ವಿಷಯಕ್ಕೆ ಹೋಗಿ

ಪಂಚಾಯ್ತಿಯಲ್ಲಿ ಆಪರೇಟರ್ ಹುದ್ದೆ ನೀಡದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವೆ

ಪಂಚಾಯ್ತಿಯಲ್ಲಿ ಆಪರೇಟರ್ ಹುದ್ದೆ ನೀಡದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವೆ
----------------------------------------
ಕಳೆದ ಮೂರು ವರ್ಷಗಳಿಂದಲೂ ಉದ್ಯೋಗಕ್ಕಾಗಿ ಅಲೆದ ಲಕ್ಷ್ಮೀಯ ಗೋಳಾಟ
--------------------------------------
ಜಿಲ್ಲಾ ಉಸ್ತುವಾರಿ ಸಚಿವರ ಆದೇಶಕ್ಕೂ ಕಿಮ್ಮತ್ತು ನೀಡದ ಅಧಿಕಾರಿಗಳು
----------------------------------------
ಹುಳಿಯಾರು:ಹುಳಿಯಾರು ಗ್ರಾಮ ಪಂಚಾಯಿತಿಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಯನ್ನು ಕಳೆದ ಮೂರು ವರ್ಷದ ಹಿಂದೆ ನಾನು ನಿರ್ವಹಿಸಿದ್ದು ನನ್ನನ್ನು ವಿನಾಕಾರಣ ಏಕಾಏಕಿ ಕೆಲಸದಿಂದ ತೆಗೆದು ಹಾಕಿದ್ದು ಆ ಹುದ್ದೆಯನ್ನು ನನಗೆ ನೀಡಲೇಬೇಕು.ಇಲ್ಲದಿದ್ದಲ್ಲಿ ಇಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಲಕ್ಷ್ಮೀ ಎಂಬಾಕೆ ತನ್ನ ಅಳಲು ತೋಡಿಕೊಂಡು ಎಲ್ಲರೆದುರಿಗೂ ಕಣ್ಣೀರಿಟ್ಟ ಪ್ರಸಂಗ ಇಂದಿನ ಗ್ರಾಮಸಭೆಯಲ್ಲಿ ಜರುಗಿತು.
ಹುಳಿಯಾರು ಪಂಚಾಯ್ತಿಯಲ್ಲಿ ನಡೆದ ಗ್ರಾಮಸಭೆಯಲ್ಲಿ ಉದ್ಯೊಗಕ್ಕಾಗಿ ಒತ್ತಾಯಿಸಿದ ಲಕ್ಷ್ಮೀ.
                  ಹುಳಿಯಾರು ಗ್ರಾಮ ಪಂಚಾಯಿತಿಯಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಬಂದಿರುವ ಒಂದು ಕೋಟಿರೂ ಹಣದ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ಕರೆಯಲಾಗಿದ್ದ ಗ್ರಾಮಸಭೆಯಲ್ಲಿ ತನ್ನ ತಾಯಿಯೊಂದಿಗೆ ಆಗಮಿಸಿದ್ದ ಈಕೆ ಜಿಲ್ಲಾ ಪಂಚಾಯಿತಿ ಸದಸ್ಯ,ತಾಲೂಕು ಪಂಚಾಯಿತಿ ಸದಸ್ಯ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ತನ್ನ ಸಮಸ್ಯೆ ಹೇಳಿಕೊಂಡಿದ್ದಲ್ಲದೆ ಸಮಸ್ಯೆ ಪರಿಹರಿಸದಿದ್ದಲ್ಲಿ ಇಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದಳು.

            ಹುಳಿಯಾರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಈ ಹಿಂದೆ ಮೂರು ವರ್ಷ ಕೆಲಸ ಮಾಡಿದ್ದು ಅವರು ಸಂಬಳವೆಂದು ಬಿಡುಗಾಸು ನೀಡದಿದ್ದರೂ ಸಹ ಮುಂದೆ ಉದ್ಯೋಗ ದೊರೆಯಬಹುದೆಂಬ ನಿರೀಕ್ಷೆಯಿಂದ ಕೆಲಸ ನಿರ್ವಹಿಸಿದ್ದೆ. ಆದರೆ ಯಾವುದೇ ಕಾರಣ ನೀಡದೆ ನನ್ನನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿ ಬೇರೆ ತಾಲ್ಲೂಕಿನ ವ್ಯಕ್ತಿಯನ್ನು ಇದೇ ಕೆಲಸಕ್ಕೆ ತೆಗೆದುಕೊಂಡು ಇರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
           ಕಂಪ್ಯೂಟರ್ ಕೋರ್ಸ್ ಮಾಡಿರುವ ನಾನು ಪರಿಶಿಷ್ಟ ಜಾತಿಯ ದೊಂಬರು ಅಲೆಮಾರಿ ಜನಾಂಗಕ್ಕೆ ಸೇರಿದ್ದು ಕೂಲಿ ನಾಲಿಯಿಂದಲೇ ಜೀವನ ಸಾಗಿಸಬೇಕಾಗಿದ ದುಸ್ಥಿತಿ ಇದೆ.ಪಂಚಾಯಿತಿಯಲ್ಲಿ ಉದ್ಯೋಗವಾಗಬಹುದೆಂಬ ನಿರೀಕ್ಷೆಯಲ್ಲಿ ನಾನು ಬೇರೆಲ್ಲೂ ಕೆಲಸಕ್ಕೆ ಹೋಗದೆ ಇದೇ ಪಂಚಾಯಿತಿಯಲ್ಲಿ ಮೂರು ವರ್ಷ ಕಾರ್ಯ ನಿರ್ವಹಿಸಿ ಇದೀಗ ಪಂಚಾಯಿತಿಯಲ್ಲೂ ಕೆಲಸ ಸಿಗದೆ ಬೇರೆಡೆಯೂ ಕೆಲಸವಿಲ್ಲದೆ ನಿರುದ್ಯೋಗಿಯಾಗಿ ಜೀವನ ನಡೆಸುವುದು ಸಮಸ್ಯೆಯಾಗಿದೆ.
         ನನ್ನ ಸಮಸ್ಯೆ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯಿಂದ ಹಿಡಿದು ಜಿಲ್ಲಾ ಪಂಚಾಯಿತಿ ಸದಸ್ಯರು, ಶಾಸಕರು,ಸಂಸದರು,ಜಿಲ್ಲಾ ಉಸ್ತುವಾರಿ ಸಚಿವರು,ಮುಖ್ಯಮಂತ್ರಿಗಳು ಕಡೆಗೆ ಪ್ರಧಾನ ಮಂತ್ರಿಗಳವರೆಗೂ ಪತ್ರ ಬರೆದು ಎಲ್ಲರ ಗಮನಕ್ಕೂ ತಂದು ನನ್ನ ಅಳಲು ತೋಡಿಕೊಂಡಿರುವ.ಎಲ್ಲೆಡೆಯಿಂದಲೂ ಇವರನ್ನು ಕೆಲಸಕ್ಕೆ ತೆಗೆದುಕೊಳ್ಳಿ ಎಂದು ಹೇಳಿ ಪತ್ರ ಬಂದಿದ್ದರೂ ಸಹ ನೀವು ನನ್ನನ್ನು ಕೆಲಸಕ್ಕೆ ತೆಗೆದುಕೊಳ್ಳದಿರಲು ಕಾರಣವೇನೆಂದು ಪ್ರಶ್ನಿಸಿ ಎಲ್ಲೆಡೆಯಿಂದ ಬಂದಿದ್ದ ಪತ್ರ ಪ್ರದರ್ಶನ ಮಾಡಿದರು.
ಮುಖ್ಯಮಂತ್ರಿಗಳ,ಸಚಿವರ ಪತ್ರ ಪ್ರದರ್ಶನ ಮಾಡಿದ ಲಕ್ಷ್ಮೀ.
