ವಿಷಯಕ್ಕೆ ಹೋಗಿ

ಸತತ ಪರಿಶ್ರಮದಿಂದ ಮಾತ್ರವೇ ಯಶಸ್ಸುಗಳಿಸಲು ಸಾಧ್ಯ:ಕೆ.ಎಸ್.ಕಿರಣ್ ಕುಮಾರ್

ಮುಂದಿನ ಶೈಕ್ಷಣಿಕ ವರ್ಷದಿಂದ ಹುಳಿಯಾರಿನಲ್ಲಿ ನಾರಾಯಣ ಕಾಲೇಜು ಆರಂಭ
--------------------------------
ಹುಳಿಯಾರು:ಪ್ರತಿಭೆ ಯಾರ ಸ್ವತ್ತೂ ಅಲ್ಲ,ಅದನ್ನು ಅನಾವರಣಗೊಳಿಸುವ ಕೆಲಸ ಮಾಡಬೇಕಷ್ಟೇ.ಪ್ರತಿಭೆ ಒಂದೇ ದಿನದಲ್ಲಿ ಹೊರ ಬರಲು ಸಾಧ್ಯವಿಲ್ಲ.ಸತತ ಪರಿಶ್ರಮದಿಂದ ಮಾತ್ರವೇ ಯಶಸ್ಸು ಗಳಿಸಲು ಸಾಧ್ಯ ಎಂದು ಮಾಜಿ ಶಾಸಕರು ಹಾಗೂ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯ ಟ್ರಸ್ಟಿನ ಅಧ್ಯಕ್ಷರೂ ಆದ ಕೆ.ಎಸ್.ಕಿರಣ್ ಕುಮಾರ್ ಹೇಳಿದರು.
ಹುಳಿಯಾರಿನ ಧ್ಯಾನ ನಗರಿಯಲ್ಲಿರುವ ಸೇವಾಲಾಲ್ ಸಾಂಸ್ಕೃತಿಕ ಸದನದಲ್ಲಿ ವಿದ್ಯಾವಾರಧಿ ಇಂಟರ್ ನ್ಯಾಷನಲ್ ಶಾಲೆಯವತಿಯಿಂದ ನಡೆದ ಅನ್ವೇಷಣಾ ಸ್ಪರ್ಧಾ ಪರೀಕ್ಷೆಯ ಬಹುಮಾನ ವಿತರಣೆ,ನಾರಾಯಣ ಶಾಲೆಯ ಬಗ್ಗೆ ಮಾಹಿತಿ ಹಾಗೂ ಪೋಷಕರಿಗೆ ಆಟೋಟ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


