ವಿಷಯಕ್ಕೆ ಹೋಗಿ

ಬೀದಿಬದಿ ವ್ಯಾಪಾರಿಗಳಿಗೆ ಅರಿವು ಮೂಡಿಸಿದ ಅಭಿಯಾನ ವ್ಯವಸ್ಥಾಪಕ ದೊಡ್ಡವಲಪ್ಪ

 ಬೀದಿಬದಿಯ ವ್ಯಾಪಾರಿಗಳು ಎಂಬ ಗುರುತಿನ ಚೀಟಿಯನ್ನು ಪಡೆಯಲು ಸಲಹೆ

ಹುಳಿಯಾರು:ಪಟ್ಟಣ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬೀದಿಬದಿ ವ್ಯಾಪಾರಿಗಳಿಗೆ ತಮ್ಮ ವ್ಯಾಪಾರ ಚಟುವಟಿಕೆಗಳನ್ನು ಕೈಗೊಳ್ಳಲು ಆರ್ಥಿಕ ಸಹಾಯ ಒದಗಿಸಲು ಪ್ರಧಾನಮಂತ್ರಿ ಬೀದಿ ಬದಿ ಆತ್ಮನಿರ್ಭರ್ ಯೋಜನೆಯನ್ನು ಜಾರಿಗೆ ತಂದಿದ್ದು ಅರ್ಹ ಫಲಾನುಭವಿಗಳು ಇದರ ಉಪಯೋಗ ಪಡೆಯುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಕಛೇರಿ ಅಭಿಯಾನ ವ್ಯವಸ್ಥಾಪಕರಾದ ದೊಡ್ಡವಲಪ್ಪ ತಿಳಿಸಿದರು.

 ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಯೋಜನೆಯ ಬಗ್ಗೆ ಹುಳಿಯಾರು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎಲ್.ವಿ.ಮಂಜುನಾಥ್ ಅವರೊಂದಿಗೆ ಪಟ್ಟಣದ ಬೀದಿ ಬದಿ ವ್ಯಾಪಾರ ಮಾಡುವ ಸ್ಥಳಗಳಿಗೆ ಖುದ್ದಾಗಿ ತೆರಳಿ ಮಾಹಿತಿ ನೀಡಿದರು.ಹೂ, ಹಣ್ಣು, ಎಳನೀರು, ಮೀನು, ಗೃಹೋಪಯೋಗಿ ವಸ್ತುಗಳು, ತರಕಾರಿ ಮುಂತಾದವುಗಳನ್ನು ತಲೆಹೊರೆ, ತಳ್ಳುಗಾಡಿ, ಸೈಕಲ್, ಮೋಟಾರ್ ಸೈಕಲ್ ಮೂಲಕ ಮನೆಮನೆಗೆ ತೆರಳಿ ಅಥವಾ ಬೀದಿಗಳಲ್ಲಿ ವ್ಯಾಪಾರ ಮಾಡುತ್ತಿರುವವರನ್ನು ಭೇಟಿಯಾಗಿ ಸಾಲ ಸೌಲಭ್ಯದ ಬಗ್ಗೆ ಅರಿವು ಮೂಡಿಸಿದರು. 

ಈ ಯೋಜನೆಡಿ ಪ್ರತೀ ಅರ್ಹ ಫಲಾನುಭವಿಗಳಿಗೆ ರೂ.10,000 ಬ್ಯಾಂಕ್ ಸಾಲವನ್ನು ನೀಡಲಾಗುತ್ತಿದ್ದು ಇದರ ಮರುಪಾವತಿಯನ್ನು 12 ಮಾಸಿಕ ಕಂತುಗಳಲ್ಲಿ ಪಾವತಿ ಮಾಡಬಹುದಾಗಿದೆ ಎಂದರು.

 

ಬೀದಿಬದಿಯ ವ್ಯಾಪಾರಿಗಳಿಗಾಗಿ ಸರಕಾರ ಸಾಕಷ್ಟು ಯೋಜನೆಗಳನ್ನ ಜಾರಿಗೆ ತಂದಿದ್ದು ಈ ಯೋಜನೆಯ ಅನುಕೂಲ ಹೊಂದಬೇಕಾದರೆ ಮೊದಲು ಬೀದಿಬದಿಯ ವ್ಯಾಪಾರಿಗಳು ಎಂಬ ಗುರುತಿನ ಚೀಟಿಯನ್ನು ಪಡೆದಿರಬೇಕು.ಇದಕ್ಕಾಗಿ ತಾವು ವ್ಯಾಪಾರ ಮಾಡುತ್ತಿರುವ ಸ್ಥಳದ ಪೋಟೋ,ಆಧಾರ್ ಕಾರ್ಡ,ಪಡಿತರ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಮತ್ತಿತರ ಅಗತ್ಯ ದಾಖಲೆಗಳನ್ನು ಭರ್ತಿಮಾಡಿದ ಅರ್ಜಿಯೊಂದಿಗೆ ಸ್ಥಳಿಯ ಪಟ್ಟಣ ಪಂಚಾಯ್ತಿಗೆ ನೀಡುವಂತೆ ತಿಳಿಸಿದರು.

 ಈಗಾಗಲೇ ಬೀದಿ ಬದಿ ವ್ಯಾಪಾರಿಗಳ ಅದಿನಿಯಮ 2014 ರ ಅನ್ವಯ ಬೀದಿಬದಿ ವ್ಯಾಪಾರಿಗಳನ್ನು ಸರ್ವೇ ಕಾರ್ಯದ ಮೂಲಕ ಗುರುತಿಸಿ ವ್ಯಾಪಾರ ಪ್ರಮಾಣಪತ್ರ ಹಾಗೂ ಗುರುತಿನ ಚೀಟಿ ವಿತರಿಸಲಾಗಿದೆ ಎಂದ ಅವರು ಸದ್ಯ ಜನಸಂಖ್ಯೆಯ ಆಧಾರದ ಮೇಲೆ ಹುಳಿಯಾರು ಪಟ್ಟಣ ಪಂಚಾಯಿತಿಗೆ ಒಟ್ಟು 154 ಬೀದಿಬದಿ ವ್ಯಾಪಾರಿಗಳ ಕಾರ್ಡ್ ಗುರಿ ನಿಗದಿಪಡಿಸಲಾಗಿದ್ದು ಪ್ರಸ್ತುತ 50 ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದು 27 ಬೀದಿ ವ್ಯಾಪಾರಿಗಳಿಗೆ ಸಾಲ ಮಂಜೂರಾತಿ ಆಗಿದೆ ಎಂದು ಮಾಹಿತಿ ನೀಡಿದರು.

 

ಸ್ಥಳಿಯ ಪಟ್ಟಣ ಪಂಚಾಯ್ತಿಯು ಅರ್ಹ ಫಲಾನುಭವಿಗಳಿಂದ ಅರ್ಜಿ ಪಡೆದು ಅವರುಗಳನ್ನು ಫಲಾನುಭವಿಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...