ವಿಷಯಕ್ಕೆ ಹೋಗಿ

ಜಾನಪದ ನಮ್ಮ ಬದುಕಿನ,ಸಮುದಾಯದ ಸಂಸ್ಕೃತಿ :ಕಪ್ಪಣ್ಣ

ಹುಳಿಯಾರಿನಲ್ಲಿ ಶ್ರೀ ಮಾತಾ ಚಾರಿಟಬಲ್ ಟ್ರಸ್ಟ್ ವತಿಯಿಂದ ೯ ದಿನಗಳ ಕಾಲ "ಕನ್ನಡದ ಅಂತರಾಷ್ಟ್ರೀಯ ಕಲಾವಿದರಿಂದ ರಾಷ್ಟ್ರೀಯ ಉತ್ಸವ"

ಹುಳಿಯಾರು: ಜಾನಪದ ನಮ್ಮ ಬದುಕಿನ,ಸಮುದಾಯದ ಸಂಸ್ಕೃತಿಯಾಗಿದ್ದು ಇದನ್ನು ಉಳಿಸಿ ಬೆಳಸಿ ಮುಂದಿನ ತಲೆಮಾರುಗಳಿಗೆ ಜೀವಂತವಾಗಿರಿಸುವ ನಿಟ್ಟಿನಲ್ಲಿ ಸಂಘಸಂಸ್ಥೆಗಳು ಸಮಾಜಮುಖಿಯಾಗಿ ಚಿಂತಿಸಿ ,ಜವಬ್ದಾರಿ ಹೊರಬೇಕಿದೆ ಎಂದು ಹಿರಿಯ ರಂಗಕರ್ಮಿ ಶ್ರೀನಿವಾಸ ಜಿ.ಕಪ್ಪಣ್ಣ ತಿಳಿಸಿದರು.
           ಹುಳಿಯಾರಿನ ಶ್ರೀ ಮಾತಾ ಚಾರಿಟಬಲ್ ಟ್ರಸ್ಟ್ ವತಿಯಿಂದ ೯ ದಿನಗಳ ಕಾಲ ಆಯೋಜಿಸಲಾಗಿರುವ ಶ್ರೀ ಮಾತಾ ನವರಾತ್ರಿ ಸಾಂಸ್ಕೃತಿಕ ಉತ್ಸವದ ಆಹ್ವಾನಪತ್ರಿಕೆಯನ್ನು ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ಭಾನುವಾರ ಬಿಡುಗಡೆ ಮಾಡಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ ಅವರು ಜಾನಪದ ನಮ್ಮ ಮಣ್ಣಿನ ಸಂಸ್ಕೃತಿಯಾಗಿದ್ದು, ಜಾನಪದವಿಲ್ಲದ ಕಲೆಯೇ ಇಲ್ಲ.೧೨ನೇ ಶತಮಾನದ ವಚನಗಳು ಆಗಲೇ ಇಂಗ್ಲೀಷಿಗೆ ಹೋಗಿದ್ದಲ್ಲಿ ವಚನಕಾರರು ವಿಶ್ವದ ಪ್ರಸಿದ್ಧ ವ್ಯಕ್ತಿಗಳಾಗುತ್ತಿದ್ದರು.ನಮ್ಮ ನಾಡಿನ ಮೂಲಕಲೆಯಾದ ಜಾನಪದ ಸಾಹಿತ್ಯ,ದಾಸಸಾಹಿತ್ಯ,ವಚನ ಸಾಹಿತ್ಯದ ಬಗ್ಗೆ ಅನಾದರ ತಳೆದಿರುವುದರಿಂದ ಅವುಗಳಿಗೆ ಸಿಗಬೇಕಾದ ಮನ್ನಣೆ ದೊರೆಯದೆ ಅವು ನಿರ್ಲಕ್ಷ್ಯಕೊಳ್ಳಪಟ್ಟಿವೆ ಎಂದು ಅಭಿಪ್ರಾಯಪಟ್ಟರು.

