ವಿಷಯಕ್ಕೆ ಹೋಗಿ

ಸತತ ಪರಿಶ್ರಮದಿಂದ ಮಾತ್ರವೇ ಯಶಸ್ಸುಗಳಿಸಲು ಸಾಧ್ಯ:ಕೆ.ಎಸ್.ಕಿರಣ್ ಕುಮಾರ್

ಮುಂದಿನ ಶೈಕ್ಷಣಿಕ ವರ್ಷದಿಂದ ಹುಳಿಯಾರಿನಲ್ಲಿ ನಾರಾಯಣ ಕಾಲೇಜು ಆರಂಭ
--------------------------------
ಹುಳಿಯಾರು:ಪ್ರತಿಭೆ ಯಾರ ಸ್ವತ್ತೂ ಅಲ್ಲ,ಅದನ್ನು ಅನಾವರಣಗೊಳಿಸುವ ಕೆಲಸ ಮಾಡಬೇಕಷ್ಟೇ.ಪ್ರತಿಭೆ ಒಂದೇ ದಿನದಲ್ಲಿ ಹೊರ ಬರಲು ಸಾಧ್ಯವಿಲ್ಲ.ಸತತ ಪರಿಶ್ರಮದಿಂದ ಮಾತ್ರವೇ ಯಶಸ್ಸು ಗಳಿಸಲು ಸಾಧ್ಯ ಎಂದು ಮಾಜಿ ಶಾಸಕರು ಹಾಗೂ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯ ಟ್ರಸ್ಟಿನ ಅಧ್ಯಕ್ಷರೂ ಆದ ಕೆ.ಎಸ್.ಕಿರಣ್ ಕುಮಾರ್ ಹೇಳಿದರು.
ಹುಳಿಯಾರಿನ ಧ್ಯಾನ ನಗರಿಯಲ್ಲಿರುವ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ವಿದ್ಯಾವಾರಧಿ ಇಂಟರ್ ನ್ಯಾಷನಲ್ ಶಾಲೆಯವತಿಯಿಂದ ನಡೆದ ಅನ್ವೇಷಣಾ ಸ್ಪರ್ಧಾ ಪರೀಕ್ಷೆಯ ಬಹುಮಾನ ವಿತರಣೆ,ನಾರಾಯಣ ಶಾಲೆಯ ಬಗ್ಗೆ ಮಾಹಿತಿ ಹಾಗೂ ಪೋಷಕರಿಗೆ ಆಟೋಟ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


