ವಿಷಯಕ್ಕೆ ಹೋಗಿ

ಬೀದಿಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸಿದ ಅಭಿಯಾನ ವ್ಯವಸ್ಥಾಪಕ ದೊಡ್ಡವಲಪ್ಪ

 ಬೀದಿಬದಿಯ ವ್ಯಾಪಾರಿಗಳು ಎಂಬ ಗುರುತಿನ ಚೀಟಿಯನ್ನು ಪಡೆಯಲು ಸಲಹೆ

ಹುಳಿಯಾರು:ಪಟ್ಟಣ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೀದಿಬದಿ ವ್ಯಾಪಾರಿಗಳಿಗೆ ತಮ್ಮ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ಸಹಾಯ ಒದಗಿಸಲು ಪ್ರಧಾನಮಂತ್ರಿ ಬೀದಿ ಬದಿ ಆತ್ಮನಿರ್ಭರ್ ಯೋಜನೆಯನ್ನು ಜಾರಿಗೆ ತಂದಿದ್ದು ಅರ್ಹ ಫಲಾನುಭವಿಗಳು ಇದರ ಉಪಯೋಗ ಪಡೆಯುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಕಛೇರಿ ಅಭಿಯಾನ ವ್ಯವಸ್ಥಾಪಕರಾದ ದೊಡ್ಡವಲಪ್ಪ ತಿಳಿಸಿದರು.

 ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಯೋಜನೆಯ ಬಗ್ಗೆ ಹುಳಿಯಾರು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎಲ್.ವಿ.ಮಂಜುನಾಥ್ ಅವರೊಂದಿಗೆ ಪಟ್ಟಣದ ಬೀದಿ ಬದಿ ವ್ಯಾಪಾರ ಮಾಡುವ ಸ್ಥಳಗಳಿಗೆ ಖುದ್ದಾಗಿ ತೆರಳಿ ಮಾಹಿತಿ ನೀಡಿದರು.ಹೂ, ಹಣ್ಣು, ಎಳನೀರು, ಮೀನು, ಗೃಹೋಪಯೋಗಿ ವಸ್ತುಗಳು, ತರಕಾರಿ ಮುಂತಾದವುಗಳನ್ನು ತಲೆಹೊರೆ, ತಳ್ಳುಗಾಡಿ, ಸೈಕಲ್, ಮೋಟಾರ್ ಸೈಕಲ್ ಮೂಲಕ ಮನೆಮನೆಗೆ ತೆರಳಿ ಅಥವಾ ಬೀದಿಗಳಲ್ಲಿ ವ್ಯಾಪಾರ ಮಾಡುತ್ತಿರುವವರನ್ನು ಭೇಟಿಯಾಗಿ ಸಾಲ ಸೌಲಭ್ಯದ ಬಗ್ಗೆ ಅರಿವು ಮೂಡಿಸಿದರು. 

ಈ ಯೋಜನೆಡಿ ಪ್ರತೀ ಅರ್ಹ ಫಲಾನುಭವಿಗಳಿಗೆ ರೂ.10,000 ಬ್ಯಾಂಕ್ ಸಾಲವನ್ನು ನೀಡಲಾಗುತ್ತಿದ್ದು ಇದರ ಮರುಪಾವತಿಯನ್ನು 12 ಮಾಸಿಕ ಕಂತುಗಳಲ್ಲಿ ಪಾವತಿ ಮಾಡಬಹುದಾಗಿದೆ ಎಂದರು.

 

ಬೀದಿಬದಿಯ ವ್ಯಾಪಾರಿಗಳಿಗಾಗಿ ಸರಕಾರ ಸಾಕಷ್ಟು ಯೋಜನೆಗಳನ್ನ ಜಾರಿಗೆ ತಂದಿದ್ದು ಈ ಯೋಜನೆಯ ಅನುಕೂಲ ಹೊಂದಬೇಕಾದರೆ ಮೊದಲು ಬೀದಿಬದಿಯ ವ್ಯಾಪಾರಿಗಳು ಎಂಬ ಗುರುತಿನ ಚೀಟಿಯನ್ನು ಪಡೆದಿರಬೇಕು.ಇದಕ್ಕಾಗಿ ತಾವು ವ್ಯಾಪಾರ ಮಾಡುತ್ತಿರುವ ಸ್ಥಳದ ಪೋಟೋ,ಆಧಾರ್ ಕಾರ್ಡ,ಪಡಿತರ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಮತ್ತಿತರ ಅಗತ್ಯ ದಾಖಲೆಗಳನ್ನು ಭರ್ತಿಮಾಡಿದ ಅರ್ಜಿಯೊಂದಿಗೆ ಸ್ಥಳಿಯ ಪಟ್ಟಣ ಪಂಚಾಯ್ತಿಗೆ ನೀಡುವಂತೆ ತಿಳಿಸಿದರು.

 ಈಗಾಗಲೇ ಬೀದಿ ಬದಿ ವ್ಯಾಪಾರಿಗಳ ಅದಿನಿಯಮ 2014 ರ ಅನ್ವಯ ಬೀದಿಬದಿ ವ್ಯಾಪಾರಿಗಳನ್ನು ಸರ್ವೇ ಕಾರ್ಯದ ಮೂಲಕ ಗುರುತಿಸಿ ವ್ಯಾಪಾರ ಪ್ರಮಾಣಪತ್ರ ಹಾಗೂ ಗುರುತಿನ ಚೀಟಿ ವಿತರಿಸಲಾಗಿದೆ ಎಂದ ಅವರು ಸದ್ಯ ಜನಸಂಖ್ಯೆಯ ಆಧಾರದ ಮೇಲೆ ಹುಳಿಯಾರು ಪಟ್ಟಣ ಪಂಚಾಯಿತಿಗೆ ಒಟ್ಟು 154 ಬೀದಿಬದಿ ವ್ಯಾಪಾರಿಗಳ ಕಾರ್ಡ್ ಗುರಿ ನಿಗದಿಪಡಿಸಲಾಗಿದ್ದು ಪ್ರಸ್ತುತ 50 ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದು 27 ಬೀದಿ ವ್ಯಾಪಾರಿಗಳಿಗೆ ಸಾಲ ಮಂಜೂರಾತಿ ಆಗಿದೆ ಎಂದು ಮಾಹಿತಿ ನೀಡಿದರು.

 

ಸ್ಥಳಿಯ ಪಟ್ಟಣ ಪಂಚಾಯ್ತಿಯು ಅರ್ಹ ಫಲಾನುಭವಿಗಳಿಂದ ಅರ್ಜಿ ಪಡೆದು ಅವರುಗಳನ್ನು ಫಲಾನುಭವಿಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...