        ಸಂಸದರ,ಮುಖ್ಯಮಂತ್ರಿಗಳ ಪತ್ರಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದೆ ನನ್ನನ್ನು ಸತಾಯಿಸಿತಿರುವುದಲ್ಲದೇ ಇಲ್ಲ ಸಲ್ಲದ ಕಾನೂನು ನೆಪ ಹೇಳಿ ನುಣುಚಿಕೊಳ್ಳುತ್ತಿರುವುದು ಸರಿಯಲ್ಲ. ಹುಳಿಯಾರು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಾರೊಬ್ಬರೂ ಸಹ ಸರ್ಕಾರದ ನೀತಿ ನಿಯಮ ಹಾಗೂ ಆಯ್ಕೆ ಪ್ರಕ್ರಿಯೆಯಂತೆ ಆಯ್ಕೆಯಾಗದೇ ಕೇವಲ ಸದಸ್ಯರ ಶಿಫಾರಸ್ಸು ಮೇಲೆಯೇ ಕಾರ್ಯನಿರ್ವಹಿಸುತ್ತಿದ್ದಾರೆ.ಅಂತಹದರಲ್ಲಿ ಅವರು ಯಾರಿಗೂ ಇಲ್ಲದ ಕಾನೂನು ನನಗೆ ಮಾತ್ರ ಏಕೆಂದು ಪ್ರಶ್ನಿಸಿದ್ದಲ್ಲದೆ ಪರಿಶಿಷ್ಟರು ಎಂದು ನನ್ನನ್ನು ತೆಗೆದುಕೊಳ್ಳದೆ ಅಲೆದಾಡಿಸುತ್ತಿರುವುದು ಅಮಾನವೀಯ ಎಂದರು.
        ಇಂದು ಎಲ್ಲರೂ ಸೇರಿದ್ದು ನನ್ನ ಸಮಸ್ಯೆಯನ್ನು ಸ್ಥಳದಲ್ಲೇ ಬಗೆಹರಿಸಬೇಕೆಂದು ಪಟ್ಟು ಹಿಡಿದ ಅವರು ಇಲ್ಲದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದರು.ಸ್ಥಳದಲ್ಲೇ ಇದ್ದ ಪೊಲೀಸರು ವಿಷದ ಬಾಟಲ್ ಎತ್ತಿಕೊಂಡು ಸಮಾಧಾನ ಮಾಡಿದರು.ಇದೇ ವೇಳೆ ಜಿಲ್ಲಾ ಪಂಚಾಯಿತಿ ಸಿದ್ದರಾಮಣ್ಣ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ಹೆಚ್.ಎನ್.ಕುಮಾರ್ ಕಾರ್ಯನಿರ್ವಹಣಾಧಿಕಾರಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡಿ ಸಮಸ್ಯೆಯನ್ನು ಅವರ ಗಮನಕ್ಕೆ ತಂದು ಉದ್ಯೋಗ ನೀಡುವಂತೆ ಆಗ್ರಹಿಸಿದರು.
ಜಿಲ್ಲಾಉಸ್ತುವಾರಿ ಸಚಿವರ ಪತ್ರ.
        ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯನಿರ್ವಾಹಕ ಅಧಿಕಾರಿ ಆಕೆಯ ಸಲ್ಲಿಸಿರುವ ದಾಖಲೆಗಳು ಹಾಗೂ ಮನವಿ ಪತ್ರಗಳನ್ನು ತೆಗೆದುಕೊಂಡು ಬಂದಲ್ಲಿ ಪರಿಶೀಲಿಸುವುದಾಗಿ ಹೇಳಿದರು.
       ಒಟ್ಟಾರೆ ಅಧಿಕಾರಿಗಳು ಈಗಲಾದರೂ ಜಿಲ್ಲಾಉಸ್ತುವಾರಿ ಸಚಿವರ ಆದೇಶಕ್ಕೆ ಬೆಲೆಕೊಟ್ಟು ಆಕೆಯ ಉದ್ಯೋಗಕ್ಕೊಂದು ದಾರಿಮಾಡಿಕೊಡುವರಾ ಕಾದುನೋಡಬೇಕು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...