ಹುಳಿಯಾರು : ದೊಡ್ಡಣ್ಣೆಗರೆ ಗ್ರಾಮಪಂಚಾಯತಿ ಪ್ರಭಾರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅಡವೀಶ್ ಕುಮಾರ್ ಅವರ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ, ಜಾತಿ ನಿಂದನೆ ಮಾಡುವವ ಮೂಲಕ ಮಾನ ಹಾನಿ ಮಾಡಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಚಿಕ್ಕನಾಯಕನಹಳ್ಳಿ ತಾಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ತಹಸಿಲ್ದಾರ್ ತೇಜಸ್ವಿನಿ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ವಿವರ: ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಂದನಕೆರೆ ಹೋಬಳಿ ದೊಡ್ಡಣ್ಣೆಗರೆ ಗ್ರಾಮಪಂಚಾಯತಿಯಲ್ಲಿ (ಪ್ರಭಾರ) ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಡವೀಶ್ ಕುಮಾರ್ ರವರ ಮೇಲೆ ದಿನಾಂಕ:24/02/2021 ರಂದು ಸದರಿ ಪಂಚಾಯತಿ ಅಧ್ಯಕ್ಷರಾದ ಎ.ವೈ ರಮ್ಯರವರ ಪತಿಯಾದ ಮಂಜುನಾಥ್ ಹಾಗೂ ಗ್ರಾಮಪಂಚಾಯತಿ ಸದಸ್ಯರಾದ ಪ್ರಶಾಂತ್ ಡಿ.ಎಸ್ ಹಾಗೂ ಶಿವಕುಮಾರ್ ಡಿ.ಎಂ ರವರು ಗ್ರಾಮಪಂಚಾಯತಿ ಕಛೇರಿಗೆ ಬಂದು ಕರ್ತವ್ಯದ ಅವಧಿಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಅವರನ್ನು ಕೊಠಡಿಯಿಂದ ಹೊರಹಾಕಿ ಸರ್ಕಾರಿ ಕರ್ತವ್ಯ ನಿರ್ವಹಿಸಲು ಅಡ್ಡಿ ಉಂಟು ಮಾಡಿರುತ್ತಾರೆ. ಆ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಇವರ ಮೇಲೆ ಜಾತಿ ನಿಂದನೆ ಮಾಡುವ ಮೂಲಕ ಮಾನಹಾನಿ ಮಾಡಿರುತ್ತಾರೆ. ಈ ಬಗ್ಗೆ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ...
📰 ಹುಳಿಯಾರು ಸೇರಿದಂತೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸ್ಥಳಿಯ ಸುದ್ದಿ ಸಮಾಚಾರದ ಬ್ಲಾಗ್........ ✍️ನರೇಂದ್ರಬಾಬು ಹುಳಿಯಾರು-📞9448760070