ವಿಷಯಕ್ಕೆ ಹೋಗಿ

ಕೋಡಿಪಾಳ್ಯದಲ್ಲಿ ಮೇ ೩ ರಿಂದ ಕಂಕಾಳಿನೂತನ ಮತ್ತು ತುಳುಜಾ ಭವಾನಿ ದೇವಾಲಯದ ಉದ್ಘಾಟನೆ

ನಾಗಾಸಾಧುಗಳ ಉಪಸ್ಥಿತಿ:ಖ್ಯಾತ ಕಲಾವಿದರಿಂದ ಸಾಂಸ್ಕೃತಿಕಕಾರ್ಯಕ್ರಮ

ಹುಳಿಯಾರು:ಪಟ್ಟಣದ ಕೋಡಿಪಾಳ್ಯದಲ್ಲಿ ಶ್ರೀ ಮಾತಾ ಚಾರಿಟಲ್ ಟ್ರಸ್ಟ್ ವತಿಯಿಂದ ನೂತನವಾಗಿ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಕಂಕಾಳಿ ಮಾತೆ, ಶ್ರೀ ತುಳಜಾ ಭವಾನಿ, ಶ್ರೀ ಮರಿಯಮ್ಮ, ಶ್ರೀ ಬಲಮುರಿ ಗಣಪತಿ, ಶ್ರೀ ನವಗ್ರಹ ದೇವತೆಗಳು ಹಾಗೂ ಶ್ರೀ ಅನಂತ ಪದ್ಮನಾಭ ಸ್ವಾಮಿ ಮೂರ್ತಿಗಳ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗೂ ವಿಮಾನ ಗೋಪುರ ಸಹಸ್ರ ಕುಂಭಾಭಿಷೇಕ ಮಹೋತ್ಸವವು ಮೇ ೩ ರಿಂದ ೫ರವರೆಗೆ ಜರುಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಗಂಗಾಧರ್ ತಿಳಿಸಿದರು.

