ಹುಳಿಯಾರು ; ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನದಿಂದ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಂದ ಜನಜಂಗುಳಿಯಾಗಿ ಬೆಂಗಳೂರಿಗೆ ತೆರಳುವ ಯಾವೊಂದು ಬಸ್ ಬಂದರೂ ಸಾಕು ಹರಸಾಹಸ ಮಾಡಿಯಾದರು ಬಸ್ ನೊಳಗೆ ಪ್ರವೇಶ ಮಾಡೀಯೇ ತೀರುವ ಪರಿಸ್ಥಿತಿ ಪ್ರಯಾಣಿಕರಲ್ಲಿ ಉಂಟಾಗಿತ್ತು.ದೀಪಾವಳಿ ಹಬ್ಬದ ಸಾಲು ರಜಾ ದಿನ ಮುಗಿಸಿ ವಾಪಸ್ ತೆರಳಲು ಹುಳಿಯಾರು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಜನರಿಗೆ ಬರುತ್ತಿದ್ದ ಬಸ್ಸುಗಳು ಭರ್ತಿಯಾಗಿ ಬರುತ್ತಿದ್ದರಿಂದ ಬಸ್ ಹತ್ತಲು ಹೈರಾಣಾಗುವ ಸ್ಥಿತಿ ಉಂಟಾಗಿತ್ತು. ಬೆಂಗಳೂರು ಕಡೆ ಹೋಗಲು ಯಾವ ಬಸ್ ಬಂದರೂ ಸಹ ಅವೆಲ್ಲಾ ಹೊಸದುರ್ಗದಿಂದಲೇ ಭರ್ತಿಯಾಗಿ ಬರುತ್ತಿದ್ದರಿಂದ ಕಾಲಿಡುವುದಕ್ಕು ಆಸ್ಪದವಿರಲಿಲ್ಲ. ಹುಳಿಯಾರು ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಸಾಕಷ್ಟು ಮಂದಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವವರೇ ಆಗಿದ್ದು ದೀಪಾವಳಿ ಹಬ್ಬಕ್ಕೆಂದು ತಂತಮ್ಮ ಊರುಗಳಿಗೆ ಬಂದಿದ್ದರು. ಹಬ್ಬದ ರಜೆ ಮುಗಿಸಿ ಸೋಮವಾರದಂದು ವಾಪಸ್ಸ್ ಕೆಲಸಕ್ಕೆ ಹಾಜರಾಗಲು ಎಲ್ಲರೂ ಮಧ್ಯಾಹ್ನದಿಂದಲೇ ಬಂದಿದ್ದರಿಂದ ಬಸ್ ನಿಲ್ದಾಣ ಗಿಜುಗುಟ್ಟುತ್ತಿತ್ತು. ಎಲ್ಲಾ ಕೆಎಸಾರ್ಟಿಸಿ ಬಸ್ಸುಗಳು ಹೊಸದುರ್ಗದಿಂದ ಬರುತ್ತಿದ್ದವಾದ್ದರಿಂದ ಹುಳಿಯಾರಿಗೆ ಬರುವಷ್ಟರಲ್ಲೇ ಬಸ್ ಸೀಟ್ ಗಳೆಲ್ಲಾ ತುಂಬಿದ್ದು ಪ್ರಯಾಣಿಕರು ಪರದಾಡುವಂತಾಗಿತ್ತು. ಬರುತ್ತಿದ್ದ ಬಸ್ ಗೆ ಒಮ್ಮೆಲೆ ಎಲ್ಲಾ ಪ್ರಯಾಣಿಕರು ನುಗ್ಗುತ್ತಿದ್ದರಿಂದ ಬಸ್ ಹತ್ತುವುದೆ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070