ವಿಷಯಕ್ಕೆ ಹೋಗಿ

ಲಂಬಾಣಿ ಸಂಸ್ಕೃತಿ ಅಖಂಡ ಭಾರತೀಯ ಸಂಸ್ಕೃತಿಯಾಗಿದೆ :

ಲಂಬಾಣಿ ಸಮುದಾಯದವರು ಭಾರತದ ಎಲ್ಲೆಡೆಯಿದ್ದು ತಮ್ಮದೇ ಆದ ಸಂಸ್ಕೃತಿಯನ್ನು ಹೊಂದುವ ಮೂಲಕ ಪುರಾತನ ಕಾಲದಿಂದಲೂ ತಮ್ಮ ಸಂಸ್ಕೃತಿಯನ್ನು ಇಂದಿನವರೆಗೆ ಅನುಸರಿಸಿಕೊಂಡು ಬರುತ್ತಿದ್ದು ನಮ್ಮ ಲಂಬಾಣಿ ಸಂಸ್ಕೃತಿ ಅಖಂಡ ಭಾರತದ ಸಂಸ್ಕೃತಿಯಾಗಿದೆ ಎಂದು ಮಾಯಕೊಂಡ ಶಾಸಕ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಕೆ.ಶಿವಮೂರ್ತಿ ನಾಯಕ್ ಅಭಿಮತ ವ್ಯಕ್ತಪಡಿಸಿದರು.
          ಹುಳಿಯಾರಿನ ಕೋಡೀಪಾಳ್ಯದ ಕಂಕಾಳಿ ದೇವಾಲಯ ಕಂಕಾಳಿ ಮತ್ತು ಶ್ರೀ ತುಳಜಾ ಭವಾನಿ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಹುಳಿಯಾರು ಹೋಬಳಿ ಕೋಡಿಪಾಳ್ಯದಲ್ಲಿ ಕಂಕಾಳಿ ಪ್ರಾರಂಭೋತ್ಸವಕ್ಕೆ ಆಗಮಿಸಿದ್ದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಕೆ.ಶಿವಮೂರ್ತಿ ನಾಯಕ್ ಮಾಧ್ಯಮದವರೊಂದಿಗೆ ಮಾತನಾಡಿದರು.
       ಲಂಬಾಣಿ(ಬಂಜಾರ) ಜನಾಂಗದವರು ಹಿಂದಿನಿಂದಲೂ ಸಹ ತಮ್ಮದೇ ಆದ ವಿಶಿಷ್ಟ ಉಡುಗೆತೊಡುಗೆ ಹಾಗೂ ಭಾಷೆಯನ್ನು ಹೊಂದಿದ್ದು ಇಂದಿಗೂ ಅದನ್ನೇ ಅನುಸರಿಸಿಕೊಂಡು ಸಾಗುತ್ತಿದ್ದಾರೆ. ನಮ್ಮ ಈ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೋಯ್ಯುವ ಕೆಲಸವನ್ನು ಮಾಡಬೇಕಿದೆ ಎಂದರು. ಲಂಬಾಣಿ ಸಮುದಾಯದ ನಾವುಗಳು ಮೂಲ ನಿವಾಸಿಗಳೇ ಆಗಿದ್ದರೂ ಸಹ ಇಂದು ನಮ್ಮ ಹಕ್ಕುಗಳು ನಮಗೆ ದೊರೆಯದಂತಾಗಿವೆ ನಮಗೆ ಸಿಗಬೇಕಾದ ಹಕ್ಕುಗಳು ಸಮರ್ಪಕವಾಗಿ ಸಿಗದೆ ಹೋದಲ್ಲಿ ಲಂಬಾಣಿ ಸಮುದಾಯದ ಎಲ್ಲರೂ ರಾಷ್ತ್ರೀಯ ಮಾನವಹಕ್ಕು ಅಯೋಗಕ್ಕೆ ಹೋಗುವ ಮೂಲಕ ತಮಗೆ ಸಿಗಬೇಕಾದ ಹಕ್ಕುಬಾಧ್ಯತೆಯನ್ನು ಪಡೆಯುತ್ತೇವೆ ಎಂದರು. ನಾವು ಮಾತನಾಡುವ ಲಂಬಾಣಿ ಭಾಷೆಗೆ ಲಿಪಿ ಇಲ್ಲದರೂ ಈ ಭಾಷೆ ಇತರ ಭಾಷೆಗಳಷ್ಟೆ ಪುರಾತನವಾದದ್ದು ಅದಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡುವ ಕೆಲಸ ಸರ್ಕಾರದಿಂದ ಆಗಬೇಕಿದೆ ಎಂದರು.
ಪ್ರಸ್ತುತದಲ್ಲಿ ರಾಜ್ಯರಾಜ್ಯಗಳ ನಡುವೆ ಭಿನ್ನಾಭಿಪ್ರಾಯಗಳು ಮೂಡುತ್ತಿದ್ದು ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರು ಕೇಂದ್ರದ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರೊಂದಿಗೆ ಚರ್ಚಿಸಿ ಈ ಬಿಕ್ಕಟ್ಟನ್ನು ಪರಿಸಹಿಸಬೇಕಿದೆಎಂದರು.
ಪ್ರವಾಸೋದ್ಯಮ ಸ್ಥಳವಾಗಲಿ : ಇಲ್ಲಿ ನಿರ್ಮಾಣವಾಗಿರುವಂತ ಅದ್ಭುತ ದೇವಾಲಯ ಹಾಗೂ ಅನಂತಪದ್ಮನಾಭ ಮೂರ್ತಿ ಅತ್ಯಂತ ವಿಶಿಷ್ಟವಾಗಿದ್ದು, ಈ ಧಾರ್ಮಿಕ ಕ್ಷೇತ್ರವನ್ನು ಸರ್ಕಾರದವರು ಗುರುತಿಸಿ ಕರ್ನಾಟಕದ ಪ್ರವಾಸೋದ್ಯಮ ಪಟ್ಟಿಯಲ್ಲಿ ಸೇರಿಸಬೇಕಿದೆ ಎಂದರು. ಐತಿಹಾಸಿಕ ಜೋಡಣೆಯಾಗಿ ಈ ಕ್ಷೇತ್ರ ತಲೆಯೆತ್ತಿದ್ದು , ಆಚಾರ ವಿಚಾರದ ಜೊತೆಗೆ ಮುಂದಿನ ದಿನಗಳಲ್ಲಿ ತಾಂತ್ರಿಕ, ವೃತ್ತಿಪರ ಶಿಕ್ಷಣ ನೀಡುವ ಸ್ಥಳವಾಗಿ ಬೆಳೆಯಲಿ ಎಂದರು. ಇಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಚಟುವಟಿಕೆಗಳು ರಾಷ್ಟ್ರವ್ಯಾಪಿ ಹರಡಲಿ ಎಂದರು.

       ಈ ಸಂದರ್ಭದಲ್ಲಿ ಮಾಜಿ ಜಿಪಂ ಅಧ್ಯಕ್ಷ ಜಿ.ರಘುನಾಥ್,ಜಯರಾಂನಾಯಕ್,ಗ್ರಾಪಂ ಉಪಾಧ್ಯಕ್ಷ ಗಣೇಶ್ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...