ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಎಬಿವಿಪಿ ಹುಳಿಯಾರು ಘಟಕದವತಿಯಿಂದ ವಿದ್ಯಾರ್ಥಿಗಳಿಗೆ ಭದ್ರತೆ ನೀಡಲು ಕೋರಿ ಪೊಲೀಸ್ ಹಾಗೂ ಪಟ್ಟಣ ಪಂಚಾಯತಿ ಅಧ್ಯಕ್ಷರಿಗೆ ಮನವಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಘಟಕದವತಿಯಿಂದ ವಿದ್ಯಾರ್ಥಿಗಳ ಸಮಸ್ಯೆಗಳು ಮತ್ತು ಹೆಚ್ಚಿನ ಭದ್ರತೆಯನ್ನು  ಹೆಚ್ಚಿಸುವ ಬಗ್ಗೆ ಹುಳಿಯಾರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಕಿರಣ್ ಕುಮಾರ್ ಹಾಗೂ ಪೊಲೀಸ್ ಠಾಣಾಧಿಕಾರಿಗಳಾದ ಕೆ.ವಿ ಮೂರ್ತಿ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಹುಳಿಯಾರು-ಕೆಂಕೆರೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹುಳಿಯಾರು-ಕೆಂಕೆರೆ ಶಾಲಾ ಕಾಲೇಜುಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಎಲ್ಲಾ ವಿದ್ಯಾರ್ಥಿಗಳಿಗೂ ಹೆಚ್ಚಿನ ಭದ್ರತೆ ಒದಗಿಸುವ ಕಾರಣದಿಂದ ಶಾಶ್ವತ ಗೇಟ್ ವ್ಯವಸ್ಥೆ ಮತ್ತು ಸಿಸಿಟಿವಿ ಅಳವಡಿಸಿ ವಿದ್ಯಾರ್ಥಿಗಳು ಸಂಚರಿಸುವ ಸಮಯದಲ್ಲಿ ಹೆಚ್ಚಿನ ನಿಗಾ ವಹಿಸಬೇಕೆಂದು ಮನವಿ ನೀಡಲಾಯಿತು. ಮನವಿ ಪತ್ರ ಸ್ವೀಕರಿಸಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ ಕಿರಣ್ ಕುಮಾರ್ ಮುಂದಿನ 15 ದಿನಗಳಲ್ಲಿ ಶಾಶ್ವತ ಪರಿಹಾರವನ್ನು ಒದಗಿಸುವ ಭರವಸೆ ನೀಡಿದರು. ವಿದ್ಯಾರ್ಥಿಗಳ ಮನವಿ ಪತ್ರ ಸ್ವೀಕರಿಸಿದ ಪೊಲೀಸ್ ಠಾಣಾಧಿಕಾರಿ ಕೆ.ವಿ.ಮೂರ್ತಿ  ಸೋಮವಾರದಿಂದಲೇ ಹೆಚ್ಚಿನ ನಿಗಾವಹಿಸಿ ಸಿಸಿಟಿವಿ ಅಳವಡಿಸುವ ಭರವಸೆ ನೀಡಿದರು. ಈ ವೇಳೆಯಲ್ಲಿ ಅತಿಥಿ ಉಪನ್ಯಾಸಕರಾದ ನರೇಂದ್ರಬಾಬು,ಕಾರ್ಯಕರ್ತರಾದ ಹರೀಶ್ ಎಸ್.ಎನ್ ರಾಕೇಶ್ ಹಾಗೂ ಗಿರೀಶ್ , ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕನಾಯಕನಹಳ್ಳಿ ತಾಲೂ

ಮತಿಘಟ್ಟದಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಚಿಕ್ಕನಾಯಕನಹಳ್ಳಿ ತಾ ಮತ್ತಿಘಟ್ಟದಲ್ಲಿ ತಿಪಟೂರಿನ ಶಾಲಾ ಕಾಲೇಜುಗಳಿಗೆ ತೆರಳಲು ಬೆಳಿಗ್ಗೆಯಿಂದ 9 ಘಂಟೆಯವರವಿಗೂ KSRTC ಬಸ್ಸುಗಳು ಸರಿಯಾಗಿ ಬರುವುದಿಲ್ಲ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಇಂದು ಸಹ ಸರಿಯಾಗಿ ಬಸ್ಸು ಬಾರದಿದ್ದು ಪ್ರತಿಭಟನೆಗೆ ಕಾರಣವಾಯಿತು. ಹಂದನಕೆರೆ ಪೋಲೀಸರು ಬಂದು ಮೇಲಧಿಕಾರಿಗಳ ಗಮನಕ್ಕೆ ತಂದು ನಾಳೆಯಿಂದ ಸರಿಪಡಿಸುತ್ತೇವೆ ಎಂದು ತಿಳಿಸಿದರು.ವಿದ್ಯಾರ್ಥಿಗಳಿಗೆ  ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರು ನೀಡಲು ತಿಳಿಸಿದರು. ಮತಿಘಟ್ಟದಲ್ಲಿ ದಿನನಿತ್ಯ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತಿಪಟೂರಿಗೆ ಓಡಾಡುತ್ತಾರೆ.ಸರಿಯಾದ ಸಮಯಕ್ಕೆ ಬಸ್ಸುಗಳು ಬರುವುದಿಲ್ಲ.ಇಲ್ಲಿಗೊಂದು ಬಸ್ ನಿಲ್ದಾಣ ಮಾಡಬೇಕು,ಇಲ್ಲಿಗೊಬ್ಬರು TC ಸಿಬ್ಬಂದಿ ನೇಮಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದರು.

