಡಿಬಂದಿದ್ದಾರೆ.ಒಳಗಿದ್ದವರನ್ನು ಕೂಗಿ ಕರೆದಿದ್ದಾರೆ.ಭೂಕಂಪನದ ತೀವ್ರತೆ ಮಹಡಿ ಮೇಲಿದ್ದವರಿಗೆ ಹೆಚ್ಚಿಗೆ ಅನುಭವಕ್ಕೆ ಬಂದಿದ್ದು ಇಳಿದು ಓಡಿದ್ದಷ್ಟೆ ಗೊತ್ತು ಎನ್ನುತ್ತಾರೆ.ಕೆಲವೇ ಸೆಂಕೆಂಡುಗಳಷ್ಟು ಕಾಲದ ಕಂಪನವಾದ್ದರಿಂದ ಕೆಲವರಿಗೆ ಏನಾಯಿತೆಂದು ತಿಳಿಯದೆ ಆತಂಕದಲ್ಲಿದ್ದರು.ಅಕ್ಕಪಕ್ಕದವರ ಜೊತೆ ತಾವು ಅನುಭಸಿದ್ದನ್ನು ಹೇಳಿಕೊಂಡು ಮುಂದೇನು ಎಂದು ಅವರಿವರಿಗೆ ಫೋನ್ ಮಾಡುತ್ತಿದ್ದ ದೃಶ್ಯ ಕಂಡುಬಂತು.ಒಟ್ಟಾರೆ ಎಲ್ಲೆಡೆಯೂ ಭೂಕಂಪನದ್ದೆ ಮಾತಾಗಿದ್ದು .ಭೂಕಂಪನದಿಂದಾಗಿ ಹೋಬಳಿಯಲ್ಲಿ ಯಾವುದೇ ಸಾವು ನೋವು,ಮತ್ತಿತರ ಅವಘಡಗಳು ಸಂಭವಿಸಿರುವುದು ವರದಿಯಾಗಿಲ್ಲ.                ಹುಳಿಯಾರು,ಕಂಪನಹಳ್ಳಿ,ಯ