ವಿಷಯಕ್ಕೆ ಹೋಗಿ

ಹುಳಿಯಾರು ಕೆರೆಗೆ ಇನ್ನೊಂದು ತಿಂಗಳಲ್ಲಿ ಹರಿದುಬರಲಿದೆ ಹೇಮಾವತಿ ನೀರು

ಜಿಲ್ಲಾ ಉಸ್ತುವಾರಿ ಸಚಿವರ ಆದೇಶದ ಮೇರೆಗೆ ಸ್ಥಳ ಪರಿಶೀಲನೆಗೆ ಆಗಮಿಸಿದ ಎಕ್ಸಿಕ್ಯೂಟಿವ್ ಇಂಜಿನಿಯರ್

                            ವರದಿ:ಡಿ.ಆರ್.ನರೇಂದ್ರಬಾಬು

ಹುಳಿಯಾರು:ಈ ಭಾಗದ ಜನರ ದಶಕಗಳ ಕಾಲದ ಕನಸು ನನಸಾಗಲಿದ್ದು ಇನ್ನು ಕೆಲವೇ ದಿನಗಳಲ್ಲಿ ಹುಳಿಯಾರು ಕೆರೆಗೆ ಹೇಮಾವತಿ ನೀರು ಹರಿಯಲಿದ್ದು,ಈ ಮೂಲಕ ಸಂಘ-ಸಂಸ್ಥೆಗಳು ಸೇರಿದಂತೆ ಅನೇಕರ ಹೋರಾಟದ ಫಲ ದಕ್ಕಲು ಕ್ಷಣಗಣನೆ ಆರಂಭವಾಗಿದೆ.

ದಶಕಗಳಿಂದಲೂ ಮಳೆಯಿಲ್ಲದೆ ಬರಪೀಡಿತ ಪ್ರದೇಶವಾಗಿರುವ ಹುಳಿಯಾರಿನಲ್ಲಿ ನೀರಿನ ಸಮಸ್ಯೆ ತೀವ್ರ ಉಲ್ಬಣವಾಗಿದ್ದು ಇಂತಹ ಸಮಯದಲ್ಲಿ ಹೇಮಾವತಿ ನೀರು ಹರಿದು ಜನರ ಸಂಕಷ್ಟಕ್ಕೆ ಇತಿಶ್ರೀ ಹಾಡಲಿರುವುದು ಇಲ್ಲಿನ ಜನಗಳ ಸಂತಸಕ್ಕೆ ಕಾರಣವಾಗಲಿದೆ.

 

ತಾಲೂಕಿನ 24 ಕೆರೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹೇಮಾವತಿ ನೀರು ಹರಿಸಲು ಅಲೊಕೇಶನ್ ಸದ್ಯ ಶೆಟ್ಟಿಕೆರೆ ಕೆರೆಗೆ ನೀರು ತುಂಬುತ್ತಿದೆ. ಅಲ್ಲಿಂದ ಜೋಡಿ ತಿರುಮಲಾಪುರದ ಕೆರೆಗೆ ನೀರು ಬರಲಿದ್ದು,ಅದು ತುಂಬಿದ ನಂತರ ತಿರುಮಲಾಪುರದ ಕೆರೆ ಕೋಡಿಯಿಂದ ಒಣ ಕಾಲುವೆ ಮೂಲಕ ಹುಳಿಯಾರು ಕೆರೆಗೆ ನೀರು ತಲುಪಲಿದೆ.

 

ನಾನಾ ಕಾರಣಗಳಿಂದಾಗಿ ವಿಳಂಬಗೊಂಡಿದ್ದ ಹೇಮಾವತಿ ನಾಳೆಯ ಕಾಮಗಾರಿ ಇದೀಗ ಚುರುಕಾಗಿ ನಡೆಯುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರ ಆದೇಶದಂತೆ ಇಂದು ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರವಿ ಸೂರನ್ ಹಾಗೂ ಶಿರಾ ಭಾಗದ ಸಹಾಯಕ ಇಂಜಿನಿಯರ್ ಪ್ರಭಾಕರ್ ತಿಮ್ಲಾಪುರ ಕೆರೆ ಕೋಡಿ ಹಾಗೂ ಹುಳಿಯಾರು ಒಣಕಾಲುವೆ ಜಾಗ ಪರಿಶೀಲಿಸಿದರು.

