ವಿಷಯಕ್ಕೆ ಹೋಗಿ

ನಮ್ಮೂರ ಹಾಸ್ಟಲ್ ಸ್ಥಳಾಂತರ ಕೂಡದು.

ಪ್ರಾರಂಭವಾಗುವವರೆಗೂ ಸ್ಥಳ ಬಿಟ್ಟು ಕದಲೆವು;ಹೈಸ್ಕೂಲ್ ವಿದ್ಯಾರ್ಥಿಗಳು ಭಾಗಿ
ಹಾಸ್ಟಲ್ ಸ್ಥಳಾಂತರ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಸೌಲಭ್ಯಕ್ಕೆ ಎಸಗುವ ವಂಚನೆ
--------------
ಹುಳಿಯಾರು: ಅಧಿಕಾರಿಗಳು ಕುಂಟುನೆಪ ಒಡ್ಡಿ ಸ್ಥಳಾಂತರ ಮಾಡಲು ಹೊರಟಿರುವ ನಮ್ಮೂರಿನ ಹಾಸ್ಟಲ್ ಸ್ಥಳಾಂತರಗೊಳಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ.ಅಲ್ಲದೆ ಈಗ ಹಾಸ್ಟಲ್ ಸೇರಲು ಸಿದ್ಧವಾಗಿರುವ ನಮ್ಮೂರ ಸುತ್ತಮುತ್ತಲ ಗ್ರಾಮಗಳ ೪೫ ಮಕ್ಕಳಿಗೆ ಇಲ್ಲಿ ಹಾಸ್ಟಲ್ ತೆರೆಸಿ ಅವಕಾಶ ಕಲ್ಪಿಸಿಯೇ ತೀರುವೆವು.ಅಲ್ಲಿಯವರೆಗೂ ಸ್ಥಳ ಬಿಟ್ಟು ಕದಲುವುದಿಲ್ಲ ಎಂದು ಸ್ಥಳಿಯ ಪಂಚಾಯ್ತಿ ಪ್ರತಿನಿಧಿಗಳು, ಗ್ರಾಮಸ್ಥರು,ಸಂಘಸಂಸ್ಥೆಗಳ ಪ್ರತಿನಿಧಿಗಳು,ಫೋಷಕರುಗಳು ಆಹೋರಾತ್ರಿ ಧರಣಿ ಪ್ರಾರಂಭಿಸಿರುವ ಘಟನೆ ಹುಳಿಯಾರು ಹೋಬಳಿಯ ಹೊಯ್ಸಳ ಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರನಕಣಿವೆಯಲ್ಲಿ ಜರುಗಿದೆ.
ಹುಳಿಯಾರು ಹೋಬಳಿ ಬೋರನಕಣಿವೆಯಲ್ಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಸ್ಥಳಾಂತರ ವಿರೋಧಿಸಿ ಶೀಘ್ರ ಆರಂಭಕ್ಕೆ ಒತ್ತಾಯಿಸಿ ಸೋಮವಾರದಿಂದ ಅಹೋರಾತ್ರಿ ಧರಣಿ ಪ್ರಾರಂಭವಾಗಿದ್ದು ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು,ಪೋಷಕರುಗಳು ಅವರೊಂದಿಗೆ ಸ್ಥಳಿಯ ಪಂಚಾಯ್ತಿ ಪ್ರತಿನಿಧಿಗಳು ಧರಣಿ ಕೂತಿದ್ದಾರೆ.

ಬೋರನಕಣಿವೆಯಲ್ಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಆರಂಭಕ್ಕೆ ಒತ್ತಾಯಿಸಿ ಸೋಮವಾರದಿಂದ ಅಹೋರಾತ್ರಿ ಧರಣಿ ಪ್ರಾರಂಭವಾಗಿದ್ದು ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು,ಪೋಷಕರುಗಳು ಅವರೊಂದಿಗೆ ಸ್ಥಳಿಯ ಪಂಚಾಯ್ತಿ ಪ್ರತಿನಿಧಿಗಳು ಧರಣಿ ಕೂತಿದ್ದಾರೆ.ಈಗಾಗಲೇ ಇಲ್ಲಿ ನಡೆದಿರುವ ಪ್ರತಿಭಟನೆಯ ಸುದ್ದಿ ತಿಳಿದಿದ್ದರೂ ಕೂಡ ಅಧಿಕಾರಿಗಳು ತಮ್ಮ ಧೋರಣೆಯನ್ನು ಮುಂದುವರಿಸಿದ್ದು ಇದಕ್ಕೂ ತಮಗೂ ಸಂಬಂಧವಿಲ್ಲದಂತೆ ನಿರ್ಲಕ್ಷ್ಯ ಮನೋಭಾವ ಮೆರೆದಿದ್ದಾರೆ.ಹಾಸ್ಟಲ್ ಅಸ್ಥಿತ್ವದ ಅಳಿವು ಉಳಿವು ಪ್ರಶ್ನೆ ಎದುರಾಗಿರುವುದರಿಂದ ಪ್ರತಿಭಟನೆ ಇನ್ನೂ ತೀವ್ರವಾಗುವ ಲಕ್ಷಣಗಳಿದೆ.

