ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ನವೆಂಬರ್, 2017 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪಂಚಾಯ್ತಿಯಲ್ಲಿ ಆಪರೇಟರ್ ಹುದ್ದೆ ನೀಡದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವೆ

ಪಂಚಾಯ್ತಿಯಲ್ಲಿ ಆಪರೇಟರ್ ಹುದ್ದೆ ನೀಡದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವೆ ---------------------------------------- ಕಳೆದ ಮೂರು ವರ್ಷಗಳಿಂದಲೂ ಉದ್ಯೋಗಕ್ಕಾಗಿ ಅಲೆದ ಲಕ್ಷ್ಮೀಯ ಗೋಳಾಟ -------------------------------------- ಜಿಲ್ಲಾ ಉಸ್ತುವಾರಿ ಸಚಿವರ ಆದೇಶಕ್ಕೂ ಕಿಮ್ಮತ್ತು ನೀಡದ ಅಧಿಕಾರಿಗಳು ---------------------------------------- ಹುಳಿಯಾರು: ಹುಳಿಯಾರು ಗ್ರಾಮ ಪಂಚಾಯಿತಿಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಯನ್ನು ಕಳೆದ ಮೂರು ವರ್ಷದ ಹಿಂದೆ ನಾನು ನಿರ್ವಹಿಸಿದ್ದು ನನ್ನನ್ನು ವಿನಾಕಾರಣ ಏಕಾಏಕಿ ಕೆಲಸದಿಂದ ತೆಗೆದು ಹಾಕಿದ್ದು ಆ ಹುದ್ದೆಯನ್ನು ನನಗೆ ನೀಡಲೇಬೇಕು.ಇಲ್ಲದಿದ್ದಲ್ಲಿ ಇಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಲಕ್ಷ್ಮೀ ಎಂಬಾಕೆ ತನ್ನ ಅಳಲು ತೋಡಿಕೊಂಡು ಎಲ್ಲರೆದುರಿಗೂ ಕಣ್ಣೀರಿಟ್ಟ ಪ್ರಸಂಗ ಇಂದಿನ ಗ್ರಾಮಸಭೆಯಲ್ಲಿ ಜರುಗಿತು. ಹುಳಿಯಾರು ಪಂಚಾಯ್ತಿಯಲ್ಲಿ ನಡೆದ ಗ್ರಾಮಸಭೆಯಲ್ಲಿ ಉದ್ಯೊಗಕ್ಕಾಗಿ ಒತ್ತಾಯಿಸಿದ ಲಕ್ಷ್ಮೀ.                   ಹುಳಿಯಾರು ಗ್ರಾಮ ಪಂಚಾಯಿತಿಯಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಬಂದಿರುವ ಒಂದು ಕೋಟಿರೂ ಹಣದ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ಕರೆಯಲಾಗಿದ್ದ ಗ್ರಾಮಸಭೆಯಲ್ಲಿ ತನ್ನ ತಾಯಿಯೊಂದಿಗೆ ಆಗಮಿಸಿದ್ದ ಈಕೆ ಜಿಲ್ಲಾ ಪಂಚಾಯಿತಿ ಸದಸ್ಯ,ತಾಲೂಕು ಪಂಚಾಯಿತಿ ಸದಸ್ಯ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ತನ್ನ ಸಮ

ಸರ್ದಾರ್ ಪಟೇಲರ ಜಯಂತಿ: ಹುಳಿಯಾರಿನಲ್ಲಿ ಏಕತೆಗಾಗಿ ಓಟ

ಹುಳಿಯಾರು :ಭಾರತದ ಉಕ್ಕಿನ ಮನುಷ್ಯ ಮತ್ತು ರಾಷ್ಟ್ರದ ಅಖಂಡತೆಯ ಪ್ರವರ್ತಕ ಸರದಾರ್ ವಲ್ಲಭಭಾಯಿ ಪಟೇಲ್ ಅವರ ನೂರಾ ನಲವತ್ತೆರಡನೇ ಜನ್ಮ ದಿನೋತ್ಸವದ ಪ್ರಯುಕ್ತ ಹುಳಿಯಾರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏಕತೆಗಾಗಿ ಓಟವನ್ನು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.          ಕಾಲೇಜು ಆವರಣದಿಂದ ಪ್ರಾರಂಭವಾದ ಏಕತಾ ಓಟ ಹುಳಿಯಾರು ಪಟ್ಟಣ ತಲುಪಿ ರಾಮಾಹಾಲ್ ಮುಂಭಾಗದಿಂದ ಬಸ್ ನಿಲ್ದಾಣ ತಲುಪಿ ಮುಕ್ತಾಯಗೊಂಡಿತು.ಸುಮಾರು ಐನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಓಟದಲ್ಲಿ ಪಾಲ್ಗೊಂಡಿದ್ದರು.            ಇದಕ್ಕೂ ಮುನ್ನಾ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಭಾರತೀಯ ಜನತಾ ಪಕ್ಷದ ವೈದ್ಯಕೀಯ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಡಾ.ಬಸವರಾಜು ಏಕತೆಗಾಗಿ ಓಟದಲ್ಲಿ ಪಾಲ್ಗೊಳ್ಳುವ ಮೂಲಕ ಮೂಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಸ್ಮರಿಸೋಣ ಮತ್ತು ದೇಶಾದ್ಯಂತ ಸಾಮರಸ್ಯ ಭಾತೃತ್ವ ಭಾವನೆಯನ್ನು ಪಸರಿಸೋಣ ಎಂದು ಕರೆನೀಡಿದರು.ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಎಲ್ಲಾ ಜನರನ್ನು, ಹಳ್ಳಿ ಹಳ್ಳಿಗಳನ್ನು, ದೇಶವನ್ನು ಒಗ್ಗೂಡಿಸುವುದೇ ಈ ಓಟದ ಉದ್ದೇಶವಾಗಿದ್ದು ಈ ಓಟವು ಎಲ್ಲಾ ಭಾರತೀಯರ ಕನಸನ್ನು, ಬಯಕೆಯನ್ನು ಈಡೇರಿಸುವ ಪ್ರಯತ್ನವಾಗಿದೆ ಎಂದರು. ಹುಳಿಯಾರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಏಕತೆಗಾಗಿ ಓಟದ ಸಮಾರಂಭದಲ್ಲಿ ಡಾ.ಬಸವರಾಜು ಮಾತನಾಡಿದರು.         ಚೀನಿ ಉತ್