ಹುಳಿಯಾರು ಕೆರೆಗೆ ನೈಸರ್ಗಿಕವಾಗಿ ನೀರು : ನೀರಿನ ಹರಿವಿನ ಬಗ್ಗೆ ಮಾತನಾಡಿದ ಎಕ್ಸಿಕ್ಯೂಟಿವ್ ಇಂಜಿನಿಯರ್ ರವಿ ಸೂರನ್ ಸಧ್ಯ ತಾಲ್ಲೂಕಿನ ಶೆಟ್ಟಿಕೆರೆಯ ಕೆರೆಗೆ ನೀರು ಹರಿದು ಬರುತ್ತಿದ್ದು ಅದು ತುಂಬುತ್ತಿದ್ದಂತೆಯೇ ನೈಸರ್ಗಿಕವಾಗಿ ತಿಮ್ಲಾಪುರ ಕೆರೆಗೆ ಹರಿದು ಬರಲಿದೆ.ಶೆಟ್ಟಿಕೆರೆ ಕೆರೆ ತುಂಬಲು ಇನ್ನೂ ಒಂದು ವಾರ ಬೇಕಿದ್ದು ಅಲ್ಲಿಂದ ತಿಮ್ಲಾಪುರಕ್ಕೆ ಬರುವ ಮಾರ್ಗಮಧ್ಯೆ ಅಲ್ಲಲ್ಲಿ ಸ್ಟೋರೇಜ್,ಚೆಕ್ ಡ್ಯಾಮ್ ಗಳಿದ್ದು ಅವುಗಳೆಲ್ಲಾ ತುಂಬಿ ತಿಮ್ಲಾಪುರ ಕೆರೆ ತುಂಬಲು ಇನ್ನು 15 ದಿನಗಳಾದರೂ ಬೇಕಾಗಲಿದೆ.ತಿಮ್ಲಾಪುರ ಕೆರೆ ಸಹ ದೊಡ್ಡ ಕೆರೆಯಾಗಿದೆ.ತಿಮ್ಮಲಾಪುರ ಕೆರೆ ತುಂಬಿದ ನಂತರ ಫೀಡರ್ ಚಾನಲ್ ಮುಖಾಂತರ ಹುಳಿಯಾರು ಕೆರೆ ತಲುಪಲಿದೆ ಎಂದರು.

 

ಸದ್ಯಕ್ಕೆ ತಾಲೂಕಿನ 24 ಕೆರೆಗಳಿಗೆ ಹೇಮಾವತಿಯಿಂದ ನೀರು ತುಂಬಿಸಲು ಅಲೊಕೇಶನ್ ಇದ್ದು ಹೇಮಾವತಿ ಭಾಗದಲ್ಲೂ ಸಹ ಉತ್ತಮ ಮಳೆಯಾಗಿರುವುದರಿಂದ ನೀರಿನ ಹರಿವಿಗೆ ಸಮಸ್ಯೆ ಎದುರಾಗುವುದಿಲ್ಲ ಎನ್ನಲಾಗುತ್ತಿದ್ದು ಎಲ್ಲಾ ಯೋಜನೆಯಂತೆ ನಡೆದಲ್ಲಿ ವರ್ಷಾಂತ್ಯದೊಳಗೆಯೇ ಹುಳಿಯಾರು ಕೆರೆಗೆ ಹೇಮಾವತಿ ನೀರು ಹರಿದು ತುಂಬಲಿದೆ.

 ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಕೆಂಕೆರೆ ನವೀನ್ ಹಾಗೂ ಹುಳಿಯಾರು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಹೇಮಂತ್ ಕುಮಾರ್ ಇದ್ದರು.

----------------------------------------------

ಈಗ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ನೀರು ಹರಿದಲ್ಲಿ ತಿಮ್ಲಾಪುರ ಕೆರೆ ತುಂಬಲು ಇನ್ನೂ ಒಂದು ತಿಂಗಳು ಬೇಕಾಗುತ್ತದೆ.ಕೋಡಿಯಿಂದ ಹುಳಿಯಾರಿಗೆ ಒಣಕಾಲುವೆ ಮೂಲಕ ನೀರು ಬರಲಿದೆ.ಅಷ್ಟರೊಳಗೆ ಜಂಗಲ್ ಹಾಗೂ ಶಿಲ್ಟ್ ನಿಂದ ತುಂಬಿರುವ ಫೀಡರ್ ಚಾನೆಲ್ ಸ್ವಚ್ಛಗೊಳಿಸುವ ಕಾರ್ಯ ನಡೆಯಲಿದೆ.ಡಿಶಿಲ್ಟಿಂಗ್ ಮಾಡಿದ ನಂತರ ನೀರು ಸರಾಗವಾಗಿ ಹರಿಯಲಿದೆ. ಹುಳಿಯಾರು ಕೆರೆಯ ಸ್ಟೋರೇಜ್ ಪ್ರಮಾಣ ಹೆಚ್ಚಿದ್ದು ಸದ್ಯಕ್ಕೆ ಚಾನಲ್ ಸ್ವಚ್ಛ ಮಾಡುವ ಕಾರ್ಯ ನಾಳೆಯಿಂದಲೇ ಜರುಗಲಿದೆ:ಪ್ರಭಾಕರ್,ಸಹಾಯಕ ಇಂಜಿನಿಯರ್

-------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...