ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಅಕ್ಟೋಬರ್, 2017 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹಬ್ಬದ ಎಫೆಕ್ಟ್; ಬೆಂಗಳೂರು ಬಸ್ ಗಳು ರಶೋ.......ರಶ್

ಹುಳಿಯಾರು ; ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನದಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಂದ ಜನಜಂಗುಳಿಯಾಗಿ ಬೆಂಗಳೂರಿಗೆ ತೆರಳುವ ಯಾವೊಂದು ಬಸ್ ಬಂದರೂ ಸಾಕು ಹರಸಾಹಸ ಮಾಡಿಯಾದರು ಬಸ್ ನೊಳಗೆ ಪ್ರವೇಶ ಮಾಡೀಯೇ ತೀರುವ ಪರಿಸ್ಥಿತಿ ಪ್ರಯಾಣಿಕರಲ್ಲಿ ಉಂಟಾಗಿತ್ತು.ದೀಪಾವಳಿ ಹಬ್ಬದ ಸಾಲು ರಜಾ ದಿನ ಮುಗಿಸಿ ವಾಪಸ್ ತೆರಳಲು ಹುಳಿಯಾರು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಜನರಿಗೆ ಬರುತ್ತಿದ್ದ ಬಸ್ಸುಗಳು ಭರ್ತಿಯಾಗಿ ಬರುತ್ತಿದ್ದರಿಂದ ಬಸ್ ಹತ್ತಲು ಹೈರಾಣಾಗುವ ಸ್ಥಿತಿ ಉಂಟಾಗಿತ್ತು. ಬೆಂಗಳೂರು ಕಡೆ ಹೋಗಲು ಯಾವ ಬಸ್ ಬಂದರೂ ಸಹ ಅವೆಲ್ಲಾ ಹೊಸದುರ್ಗದಿಂದಲೇ ಭರ್ತಿಯಾಗಿ ಬರುತ್ತಿದ್ದರಿಂದ ಕಾಲಿಡುವುದಕ್ಕು ಆಸ್ಪದವಿರಲಿಲ್ಲ. ಹುಳಿಯಾರು ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಸಾಕಷ್ಟು ಮಂದಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವವರೇ ಆಗಿದ್ದು ದೀಪಾವಳಿ ಹಬ್ಬಕ್ಕೆಂದು ತಂತಮ್ಮ ಊರುಗಳಿಗೆ ಬಂದಿದ್ದರು. ಹಬ್ಬದ ರಜೆ ಮುಗಿಸಿ ಸೋಮವಾರದಂದು ವಾಪಸ್ಸ್ ಕೆಲಸಕ್ಕೆ ಹಾಜರಾಗಲು ಎಲ್ಲರೂ ಮಧ್ಯಾಹ್ನದಿಂದಲೇ ಬಂದಿದ್ದರಿಂದ ಬಸ್ ನಿಲ್ದಾಣ ಗಿಜುಗುಟ್ಟುತ್ತಿತ್ತು. ಎಲ್ಲಾ ಕೆಎಸಾರ್ಟಿಸಿ ಬಸ್ಸುಗಳು ಹೊಸದುರ್ಗದಿಂದ ಬರುತ್ತಿದ್ದವಾದ್ದರಿಂದ ಹುಳಿಯಾರಿಗೆ ಬರುವಷ್ಟರಲ್ಲೇ ಬಸ್ ಸೀಟ್ ಗಳೆಲ್ಲಾ ತುಂಬಿದ್ದು ಪ್ರಯಾಣಿಕರು ಪರದಾಡುವಂತಾಗಿತ್ತು. ಬರುತ್ತಿದ್ದ ಬಸ್ ಗೆ ಒಮ್ಮೆಲೆ ಎಲ್ಲಾ ಪ್ರಯಾಣಿಕರು ನುಗ್ಗುತ್ತಿದ್ದರಿಂದ ಬಸ್ ಹತ್ತುವುದೆ