           ನೂತನ ದೇವಾಲಯ ಆವರಣದಲ್ಲಿನ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ಭಾನುವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ದೇವಾಲಯದ ಲೋಕಾರ್ಪಣೆ ಕುರಿತಂತೆ ಮಾತನಾಡಿದ ಅವರು ಮೇ ೩,೪ ಹಾಗೂ ೫ ರಂದು ದೇವಾಲಯಗಳ ಪ್ರಾರಂಭೋತ್ಸವವನ್ನು ಆಗಮ ಶಾಸ್ತ್ರದಂತೆ ನಡೆಸಲಾಗುವುದು ಎಂದರು.ಈ ನೂತನ ದೇವಾಲಯವನ್ನು ಸುಮಾರು ೩೦ ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ೫ ಎಕರೆ ಜಾಗದಲ್ಲಿ ದೇವಾಲಯ ಸೇರಿದಂತೆ,ಸೇವಾಲಾಲ್ ಸಾಂಸ್ಕೃತಿಕ ಸದನ, ಪಿರಮಿಡ್ ಆಕಾರದ ೨೦೦ ಮಂದಿ ಧ್ಯಾನ ಮಾಡಬಹುದಾದ ಧ್ಯಾನ ಮಂದಿರವನ್ನು ಕೂಡಾ ನಿರ್ಮಿಸಲಾಗಿದ್ದು ಪ್ರತಿಷ್ಟಾಪನೆಗೆ ಹಿಮಾಲಯದಲ್ಲಿ ತಪಸ್ಸು ನಿರತರಾಗಿರುವ ನಾಗಸಾಧುಗಳು ಆಗಮಿಸಲಿದ್ದಾರೆ ಎಂದರು.ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಗಳಿಂದ ಭಕ್ತಾದಿಗಳು ಬರುವ ನಿರೀಕ್ಷೆ ಇದ್ದು, ಬರುವ ಎಲ್ಲ ಭಕ್ತರಿಗೂ ಊಟದ ವ್ಯವಸ್ಥೆ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.
ದೇವಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಶ್ರೀ ಅನಂತಪದ್ಮನಾಭಸ್ವಾಮಿ
           ನಾಗಾಸಾಧುಗಳ ದಿವ್ಯ ಸಾನಿಧ್ಯದಲ್ಲಿ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ವಿಮಾನ ಗೋಪುರ ಸಹಸ್ರ ಕುಂಬಾಭಿಷೇಕ ಮಹೋತ್ಸವ ಜರುಗಲಿದ್ದು ಹೋಮಹವನಾದಿಗಳು,ಭಜನೆ ಮುಂತಾದ ಧಾರ್ಮಿಕ ವಿಧಿಗಳನ್ನು ನೆರವೇರಿಸಲು ಶೃಂಗೇರಿಯಿಂದ ೩೨ ಮಂದಿಯನ್ನು ಋತ್ವಿಜರು ಆಗಮಿಸಲಿದ್ದಾರೆ ಎಂದರು.
ಮೇ ೨ ರ ಸಂಜೆ ಹುಳಿಯಾರು ಗ್ರಾಮದ ಮುಖ್ಯದ್ವಾರದಲ್ಲಿ ನಾಗಸಾಧುಗಳ ಸ್ವಾಗತದೊಂದಿಗೆ ಪೂಜಾ ಕೈಕರ್ಯಗಳಿಗೆ ಚಾಲನೆ ನೀಡಲಾಗುವುದು ಎಂದರು.
             ಮೇ ೩ ರಂದು ಬುಧವಾರ ಬೆಳಗ್ಗೆ ೭ ಗಂಟೆಗೆ ಹೋಮ, ಹವನಗಳು ಆರಂಭವಾಗಲಿದ್ದು ಅಪರೂಪದ 'ಗ'ಕಾರ ಸಹಸ್ರ ಗಣಯಾಗ ನಡೆಯುವುದು ವಿಶೇಷವಾಗಿದೆ.ದೇವಸ್ಥಾನಕ್ಕೆ ಹೊಂದಿ ಕೊಂಡಂತೆ ನಿರ್ಮಿಸಲಾಗಿರುವ ಶ್ರೀ ಸೇವಾಲಾಲ್ ಸಾಂಸ್ಕೃತಿಕ ಸದನ ಸಭಾಂಗಣವನ್ನು ಅದೇದಿನ ಬೆಳಗ್ಗೆ ೧೦.೪೫ಕ್ಕೆ ಕನ್ನಡ ಚಲನಚಿತ್ರ ರಂಗದ ಹಿರಿಯ ನಟರಾದ ಎಸ್.ಶಿವರಾಂ ಲೋಕಾರ್ಪಣೆ ಮಾಡುವರು. ಯಾತ್ರಾರ್ಥಿಗಳ ಅನುಕೂಲಕ್ಕಾಗಿ ನಿರ್ಮಾಣ ಮಾಡಲಾಗಿರುವ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದ ಶ್ರೀಮಾತಾ ಯಾತ್ರಿನಿವಾಸ ವಸತಿ ಗೃಹವನ್ನು ಇದೇ ಸಂದರ್ಭದಲ್ಲಿ ಅಯ್ಯಪ್ಪ ಸೇವಾ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್ ಲೋಕಾರ್ಪಣೆ ಮಾಡಲಿದ್ದಾರೆ. ಕಲಾವಿದರಾದ ಶಶಿಧರ ಹಡಪ ಮುಖ್ಯ ಅತಿಥಿಗಳಾಗಿರುವರು. ಅಂದು ಸಂಜೆ ೬ ಗಂಟೆಗೆ ಬೆಂಗಳೂರಿನ ಪ್ರಭಾತ್ ಕಲಾವಿದರಿಂದ ಮಹಿಷಾಸುರ ಮರ್ದಿನಿ ನೃತ್ಯ ರೂಪಕವನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.
