ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

2019 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪ್ರಧಾನಿ ಮೋದಿ ಜೊತೆ ಗಣರಾಜ್ಯೋತ್ಸವ ಪೆರೇಡ್ ವೀಕ್ಷಿಸಲು ಹುಳಿಯಾರಿನ ಯಶಸ್ ಗೆ ಆಹ್ವಾನ

ಹಳ್ಳಿ ಹುಡುಗನೊಬ್ಬ ದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡನ್ನು ಪ್ರಧಾನಿ ಮೋದಿ ಅವರೊಂದಿಗೆ ವೀಕ್ಷಿಸಲಿದ್ದಾನೆ.          ಇದೇ ಜನವರಿ 26ರಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿದೇಶಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡಿನಲ್ಲಿ ಪಾಲ್ಗೊಳ್ಳುವ ಅವಕಾಶ ಹುಳಿಯಾರಿನ ತಿಮ್ಮನಹಳ್ಳಿಯ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿ ಯಶಸ್‌ಗೆ ದೊರೆತಿದೆ.          ಹೌದು...ಯಶಸ್ ಪರಿಕ್ರಮಿಸಿರುವ ಯಶಸ್ಸಿನ ಹಾದಿ ಅವನನ್ನು ಪ್ರಧಾನಮಂತ್ರಿ ಬಾಕ್ಸ್ ನಲ್ಲಿ ಕುಳಿತು ಗಣರಾಜ್ಯೋತ್ಸವ ಪೆರೇಡ್ ವೀಕ್ಷಣೆ ಮಾಡಲು ಅನುವು ಮಾಡಿಕೊಟ್ಟಿದೆ.         ಹುಳಿಯಾರು ಸಮೀಪದ ಹಳ್ಳಿಗಾಡಿನ ತಿಮ್ಮನಹಳ್ಳಿಯ ಕೃಷಿಕರಾದ ದೇವರಾಜು ಹಾಗೂ ನೇತ್ರಾವತಿ ಪುತ್ರನಾದ ಯಶಸ್ ದೇವರಾಜು ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಯಾಗಿ ಸಾಧಿಸಿದ್ದು ಬಹಳ. ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿ ಯಶಸ್ ಕಳೆದ ಸಾಲಿನ ಸಿಬಿಎಸ್ಸಿ ಹತ್ತನೇ ತರಗತಿಯಲ್ಲಿ ದೇಶದಲ್ಲಿಯೇ ಎರಡನೇ ಸ್ಥಾನ ಪಡೆದು ದಕ್ಷಿಣ ವಲಯ ಹಾಗೂ ರಾಜ್ಯಕ್ಕೆ ಪ್ರಥಮನಾಗಿ ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಹಾಗೂ ತುಮಕೂರು ಜಿಲ್ಲೆ ಸೇರಿದಂತೆ ಹುಳಿಯಾರಿನ ವಿದ್ಯಾವಾರಿಧಿ ಶಾಲೆಗೆ ಕೀರ್ತಿ ತಂದಿದ್ದು ಇದೀಗ ಯಶೋಗಾಥೆ. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ಹಿನ್ನಲೆಯಲ್ಲಿ ಮಾನವ ಸಂಪನ್ಮೂಲ ಸಚಿವಾಲಯದಿಂದ

