ವಿಷಯಕ್ಕೆ ಹೋಗಿ

ಹುಳಿಯಾರು ಕೆರೆಗೆ ಇನ್ನೊಂದು ತಿಂಗಳಲ್ಲಿ ಹರಿದುಬರಲಿದೆ ಹೇಮಾವತಿ ನೀರು

ಜಿಲ್ಲಾ ಉಸ್ತುವಾರಿ ಸಚಿವರ ಆದೇಶದ ಮೇರೆಗೆ ಸ್ಥಳ ಪರಿಶೀಲನೆಗೆ ಆಗಮಿಸಿದ ಎಕ್ಸಿಕ್ಯೂಟಿವ್ ಇಂಜಿನಿಯರ್

                            ವರದಿ:ಡಿ.ಆರ್.ನರೇಂದ್ರಬಾಬು

ಹುಳಿಯಾರು:ಈ ಭಾಗದ ಜನರ ದಶಕಗಳ ಕಾಲದ ಕನಸು ನನಸಾಗಲಿದ್ದು ಇನ್ನು ಕೆಲವೇ ದಿನಗಳಲ್ಲಿ ಹುಳಿಯಾರು ಕೆರೆಗೆ ಹೇಮಾವತಿ ನೀರು ಹರಿಯಲಿದ್ದು,ಈ ಮೂಲಕ ಸಂಘ-ಸಂಸ್ಥೆಗಳು ಸೇರಿದಂತೆ ಅನೇಕರ ಹೋರಾಟದ ಫಲ ದಕ್ಕಲು ಕ್ಷಣಗಣನೆ ಆರಂಭವಾಗಿದೆ.

ದಶಕಗಳಿಂದಲೂ ಮಳೆಯಿಲ್ಲದೆ ಬರಪೀಡಿತ ಪ್ರದೇಶವಾಗಿರುವ ಹುಳಿಯಾರಿನಲ್ಲಿ ನೀರಿನ ಸಮಸ್ಯೆ ತೀವ್ರ ಉಲ್ಬಣವಾಗಿದ್ದು ಇಂತಹ ಸಮಯದಲ್ಲಿ ಹೇಮಾವತಿ ನೀರು ಹರಿದು ಜನರ ಸಂಕಷ್ಟಕ್ಕೆ ಇತಿಶ್ರೀ ಹಾಡಲಿರುವುದು ಇಲ್ಲಿನ ಜನಗಳ ಸಂತಸಕ್ಕೆ ಕಾರಣವಾಗಲಿದೆ.

 

ತಾಲೂಕಿನ 24 ಕೆರೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹೇಮಾವತಿ ನೀರು ಹರಿಸಲು ಅಲೊಕೇಶನ್ ಸದ್ಯ ಶೆಟ್ಟಿಕೆರೆ ಕೆರೆಗೆ ನೀರು ತುಂಬುತ್ತಿದೆ. ಅಲ್ಲಿಂದ ಜೋಡಿ ತಿರುಮಲಾಪುರದ ಕೆರೆಗೆ ನೀರು ಬರಲಿದ್ದು,ಅದು ತುಂಬಿದ ನಂತರ ತಿರುಮಲಾಪುರದ ಕೆರೆ ಕೋಡಿಯಿಂದ ಒಣ ಕಾಲುವೆ ಮೂಲಕ ಹುಳಿಯಾರು ಕೆರೆಗೆ ನೀರು ತಲುಪಲಿದೆ.

 

ನಾನಾ ಕಾರಣಗಳಿಂದಾಗಿ ವಿಳಂಬಗೊಂಡಿದ್ದ ಹೇಮಾವತಿ ನಾಳೆಯ ಕಾಮಗಾರಿ ಇದೀಗ ಚುರುಕಾಗಿ ನಡೆಯುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರ ಆದೇಶದಂತೆ ಇಂದು ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರವಿ ಸೂರನ್ ಹಾಗೂ ಶಿರಾ ಭಾಗದ ಸಹಾಯಕ ಇಂಜಿನಿಯರ್ ಪ್ರಭಾಕರ್ ತಿಮ್ಲಾಪುರ ಕೆರೆ ಕೋಡಿ ಹಾಗೂ ಹುಳಿಯಾರು ಒಣಕಾಲುವೆ ಜಾಗ ಪರಿಶೀಲಿಸಿದರು.

