ವಿಷಯಕ್ಕೆ ಹೋಗಿ

ಹುಳಿಯಾರು ಹೋಬಳಿಯಲ್ಲಿ ನೀರಿನ ಘಟಕಗಳ ನಿರ್ವಹಣೆ ಕೊರತೆ

ಕೆಟ್ಟುಹೋಗಿ ವಾರವಾದರೂ ದುರಸ್ತಿಯಾಗದ ಶುದ್ದ ಕುಡಿಯುವ ನೀರಿನ ಘಟಕಗಳು

ವರದಿ:ಡಿ.ಆರ್..ನರೇಂದ್ರಬಾಬು
ಹುಳಿಯಾರು:ಹುಳಿಯಾರು ಸೇರಿದಂತೆ ಹೋಬಳಿಯ ಅನೇಕ ಗ್ರಾಮಗಳಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕಗಳ ನಿರ್ವಹಣೆ ಸಂಪೂರ್ಣ ವಿಫಲವಾಗಿದ್ದು ಇವರುಗಳ ನಿರ್ಲಕ್ಷ್ಯದಿಂದ ಅನೇಕ ಘಟಕಗಳು ಶೀಘ್ರ ದುರಸ್ತಿ ಕಾಣದೆ ಸ್ಥಗಿತಗೊಳ್ಳುತ್ತಿರುವುದರಿಂದ ಜನ ಫ್ಲೋರೈಡ್ ಯುಕ್ತ ನೀರನ್ನೆ ಕುಡಿಯುವ ಪರಿಸ್ಥಿತಿ ತಲೆದೋರಿದೆ.

        ಹುಳಿಯಾರಿನಲ್ಲಿ ಸ್ಥಾಪಿಸಲಾಗಿರುವ ಘಟಕಗಳಂತೂ ಮೂರು ದಿನ ಸರಿಯಿದ್ದರೆ ನಾಲ್ಕುದಿನ ಕೆಟ್ಟು ನಿಲ್ಲುತ್ತದೆ.ಹುಳಿಯಾರೊಂದೆ ಅಲ್ಲದೆ ಎಲ್ಲಾಹಳ್ಳಿಗಳಲ್ಲೂ ಇದೇ ಸಮಸ್ಯೆಯಾಗಿದ್ದು ಈ ಬಗ್ಗೆ ಇಲಾಖಾ ಅಧಿಕಾರಿಗಳು ಗಮನ ಮಾಡುವ ಅಗತ್ಯವಿದೆ.