           ಮೇ.೪ ರಂದು ಬೆಳಿಗ್ಗೆ ಶಕ್ತಿಪೀಠವಾದ ಶ್ರೀ ಕಂಕಾಳಿ ಮಾತೆ, ಶ್ರೀ ತುಳಜ ಭವಾನಿ, ಶ್ರೀ ಮರಿಯಮ್ಮ, ಶ್ರೀ ಮಹಾಗಣಪತಿ, ಶ್ರೀ ನವಗ್ರಹ ದೇವತೆಗಳು ಹಾಗೂ ಶ್ರೀ ಅನಂತಪದ್ಮನಾಭಸ್ವಾಮಿ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗೂ ವಿಮಾನಗೋಪುರ, ಸಹಸ್ರ ಕುಂಭಾಭಿಷೇಕ ಮಹೋತ್ಸವ ಜರುಗಲಿದೆ. ನಾಗಾಸಾಧುಗಳಿಂದ ಏಕಾದಶರುದ್ರಹವನ ಪೂರ್ಣಾಹುತಿ,ಮಹಾಮಂಗಲಳಾರತಿ ತತ್ಸಂಬಂಧ ಹೋಮಹವನಾದಿಗಳು ಜರುಗಲಿದೆ.ಸಂಜೆ ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಬೆಂಗಳೂರು ಇವರಿಂದ ಶಾ.ಸುಪರ್ಣ ವೆಂಕಟೇಶ್ ನಿರ್ದೇಶನದಲ್ಲಿ ಮಹಾಶಕ್ತಿ ನೃತ್ಯರೂಪಕ ಏರ್ಪಡಿಸಲಾಗಿದೆ ಎಂದರು.
ಹುಳಿಯಾರು ಪಟ್ಟಣದ ಕೋಡಿಪಾಳ್ಯದಲ್ಲಿ ಶ್ರೀ ಮಾತಾ ಚಾರಿಟಲ್ ಟ್ರಸ್ಟ್ ವತಿಯಿಂದ ನಿರ್ಮಿಸಿರುವ ಶ್ರೀ ಕಂಕಾಳಿ ಮಾತೆ, ಶ್ರೀ ತುಳಜಾ ಭವಾನಿ, ಶ್ರೀ ಮರಿಯಮ್ಮ, ಶ್ರೀ ಬಲಮುರಿ ಗಣಪತಿ, ಶ್ರೀ ನವಗ್ರಹ ದೇವತೆಗಳ ದೇವಾಲಯ ಸಮುಚ್ಚಯ.
           ಮೇ ೫ ರ ಮಧ್ಯಾಹ್ನ ೧೨.೧೫ಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಈ ಭವ್ಯ ದೇಗುಲಗಳನ್ನು ಲೋಕಾರ್ಪಣೆಗೊಳಿಸಲಿದ್ದು. ಶಾಸಕ ಸಿ.ಬಿ.ಸುರೇಶ್‌ಬಾಬು ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ, ಮಾಜಿ ಲೋಕೋಪಯೋಗಿ ಖಾತೆ ಸಚಿವ ಹೆಚ್. ಡಿ.ರೇವಣ್ಣ, ಹಾಸನ ಜಿ.ಪಂ.ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಭವಾನಿ ರೇವಣ್ಣ ಅವರುಗಳು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
         ಕಾರ್ಯಕ್ರಮದಲ್ಲಿ ಸಂಸದರಾದ ಎಸ್.ಪಿ. ಮುದ್ದಹನುಮೇಗೌಡ, ಡಿ.ಕೆ.ಸುರೇಶ್, ಬಿ.ಎನ್.ಚಂದ್ರಪ್ಪ, ಶಾಸಕರುಗಳಾದ ಕೆ.ಷಡಕ್ಷರಿ, ಎಂ.ಟಿ. ಕೃಷ್ಣಪ್ಪ, ಡಾ.ಎಸ್. ರಫೀಕ್ ಅಹಮದ್, ಬಿ.ಸುರೇಶ್ ಗೌಡ, ಪಿ.ಆರ್.ಸುಧಾಕರಲಾಲ್, ಟಿ.ಎಂ.ತಿಮ್ಮರಾಯಪ್ಪ, ಡಿ.ನಾಗರಾಜಯ್ಯ, ಎಸ್.ಆರ್.ಶ್ರೀನಿವಾಸ್, ಕೆ.ಎನ್. ರಾಜಣ್ಣ, ಕೆ.ಶಿವಮೂರ್ತಿ ನಾಯಕ್, ವಿ.ಪ. ಸದಸ್ಯರಾದ ಬಿ.ಎಂ.ಕಾಂತರಾಜು, ರಮೇಶ್ ಬಾಬು ಮತ್ತು ವಿ.ಎಸ್.ಉಗ್ರಪ್ಪ ಅವರುಗಳು ವಿಶೇಷ ಆಹ್ವಾನಿತರಾಗಿರುತ್ತಾರೆ. ಶಾಸಕರಾದ ಡಾ.ಉಮೇಶ್ ಜಿ.ಜಾಧವ್, ಶಾರದಾ ಪೋರ್ಯಾನಾಯಕ್, ಭೀಮಾನಾಯಕ್, ಪ್ರಭು ಚವ್ಹಾಣ್, ಪಿ.ರಾಜೀವ್, ಮಾಜಿ ಸಚಿವರಾದ ಪಿ.ಟಿ.ಪರಮೇಶ್ವರ ನಾಯಕ್ ಹಾಗೂ ಲಲಿತಾ ನಾಯಕ್, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಾಲರಾಜ್, ಮಾಜಿ ಶಾಸಕರುಗಳಾದ ಜೆ.ಸಿ.ಮಾಧುಸ್ವಾಮಿ, ಕಿರಣ್‌ಕುಮಾರ್, ಕೆ.ಲಕ್ಕಪ್ಪ, ರೇವು ನಾಯಕ್ ಬೆಳಮಗಿ, ಬಸವರಾಜ ನಾಯಕ್, ನೇಮಿರಾಜ್ ನಾಯಕ್, ಚಂದ್ರಾನಾಯಕ್, ವಾಲ್ಮೀಕಿ ನಾಯಕ್, ಸೋಮ್ಲಾನಾಯಕ್, ಎಚ್.ಡಿ. ಲಮಾಣಿ, ಪ್ರಕಾಶ್ ರಾಥೋಡ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು ಎಂದರು..
 ಶ್ರೀ ಸೇವಾಲಾಲ್ ಸಾಂಸ್ಕೃತಿಕ ಸದನ ಸಭಾಂಗಣ

       ಪತ್ರಿಕಾಗೋಷ್ಠಿಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಜಿ.ರಘುನಾಥ್,ಉಮೇಶ್ ಮಾಯಕ್,ಚಂದ್ರಶೇಖರ್, ತಿಮ್ಮಾನಾಯಕ್,ಸಕ್ರಾ ನಾಯಕ್,ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನೀಯರ್ ನಾಗರಾಜು,ಎಇಇ ಗವೀರಂಗಯ್ಯ, ನಂದೀಹಳ್ಳಿ ಶಿವಣ್ಣ ಉಪಸ್ಥಿತರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...