ಸಮಸ್ಯೆ ಏನು:ಬೋರನಕಣಿವೆಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಬಿಸಿಎಂ ಇಲಾಖೆ ಕಳೆದ 30 ವರ್ಷಗಳ ಹಿಂದೆ ವಿದ್ಯಾರ್ಥಿನಿಲಯ ತೆರೆದಿತ್ತು. ಇದರಿಂದ ಸುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅನುಕೂಲವಾಗಿತ್ತು. ಆದರೆ ಈ ಶೈಕ್ಷಣಿಕ ವರ್ಷದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿಗಳು ಕಡಿಮೆ ಇದ್ದಾರೆ ಎಂಬ ನೆಪವೊಡ್ಡಿ ವಿದ್ಯಾರ್ಥಿ ನಿಲಯವನ್ನು ಪ್ರಾರಂಭಿಸದೆ ಬೇರೆಡೆ ಸ್ಥಳಾಂತರಿಸಲು ಮುಂದಾಗಿ ವಿದ್ಯಾರ್ಥಿನಿಲಯ ಮುಚ್ಚಿದ್ದಾರೆ.

ಗ್ರಾಮಸ್ಥರ ಅಹವಾಲು:ಅಧಿಕಾರಿಗಳು ಕೇವಲ ಸಬೂಬು ಹೇಳುತ್ತಿದ್ದಾರೆಯೇ ಹೊರತು ಹಾಸ್ಟಲ್ ಅಭಿವೃದ್ಧಿಗೆ ಮುಂದಾಗುತ್ತಿಲ್ಲ.ಮಕ್ಕಳ ಸಂಖ್ಯೆ ಕಡಿಮೆಯಿದೆ ಎನ್ನುತ್ತಿದ್ದಂತೆ ನಾವು ಈ ಬಗ್ಗೆ ಕೆಲವು ಪೋಷಕರುಗಳ ಮನವೊಲಿಸಿದ್ದು ಮಕ್ಕಳ ಸಂಖ್ಯೆ ೫೦ ತಲುಪಲಿದೆ.ಅಲ್ಲದೆ ಹಾಸ್ಟಲ್ ಶಿಥಿಲವಾಗಿದೆ ಎನ್ನುವ ಸಬೂಬು ಕೂಡ ಇವರು ನೀಡುತ್ತಿದ್ದು ಹಾಸ್ಟಲ್ ನ ತಾರಸಿಯಲ್ಲಿ ಮಳೆನೀರು ಹನುಕಿದೆ.ಆದರೆ ಶಿಥಿಲವಾಗಿಲ್ಲ.ಇದನ್ನು ರಿಪೇರಿ ಮಾಡಬಹುದಾಗಿದ್ದರೂ ಕೂಡ ಆ ಕೆಲಸಕ್ಕೆ ಮುಂದಾಗುತ್ತಿಲ್ಲ.ಇಲ್ಲಸಲ್ಲದ ಕುಂಟುನೆಪ ಹೇಳುವ ಬದಲು ರಿಪೇರಿ ಮಾಡಿಸಿ ಹಾಸ್ಟಲ್ ಶುರುಮಾಡಿಸಿ.ನಮ್ಮೂರಿನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸಿ ಎನ್ನುವ ಗ್ರಾಮಸ್ಥರು ಯಾವುದೇ ಕಾರಣಕ್ಕೂ ಹಾಸ್ಟಲ್ ಪುನರಾರಂಭಿಸುವವರೆಗೂ ಸ್ಥಳದಿಂದ ಕದಲೆವು ಎಂದು ಬಿಗಿಪಟ್ಟು ಹಿಡಿದ್ದಿದ್ದಾರೆ.