ಜಾತಿಯನ್ನು ಮುಂದೆ ಮಾಡಿಕೊಂಡು ಇಂದಿಗೂ ಬಡಿದಾಡುತ್ತಿರುವುದು ವಿಪರ್ಯಾಸ

ಕುಲ ಕುಲವೆಂದು ಹೊಡೆದಾಡಬೇಡಿ ಹುಚ್ಚಪ್ಪಗಳಿರಾ ಎಂದು ಶತಶತಮಾನಗಳ ಹಿಂದೆಯೇ ದಾಸ ಶ್ರೇಷ್ಠ ಕನಕದಾಸರು ಹೇಳಿದ್ದ ವಿಚಾರವನ್ನು ಇಂದಿಗೂ ಅರ್ಥ ಮಾಡಿಕೊಳ್ಳದ ಜನ ಸಲ್ಲದ ವಿಷಯಕ್ಕೇ ಜಾತಿಯನ್ನು ಮುಂದೆ ಮಾಡಿಕೊಂಡು ಇವತ್ತು ಬಡಿದಾಡುತ್ತಿರುವುದು ವಿಪರ್ಯಾಸ ಎಂದು ಮಾಜಿ ಶಾಸಕರಾದ ಕಿರಣ್ ಕುಮಾರ್ ವಿಷಾಧಿಸಿದರು. ಹುಳಿಯಾರಿನ ಧ್ಯಾನ ನಗರಿಯಲ್ಲಿರುವ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ವಿದ್ಯಾವಾರಧಿ ಇಂಟರ್ ನ್ಯಾಷನಲ್ ಶಾಲೆಯವತಿಯಿಂದ ಕನಕ ಜಯಂತಿ ಆಚರಿಸಲಾಯಿತು. ಹುಳಿಯಾರಿನ ಧ್ಯಾನ ನಗರಿಯಲ್ಲಿರುವ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ವಿದ್ಯಾವಾರಧಿ ಇಂಟರ್ ನ್ಯಾಷನಲ್ ಶಾಲೆಯವತಿಯಿಂದ ನಡೆದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಹುಳಿಯಾರಿನಲ್ಲಿ ಕಳದೆರಡು ದಿನಗಳಿಂದ ನಡೆಯುತ್ತಿರುವ ವಿದ್ಯಾಮಾನ ಪ್ರಸ್ತಾವಿಸಿ ಅವರು ಮಾತನಾಡಿ ಕನಕದಾಸರ ವೃತ್ತ ಎಂಬ ನಾಮಫಲಕವನ್ನು ಕಿತ್ತೊಗೆದು ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನಿಡಲು ಹೊರಟ ಸಂಗತಿ ಬೇಸರ ತರಿಸುತ್ತದೆ.ವಿಕೃತ ಮನಸ್ಸುಗಳನ್ನು ಕಡಿವಾಣ ಹಾಕದಿದ್ದಲ್ಲಿ ಸೌಹಾರ್ದತೆಗೆ ಧಕ್ಕೆಯಾಗುತ್ತದೆ ಎಂದರು.    ಈ ಸಂದರ್ಭದಲ್ಲಿ ಶರಣ ಸಾಹಿತಿಗಳಾದ ಶ್ಯಾಮಸುಂದರ್ ದಿಬ್ಬದಹಳ್ಳಿ,ಕಾರ್ಯದರ್ಶಿ ಕವಿತಾ ಕಿರಣ್,ವಿದ್ಯಾವಾರಿಧಿ ಶಾಲೆಯ ಪ್ರಾಂಶುಪಾಲ ಕೃಷ್ಣನ್ ಕೌಶಿಕ್,ಸತೀಶ್ ನಾಯಕ್ ಪ್ರತಾಪ್ ಟಿ.ಸಿ.ಮೊದಲಾದವರಿದ್ದರು.

ಹುಳಿಯಾರು:ಸಂಭ್ರಮದ ಈದ್ ಮೆರವಣಿಗೆ

ಹುಳಿಯಾರು ಪಟ್ಟಣದಲ್ಲಿ ಈದ್-ಮಿಲಾದ್ ಅಂಗವಾಗಿ ಭಾನುವಾರ ಮುಸ್ಲಿಂ ಬಾಂಧವರಿಂದ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಂಭ್ರಮದ ಮೆರವಣಿಗೆ ನಡೆಯಿತು. ಮದೀನಾ ಮಸೀದಿಯಿಂದ ಆರಂಭವಾದ ಮೆರವಣಿಗೆ ಬಸ್ ನಿಲ್ದಾಣ,ಬಿ ಹೆಚ್ ರಸ್ತೆ,ರಾಮ್ ಗೋಪಾಲ್ ಸರ್ಕಲ್ ಮಾರ್ಗವಾಗಿ ತೆರಳಿತು.ಧಾರ್ಮಿಕ ಬಾವುಟದ ಜೊತೆಗೆ ರಾಷ್ಟ್ರಧ್ವಜ ಹಿಡಿದು ನಡೆದಿದ್ದು ಗಮನಸೆಳೆಯಿತು.ನೂರಾರು ಯುವಕರು ಡಿಜೆ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ.ಮಾಧುಸ್ವಾಮಿ,ಮಾಜಿ ಶಾಸಕರಾದ ಸಿ.ಬಿ.ಸುರೇಶ್ ಬಾಬು ಸೇರಿದಂತೆ ಜಿಲ್ಲಾ ಪಂಚಾಯಿತಿ ಸದಸ್ಯ ವೈ.ಸಿ.ಸಿದ್ದರಾಮಯ್ಯ,ತಾಲೂಕು ಪಂಚಾಯಿತಿ ಸದಸ್ಯ ಹೆಚ್.ಎನ್ ಕುಮಾರ್ ಮತ್ತಿತರರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.   ಕಳೆದ ಶುಕ್ರವಾರ ಆಯೋಜಿಸಲಾಗಿದ್ದ ಮೆರವಣಿಗೆಯು ಪಟ್ಟಣದಲ್ಲಿ ನಾಮಫಲಕ ವಿವಾದದಿಂದಾಗಿ ಸೆಕ್ಷನ್ 144 ಜಾರಿಯಲ್ಲಿದ್ದರಿಂದ ಮುಂದೂಡಲ್ಪಟ್ಟಿ ಭಾನುವಾರ ಭಾರಿ ಪೊಲೀಸ್ ಬಂದೋಬಸ್ತ್ ನಲ್ಲಿ ಆಚರಿಸಲಾಯಿತು.