          ಸಮೀಪದ ತಿರುಮಲಾಪುರದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟುನಿಂತು ವಾರವಾದರೂ ನಿರ್ವಹಣೆ ಮಾಡುವವರ ನಿರ್ಲಕ್ಷ್ಯದಿಂದ ದುರಸ್ತಿಯಾಗದೆ ಗ್ರಾಮಸ್ಥರು ಕುಡಿಯುವ ನೀರಿಗೆ ಯಥಾಪ್ರಕಾರ ಟ್ಯಾಂಕ್ ನೀರಿಗೆ ಮೊರೆಹೋಗುವಂತಾಗಿದೆ.
ತಿರುಮಲಾಪುರದಲ್ಲಿನ ನೀರಿನ ಘಟಕ ಸ್ಥಗಿತಗೊಂಡಿದ್ದು ನೀರಿಗಾಗಿ ಖಾಲಿಕೊಡ ಹಿಡಿದುನಿಂತಿರುವ ಮಹಿಳೆಯರು.
          ಈ ಗ್ರಾಮದಲ್ಲಿ ಕಳೆದ ಹದಿನೈದು ದಿನದ ಹಿಂದಷ್ಟೆ ಶುದ್ಧನೀರಿನ ಘಟಕ ಸ್ಥಾಪಿಸಲಾಗಿದ್ದು ತರಾತುರಿಯಲ್ಲಿ ಚಾಲನೆ ಮಾಡಲಾಯಿತು.ಕೇವಲ ಎರಡೇ ದಿನ ನಡೆದ ಇದು ಕೆಟ್ಟುನಿಂತಿದ್ದು ಇದುವರೆಗೂ ದುರಸ್ತಿಯಾಗಿಲ್ಲ.ಅಲ್ಲದೆ ಇದರ ಕಾಮಗಾರಿಯೂ ತೀರ ಕಳಪೆಯಾಗಿದ್ದು ಘಟಕದ ಕಿಟಕಿಗಳು ಕೈಗೆ ಕಿತ್ತುಬರುವಂತಿದೆ.ಟ್ಯಾಂಕಿನ ಕಂಬಗಳು ಅಲ್ಲಾಡುತ್ತಿದೆ.ಫಿಲ್ಟರ್ ಆದ ನೀರು ಹೊರಗೆ ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದೆ ಅಲ್ಲೆ ಬಿಟ್ಟಿರುವುದರಿಂದ ಪುರಾಣ ಪ್ರಸಿದ್ದ ವೇಣುಗೋಪಾಲ ಸ್ವಾಮಿ ದೇವಸ್ಥಾನದ ಮುಂಭಾಗ ನೀರು ನಿಲ್ಲುವಂತಾಗಿದೆ.
           ಇದನ್ನು ಲ್ಯಾಂಡ್ ಆರ್ಮಿಯಿಂದ ನಿರ್ಮಿಸಲಾಗಿದ್ದು ಇದರ ಸ್ಥಾಪನೆ ಸಮಯದಲ್ಲೇ ಅಚ್ಚುಕಟ್ಟಾಗಿ ಮಾಡಿ ಎಂದು ಗೋಗರೆದರೂ ನಮಗೆ ಬಂದಿರುವ ಹಣ ಇಷ್ಟೆ.ಇದರಲ್ಲೆ ನಾವೆಲ್ಲಾ ಮಾಡಬೇಕಿದೆ ಎಂದು ತೀರಾ ಕಳಪೆಯಾಗಿ ಕಾಮಗಾರಿ ಮಾಡಿ ಮುಗಿಸಿದ್ದಾರೆ.ಕೆಟ್ಟುನಿಂತು ಹತ್ತುದಿನವಾದರೂ ಸಹ ನಿರ್ವಹಣೆ ಮಾಡುವವರು ಇದವರೆಗೂ ಬಾರದೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಜಟಿಲವಾಗುತ್ತಿದೆ. ಯಥಾಪ್ರಕಾರ ಫ್ಲೋರೈಡ್ ಯುಕ್ತ ಟ್ಯಾಂಕಿನ ನೀರನ್ನು ಕುಡಿಯುವ ಪರಿಸ್ಥಿತಿ ಬಂದೊದಗಿದೆ ಎನ್ನುತ್ತಾರೆ ಇಲ್ಲಿನ ಡಿಶ್ ಬಸವರಾಜು.

       ಅದೇ ರೀತಿ ಹೋಬಳಿಯ ದೊಡ್ಡಬಿದರೆ ಗ್ರಾಮದಲ್ಲೂ ಕುಡಿಯುವ ನೀರಿನ ಘಟಕ ಕೆಟ್ಟು ನಿಂತು ವಾರವಾಗಿದ್ದು ಬೆಂಗಳೂರಿನ ಕಂಪನಿಯವರಿಗೆ ದಿನಾ ಫೋನ್ ಮಾಡುತ್ತಿದ್ದರೂ ಇನ್ನೂ ದುರಸ್ತಿಯಾಗಿಲ್ಲ ಎನ್ನುತ್ತಾರೆ ಅಲ್ಲಿನ ನಿವಾಸಿ ಯೋಗೇಶ್.

