ವಿಷಯಕ್ಕೆ ಹೋಗಿ

ಚಿಕ್ಕನಾಯಕನಹಳ್ಳಿಯ ಹಾಲುಗೊಣದಲ್ಲಿ ಶ್ರವಣ ನ್ಯೂನ್ಯತೆಯ ಬಗ್ಗೆ ಜಾಗೃತಿ ಶಿಬಿರ/ದಿನಸಿ ಕಿಟ್ ವಿತರಣೆ

ಚಿಕ್ಕನಾಯಕನಹಳ್ಳಿ ತಾಲೂಕಿನ ಹಾಲುಗೊಣದ ಶ್ರೀ ಸಿದ್ದರಾಮೇಶ್ವರ ಶ್ರವಣದೋಷ ಮಕ್ಕಳ ವಸತಿ ಶಾಲೆ ಹಾಗೂ ಬೆಂಗಳೂರಿನ ಧೃವತಾರೆ ಚಾರಿಟಬಲ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಿದ್ದರಾಮೇಶ್ವರ ವಸತಿ ಶಾಲೆಯಲ್ಲಿ ಶ್ರವಣ ನ್ಯೂನ್ಯತೆಯ ಬಗ್ಗೆ ಜಾಗೃತಿ ಶಿಬಿರ- ಪೋಷಕರ ಸಭೆ ಹಾಗೂ ಅಗತ್ಯ ದಿನಸಿ ಕಿಟ್‌ಗಳ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಅಧ್ಯಕ್ಷರಾದ ಚಂದ್ರಶೇಖರಯ್ಯನವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಣೆಬೆನ್ನೂರು ಸೇವಾ ಅಂಧರ ಸಂಸ್ಥೆಯ ಶಿವಕುಮಾರ್, ನಿರ್ದೇಶಕರುಗಳಾದ ಶ್ರೀಮತಿ ಚಂದ್ರಮ್ಮ, ಬಸವರಾಜು ಅದಲಗೆರೆ, ಧ್ರುವತಾರೆ ಚಾರಿಟಬಲ್ ಟ್ರಸ್ಟಿನ ಅಧ್ಯಕ್ಷರಾದ ಸೋಮಶೇಖರ್, ಉಪಾಧ್ಯಕ್ಷರಾದ ಚಿಕ್ಕನಾಯಕನಹಳ್ಳಿಯ ಕೋದಂಡರಾಮಯ್ಯ ಕಾರ್ಯದರ್ಶಿಯಾದ ಬೆಂಗಳೂರಿನ ಬೆಟ್ಟೇಗೌಡರು, ನಿರ್ದೇಶಕರುಗಳಾದ ಹರೀಶ್ ರಾವ್ ,ಬಸವರಾಜು, ವಿಶೇಷ ಅತಿಥಿಗಳಾಗಿ ತಿಮ್ಮನಹಳ್ಳಿ ಸುಬ್ರಹ್ಮಣ್ಯ,ಚಿಕ್ಕನಾಯಕನಹಳ್ಳಿ ಪುರಸಭೆ ಕೌನ್ಸಿಲರ್ ಶ್ರೀಮತಿ ಲಕ್ಷ್ಮಿ ಪಾಂಡು, ಶ್ರೀಮತಿ ನಾಗರತ್ನ ಜಯರಾಮ್, ವಿಶಾಲ ನಾಯಕ್, ಸಿದ್ದರಾಮೇಶ್ವರ ಅಂಧರ ಸಂಸ್ಥೆಯ ಸಿಬ್ಬಂದಿಗಳಾದ ನಾಗೇಶ್ ,ಸಂಜುಶ್ರೀ,ಪ್ರೇರಣಾಶ್ರೀ ಸೇರಿದಂತೆ ಮಕ್ಕಳ ಪೋಷಕರು ಪಾಲ್ಗೊಂಡಿದ್ದರುಇದೇ ಸಂದರ್ಭದಲ್ಲಿ ಎಲ್ಲಾ ಮಕ್ಕಳಿಗೂ ಆಹಾರದ ಕಿಟ್ ವಿತರಣೆ ಹಾಗೂ ಕಲಿಕಾ ಸಾಮಗ್ರಿಗಳ ವಿತರಣೆ ಮಾಡಲಾಯಿತು.ಧೃವತಾರೆ ಚಾರಿಟಬಲ್ ಟ್ರಸ್ಟಿನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...