ವಿಷಯಕ್ಕೆ ಹೋಗಿ

ನಡಿಗೆಯಿಂದಷ್ಟೇ ನಾವು ಎಲ್ಲ ವರ್ಗದವರ ಸಂಬಂಧವನ್ನು ಬೆಳೆಸಬಹುದು:ವಾಕ್ ಆಫ್ ಜಾಯ್ ಖ್ಯಾತಿಯ ಬ್ರಿಟನ್ ಪ್ರಜೆ ಡೇವಿಡ್ ಅಥೋವಾ

ಹುಳಿಯಾರು: ವಾಕ್ ಆಫ್ ಜಾಯ್ ಖ್ಯಾತಿಯ ಬ್ರಿಟನ್ ಪ್ರಜೆ ಡೇವಿಡ್ ಅಥೋವಾ ಅವರು ಸೋಮವಾರ ಬೆಳಗ್ಗೆ ಹುಳಿಯಾರಿಗೆ ಆಗಮಿಸಿದ್ದು ಅವರನ್ನು ಕಲ್ಪತರು ಆಗ್ರೋ ಕೇಂದ್ರದ ಬಳಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.


     ಚಿಕ್ಕನಾಯಕನಹಳ್ಳಿಯಿಂದ ಬೆಳಗುಲಿ,ಗೂಬೇಹಳ್ಳಿ ಮಾರ್ಗವಾಗಿ ಹುಳಿಯಾರಿಗೆ ಆಗಮಿಸಿದ ಅವರೊಂದಿಗೆ ಪಟ್ಟಣದೆಲ್ಲಡೆ ರೈತ ಸಂಘದ ಪ್ರತಿನಿಧಿಗಳು,ವಿವಿಧ ಸಂಘ ಸಂಸ್ಥೆಯವರು ನಡಿಗೆಯ ಹೆಜ್ಜೆ ಹಾಕಿದರು.

        ತಾವು ಆರಂಭಿಸಿರುವ ವಾಕ್ ಆಫ್ ಜಾಯ್ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ನಡಿಗೆಯ ಮುಖಾಂತರವೇ ತಾವು ದೇಶ ವಿದೇಶ ಸಂಚರಿಸಿದ್ದು , ನಡಿಗೆಯಿಂದಾಗುವ ಲಾಭ ಹಾಗೂ ಸುಸ್ಥಿರಕೃಷಿ,ಸಿರಿಧಾನ್ಯದ ಬಗ್ಗೆ ತಮ್ಮ ಸಂಚಾರ ಸಮಯದಲ್ಲಿ ಕಂಡುಕೊಂಡ ಅನುಭವದ ಬಗ್ಗೆ ವಿವರಿಸಿದರು.
        ಆಧುನಿಕ ಸಂಪರ್ಕ ಸಾಧನಗಳಲ್ಲಿ ಇತ್ತೀಚೆಗೆ ಮೊಬೈಲ್ ಎಲ್ಲರಿಗೂ ಸರ್ವಸ್ವವಾಗಿದ್ದು ಅವುಗಳಿಂದ ಎಲ್ಲಾ ವರ್ಗದ ಜನರನ್ನು ತಲುಪಲು ಸಾಧ್ಯವಿಲ್ಲ.ನಾವು ವೇಗವಾದ ಬೆಳವಣಿಗೆಯಿಂದಲೇ ಹಾಳಾಗುತ್ತಿದ್ದು ನಡಿಗೆಯಿಂದಷ್ಟೇ ನಾವು ಎಲ್ಲ ವರ್ಗದವರ ಸಂಬಂಧವನ್ನು ಬೆಳೆಸಬಹುದು ಎಂದು ಅಭಿಪ್ರಾಯಪಟ್ಟರು.

       ನಡಿಗೆ ನಮಗೆ ಸಮಾಧಾನ,ಸಾವಧಾನ ಕಲಿಸುತ್ತದೆ, ಸಂಬಂಧ ಬೆಳೆಸುತ್ತದೆ.ಸಂಚಾರ ಸಂದರ್ಭದಲ್ಲಿ ನಾನಾ ರೀತಿಯ ಜನಗಳೊಂದಿಗೆ ಬೇರೆಯುವುದರ ಮೂಲಕ ದೇಶದ ಸಮಗ್ರ ವೈವಿಧ್ಯತೆಯನ್ನು ತಿಳಿಯಲು ಸಾಧ್ಯವಾಗುತ್ತದೆ ಎಂದರು.

