ವಿಷಯಕ್ಕೆ ಹೋಗಿ

ಪಂಚಾಯ್ತಿಯಲ್ಲಿ ಆಪರೇಟರ್ ಹುದ್ದೆ ನೀಡದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವೆ

ಪಂಚಾಯ್ತಿಯಲ್ಲಿ ಆಪರೇಟರ್ ಹುದ್ದೆ ನೀಡದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವೆ
----------------------------------------
ಕಳೆದ ಮೂರು ವರ್ಷಗಳಿಂದಲೂ ಉದ್ಯೋಗಕ್ಕಾಗಿ ಅಲೆದ ಲಕ್ಷ್ಮೀಯ ಗೋಳಾಟ
--------------------------------------
ಜಿಲ್ಲಾ ಉಸ್ತುವಾರಿ ಸಚಿವರ ಆದೇಶಕ್ಕೂ ಕಿಮ್ಮತ್ತು ನೀಡದ ಅಧಿಕಾರಿಗಳು
----------------------------------------
ಹುಳಿಯಾರು:ಹುಳಿಯಾರು ಗ್ರಾಮ ಪಂಚಾಯಿತಿಯಲ್ಲಿ ಕಂಪ್ಯೂಟರ್ ಆಪರೇಟರ್ ಹುದ್ದೆಯನ್ನು ಕಳೆದ ಮೂರು ವರ್ಷದ ಹಿಂದೆ ನಾನು ನಿರ್ವಹಿಸಿದ್ದು ನನ್ನನ್ನು ವಿನಾಕಾರಣ ಏಕಾಏಕಿ ಕೆಲಸದಿಂದ ತೆಗೆದು ಹಾಕಿದ್ದು ಆ ಹುದ್ದೆಯನ್ನು ನನಗೆ ನೀಡಲೇಬೇಕು.ಇಲ್ಲದಿದ್ದಲ್ಲಿ ಇಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಲಕ್ಷ್ಮೀ ಎಂಬಾಕೆ ತನ್ನ ಅಳಲು ತೋಡಿಕೊಂಡು ಎಲ್ಲರೆದುರಿಗೂ ಕಣ್ಣೀರಿಟ್ಟ ಪ್ರಸಂಗ ಇಂದಿನ ಗ್ರಾಮಸಭೆಯಲ್ಲಿ ಜರುಗಿತು.
ಹುಳಿಯಾರು ಪಂಚಾಯ್ತಿಯಲ್ಲಿ ನಡೆದ ಗ್ರಾಮಸಭೆಯಲ್ಲಿ ಉದ್ಯೊಗಕ್ಕಾಗಿ ಒತ್ತಾಯಿಸಿದ ಲಕ್ಷ್ಮೀ.
                  ಹುಳಿಯಾರು ಗ್ರಾಮ ಪಂಚಾಯಿತಿಯಲ್ಲಿ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯಡಿ ಬಂದಿರುವ ಒಂದು ಕೋಟಿರೂ ಹಣದ ಕ್ರಿಯಾ ಯೋಜನೆ ತಯಾರಿಸುವ ಬಗ್ಗೆ ಕರೆಯಲಾಗಿದ್ದ ಗ್ರಾಮಸಭೆಯಲ್ಲಿ ತನ್ನ ತಾಯಿಯೊಂದಿಗೆ ಆಗಮಿಸಿದ್ದ ಈಕೆ ಜಿಲ್ಲಾ ಪಂಚಾಯಿತಿ ಸದಸ್ಯ,ತಾಲೂಕು ಪಂಚಾಯಿತಿ ಸದಸ್ಯ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರೊಂದಿಗೆ ತನ್ನ ಸಮಸ್ಯೆ ಹೇಳಿಕೊಂಡಿದ್ದಲ್ಲದೆ ಸಮಸ್ಯೆ ಪರಿಹರಿಸದಿದ್ದಲ್ಲಿ ಇಲ್ಲೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದಳು.

            ಹುಳಿಯಾರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಈ ಹಿಂದೆ ಮೂರು ವರ್ಷ ಕೆಲಸ ಮಾಡಿದ್ದು ಅವರು ಸಂಬಳವೆಂದು ಬಿಡುಗಾಸು ನೀಡದಿದ್ದರೂ ಸಹ ಮುಂದೆ ಉದ್ಯೋಗ ದೊರೆಯಬಹುದೆಂಬ ನಿರೀಕ್ಷೆಯಿಂದ ಕೆಲಸ ನಿರ್ವಹಿಸಿದ್ದೆ. ಆದರೆ ಯಾವುದೇ ಕಾರಣ ನೀಡದೆ ನನ್ನನ್ನು ಏಕಾಏಕಿ ಕೆಲಸದಿಂದ ತೆಗೆದು ಹಾಕಿ ಬೇರೆ ತಾಲ್ಲೂಕಿನ ವ್ಯಕ್ತಿಯನ್ನು ಇದೇ ಕೆಲಸಕ್ಕೆ ತೆಗೆದುಕೊಂಡು ಇರುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
           ಕಂಪ್ಯೂಟರ್ ಕೋರ್ಸ್ ಮಾಡಿರುವ ನಾನು ಪರಿಶಿಷ್ಟ ಜಾತಿಯ ದೊಂಬರು ಅಲೆಮಾರಿ ಜನಾಂಗಕ್ಕೆ ಸೇರಿದ್ದು ಕೂಲಿ ನಾಲಿಯಿಂದಲೇ ಜೀವನ ಸಾಗಿಸಬೇಕಾಗಿದ ದುಸ್ಥಿತಿ ಇದೆ.ಪಂಚಾಯಿತಿಯಲ್ಲಿ ಉದ್ಯೋಗವಾಗಬಹುದೆಂಬ ನಿರೀಕ್ಷೆಯಲ್ಲಿ ನಾನು ಬೇರೆಲ್ಲೂ ಕೆಲಸಕ್ಕೆ ಹೋಗದೆ ಇದೇ ಪಂಚಾಯಿತಿಯಲ್ಲಿ ಮೂರು ವರ್ಷ ಕಾರ್ಯ ನಿರ್ವಹಿಸಿ ಇದೀಗ ಪಂಚಾಯಿತಿಯಲ್ಲೂ ಕೆಲಸ ಸಿಗದೆ ಬೇರೆಡೆಯೂ ಕೆಲಸವಿಲ್ಲದೆ ನಿರುದ್ಯೋಗಿಯಾಗಿ ಜೀವನ ನಡೆಸುವುದು ಸಮಸ್ಯೆಯಾಗಿದೆ.
         ನನ್ನ ಸಮಸ್ಯೆ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯಿಂದ ಹಿಡಿದು ಜಿಲ್ಲಾ ಪಂಚಾಯಿತಿ ಸದಸ್ಯರು, ಶಾಸಕರು,ಸಂಸದರು,ಜಿಲ್ಲಾ ಉಸ್ತುವಾರಿ ಸಚಿವರು,ಮುಖ್ಯಮಂತ್ರಿಗಳು ಕಡೆಗೆ ಪ್ರಧಾನ ಮಂತ್ರಿಗಳವರೆಗೂ ಪತ್ರ ಬರೆದು ಎಲ್ಲರ ಗಮನಕ್ಕೂ ತಂದು ನನ್ನ ಅಳಲು ತೋಡಿಕೊಂಡಿರುವ.ಎಲ್ಲೆಡೆಯಿಂದಲೂ ಇವರನ್ನು ಕೆಲಸಕ್ಕೆ ತೆಗೆದುಕೊಳ್ಳಿ ಎಂದು ಹೇಳಿ ಪತ್ರ ಬಂದಿದ್ದರೂ ಸಹ ನೀವು ನನ್ನನ್ನು ಕೆಲಸಕ್ಕೆ ತೆಗೆದುಕೊಳ್ಳದಿರಲು ಕಾರಣವೇನೆಂದು ಪ್ರಶ್ನಿಸಿ ಎಲ್ಲೆಡೆಯಿಂದ ಬಂದಿದ್ದ ಪತ್ರ ಪ್ರದರ್ಶನ ಮಾಡಿದರು.
ಮುಖ್ಯಮಂತ್ರಿಗಳ,ಸಚಿವರ ಪತ್ರ ಪ್ರದರ್ಶನ ಮಾಡಿದ ಲಕ್ಷ್ಮೀ.