ಈ ಬಗ್ಗೆ ಮಾತನಾಡಿದ ಸುವರ್ಣ ವಿದ್ಯಾ ಚೇತನದ ಅಧ್ಯಕ್ಷ ರಾಮಕೃಷ್ಣಪ್ಪ ಹಾಸ್ಟಲ್ ಸ್ಥಳಾಂತರ ಸರ್ಕಾರಿ ಶಾಲೆಯ ದುರ್ಬಲಿಕರಣ ಮಾಡುವ ಹುನ್ನಾರವಾಗಿದ್ದು ಇದು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯಕ್ಕೆ ಎಸಗುವ ವಂಚನೆಯಾಗಿದೆ.ಹಾಸ್ಟಲ್ ಇಲ್ಲಿಯೇ ಉಳಿಯಬೇಕು,ನಮ್ಮ ಸುತ್ತಮುತ್ತಲ ಹಳ್ಳಿಯ ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ ದೊರೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಗ್ರಾಪಂ ಅಧ್ಯಕ್ಷೆ ಮಂಜುಳಾ ಹೆಂಜಾರಪ್ಪ,ಉಪಾಧ್ಯಕ್ಷೆ ಸಣ್ಣಮ್ಮ,ಸದಸ್ಯರುಗಳಾದ ಗಿರೀಶ್,ರಘುವೀರ್,ರಮೇಶ್,ಚಿಕ್ಕಣ್ಣ, ರಂಗನಾಥ್, ರತ್ನಮ್ಮ,ಮಂಗಳ ಲೋಕೇಶ್,ನರಸಿಂಹರಾಜು, ಮಂಗಳ ಶಿವಾನಂದ್,ದಸೂಡಿ ತಾಪಂ ಸದಸ್ಯ ಪ್ರಸನ್ನ ಕುಮಾರ್,ಸಾಮಾಜಿಕ ಹೋರಾಟಗಾರ ದಬ್ಬಗುಂಟೆ ರವಿಕುಮಾರ್, ತಾಪಂ ಮಾಜಿ ಸದಸ್ಯೆ ಕವಿತಾ ಪ್ರಕಾಶ್,ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ವದ್ದೀಗಯ್ಯ,ಮುಖಂಡರುಗಳಾದ ಮಲ್ಲೇಶಣ್ಣ,ಕಲ್ಲೇನಹಳ್ಳಿ ಶಿವಕುಮಾರ್,ಮಂಜುನಾಥ್ ಎಲ್.ಬಿ.,ಗುರು, ಕಾಂತರಾಜು,ತಿಮ್ಮಯ್ಯ,ಕೋದಂಡಪ್ಪ ಮತ್ತಿತರರು ಸೇರಿದಂತೆಎಸ್ ಡಿ ಎಂ ಸಿ ಸಮಿತಿಯವರು, ಪೋಷಕರುಗಳು ಹಾಜರಿದ್ದರು.
---------
ಕಳೆದ 30ವರ್ಷಗಳಿಂದ ಇದು ಸರ್ಕಾರಿ ಹಾಸ್ಟಲ್ ಆಗಿದ್ದರೂ ಕೂಡ ಅದಕ್ಕೂ ಮುನ್ನಾ 1963 ರಲ್ಲಿ ಶಾಲೆಯನ್ನು 30 ಹಳ್ಳಿಗಳ ಗ್ರಾಮಸ್ಥರು 50ರೂ,100ರೂ ವಂತಿಗೆಯೆತ್ತಿ ಆರಂಭಿಸಿದ್ದು ಮಕ್ಕಳ ಅನೂಕೂಲಕ್ಕಾಗಿ ಆಗಲೇ ಹಾಸ್ಟಲ್ ಕೂಡ ಆರಂಭ ಮಾಡಿ ಮಕ್ಕಳ ಊಟಕ್ಕೆ ಬೇಕಾದ ಅಕ್ಕಿ,ಬೇಳೆ,ಉಪ್ಪು,ಹುಣುಸೆಹಣ್ಣು ನೀಡಿ 24ವರ್ಷಗಳ ಕಾಲ ಸಾರ್ವಜನಿಕರ ಉದಾರ ಹೃದಯದ ಸಹಕಾರದಿಂದ ನಡೆದಿತ್ತು.1987ರಿಂದ ಈಚೆಗೆ ಸರ್ಕಾರ ಶಾಲೆಯನ್ನು ಹಾಗೂ ಹಾಸ್ಟಲ್ ಅನ್ನು ವಹಿಸಿಕೊಂಡು ಬಂದಿದೆ.

------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...