        ಭಾರತದಲ್ಲಿ 6000 ಕಿಲೋಮೀಟರ್ ದೂರ ಕ್ರಮಿಸುವ ಉದ್ದೇಶ ಹೊಂದಿರುವ ಅವರು ತಾವೀಗ ಪ್ರಾರಂಭಿಸಿರುವ ಮೊದಲನೇ ಹಂತದ ನಡಿಗೆ ಇದೇ ಡಿಸಂಬರ್ ಗೆ ಮುಗಿಯಲಿದ್ದು ಜನವರಿಯಿಂದ 2018ರಿಂದ ಎರಡನೇ ಹಂತದ ನಡಿಗೆಯನ್ನು ಪಶ್ಚಿಮ ಬಂಗಾಳದಿಂದ ಪ್ರಾರಂಭಿಸಿ ಜಾರ್ಖಂಡ್,ಬಿಹಾರ,ಉತ್ತರಪ್ರದೇಶ,ಹರಿಯಾಣದ ಮುಖಾಂತರ ಪಂಜಾಬಿನ ಅಮೃತಸರದಲ್ಲಿ ಭಾರತ ದೇಶದ ಸಂಚಾರ ಮುಗಿಸುವುದಾಗಿ ಹೇಳಿದರು

            ಹುಳಿಯಾರಿನ ಜಸ್ಟ್ ರಿಲ್ಯಾಕ್ಸ್ ಕಾಫಿ ಕೇಂದ್ರದಲ್ಲಿ ವಾಸ್ತವ್ಯ ಹೂಡಿದ ಅವರು ತೆಂಗಿನಿಂದ ನೀರಾ ಇಳಿಸುವ ರೀತಿಯನ್ನು ತೋಟಕ್ಕೆ ಹೋಗಿ ನೋಡಿದ್ದಲ್ಲದೆ ಗಾಂಧಿ ಪೇಟೆಯಲ್ಲಿರುವ ಎಲ್.ಆರ್.ಚಂದ್ರಶೇಖರ್ ಅವರ ನಾರಿನ ಕೈಗಾರಿಕಾ ಕೇಂದ್ರಕ್ಕೆ ಭೇಟಿ ನೀಡಿ ನಾರು ತಯಾರಿಸುವ ವಿಧಾನವನ್ನು ವೀಕ್ಷಿಸಿದರು.


         ಈ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿಯ ನೆರಳು ಸಂಘಟನೆಯ ಗುಂಡ ಮಹಮ್ಮದ್ ಹುಸೇನ್ ,ಹುಳಿಯಾರಿನ ಕಲ್ಪತರು ಅಗ್ರೋ ಕೇಂದ್ರದ ಸತೀಶ್,ಪ್ರೋ/ ಬಿಳಿಗೆರೆ ಕೃಷ್ಣಮೂರ್ತಿ, ರಾಜು ಬಡಗಿ,ನಾಗರಾಜ ಪೂಜಾರಿ,ತೋಟದ ಮನೆ ಸೋಮಶೇಖರ್, ರಂಗನಾಥ್ ಪ್ರಸಾದ್, ಇಮ್ರಾಜ್,ರಂಗನಕೆರೆ ವಿರೂಪಾಕ್ಷ,ರೈತ ಸಂಘದ ಪಾತ್ರೆ ಸತೀಶ್,ಕಂಪನಹಳ್ಳಿ ಪ್ರಕಾಶ್,ಮಂಜಣ್ಣ,ಯೋಗಣ್ಣ,ಮರುಳಪ್ಪ,ಗಂಗಣ್ಣ ಸೇರಿದಂತೆ ಸಂಘಸಂಸ್ಥೆಗಳ ಸದಸ್ಯರು ಇದ್ದರು.
--------------------------
ನಗುವಿಗೆ ಮಾತ್ರ ಎಲ್ಲರನ್ನೂ ಒಂದು ಮಾಡುವ ಶಕ್ತಿ ಇದ್ದು ಮುಂದಿನ ಪೀಳಿಗೆಗೆ ಅದನ್ನು ಪ್ರಚಾರ ಪಡಿಸುವ ಉದ್ದೇಶದಿಂದ ತಾವು ವಾಕ್ ಆಫ್ ಜಾಯ್ ಪ್ರವಾಸ ಕೈಗೊಂಡಿದ್ದು ಇದೇ ಜುಲೈ 15ರಿಂದ ಕೇರಳದ ಕನ್ಯಾಕುಮಾರಿ ಮೂಲಕ ತಾವು ಭಾರತ ಪ್ರವಾಸವನ್ನು ಕೈಗೊಂಡಿರುವೆ..ಸದ್ಯ 900 ಕಿಲೋಮೀಟರ್ ದೂರ ಕ್ರಮಿಸಿದ್ದು ಇಲ್ಲಿಂದ ಸಾಣೇಹಳ್ಳಿ, ಕಡೂರು,ತರೀಕೆರೆ,ಶಿವಮೊಗ್ಗ,ಶಿರಸಿ,ಕಾರವಾರದ ಮೂಲಕ ಗೋವಾ,ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನಕ್ಕೆ ಭೇಟಿ ನೀಡುವ ಉದ್ದೇಶ ಹೊಂದಿರುವೆ:ಡೇವಿಡ್ ಅಥೋವಾ

--------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.