ವಿಷಯಕ್ಕೆ ಹೋಗಿ

ಲಂಬಾಣಿ ಸಂಸ್ಕೃತಿ ಅಖಂಡ ಭಾರತೀಯ ಸಂಸ್ಕೃತಿಯಾಗಿದೆ :

ಲಂಬಾಣಿ ಸಮುದಾಯದವರು ಭಾರತದ ಎಲ್ಲೆಡೆಯಿದ್ದು ತಮ್ಮದೇ ಆದ ಸಂಸ್ಕೃತಿಯನ್ನು ಹೊಂದುವ ಮೂಲಕ ಪುರಾತನ ಕಾಲದಿಂದಲೂ ತಮ್ಮ ಸಂಸ್ಕೃತಿಯನ್ನು ಇಂದಿನವರೆಗೆ ಅನುಸರಿಸಿಕೊಂಡು ಬರುತ್ತಿದ್ದು ನಮ್ಮ ಲಂಬಾಣಿ ಸಂಸ್ಕೃತಿ ಅಖಂಡ ಭಾರತದ ಸಂಸ್ಕೃತಿಯಾಗಿದೆ ಎಂದು ಮಾಯಕೊಂಡ ಶಾಸಕ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಕೆ.ಶಿವಮೂರ್ತಿ ನಾಯಕ್ ಅಭಿಮತ ವ್ಯಕ್ತಪಡಿಸಿದರು.
          ಹುಳಿಯಾರಿನ ಕೋಡೀಪಾಳ್ಯದ ಕಂಕಾಳಿ ದೇವಾಲಯ ಕಂಕಾಳಿ ಮತ್ತು ಶ್ರೀ ತುಳಜಾ ಭವಾನಿ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಹುಳಿಯಾರು ಹೋಬಳಿ ಕೋಡಿಪಾಳ್ಯದಲ್ಲಿ ಕಂಕಾಳಿ ಪ್ರಾರಂಭೋತ್ಸವಕ್ಕೆ ಆಗಮಿಸಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಕೆ.ಶಿವಮೂರ್ತಿ ನಾಯಕ್ ಮಾಧ್ಯಮದವರೊಂದಿಗೆ ಮಾತನಾಡಿದರು.
       ಲಂಬಾಣಿ(ಬಂಜಾರ) ಜನಾಂಗದವರು ಹಿಂದಿನಿಂದಲೂ ಸಹ ತಮ್ಮದೇ ಆದ ವಿಶಿಷ್ಟ ಉಡುಗೆತೊಡುಗೆ ಹಾಗೂ ಭಾಷೆಯನ್ನು ಹೊಂದಿದ್ದು ಇಂದಿಗೂ ಅದನ್ನೇ ಅನುಸರಿಸಿಕೊಂಡು ಸಾಗುತ್ತಿದ್ದಾರೆ. ನಮ್ಮ ಈ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೋಯ್ಯುವ ಕೆಲಸವನ್ನು ಮಾಡಬೇಕಿದೆ ಎಂದರು. ಲಂಬಾಣಿ ಸಮುದಾಯದ ನಾವುಗಳು ಮೂಲ ನಿವಾಸಿಗಳೇ ಆಗಿದ್ದರೂ ಸಹ ಇಂದು ನಮ್ಮ ಹಕ್ಕುಗಳು ನಮಗೆ ದೊರೆಯದಂತಾಗಿವೆ ನಮಗೆ ಸಿಗಬೇಕಾದ ಹಕ್ಕುಗಳು ಸಮರ್ಪಕವಾಗಿ ಸಿಗದೆ ಹೋದಲ್ಲಿ ಲಂಬಾಣಿ ಸಮುದಾಯದ ಎಲ್ಲರೂ ರಾಷ್ತ್ರೀಯ ಮಾನವಹಕ್ಕು ಅಯೋಗಕ್ಕೆ ಹೋಗುವ ಮೂಲಕ ತಮಗೆ ಸಿಗಬೇಕಾದ ಹಕ್ಕುಬಾಧ್ಯತೆಯನ್ನು ಪಡೆಯುತ್ತೇವೆ ಎಂದರು. ನಾವು ಮಾತನಾಡುವ ಲಂಬಾಣಿ ಭಾಷೆಗೆ ಲಿಪಿ ಇಲ್ಲದರೂ ಈ ಭಾಷೆ ಇತರ ಭಾಷೆಗಳಷ್ಟೆ ಪುರಾತನವಾದದ್ದು ಅದಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡುವ ಕೆಲಸ ಸರ್ಕಾರದಿಂದ ಆಗಬೇಕಿದೆ ಎಂದರು.
ಪ್ರಸ್ತುತದಲ್ಲಿ ರಾಜ್ಯರಾಜ್ಯಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಿದ್ದು ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರು ಕೇಂದ್ರದ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರೊಂದಿಗೆ ಚರ್ಚಿಸಿ ಈ ಬಿಕ್ಕಟ್ಟನ್ನು ಪರಿಸಹಿಸಬೇಕಿದೆಎಂದರು.
ಪ್ರವಾಸೋದ್ಯಮ ಸ್ಥಳವಾಗಲಿ : ಇಲ್ಲಿ ನಿರ್ಮಾಣವಾಗಿರುವಂತ ಅದ್ಭುತ ದೇವಾಲಯ ಹಾಗೂ ಅನಂತಪದ್ಮನಾಭ ಮೂರ್ತಿ ಅತ್ಯಂತ ವಿಶಿಷ್ಟವಾಗಿದ್ದು, ಈ ಧಾರ್ಮಿಕ ಕ್ಷೇತ್ರವನ್ನು ಸರ್ಕಾರದವರು ಗುರುತಿಸಿ ಕರ್ನಾಟಕದ ಪ್ರವಾಸೋದ್ಯಮ ಪಟ್ಟಿಯಲ್ಲಿ ಸೇರಿಸಬೇಕಿದೆ ಎಂದರು. ಐತಿಹಾಸಿಕ ಜೋಡಣೆಯಾಗಿ ಈ ಕ್ಷೇತ್ರ ತಲೆಯೆತ್ತಿದ್ದು , ಆಚಾರ ವಿಚಾರದ ಜೊತೆಗೆ ಮುಂದಿನ ದಿನಗಳಲ್ಲಿ ತಾಂತ್ರಿಕ, ವೃತ್ತಿಪರ ಶಿಕ್ಷಣ ನೀಡುವ ಸ್ಥಳವಾಗಿ ಬೆಳೆಯಲಿ ಎಂದರು. ಇಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಚಟುವಟಿಕೆಗಳು ರಾಷ್ಟ್ರವ್ಯಾಪಿ ಹರಡಲಿ ಎಂದರು.

       ಈ ಸಂದರ್ಭದಲ್ಲಿ ಮಾಜಿ ಜಿಪಂ ಅಧ್ಯಕ್ಷ ಜಿ.ರಘುನಾಥ್,ಜಯರಾಂನಾಯಕ್,ಗ್ರಾಪಂ ಉಪಾಧ್ಯಕ್ಷ ಗಣೇಶ್ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...