ಹುಳಿಯಾರು:ಹುಳಿಯಾರು-ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಂದು ರಾಷ್ಟ್ರೀಯ ಸೇವಾ ಯೋಜನೆ ಘಟಕ-೧ ಮತ್ತು ೨ರ ಅಡಿಯಲ್ಲಿ ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ವರ್ಗದವರಿಗೆ "ಜಾಗೃತಿ ಸಪ್ತಾಹ - ೨೦೨೦ : ಪ್ರತಿಜ್ಞಾ ವಿಧಿ"ಯನ್ನು ಬೋಧಿಸಲಾಯಿತು.
ಭ್ರಷ್ಟಾಚಾರ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಪ್ರಗತಿಗೆ ಬಹುಮುಖ್ಯ ಅಡೆತಡೆ ಎಂದು ನಂಬಿರುತ್ತೇನೆ ಮತ್ತು ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ ನಾಗರಿಕರು ಮತ್ತು ಖಾಸಗಿ ವಲಯದ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕೆಂದು ನಂಬಿರುತ್ತೇನೆ. ಆದ್ದರಿಂದ ನಾನು ಈ ಕೆಳಕಂಡಂತೆ ಪ್ರತಿಜ್ಞೆಯನ್ನು ಸ್ವೀಕರಿಸುತ್ತೇನೆ.ನಾನು ಲಂಚವನ್ನು ಕೇಳುವುದಿಲ್ಲ, ಪಡೆಯುವುದೂ ಇಲ್ಲ, ಕೊಡುವುದೂ ಇಲ್ಲ. ಎಲ್ಲ ಕೆಲಸಗಳನ್ನು ಪಾರದರ್ಶಕವಾಗಿ ಮತ್ತು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಸಾರ್ವಜನಿಕ ಹಿತಾಸಕ್ತಿಗಾಗಿ ಕೆಲಸ ಮಾಡುತ್ತೇನೆ. ಯಾವುದೇ ಭ್ರಷ್ಟಾಚಾರದ ಪ್ರಕರಣಗಳನ್ನು ಸಂಬಂಧಪಟ್ಟ ಸಂಸ್ಥೆಗೆ ವರದಿ ಮಾಡುತ್ತೇನೆ" - ಎಂಬ ಪ್ರತಿಜ್ಞೆಯನ್ನು ಎಲ್ಲರೂ ಸ್ವೀಕರಿಸಿದರು.
ಎಸ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರೊ.ಎಂ.ಜೆ.ಮೋಹನ್ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು.
ಪ್ರಾಚಾರ್ಯ ಕೃಷ್ಣಮೂರ್ತಿ ಬಿಳಿಗೆರೆಯವರು ಗ್ರಾಮ ಪಂಚಾಯತಿ ರಾಜಕಾರಣದ ಬಗ್ಗೆ ಮಾತನಾಡುತ್ತಾ ಭ್ರಷ್ಟಾಚಾರ ಕೆಳಹಂತದಿಂದಲೇ ನಿರ್ಮೂಲನೆಯಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.
ಈ ವೇಳೆ ಎಸ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರೊ. ಫರ್ಹಾನಾಜ್, ಪ್ರೊ.ಆರ್.ಶಿವಯ್ಯ,ಡಾ.ಲೋಕೇಶ ನಾಯ್ಕ್, ಪ್ರೊ. ವಲಿ ಆರ್, ಡಾ.ಸುಷ್ಮಾ ಬಿರಾದಾರ್, ಪ್ರೊ.ಖಲೀಲ್,ಅಧೀಕ್ಷಕರಾದ ಪುಟ್ಟಲಿಂಗಪ್ಪ, ರಮೇಶ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