          ಪಟ್ಟಣ ಪ್ರದೇಶದ ಶೈಕ್ಷಣಿಕ ವಾತಾವರಣವನ್ನು ಗ್ರಾಮೀಣ ಭಾಗದಲ್ಲಿ ಸಹ ಕಲ್ಪಿಸುವ ಉದ್ದೇಶದಿಂದ ಹತ್ತು ವರ್ಷಗಳ ಹಿಂದೆ ಬಸಪ್ಪ ಮರಳಪ್ಪ ಟ್ರಸ್ಟ್ ವತಿಯಿಂದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯನ್ನು ಆರಂಭಿಸಲಾಗಿದ್ದು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶಾಲೆಯನ್ನು ಮುಡಿಪಾಗಿಟ್ಟು ಉತ್ತಮ ಶಿಕ್ಷಣ ಕೊಡುತ್ತಾ ಬಂದ ಹಿನ್ನೆಲೆಯಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಯಾಗಿದ್ದ ತೀರಾ ಹಳ್ಳಿಯಿಂದ ಬಂದ ತಿಮ್ಮನಹಳ್ಳಿಯ ಯಶಸ್ ಕಳೆದ ಸಾಲಿನಲ್ಲಿ ಹತ್ತನೇ ತರಗತಿಯ ಸಿಬಿಎಸ್ಸಿ ಪರೀಕ್ಷೆಯಲ್ಲಿ ದಕ್ಷಿಣ ಭಾರತದಲ್ಲಿಯೇ ಪ್ರಥಮನಾಗಿದ್ದು ಇದಕ್ಕೆ ಸಾಕ್ಷಿಯಾಗಿದೆ ಎಂದರು.
ಹುಳಿಯಾರು ಭಾಗದ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಅನುಕೂಲವಾಗಲು ವಿದ್ಯಾವಾರಧಿ ಇಂಟರ್ ನ್ಯಾಷನಲ್ ಶಾಲೆಯು ಭಾರತದ ಪ್ರತಿಷ್ಠಿತ ಸಂಸ್ಥೆಯಾದ ನಾರಾಯಣ ಸಮೂಹ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು ಬರುವ ಶೈಕ್ಷಣಿಕ ವರ್ಷದಿಂದಲೇ ಪಿಯು ಕಾಲೇಜು ಆರಂಭಿಸಲಾಗುತ್ತಿದೆ.ಹೀಗಾಗಿ ನೀಟ್ ಮತ್ತು ಜೆಇಇ ಯಂಥ ಪರೀಕ್ಷೆ ಎದುರಿಸಲು ನಮ್ಮ ಭಾಗದ ವಿದ್ಯಾರ್ಥಿಗಳಿಗೂ ಸಹ ಅನುಕೂಲವಾಗಲಿದೆ ಎಂದರು.
ಕೆಎ ಕನ್ಸೂಮರ್ ಮತ್ತು ಡಿಜಿಟಲ್ ಬಿಸಿನೆಸ್ ವ್ಯವಸ್ಥಾಪಕರಾದ ಸತೀಶ್ ನಾಯಕ್ ಎಸ್.ಜಿ ಮಾತನಾಡಿ ದೇಶದ ೧೯ ರಾಜ್ಯಗಳಲ್ಲಿ ೬೫೦ ಶಿಕ್ಷಣ ಸಂಸ್ಥೆ ಹೊಂದಿರುವ ನಾರಾಯಣ ಸಮೂಹ ಸಂಸ್ಥೆ ಮುಂದಿನ ಶೈಕ್ಷಣಿಕ ವರ್ಷದಿಂದ ಹುಳಿಯಾರಿನಲ್ಲಿ ಕಾಲೇಜು ಆರಂಭಿಸುತ್ತಿರುವುದು ಸಂತಸದ ವಿಚಾರ.ಬೆಂಗಳೂರಿನಂಥ ಮೆಟ್ರೊಪಾಲಿಟಿನ್ ನಗರಗಳಿಗೆ ಮಾತ್ರ ಸೀಮಿತವಾಗಿದ್ದ ನಾರಾಯಣ ಸಮೂಹ ಶಿಕ್ಷಣ ಸಂಸ್ಥೆಯು ಕೆ.ಎಸ್.ಕಿರಣ್ ಕುಮಾರ್ ಅವರ ವಿದ್ಯಾವಾರಿಧಿ ಶಾಲೆಯ ಅಭಿವೃದ್ಧಿಯನ್ನು ಗಮನಿಸಿ ಇದೇ ಮೊದಲ ಬಾರಿಗೆ ಗ್ರಾಮೀಣ ಭಾಗದಲ್ಲಿ ಕಾಲೇಜು ತೆರೆಯುತ್ತಿದ್ದು ಇದು ತುಮಕೂರು ಜಿಲ್ಲೆಯ ಪ್ರಥಮ ಕಾಲೇಜಾಗಲಿದೆ ಎಂದರು.ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ತರಬೇತಿ ಸಹ ನೀಡಲಾಗುವುದು.ಈ ಭಾಗದ ಜನರು ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.
ನಾರಾಯಣ ಸಮೂಹ ಸಂಸ್ಥೆಯ ಮುಖ್ಯಸ್ಥ ಪ್ರತಾಪ್ ಟಿ.ಸಿ. ನಾರಾಯಣ ಕಾಲೇಜು ಬೆಳೆದು ಬಂದ ರೀತಿ,ಇದೀಗ ಸಾಧಿಸಿರುವ ಯಶೋಗಾಥೆಯ ಬಗ್ಗೆ ವಿವರಿಸಿದರು.ಹುಳಿಯಾರಿನಲ್ಲಿ ಆರರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲು ನೀಟ್ ಐಐಟಿ ತರಬೇತಿಯನ್ನು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ನಡೆಸಲಾಗುವುದು ಎಂದರು.
ಅನ್ವೇಷಣ ಪ್ರತಿಭಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹತ್ತು ವಿದ್ಯಾರ್ಥಿಗಳಿಗೆ ಬೈಜೂಸ್ ಟ್ಯಾಬ್ ಉಚಿತವಾಗಿ ವಿತರಿಸಲಾಯಿತು.


           ಶರಣ ಸಾಹಿತಿಗಳಾದ ಶ್ಯಾಮಸುಂದರ್ ದಿಬ್ಬದಹಳ್ಳಿ,ಕಾರ್ಯದರ್ಶಿ ಕವಿತಾ ಕಿರಣ್,ವಿದ್ಯಾವಾರಿಧಿ ಶಾಲೆಯ ಪ್ರಾಂಶುಪಾಲ ಕೃಷ್ಣನ್ ಕೌಶಿಕ್, ಈ ಸಂದರ್ಭದಲ್ಲಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...