       ಹುಳಿಯಾರಿನ ಬಿಎಂಎಸ್ ಕಾಲೇಜು ಪಕ್ಕದ,ದುರ್ಗಾಪರಮೇಶ್ವರಿ ದೇವಾಲಯದ ಆವರಣದಲ್ಲಿರುವ ಘಟಕದ ನಿರ್ವಹಣೆಯೂ ಅಷ್ಟಕಷ್ಟೆ ಆಗಿದ್ದು ಆಗಾಗ್ಗೆ ಸ್ಥಗಿತಗೊಳ್ಳುತ್ತಲೆ ಇರುತ್ತದೆ.
ಹುಳಿಯಾರಿನ ಬಿಎಂಎಸ್ ಕಾಲೇಜು ಪಕ್ಕ ನಿರ್ವಹಣೆಯಿಲ್ಲದೆ ನೀರಿನ ಘಟಕದ ಗಾಜು ಒಡೆದಿರುವುದು,ನಲ್ಲಿ ಮುರಿದಿರುವುದು 
         ಗ್ರಾಮಸ್ಥರಿಗೆ ಶುದ್ದ ಕುಡಿಯುವ ಸರಬರಾಜು ಮಾಡುವ ಉದ್ದೇಶದಿಂದ ಸರಕಾರ ಲಕ್ಷಾಂತರರೂಗಳ ಅನುದಾನ ಬಿಡುಗಡೆ ಮಾಡಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪನೆ ಮಾಡಿದೆ.ಆದರೆ ನಿರ್ವಹಣೆ ಕೊರತೆಯಿಂದ ಕುಡಿಯುವ ನೀರಿನ ಘಟಕಗಳು ಕೈಕೊಡುತ್ತಿದೆ.ವಾರಗಟ್ಟಲೆ ಸಮಯವಾದರೂ ದುರಸ್ತಿ ಮಾದಲು ಮುಂದಾಗುವುದಿಲ್ಲ.ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಕುಡಿಯುವ ನೀರಿನ ಘಟಕದ ನಿರ್ವಹಣೆಗಾರರಿಗೆ ಎಚ್ಚರಿಕೆ ನೀಡಬೇಕು.ಅವರುಗಳ ಮೊಬೈಲ್ ಸಂಖ್ಯೆ ಎಲ್ಲಾ ಘಟಕದ ಮುಂದೆ ಪ್ರದರ್ಶಿಸಬೇಕು.ನಿರ್ಲಕ್ಷ್ಯ ತೋರುವವರನ್ನು ಕಪ್ಪುಪಟ್ಟಿಗೆ ಸೇರಿಸಬೇಕು.ಆಗಲಾದರೂ ಎಚ್ಚೆತ್ತುಕೊಳ್ಳುತ್ತಾರಾ ಎಂದು ಕಾದುನೋಡಬೇಕಿದೆ.
-------------------------
ಶುದ್ದ ಕುಡಿಯುವ ನೀರಿನ ಘಟಕಗಳು ಕೆಟ್ಟು ಹೋದರೆ ದುರಸ್ತಿ ಮಾಡಲು ಮೊಬೈಲ್ ಸಂಚಾರಿ ದುರಸ್ತಿ ವಾಹನ ಇಡುವಂತೆ ನಿರ್ವಹಣಾಗಾರರಿಗೆ ಸೂಚಿಸಬೇಕು.ಇಲ್ಲದಿದ್ದಲ್ಲಿ ಘಟಕಗಳು ತಾಂತ್ರಿಕ ಸಮಸ್ಯೆಗಳಿಂದ ಕೆಟ್ಟು ಹೋದರೆ ಅವುಗಳ ರಿಪೇರಿಗೆ ಬೆಂಗಳೂರಿನಿಂದ ಬಂದು ಸರಿಪಡಿಸುವವರೆಗೆ ಸ್ಥಗಿತಗೊಂಡಿರುತ್ತದೆ.ತಾಲ್ಲೂಕಿನಲ್ಲಿ ನೂರಾರು ಘಟಕಗಳು ಸ್ಥಾಪಿಸಿರುವುದರಿಂದ ಸಂಚಾರಿ ಘಟಕದ ಅವಶ್ಯಕತೆಯಿದೆ: ಹೆಚ್.ಎನ್.ಕುಮಾರ್,ತಾಲ್ಲೂಕ್ ಪಂಚಾಯ್ತಿ ಸ್ಥಾಯಿ ಸಮಿತಿ ಅಧ್ಯಕ್ಷರು.
-------------------
ಈ ಭಾಗದಲ್ಲಿ ಹೆಚ್ಚುಕಡಿಮೆ ಎಲ್ಲಾ ಘಟಕಗಳ ಹೊಣೆಹೊತ್ತಿರುವುದು ಪೆಂಟಾಪ್ಯೂರ್ ಕಂಪನಿ.ಇಲ್ಲಿ ಘಟಕ ಕೆಟ್ಟರೆ ಅಥವಾ ತಾಂತ್ರಿಕ ಸಮಸ್ಯೆ ತಲೆದೋರಿದರೆ ರಿಪೇರಿ ಮಾಡಲು ನಾವು ಯಾರಿಗೆ ತಿಳಿಸಬೇಕೆನ್ನುವುದೇ ತಿಳಿಯುವುದಿಲ್ಲ.ಪ್ರತಿಘಟಕಕ್ಕೂ ನಿರ್ವಹಣೆಗಾರರ ವಿಳಾಸ ಹಾಗೂ ಮೊಬೈಲ್ ನಂಬರ್ ನಮೂದಿಸಿದಲ್ಲಿ ಅವರಿಗೆ ಕೂಡಲೇ ತಿಳಿಸಬಹುದು.ಸದ್ಯ ಯಾವೊಂದು ಘಟಕಗಳ ಮೇಲೂ ಇವರುಗಳ ನಂಬರ್ ಇಲ್ಲದಿರುವುದರಿಂದ ದುರಸ್ತಿಯಾಗಲೂ ತಡವಾಗುತ್ತಿದೆ.: ಡಿ.ಕೆ.ರಮೇಶ್, ದೊಡ್ಡಬಿದರೆ ಗ್ರಾಮಸ್ಥ

--------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.