ಹುಳಿಯಾರಿನಲ್ಲಿ ಯೋಗಾಸನ ತರಬೇತಿ ಶಿಬಿರಕ್ಕೆ ಚಾಲನೆ

ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸುವ ಆದ್ಯಾತ್ಮಿಕ ವಿದ್ಯೆಯೇ ಯೋಗ ಹುಳಿಯಾರು :ಆಧುನಿಕ ಜೀವನ ಶೈಲಿಯಿಂದಾಗಿ ಎದುರಾಗುತ್ತಿರುವ ಬಹುತೇಕ ಆರೋಗ್ಯದ ಸಮಸ್ಯೆಗಳಿಗೆ ಯೋಗ ಮದ್ದಾಗಿದ್ದು ಇದು ನಮ್ಮ ಭಾರತೀಯ ಸಂಸ್ಕೃತಿಯ ಹೆಮ್ಮೆಯ ಪ್ರತೀಕ ಎಂದು ಜಿಗಣಿಯ ವಿವೇಕಾನಂದ ಯೋಗ ಕೇಂದ್ರದ ಯೋಗಗುರು ರಾಮಲಿಂಗಂ ಹೇಳಿದರು. ಪಟ್ಟಣದ ಶ್ರೀ ಮಾತಾ ಛಾರಿಟಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಲಾಗಿರುವ ಧ್ಯಾನಮಂದಿರದಲ್ಲಿ ಉಚಿತ ಯೋಗಾಸನ ತರಬೇರತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಯೋಗದ ಮಹತ್ವ ಹಾಗೂ ಸಮತೋಲನ ಆಹಾರದ ಪ್ರಾಮುಖ್ಯತೆ ಬಗ್ಗೆ ಮಾತನಾಡಿದ ಅವರು ನಾವು ಪ್ರತಿದಿನ ಸೇವಿಸುವ ಆಹಾರ ಹಾಗೂ ಜೀವನ ಕ್ರಮದಿಂದ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆ ಹೆಚ್ಚಾಗುತ್ತಿದ್ದು ಜನರ ಆರೋಗ್ಯ ಹದಗೆಡುವಂತಾಗಿದೆ. ಉತ್ತಮ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದ್ದು, ಆಸನಗಳಿಂದ ಜೀವನಕ್ರಮ ಸರಳವಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಯೋಗ ಎಂದರೆ ಕೇವಲ ದೈಹಿಕ ಕಸರತ್ತಲ್ಲ.ಸರ್ಕಸ್ಸು ಅಲ್ಲ.ಅದೊಂದು ಮನಸ್ಸಿನ ಮೇಲೆ ನಿಯಂತ್ರಣ ಸಾಧಿಸುವ ಆಧ್ಯಾತ್ಮಿಕ ವಿದ್ಯೆ.ವಯಸ್ಸಿನ ಅಂತರವಿಲ್ಲದೆ ಪ್ರತಿಯೊಬ್ಬರೂ ಯೋಗ ಮಾಡಬಹುದಿದ್ದು ಯೋಗ ಮಾಡುವುದಕ್ಕೂ ಯೋಗ ಬೇಕು ಎಂದರು. ಈ ಸಂದರ್ಭದಲ್ಲಿ ಶ್ರೀ ಮಾತಾ ಛಾರಿಟಬಲ್ ಟ್ರಸ್ಟ್ ಅಧ್ಯಕ್ಷ ಗಂಗಾಧರ್,ಜಿಲ್ಲಾಪಂಚಾಯ್ತಿ ಸದಸ್ಯ ವೈ.ಸಿ.ಸಿದ್ಧರಾಮಯ್ಯ,ಆರ್ಯ ವೈಶ್ಯ ಮಂಡಳಿ ಅಧ್ಯಕ್ಷ ಎಂ.ಎಸ್.ನಟರಾಜು,ಹುಳಿಯಾರ