        ಸಂಸದರ,ಮುಖ್ಯಮಂತ್ರಿಗಳ ಪತ್ರಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದೆ ನನ್ನನ್ನು ಸತಾಯಿಸಿತಿರುವುದಲ್ಲದೇ ಇಲ್ಲ ಸಲ್ಲದ ಕಾನೂನು ನೆಪ ಹೇಳಿ ನುಣುಚಿಕೊಳ್ಳುತ್ತಿರುವುದು ಸರಿಯಲ್ಲ. ಹುಳಿಯಾರು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯಾರೊಬ್ಬರೂ ಸಹ ಸರ್ಕಾರದ ನೀತಿ ನಿಯಮ ಹಾಗೂ ಆಯ್ಕೆ ಪ್ರಕ್ರಿಯೆಯಂತೆ ಆಯ್ಕೆಯಾಗದೇ ಕೇವಲ ಸದಸ್ಯರ ಶಿಫಾರಸ್ಸು ಮೇಲೆಯೇ ಕಾರ್ಯನಿರ್ವಹಿಸುತ್ತಿದ್ದಾರೆ.ಅಂತಹದರಲ್ಲಿ ಅವರು ಯಾರಿಗೂ ಇಲ್ಲದ ಕಾನೂನು ನನಗೆ ಮಾತ್ರ ಏಕೆಂದು ಪ್ರಶ್ನಿಸಿದ್ದಲ್ಲದೆ ಪರಿಶಿಷ್ಟರು ಎಂದು ನನ್ನನ್ನು ತೆಗೆದುಕೊಳ್ಳದೆ ಅಲೆದಾಡಿಸುತ್ತಿರುವುದು ಅಮಾನವೀಯ ಎಂದರು.
        ಇಂದು ಎಲ್ಲರೂ ಸೇರಿದ್ದು ನನ್ನ ಸಮಸ್ಯೆಯನ್ನು ಸ್ಥಳದಲ್ಲೇ ಬಗೆಹರಿಸಬೇಕೆಂದು ಪಟ್ಟು ಹಿಡಿದ ಅವರು ಇಲ್ಲದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದರು.ಸ್ಥಳದಲ್ಲೇ ಇದ್ದ ಪೊಲೀಸರು ವಿಷದ ಬಾಟಲ್ ಎತ್ತಿಕೊಂಡು ಸಮಾಧಾನ ಮಾಡಿದರು.ಇದೇ ವೇಳೆ ಜಿಲ್ಲಾ ಪಂಚಾಯಿತಿ ಸಿದ್ದರಾಮಣ್ಣ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ಹೆಚ್.ಎನ್.ಕುಮಾರ್ ಕಾರ್ಯನಿರ್ವಹಣಾಧಿಕಾರಿಯೊಂದಿಗೆ ಮೊಬೈಲ್ ನಲ್ಲಿ ಮಾತನಾಡಿ ಸಮಸ್ಯೆಯನ್ನು ಅವರ ಗಮನಕ್ಕೆ ತಂದು ಉದ್ಯೋಗ ನೀಡುವಂತೆ ಆಗ್ರಹಿಸಿದರು.
ಜಿಲ್ಲಾಉಸ್ತುವಾರಿ ಸಚಿವರ ಪತ್ರ.
        ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯನಿರ್ವಾಹಕ ಅಧಿಕಾರಿ ಆಕೆಯ ಸಲ್ಲಿಸಿರುವ ದಾಖಲೆಗಳು ಹಾಗೂ ಮನವಿ ಪತ್ರಗಳನ್ನು ತೆಗೆದುಕೊಂಡು ಬಂದಲ್ಲಿ ಪರಿಶೀಲಿಸುವುದಾಗಿ ಹೇಳಿದರು.
       ಒಟ್ಟಾರೆ ಅಧಿಕಾರಿಗಳು ಈಗಲಾದರೂ ಜಿಲ್ಲಾಉಸ್ತುವಾರಿ ಸಚಿವರ ಆದೇಶಕ್ಕೆ ಬೆಲೆಕೊಟ್ಟು ಆಕೆಯ ಉದ್ಯೋಗಕ್ಕೊಂದು ದಾರಿಮಾಡಿಕೊಡುವರಾ ಕಾದುನೋಡಬೇಕು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...