ವಿಷಯಕ್ಕೆ ಹೋಗಿ

ಹುಳಿಯಾರಿನ ವಿದ್ಯಾವಾರಿಧಿ ಶಾಲೆಯಲ್ಲಿ ಭಾರತ ಸಂವಿಧಾನ ದಿನಾಚಾರಣೆ

ಹುಳಿಯಾರು ವಿದ್ಯಾವಾರಿಧಿ ಶಾಲೆಯ ಸುವರ್ಣಮುಖಿ ಕ್ಯಾಂಪಸ್‌ನಲ್ಲಿ  ಹಾಗೂ ಚಿಕ್ಕನಾಯಕನಹಳ್ಳಿಯ ವಿದ್ಯಾವಾರಿಧಿ ಶಾಲೆಯಲ್ಲಿ ಭಾರತ ಸಂವಿಧಾನ ದಿನಾಚಾರಣೆ ಆಚರಿಸಲಾಯಿತು. 
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಕವಿತಾ ಕಿರಣ್ ಕುಮಾರ್ ಮಾತನಾಡಿ ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇ. ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಜತೆಗೆ ಅವರ ಸಾಧನೆಯ ಜಾಗೃತಿ ಮೂಡಿಸುವುದು ಮತ್ತು ಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು ಈ ದಿನದ ವಿಶೇಷತೆ ಎಂದರು.ಸಂಸ್ಥೆಯ ಅಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಜೈವಿಕ ಇಂಧನ ನಿಗಮ ಮಂಡಳಿ ಅಧ್ಯಕ್ಷರೂ ಆಗಿರುವ ಕೆ.ಎಸ್.ಕಿರಣ್ ಕುಮಾರ್ ಮಾತನಾಡಿ  ಭಾರತ ಸಂವಿಧಾನ ಜನರನ್ನು ಸಶಕ್ತಗೊಳಿಸುವುದರ ಜತೆಗೆ ಸರ್ವರಿಗೂ ಸಮಾನತೆ ಒದಗಿಸಿದೆ.ಮೂಲಭೂತ ಹಕ್ಕುಗಳನ್ನು ನೀಡಿದೆ.ಕರ್ತವ್ಯಗಳನ್ನು ನೀಡಿದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ.ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಚಾರ್ಯರಾದ ದಿಲೀಪ್ ಹಾಗೂ ಕಾಲೇಜಿನ ಪ್ರಾಚಾರ್ಯರಾದ ಸತೀಶ್ ನಾಯ್ಕ್ ಮತ್ತು ಇತರ ಶಿಕ್ಷಕ ವೃಂದದವರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...