          ಪಟ್ಟಣ ಪ್ರದೇಶದ ಶೈಕ್ಷಣಿಕ ವಾತಾವರಣವನ್ನು ಗ್ರಾಮೀಣ ಭಾಗದಲ್ಲಿ ಸಹ ಕಲ್ಪಿಸುವ ಉದ್ದೇಶದಿಂದ ಹತ್ತು ವರ್ಷಗಳ ಹಿಂದೆ ಬಸಪ್ಪ ಮರಳಪ್ಪ ಟ್ರಸ್ಟ್ ವತಿಯಿಂದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯನ್ನು ಆರಂಭಿಸಲಾಗಿದ್ದು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶಾಲೆಯನ್ನು ಮುಡಿಪಾಗಿಟ್ಟು ಉತ್ತಮ ಶಿಕ್ಷಣ ಕೊಡುತ್ತಾ ಬಂದ ಹಿನ್ನೆಲೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಯಾಗಿದ್ದ ತೀರಾ ಹಳ್ಳಿಯಿಂದ ಬಂದ ತಿಮ್ಮನಹಳ್ಳಿಯ ಯಶಸ್ ಕಳೆದ ಸಾಲಿನಲ್ಲಿ ಹತ್ತನೇ ತರಗತಿಯ ಸಿಬಿಎಸ್ಸಿ ಪರೀಕ್ಷೆಯಲ್ಲಿ ದಕ್ಷಿಣ ಭಾರತದಲ್ಲಿಯೇ ಪ್ರಥಮನಾಗಿದ್ದು ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಹುಳಿಯಾರು ಭಾಗದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗಲು ವಿದ್ಯಾವಾರಧಿ ಇಂಟರ್ ನ್ಯಾಷನಲ್ ಶಾಲೆಯು ಭಾರತದ ಪ್ರತಿಷ್ಠಿತ ಸಂಸ್ಥೆಯಾದ ನಾರಾಯಣ ಸಮೂಹ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು ಬರುವ ಶೈಕ್ಷಣಿಕ ವರ್ಷದಿಂದಲೇ ಪಿಯು ಕಾಲೇಜು ಆರಂಭಿಸಲಾಗುತ್ತಿದೆ.ಹೀಗಾಗಿ ನೀಟ್ ಮತ್ತು ಜೆಇಇ ಯಂಥ ಪರೀಕ್ಷೆ ಎದುರಿಸಲು ನಮ್ಮ ಭಾಗದ ವಿದ್ಯಾರ್ಥಿಗಳಿಗೂ ಸಹ ಅನುಕೂಲವಾಗಲಿದೆ ಎಂದರು.
ಕೆಎ ಕನ್ಸೂಮರ್ ಮತ್ತು ಡಿಜಿಟಲ್ ಬಿಸಿನೆಸ್ ವ್ಯವಸ್ಥಾಪಕರಾದ ಸತೀಶ್ ನಾಯಕ್ ಎಸ್.ಜಿ ಮಾತನಾಡಿ ದೇಶದ ೧೯ ರಾಜ್ಯಗಳಲ್ಲಿ ೬೫೦ ಶಿಕ್ಷಣ ಸಂಸ್ಥೆ ಹೊಂದಿರುವ ನಾರಾಯಣ ಸಮೂಹ ಸಂಸ್ಥೆ ಮುಂದಿನ ಶೈಕ್ಷಣಿಕ ವರ್ಷದಿಂದ ಹುಳಿಯಾರಿನಲ್ಲಿ ಕಾಲೇಜು ಆರಂಭಿಸುತ್ತಿರುವುದು ಸಂತಸದ ವಿಚಾರ.ಬೆಂಗಳೂರಿನಂಥ ಮೆಟ್ರೊಪಾಲಿಟಿನ್ ನಗರಗಳಿಗೆ ಮಾತ್ರ ಸೀಮಿತವಾಗಿದ್ದ ನಾರಾಯಣ ಸಮೂಹ ಶಿಕ್ಷಣ ಸಂಸ್ಥೆಯು ಕೆ.ಎಸ್.ಕಿರಣ್ ಕುಮಾರ್ ಅವರ ವಿದ್ಯಾವಾರಿಧಿ ಶಾಲೆಯ ಅಭಿವೃದ್ಧಿಯನ್ನು ಗಮನಿಸಿ ಇದೇ ಮೊದಲ ಬಾರಿಗೆ ಗ್ರಾಮೀಣ ಭಾಗದಲ್ಲಿ ಕಾಲೇಜು ತೆರೆಯುತ್ತಿದ್ದು ಇದು ತುಮಕೂರು ಜಿಲ್ಲೆಯ ಪ್ರಥಮ ಕಾಲೇಜಾಗಲಿದೆ ಎಂದರು.ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ತರಬೇತಿ ಸಹ ನೀಡಲಾಗುವುದು.ಈ ಭಾಗದ ಜನರು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ನಾರಾಯಣ ಸಮೂಹ ಸಂಸ್ಥೆಯ ಮುಖ್ಯಸ್ಥ ಪ್ರತಾಪ್ ಟಿ.ಸಿ. ನಾರಾಯಣ ಕಾಲೇಜು ಬೆಳೆದು ಬಂದ ರೀತಿ,ಇದೀಗ ಸಾಧಿಸಿರುವ ಯಶೋಗಾಥೆಯ ಬಗ್ಗೆ ವಿವರಿಸಿದರು.ಹುಳಿಯಾರಿನಲ್ಲಿ ಆರರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ನೀಟ್ ಐಐಟಿ ತರಬೇತಿಯನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ನಡೆಸಲಾಗುವುದು ಎಂದರು.
ಅನ್ವೇಷಣ ಪ್ರತಿಭಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹತ್ತು ವಿದ್ಯಾರ್ಥಿಗಳಿಗೆ ಬೈಜೂಸ್ ಟ್ಯಾಬ್ ಉಚಿತವಾಗಿ ವಿತರಿಸಲಾಯಿತು.


           ಶರಣ ಸಾಹಿತಿಗಳಾದ ಶ್ಯಾಮಸುಂದರ್ ದಿಬ್ಬದಹಳ್ಳಿ,ಕಾರ್ಯದರ್ಶಿ ಕವಿತಾ ಕಿರಣ್,ವಿದ್ಯಾವಾರಿಧಿ ಶಾಲೆಯ ಪ್ರಾಂಶುಪಾಲ ಕೃಷ್ಣನ್ ಕೌಶಿಕ್, ಈ ಸಂದರ್ಭದಲ್ಲಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...