ಹುಳಿಯಾರು ಕೆರೆಗೆ ನೈಸರ್ಗಿಕವಾಗಿ ನೀರು : ನೀರಿನ ಹರಿವಿನ ಬಗ್ಗೆ ಮಾತನಾಡಿದ ಎಕ್ಸಿಕ್ಯೂಟಿವ್ ಇಂಜಿನಿಯರ್ ರವಿ ಸೂರನ್ ಸಧ್ಯ ತಾಲ್ಲೂಕಿನ ಶೆಟ್ಟಿಕೆರೆಯ ಕೆರೆಗೆ ನೀರು ಹರಿದು ಬರುತ್ತಿದ್ದು ಅದು ತುಂಬುತ್ತಿದ್ದಂತೆಯೇ ನೈಸರ್ಗಿಕವಾಗಿ ತಿಮ್ಲಾಪುರ ಕೆರೆಗೆ ಹರಿದು ಬರಲಿದೆ.ಶೆಟ್ಟಿಕೆರೆ ಕೆರೆ ತುಂಬಲು ಇನ್ನೂ ಒಂದು ವಾರ ಬೇಕಿದ್ದು ಅಲ್ಲಿಂದ ತಿಮ್ಲಾಪುರಕ್ಕೆ ಬರುವ ಮಾರ್ಗಮಧ್ಯೆ ಅಲ್ಲಲ್ಲಿ ಸ್ಟೋರೇಜ್,ಚೆಕ್ ಡ್ಯಾಮ್ ಗಳಿದ್ದು ಅವುಗಳೆಲ್ಲಾ ತುಂಬಿ ತಿಮ್ಲಾಪುರ ಕೆರೆ ತುಂಬಲು ಇನ್ನು 15 ದಿನಗಳಾದರೂ ಬೇಕಾಗಲಿದೆ.ತಿಮ್ಲಾಪುರ ಕೆರೆ ಸಹ ದೊಡ್ಡ ಕೆರೆಯಾಗಿದೆ.ತಿಮ್ಮಲಾಪುರ ಕೆರೆ ತುಂಬಿದ ನಂತರ ಫೀಡರ್ ಚಾನಲ್ ಮುಖಾಂತರ ಹುಳಿಯಾರು ಕೆರೆ ತಲುಪಲಿದೆ ಎಂದರು.

 

ಸದ್ಯಕ್ಕೆ ತಾಲೂಕಿನ 24 ಕೆರೆಗಳಿಗೆ ಹೇಮಾವತಿಯಿಂದ ನೀರು ತುಂಬಿಸಲು ಅಲೊಕೇಶನ್ ಇದ್ದು ಹೇಮಾವತಿ ಭಾಗದಲ್ಲೂ ಸಹ ಉತ್ತಮ ಮಳೆಯಾಗಿರುವುದರಿಂದ ನೀರಿನ ಹರಿವಿಗೆ ಸಮಸ್ಯೆ ಎದುರಾಗುವುದಿಲ್ಲ ಎನ್ನಲಾಗುತ್ತಿದ್ದು ಎಲ್ಲಾ ಯೋಜನೆಯಂತೆ ನಡೆದಲ್ಲಿ ವರ್ಷಾಂತ್ಯದೊಳಗೆಯೇ ಹುಳಿಯಾರು ಕೆರೆಗೆ ಹೇಮಾವತಿ ನೀರು ಹರಿದು ತುಂಬಲಿದೆ.

 ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಕೆಂಕೆರೆ ನವೀನ್ ಹಾಗೂ ಹುಳಿಯಾರು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಹೇಮಂತ್ ಕುಮಾರ್ ಇದ್ದರು.

----------------------------------------------

ಈಗ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ನೀರು ಹರಿದಲ್ಲಿ ತಿಮ್ಲಾಪುರ ಕೆರೆ ತುಂಬಲು ಇನ್ನೂ ಒಂದು ತಿಂಗಳು ಬೇಕಾಗುತ್ತದೆ.ಕೋಡಿಯಿಂದ ಹುಳಿಯಾರಿಗೆ ಒಣಕಾಲುವೆ ಮೂಲಕ ನೀರು ಬರಲಿದೆ.ಅಷ್ಟರೊಳಗೆ ಜಂಗಲ್ ಹಾಗೂ ಶಿಲ್ಟ್ ನಿಂದ ತುಂಬಿರುವ ಫೀಡರ್ ಚಾನೆಲ್ ಸ್ವಚ್ಛಗೊಳಿಸುವ ಕಾರ್ಯ ನಡೆಯಲಿದೆ.ಡಿಶಿಲ್ಟಿಂಗ್ ಮಾಡಿದ ನಂತರ ನೀರು ಸರಾಗವಾಗಿ ಹರಿಯಲಿದೆ. ಹುಳಿಯಾರು ಕೆರೆಯ ಸ್ಟೋರೇಜ್ ಪ್ರಮಾಣ ಹೆಚ್ಚಿದ್ದು ಸದ್ಯಕ್ಕೆ ಚಾನಲ್ ಸ್ವಚ್ಛ ಮಾಡುವ ಕಾರ್ಯ ನಾಳೆಯಿಂದಲೇ ಜರುಗಲಿದೆ:ಪ್ರಭಾಕರ್,ಸಹಾಯಕ ಇಂಜಿನಿಯರ್

-------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...