೫೦ ಮನೆಗಳ ಈ ಗ್ರಾಮದಲ್ಲಿ ಬಯಲು ಬಹಿರ್ದೆಸೆ ಜೀವಂತ

ಸರ್ಕಾರದ ಶೌಚಾಲಯದ ಆಂದೋಲನ ಈ ಗ್ರಾಮಕ್ಕೆ ತಲುಪಿಲ್ಲ. ೫೦ ಮನೆಗಳ ಈ ಗ್ರಾಮದಲ್ಲಿ ಬಯಲು ಬಹಿರ್ದೆಸೆ ಜೀವಂತ ವರದಿ: ಡಿ.ಆರ್.ನರೇಂದ್ರಬಾಬು ಹುಳಿಯಾರು: ಬಯಲು ಬಹಿರ್ದೆಸೆ ಮುಕ್ತ ಆರೋಗ್ಯವಂತ ಕರ್ನಾಟಕ ಮಾಡಲು ಸರ್ಕಾರ ಶೌಚಾಲಯದ ಆಂದೋಲನವನ್ನೇ ಹುಟ್ಟು ಹಾಕಿದರೂ ಕೂಡ ಇದರ ಅರಿವೇ ಇಲ್ಲದಂತೆ ಬಯಲಿನಲ್ಲಿಯೇ ಬಹಿರ್ದೆಸೆಗೆ ಗುವ ಗ್ರಾಮ ಇಂದಿಗೂ ಇರುವುದು ಯೋಜನೆಯ ಸಫಲತೆಯನ್ನು ಪ್ರಶ್ನಿಸುವಂತಾಗಿದೆ. ಶೌಚಾಲಯವಿಲ್ಲದ ಹುಳಿಯಾರಿನ ಕೂಗಳತೆಯಲ್ಲಿರುವ ಸೈಯದ್ ಸಾಬ್ ಪಾಳ್ಯದ ನೋಟ.         ಗ್ರಾಮೀಣ ಭಾಗದಲ್ಲಿ ಹೆಚ್ಚು ಕಡಿಮೆ ಎಲ್ಲರೂ ಶೌಚಾಲಯ ಹೊಂದಿ ಸಂಪೂರ್ಣ ಬಯಲು ಮುಕ್ತ ಕರ್ನಾಟಕ ಎನ್ನುವ ಹೊತ್ತಿನಲ್ಲೇ,ಸರ್ಕಾರದ ನೈರ್ಮಲ್ಯೀಕರಣ ಯೋಜನೆಯ ಫಲ ಇವರಿಗೆ ದೊರೆಯದ ಕಾರಣ ಶೌಚಾಲಯ ಹೊಂದಿರದ ಈ ಗ್ರಾಮ ಇದೀಗ ಬೆಳಕಿಗೆ ಬಂದಿದೆ.          ಹೌದು, ಹುಳಿಯಾರಿನ ಕೂಗಳತೆಯಲ್ಲಿರುವ ಸೈಯದ್ ಸಾಬ್ ಪಾಳ್ಯದಲ್ಲಿ ಐವತ್ತು ಕುಟುಂಬಗಳಿದ್ದು,ಶೌಚಾಲಯದ ಬಗ್ಗೆ ಅರಿವಿದ್ದರೂ ಕೂಡ ಅನುದಾನ ಬರುವುದಿಲ್ಲ,ಬಂದರೂ ತಡವಾಗುತ್ತದೆ ಎಂಬ ನೆಪವೊಡ್ಡಿ ಶೌಚಾಲಯದ ಉಸಾಬರಿಯೇ ಬೇಡವೆಂದು ಸುಮ್ಮನಾಗಿದ್ದಾರೆ. ಶೌಚಾಲಯದ ಯೋಜನೆಗಳ ಬಗ್ಗೆ ಹಾಗೂ ಕೊಡಮಾಡುವ ಅನುದಾನದ ಬಗ್ಗೆ ಗ್ರಾಮಸ್ಥರನ್ನು ಭೇಟಿ ಮಾಡಿ ಅರಿವು ಮೂಡಿಸುತ್ತಿರುವ ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಹೆಚ್.ಎನ್.ಕುಮಾರ್.      ಈ ಊರಿನಲ್ಲಿ ಇಂದಿಗೂ ಇರುವುದು ಒ