ವಿಷಯಕ್ಕೆ ಹೋಗಿ

ಅಗಲಿದ ಗುರುಗಳಿಗೆ ಶಿಷ್ಯರಿಂದ ಪದಕ ಸಮರ್ಪಣೆ

ನಮ್ಮ ಅಮೋಘ ಸಾಧನೆಗೆ ಗುರುಗಳ ಪ್ರೋತ್ಸಾಹವೇ ಕಾರಣ ಎಂದ ಮಕ್ಕಳು

ಹುಳಿಯಾರು: ತಮ್ಮ ಸಾಧನೆಗೆ ಗುರುಗಳ ಪ್ರೋತ್ಸಾಹ ಹಾಗೂ ಶ್ರೀ ರಕ್ಷೆಯೇ ಕಾರಣವಾಗಿದ್ದು ,ಇಂದು ನಮ್ಮ ತಂಡ ಪಡೆದ ಗೆಲುವು ಅವರಿಗಾಗಿ ಸಮರ್ಪಣೆ ಎಂದು ಬೆಳ್ಳಾರ ಶಾಲೆಯ ವಿದ್ಯಾರ್ಥಿಗಳು ತಮ್ಮ ಸಾಧನೆಯ ಹಿಂದಿನ ಕರ್ತೃವಾದ ಕಳೆದ ವಾರವಾಷ್ಟೆ ಅಗಲಿದ ದೈಹಿಕ ಶಿಕ್ಷಕ ತ್ಯಾಗರಾಜ್ ಗೆ ಸಮರ್ಪಿಸಿದ ಘಟನೆ ಹುಳಿಯಾರಿನಲ್ಲಿ ಬುಧವಾರ ಜರುಗಿದೆ .
ಹುಳಿಯಾರಿನಲ್ಲಿ ದೈಹಿಕ ಶಿಕ್ಷಕ ತ್ಯಾಗರಾಜ್ ಅವರ ಅಂತ್ಯಕ್ರಿಯೆ ನಡೆದ ಸ್ಥಳದಲ್ಲಿ ಇವರ ಪ್ರೋತ್ಸಾಹದಿಂದಲೇ ನಾವು ಗೆಲುವು ಸಾಧಿಸಿದ್ದು ಎಂದ ಮಕ್ಕಳು ಪದಕವಿಟ್ಟು ಭಾಷ್ಪಾಂಜಲಿ ಸಮರ್ಪಿಸಿದರು
         ಗುರುಗಳ ನಮ್ಮಲ್ಲಿ ಗೆಲ್ಲಲೇ ಬೇಕಂಬ ಸ್ಫೂರ್ತಿಯ ಸೆಲೆ ತುಂಬಿದ್ದು ನಮ್ಮ ಗೆಲುವಿಗೆ ಕಾರಣವೆಂದ ಮಕ್ಕಳು ಇಂದು ತಾವು ಪಡೆದ ಪದಕಗಳೆನೆಲ್ಲಾ ದೂರದ ಊರಿನಿಂದ ಹುಳಿಯಾರಿನ ಅಂತ್ಯಕ್ರಿಯೆ ನಡೆದಿದ್ದ ಸ್ಥಳಕ್ಕೆ ಆಗಮಿಸಿ ಗುಡ್ಡೆ ಮುಂದೆ ಪದಕಗಳನಿಟ್ಟು ಪೂಜೆ ಸಲ್ಲಿಸಿ ಸಮರ್ಪಿಸಿದ ಘಟನೆ
       ಅಲ್ಲಿದ್ದವರ ಕಣ್ಣಂಚಿನಲ್ಲಿ ನೀರು ತಂದಿದಂತೂ ಸತ್ಯ.ದೈಹಿಕ ಶಿಕ್ಷಕ ತ್ಯಾಗರಾಜುವಿಗೆ ಮಕ್ಕಳ ಬಗ್ಗೆಗಿದ್ದ ಅಂತಕರಣ,ಮಮಕಾರಕ್ಕೆ ಈ ಘಟನೆ ಸಾಕ್ಷಿಯಾಯಿತು.
               ಬೆಳ್ಳಾರ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ದೈಹಿಕ ಶಿಕ್ಷಕ ತ್ಯಾಗರಾಜ್ ಕಳೆದ ಬುಧವಾರ ರಾತ್ರಿ ಹುಳಿಯಾರಿನ ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ಅಕಾಲಿಕವಾಗಿ ಸಾವನ್ನಪಿದರು.
           ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಿ, ಬೆಳಸಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವಂತೆ ಮಾಡಿ ಬಹುಮಾನ ತಂದೆ ತರುವಂತಹ ತಾಕತ್ತು ತುಂಬುತ್ತಿದ್ದ ಇವರ ವಿಶಿಷ್ಟ ಶೈಲಿಯ ತರಬೇತಿ ಈ ಭಾಗದಲ್ಲಿ ಹೆಸರಾಗಿತ್ತು.
           ಇದಕ್ಕೆ ನಿದರ್ಶನವೆನ್ನುವಂತೆ ಇವರ ಕೈಕೆಳಗೆ ಕ್ರೀಡೆಗೆ ಸಿದ್ಧವಾಗಿದ್ದ ಬೆಳ್ಳಾರ ಶಾಲೆಯ ಮಕ್ಕಳು ಆ.೧ ಮತ್ತು೨ ರಂದು ದಸೂಡಿಯಲ್ಲಿ ನಡೆಯುತ್ತಿದ್ದ ಹೋಬಳಿ ಮಟ್ಟದ ಬಿ ಗ್ರೂಪಿನ ಕ್ರೀಡಾಕೂಟದಲ್ಲಿ ಎಲ್ಲಾ ಗುಂಪು ಕ್ರೀಡೆ,ಅಥ್ಲೆಟಿಕ್ಸ್ ಮತ್ತಿತರ ಕ್ರೀಡೆಗಳ್ಳಲೂ ವಿತೇತರಾಗಿ ಸಮಗ್ರ ಬಹುಮಾನಕ್ಕೆ ಭಾಜನರಾದರು.


         ಇದರ ಖ್ಯಾತಿ ನಮ್ಮನಗಲಿದ ಶಿಕ್ಷಕರಿಗೆ ಸಲ್ಲಬೇಕೆಂದ ಮಕ್ಕಳು ಇಂದು ಅವರ ಅಂತ್ಯಕ್ರಿಯೆ ನಡೆದ ಸ್ಥಳಕ್ಕಾಮಿಸಿ ನಮ್ಮ ಅಮೋಘ ಸಾಧನೆಗೆ ನಿಮ್ಮ ಪ್ರೇರಣ ಶಕ್ತಿಯೇ ಕಾರಣ ಎಂದು ಭಾಷ್ಪಾಂಜಲಿ ಸಮರ್ಪಿಸಿದರು.ತಾಲ್ಲೂಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಸಹ ಗೆಲುವು ದೊರಕುವಂತೆ ಆಶೀರ್ವದಿಸಿ ಎಂದು ಬೇಡಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...