ವಿಷಯಕ್ಕೆ ಹೋಗಿ

ಲಂಬಾಣಿ ಸಂಸ್ಕೃತಿ ಅಖಂಡ ಭಾರತೀಯ ಸಂಸ್ಕೃತಿಯಾಗಿದೆ :

ಲಂಬಾಣಿ ಸಮುದಾಯದವರು ಭಾರತದ ಎಲ್ಲೆಡೆಯಿದ್ದು ತಮ್ಮದೇ ಆದ ಸಂಸ್ಕೃತಿಯನ್ನು ಹೊಂದುವ ಮೂಲಕ ಪುರಾತನ ಕಾಲದಿಂದಲೂ ತಮ್ಮ ಸಂಸ್ಕೃತಿಯನ್ನು ಇಂದಿನವರೆಗೆ ಅನುಸರಿಸಿಕೊಂಡು ಬರುತ್ತಿದ್ದು ನಮ್ಮ ಲಂಬಾಣಿ ಸಂಸ್ಕೃತಿ ಅಖಂಡ ಭಾರತದ ಸಂಸ್ಕೃತಿಯಾಗಿದೆ ಎಂದು ಮಾಯಕೊಂಡ ಶಾಸಕ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಕೆ.ಶಿವಮೂರ್ತಿ ನಾಯಕ್ ಅಭಿಮತ ವ್ಯಕ್ತಪಡಿಸಿದರು.
          ಹುಳಿಯಾರಿನ ಕೋಡೀಪಾಳ್ಯದ ಕಂಕಾಳಿ ದೇವಾಲಯ ಕಂಕಾಳಿ ಮತ್ತು ಶ್ರೀ ತುಳಜಾ ಭವಾನಿ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಹುಳಿಯಾರು ಹೋಬಳಿ ಕೋಡಿಪಾಳ್ಯದಲ್ಲಿ ಕಂಕಾಳಿ ಪ್ರಾರಂಭೋತ್ಸವಕ್ಕೆ ಆಗಮಿಸಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಕೆ.ಶಿವಮೂರ್ತಿ ನಾಯಕ್ ಮಾಧ್ಯಮದವರೊಂದಿಗೆ ಮಾತನಾಡಿದರು.
       ಲಂಬಾಣಿ(ಬಂಜಾರ) ಜನಾಂಗದವರು ಹಿಂದಿನಿಂದಲೂ ಸಹ ತಮ್ಮದೇ ಆದ ವಿಶಿಷ್ಟ ಉಡುಗೆತೊಡುಗೆ ಹಾಗೂ ಭಾಷೆಯನ್ನು ಹೊಂದಿದ್ದು ಇಂದಿಗೂ ಅದನ್ನೇ ಅನುಸರಿಸಿಕೊಂಡು ಸಾಗುತ್ತಿದ್ದಾರೆ. ನಮ್ಮ ಈ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೋಯ್ಯುವ ಕೆಲಸವನ್ನು ಮಾಡಬೇಕಿದೆ ಎಂದರು. ಲಂಬಾಣಿ ಸಮುದಾಯದ ನಾವುಗಳು ಮೂಲ ನಿವಾಸಿಗಳೇ ಆಗಿದ್ದರೂ ಸಹ ಇಂದು ನಮ್ಮ ಹಕ್ಕುಗಳು ನಮಗೆ ದೊರೆಯದಂತಾಗಿವೆ ನಮಗೆ ಸಿಗಬೇಕಾದ ಹಕ್ಕುಗಳು ಸಮರ್ಪಕವಾಗಿ ಸಿಗದೆ ಹೋದಲ್ಲಿ ಲಂಬಾಣಿ ಸಮುದಾಯದ ಎಲ್ಲರೂ ರಾಷ್ತ್ರೀಯ ಮಾನವಹಕ್ಕು ಅಯೋಗಕ್ಕೆ ಹೋಗುವ ಮೂಲಕ ತಮಗೆ ಸಿಗಬೇಕಾದ ಹಕ್ಕುಬಾಧ್ಯತೆಯನ್ನು ಪಡೆಯುತ್ತೇವೆ ಎಂದರು. ನಾವು ಮಾತನಾಡುವ ಲಂಬಾಣಿ ಭಾಷೆಗೆ ಲಿಪಿ ಇಲ್ಲದರೂ ಈ ಭಾಷೆ ಇತರ ಭಾಷೆಗಳಷ್ಟೆ ಪುರಾತನವಾದದ್ದು ಅದಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡುವ ಕೆಲಸ ಸರ್ಕಾರದಿಂದ ಆಗಬೇಕಿದೆ ಎಂದರು.
ಪ್ರಸ್ತುತದಲ್ಲಿ ರಾಜ್ಯರಾಜ್ಯಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಿದ್ದು ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರು ಕೇಂದ್ರದ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರೊಂದಿಗೆ ಚರ್ಚಿಸಿ ಈ ಬಿಕ್ಕಟ್ಟನ್ನು ಪರಿಸಹಿಸಬೇಕಿದೆಎಂದರು.
ಪ್ರವಾಸೋದ್ಯಮ ಸ್ಥಳವಾಗಲಿ : ಇಲ್ಲಿ ನಿರ್ಮಾಣವಾಗಿರುವಂತ ಅದ್ಭುತ ದೇವಾಲಯ ಹಾಗೂ ಅನಂತಪದ್ಮನಾಭ ಮೂರ್ತಿ ಅತ್ಯಂತ ವಿಶಿಷ್ಟವಾಗಿದ್ದು, ಈ ಧಾರ್ಮಿಕ ಕ್ಷೇತ್ರವನ್ನು ಸರ್ಕಾರದವರು ಗುರುತಿಸಿ ಕರ್ನಾಟಕದ ಪ್ರವಾಸೋದ್ಯಮ ಪಟ್ಟಿಯಲ್ಲಿ ಸೇರಿಸಬೇಕಿದೆ ಎಂದರು. ಐತಿಹಾಸಿಕ ಜೋಡಣೆಯಾಗಿ ಈ ಕ್ಷೇತ್ರ ತಲೆಯೆತ್ತಿದ್ದು , ಆಚಾರ ವಿಚಾರದ ಜೊತೆಗೆ ಮುಂದಿನ ದಿನಗಳಲ್ಲಿ ತಾಂತ್ರಿಕ, ವೃತ್ತಿಪರ ಶಿಕ್ಷಣ ನೀಡುವ ಸ್ಥಳವಾಗಿ ಬೆಳೆಯಲಿ ಎಂದರು. ಇಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಚಟುವಟಿಕೆಗಳು ರಾಷ್ಟ್ರವ್ಯಾಪಿ ಹರಡಲಿ ಎಂದರು.

       ಈ ಸಂದರ್ಭದಲ್ಲಿ ಮಾಜಿ ಜಿಪಂ ಅಧ್ಯಕ್ಷ ಜಿ.ರಘುನಾಥ್,ಜಯರಾಂನಾಯಕ್,ಗ್ರಾಪಂ ಉಪಾಧ್ಯಕ್ಷ ಗಣೇಶ್ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...