ಸತತ ಪರಿಶ್ರಮದಿಂದ ಮಾತ್ರವೇ ಯಶಸ್ಸುಗಳಿಸಲು ಸಾಧ್ಯ:ಕೆ.ಎಸ್.ಕಿರಣ್ ಕುಮಾರ್

ಮುಂದಿನ ಶೈಕ್ಷಣಿಕ ವರ್ಷದಿಂದ ಹುಳಿಯಾರಿನಲ್ಲಿ ನಾರಾಯಣ ಕಾಲೇಜು ಆರಂಭ -------------------------------- ಹುಳಿಯಾರು : ಪ್ರತಿಭೆ ಯಾರ ಸ್ವತ್ತೂ ಅಲ್ಲ,ಅದನ್ನು ಅನಾವರಣಗೊಳಿಸುವ ಕೆಲಸ ಮಾಡಬೇಕಷ್ಟೇ.ಪ್ರತಿಭೆ ಒಂದೇ ದಿನದಲ್ಲಿ ಹೊರ ಬರಲು ಸಾಧ್ಯವಿಲ್ಲ.ಸತತ ಪರಿಶ್ರಮದಿಂದ ಮಾತ್ರವೇ ಯಶಸ್ಸು ಗಳಿಸಲು ಸಾಧ್ಯ ಎಂದು ಮಾಜಿ ಶಾಸಕರು ಹಾಗೂ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯ ಟ್ರಸ್ಟಿನ ಅಧ್ಯಕ್ಷರೂ ಆದ ಕೆ.ಎಸ್.ಕಿರಣ್ ಕುಮಾರ್ ಹೇಳಿದರು. ಹುಳಿಯಾರಿನ ಧ್ಯಾನ ನಗರಿಯಲ್ಲಿರುವ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ವಿದ್ಯಾವಾರಧಿ ಇಂಟರ್ ನ್ಯಾಷನಲ್ ಶಾಲೆಯವತಿಯಿಂದ ನಡೆದ ಅನ್ವೇಷಣಾ ಸ್ಪರ್ಧಾ ಪರೀಕ್ಷೆಯ ಬಹುಮಾನ ವಿತರಣೆ,ನಾರಾಯಣ ಶಾಲೆಯ ಬಗ್ಗೆ ಮಾಹಿತಿ ಹಾಗೂ ಪೋಷಕರಿಗೆ ಆಟೋಟ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.           ಪಟ್ಟಣ ಪ್ರದೇಶದ ಶೈಕ್ಷಣಿಕ ವಾತಾವರಣವನ್ನು ಗ್ರಾಮೀಣ ಭಾಗದಲ್ಲಿ ಸಹ ಕಲ್ಪಿಸುವ ಉದ್ದೇಶದಿಂದ ಹತ್ತು ವರ್ಷಗಳ ಹಿಂದೆ ಬಸಪ್ಪ ಮರಳಪ್ಪ ಟ್ರಸ್ಟ್ ವತಿಯಿಂದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯನ್ನು ಆರಂಭಿಸಲಾಗಿದ್ದು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶಾಲೆಯನ್ನು ಮುಡಿಪಾಗಿಟ್ಟು ಉತ್ತಮ ಶಿಕ್ಷಣ ಕೊಡುತ್ತಾ ಬಂದ ಹಿನ್ನೆಲೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಯಾಗಿದ್ದ ತೀರಾ ಹಳ್ಳಿಯಿಂದ ಬಂದ ತಿಮ್ಮನಹಳ್ಳಿಯ ಯಶಸ್ ಕಳೆದ ಸಾಲಿನಲ್ಲಿ ಹತ್ತನೇ ತರಗತಿಯ ಸಿಬಿಎಸ್ಸಿ ಪರೀಕ್ಷೆಯಲ