         ನಾಡಿನ ವೈಶಿಷ್ಟಪೂರ್ಣ ಜಾನಪದ ಕಲೆಗಳಕಲೆಗಳಿಗೆ ಜೀವ ತುಂಬುವ ನಿಟ್ಟಿನಲ್ಲಿ ಹಾಗೂ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅವರಿಗೆ ಸೂಕ್ತ ವೇದಿಕೆಯನ್ನು ಕಲ್ಪಿಸಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪದ ಕಲೆಯ ಮೆರುಗು ಹೆಚ್ಚಿಸಬೇಕಿದೆ.ಆ ನಿಟ್ಟಿನಲ್ಲಿ ತಾವು ಕನ್ನಡದ ಸ್ಥಳಿಯ ಅಂತರಾಷ್ಟ್ರೀಯ ಮನ್ನಣೆಹೊಂದಿರುವ ಕಲಾವಿದರಿಂದ ಹುಳಿಯಾರಿನ ಶ್ರೀ ಮಾತಾ ಚಾರಿಟಬಲ್ ಟ್ರಸ್ಟ್ ಮೂಲಕ ಕೋಡಿಪಾಳ್ಯದ ಧ್ಯಾನನಗರಿಯಲ್ಲಿ ೯ ದಿನಗಳ ಕಾಲ ರಾಷ್ಟ್ರೀಯ ಉತ್ಸವ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
          ಇದೇ ಮೊದಲ ಬಾರಿಗೆ, ಶ್ರೀ ಮಾತಾ ಚಾರಿಟಬಲ್ ಟ್ರಸ್ಟ್ ಅಪರೂಪವಾದ ಸಾಂಸ್ಕೃತಿಕ ಉತ್ಸವ ಏರ್ಪಡಿಸಿದ್ದು ಈ ಉತ್ಸವದಲ್ಲಿ ಭಾಗವಹಿಸುತ್ತಿರುವ ಬಹುಪಾಲು ಕಲಾವಿದರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನ ನೀಡಿ ಮೆಚ್ಚುಗೆ ಗಳಿಸಿದವರು. ಯಕ್ಷಗಾನ ತಂಡ ಅಮೇರಿಕಾ, ಜರ್ಮನಿ,(೨ ಬಾರಿ) ಚೀನಾ, ದುಬೈ ಮತ್ತು ಕುವೈಯತ್ ದೇಶಗಳಲ್ಲಿ , ಶ್ರೀಮತಿ ಸವಿತ ಅಮೇರಿಕಾ ಮತ್ತು ಸಿಂಗಾಪುರ ದೇಶಗಳಲ್ಲಿ, ಶ್ರೀ ಸುಷ್ಮ ಮತ್ತು ಭ್ರಮರಿ ನೃತ್ಯ ತಂಡ ಅಮೇರಿಕಾ ದೇಶಗಳಲ್ಲಿ, ಶ್ರೀ ಪಂಡಿತ್ ಪರಮೇಶ್ವರ್ ಹೆಗಡೆ ಹಲವಾರು ದೇಶಗಳಲ್ಲಿ ಪ್ರವಾಸ ಮಾಡಿರುವುದಲ್ಲದೇ ಅನೇಕ ವಿದೇಶಿ ವಿದ್ಯಾರ್ಥಿಗಳಿಗೆ ಗುರುಗಳಾಗಿದ್ದಾರೆ ಎಂದರು.
          ಮೊದಲ ದಿನದಿಂದ ಕೊನೆಯವರೆಗಿನ ಇಲ್ಲಿ ಪ್ರದರ್ಶಿತವಾಗುವ ಎಲ್ಲಾ ಕಾರ್ಯಕ್ರಮಗಳು ಈ ನೆಲದ ಶ್ರೀಮಂತ ಸಂಸ್ಕೃತಿಯನ್ನು ಪ್ರತಿಬಿಂಬಿಸುವುದಾಗಿದ್ದು ಯಕ್ಷಗಾನ, ಜಾನಪದ, ರಂಗಭೂಮಿ, ಹರಿಕಥೆ, ವಚನ ಗಾಯನ, ಕರ್ನಾಟಕ ಸಂಗೀತ, ಸುಗಮ ಸಂಗೀತ, ಚಲನಚಿತ್ರ ಗೀತೆ, ಸಮೂಹ ನೃತ್ಯ, ಸಮೂಹ ಭರತನಾಟ್ಯ, ಅಂಧ ಕಲಾವಿದೆಯರಿಂದ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ ಮುಂತಾದ ಕಲೆಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ.
           ಖ್ಯಾತ ಅಂತರಾಷ್ಟ್ರೀಯ ನೃತ್ಯಗಾರ್ತಿ ಪದ್ಮಶ್ರೀ ಪ್ರತಿಭಾ ಪ್ರಹ್ಲಾದ್ ಈ ಉತ್ಸವಕ್ಕೆ ಬರುತ್ತಿರುವುದು ಘನತೆಯ ವಿಷಯವಾಗಿದ್ದು ಒಟ್ಟಾರೆ ಈ ಉತ್ಸವ ಹುಳಿಯಾರಿನಲ್ಲಿ ನಡೆಯುತ್ತಿದ್ದರೂ ಇದು ಸ್ಥಳೀಯ ಕಾರ್ಯಕ್ರಮವಾಗದೆ ಕನ್ನಡದ ಅಂತರಾಷ್ಟ್ರೀಯ ಕಲಾವಿದರ ರಾಷ್ಟ್ರೀಯ ಉತ್ಸವವಾಗಿದೆ ಎಂದರು.

       ಈ ಸಂದರ್ಭದಲ್ಲಿ ಮಾತಾಛಾರಿಟಬಲ್ ಟ್ರಸ್ಟಿನ ಗಂಗಾಧರ್,ಮಾಜಿ ಜಿಪಂ ಅಧ್ಯಕ್ಷ ರಘುನಾಥ್, ಚಂದ್ರಶೇಖರ್,ಶ್ರೀನಿವಾಸ್, ಬಡಗಿರಾಮಣ್ಣ, ಹು.ಕೃ.ವಿಶ್ವನಾಥ್,ಎಂಎಸ್ ಆರ್ ನಟರಾಜು,ಕೆಂಕೆರೆ ಸತೀಶ್, ಉಮೇಶ್ ನಾಯಕ್,ಮೋತಿನಾಯ್ಕ್,ಲಕ್ಷ್ಮೀಭಾಯಿ,ನಂದಿಹಳ್ಳಿ ಶಿವಣ್ಣ ಮೊದಲಾದವರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.