ವಿಷಯಕ್ಕೆ ಹೋಗಿ

ವರ್ಷದ ಮೊದಲ ಹಬ್ಬ ಸಂಕ್ರಾಂತಿಯ ಭರಾಟೆ ಅಷ್ಟಕ್ಕಷ್ಟೇ

ಬಸ್ ನಿಲ್ದಾಣದಲೆಲ್ಲಾ ಕಬ್ಬಿನ ರಾಶಿ

ಅವರೆಕಾಯಿ,ಗೆಣಸು,ಹೂವಿನ ವ್ಯಾಪಾರ ಅಷ್ಟಕಷ್ಟೆ                                           

-------------------------

ಹುಳಿಯಾರು : ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಹಬ್ಬದ ಸ್ವಾಗತಿಸಲು ಜನತೆ ಸಿದ್ಧರಾಗಿದ್ದು ಪಟ್ಟಣದ ಬಸ್ ನಿಲ್ದಾಣ ಹಾಗೂ ಸಂತೆ ಬೀದಿಯಲ್ಲಿ ಹೂವು ಹಣ್ಣಿನ ವ್ಯಾಪಾರಿಗಳ ಭರಾಟೆ ಕಂಡುಬಂತು.ಸಂತೆ ಹಾಗೂ ಬಸ್ ನಿಲ್ದಾಣದಲ್ಲಿ ಅವರೆಕಾಯಿ, ಕಬ್ಬು, ಗೆಣಸು, ಕಡಲೆಕಾಯಿ, ಹೂವು,ಹಣ್ಣುಗಳ ರಾಶಿರಾಶಿ ಬಂದಿದ್ದು ಕಣ್ಸೆಳೆಯುತ್ತಿದೆ. ಕಬ್ಬು,ಅವರೆ ಕೊಳ್ಳುವವರ ಸಂಖ್ಯೆ ಜಾಸ್ತಿ ಇದ್ದರೂ ಸಹ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಅರ್ಧಕರ್ಧ  ಇದ್ದು ವ್ಯಾಪಾರ ಅಷ್ಟಕ್ಕಷ್ಟೆ ಎನ್ನುವ ಸ್ಥಿತಿ ಕಂಡುಬಂದಿದೆ.

ಬೆಲೆ ಏರಿಕೆ ನಡುವೆ ಸಹ ಗ್ರಾಹಕರು ಖರೀದಿ ನಡೆಸಿದ್ದು ಸಂಕ್ರಾಂತಿಗಾಗಿ ಹಿಂದಿನ ದಿನವೇ ರಾಶಿ ರಾಶಿ ಕಬ್ಬು ಬಂದಿದೆ. ಕಬ್ಬು ಪ್ರತಿ ಜಲ್ಲೆಗೆ 30-40 ರೂ.ವರೆಗಿದ್ದರೆ,ಗೆಣಸಿಗೆ ಕೆಜಿ 30 ರೂ ,ಅವರೆಕಾಯಿ ಕೆಜಿಗೆ 35-40 ರೂ ನಂತೆ ಮಾರಾಟ ನಡೆಯಿತು

ಕಡಲೆಕಾಯಿ ಒಂದು ಸೇರಿಗೆ 20 ರೂ.ನಂತೆ ಮಾರಾಟವಾದರೆ ಎಳ್ಳು-ಬೆಲ್ಲ ಹಾಗೂ ಸಕ್ಕರೆ ಅಚ್ಚು ಕೆ.ಜಿ.ಗೆ 200 ರೂ.ವರೆಗೆ ಮಾರಾಟವಾಗುತ್ತಿತ್ತು.

ಹೂವು ದುಬಾರಿ:ಎಲ್ಲ ಬಗೆಯ ಹೂವಿನ ಬೆಲೆಗಳೂ ಗಗನಕ್ಕೇರಿವೆ.ಚಳಿಗಾಲವಾದ್ದರಿಂದ ಉತ್ತಮ ಹೂವು ಬರುವುದು ಕಡಿಮೆ.ಹಬ್ಬದ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಾಗಿರುವುದರಿಂದ ಶಾವಂತಿಗೆ ಮಾರಿಗೆ 100 ರೂ, ಕಾಕಡ ಮಾರಿಗೆ 40ರೂ,ಚೆಂಡುಹೂವು 25 ರೂ.ನಂತೆ ಮಾರಾಟವಾಗುತ್ತಿದೆ.ಕನಕಾಂಬರ 50 ಇದ್ದು ಬೆಲೆ ದುಬಾರಿ ಎನ್ನುವಂತಾಗಿದೆ.

ಹಣ್ಣಿನ ದರ ಸಹ ಹೆಚ್ಚಾಗಿದ್ದು ಪುಟ್ಟಬಾಳೆ ಕೆಜಿಗೆ 60 ಹಾಗೂ ಪಚ್ಚಬಾಳೆ ಕೆಜಿಗೆ 30 ರೂನಂತೆ ಮಾರಾಟಮಾಡುತ್ತಿದ್ದಾರೆ. ಕಿತ್ತಳೆಹಣ್ಣು ಕೆಜಿಗೆ 50-60 ರೂಯಿದ್ದರೆ,ದಾಳಿಂಬೆ 240 ರೂ.ಬೆಲೆಯಿದೆ. ಸೇಬು 120 ರಿಂದ 140 ರೂಪಾಯಿ,ದ್ರಾಕ್ಷಿ 200ರೂಪಾಯಿ,ಸಪೋಟ 50 ರೂಪಾಯಿ ಬೆಲೆಯಿದ್ದು ವ್ಯಾಪಾರಿಗಳು ಗ್ರಾಹಕರನ್ನು ಎದುರು ನೋಡಿವ ಸ್ಥಿತಿಯಿದೆ. 

ತರಕಾರಿ ಬೆಲೆ ಅಷ್ಟಾಗಿ ಏರಿಕೆಯಾಗಿಲ್ಲ.ಆದರೆ ಎಳ್ಳುಬೆಲ್ಲ ಹಂಚಲು ಖರೀದಿಸುತ್ತಿದ್ದ ಪ್ಲಾಸ್ಟಿಕ್ ಡಬ್ಬಿಗಳ ಅಂಗಡಿಯಲ್ಲೂ ಸಹ ವ್ಯಾಪಾರ  ಇಳಿಮುಖವಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷ ವ್ಯಾಪಾರ ಇಳಿಮುಖವಾಗಿದ್ದು ದರ ಏರಿಕೆಗಿಂತ ಹೆಚ್ಚಾಗಿ ಕರೋನ ಹೊಡೆತ ಕಾರಣ ಎನ್ನಲಾಗಿದೆ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...