ಹುಳಿಯಾರಿನ ಅಲೆಮಾರಿ ಬುಡಕಟ್ಟು ಮಹಾಸಭಾವತಿಯಿಂದ 26.12.2022 ರ ಸೋಮವಾರದಿಂದ ಮತ್ತೆ ನಾಡಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಧರಣಿ

ಹುಳಿಯಾರಿನ ಅಲೆಮಾರಿ ಬುಡಕಟ್ಟು ಮಹಾಸಭಾವತಿಯಿಂದ  21.12.2022 ಪೂರ್ವ ಸಿದ್ಧತಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು  ಹುಳಿಯಾರಿನ ಶಂಕರಾಪುರ ಬಡಾವಣೆಯಲ್ಲಿ ವಾಸವಾಗಿದ್ದಂತಹ ಅಲೆಮಾರಿ ಜನರಿಗೆ ನಿವೇಶನ ಕಲ್ಪಿಸಿ ಕೊಡುವಂತೆ ಒತ್ತಾಯಿಸಿ ಅಕ್ಟೋಬರ್ 2 ನೇ ತಾರೀಖಿನಂದು 21 ದಿನಗಳ ಕಾಲ ಹುಳಿಯಾರು ನಾಡಕಛೇರಿ ಮುಂಭಾಗ ಅಹೋರಾತ್ರಿ ಧರಣಿಯನ್ನು ನಡೆಸಿದ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ ತಾಲೂಕು ದಂಡಾಧಿಕಾರಿಗಳು ಮತ್ತು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳು ಭೇಟಿ ನೀಡಿ ಒಂದು ವಾರದ ಒಳಗಾಗಿ ಸಂಪೂರ್ಣ ಕೆಲಸ ಮುಗಿಸಿ ನಿವೇಶನಗಳನ್ನು ಹಂಚಿಕೆ ಮಾಡುವುದಾಗಿ ತಿಳಿಸಿದ್ದರು. ಆದರೆ ಇಲ್ಲಿಯವರೆಗೆ ಎರಡು ತಿಂಗಳು ಕಳೆದರೂ ಇನ್ನೂ ನಿವೇಶನಗಳು ಕೈ ಸೇರಿಲ್ಲ. ಆದಕಾರಣ ಹುಳಿಯಾರು ಕೆರೆ ತುಂಬಿ ಬೀದಿಗೆ ಬಿದ್ದಿರುವ ಅಲೆಮಾರಿ ಜನಗಳ ಕಷ್ಟವನ್ನು ನಿರ್ಲಕ್ಷ ಮಾಡುತ್ತಿರುವ ಕಾರಣ 26.12.2022 ಸೋಮವಾರ ದಂದು ಮತ್ತೆ ಹುಳಿಯಾರಿನ ನಾಡಕಚೇರಿ ಮುಂಭಾಗದಲ್ಲಿ ಅಹೋರಾತ್ರಿ ಧರಣಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಯಿತು.

ರೈತರಲ್ಲಿ ತಾರತಮ್ಯ ಮಾಡದೆ ರಾಗಿ ಬೆಳೆಯುವ ಎಲ್ಲಾ ರೈತರ ರಾಗಿಯನ್ನು ಖರೀದಿಸಲು ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್ ಒತ್ತಾಯ

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮದಿಂದ ಉತ್ತಮ ಗುಣಮಟ್ಟದ ರಾಗಿಯನ್ನು ಜಿಲ್ಲೆಯ ವಿವಿಧ ಎಪಿಎಂಸಿ ಆವರಣದಲ್ಲಿ ತೆರೆಯಲಾಗಿರುವ ರಾಗಿ ಖರೀದಿ ಕೇಂದ್ರದಲ್ಲಿ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಸಲು ರೈತರ ನೋಂದಣಿ ಆರಂಭವಾಗಿರುವುದು ಸರಿಯಷ್ಟೇ. ಪ್ರಸ್ತುತವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಗರಿಷ್ಠ 20 ಕ್ವಿಂಟಾಲ್ ರಾಗಿ ಖರೀದಿಸಲು ಮುಂದಾಗಿದ್ದು, 5 ಎಕರೆಗೂ ಮೇಲ್ಪಟ್ಟು ಜಮೀನು ಹೊಂದಿರುವ ದೊಡ್ಡ ರೈತರಿಗೆ ರಾಗಿ ಮಾರಾಟ ಮಾಡಲು ಅವಕಾಶವಿಲ್ಲದಿರುವುದು ಸಮಸ್ಯೆಗೆ ಕಾರಣವಾಗಿದೆ. ಸರ್ಕಾರ ರೈತರನ್ನು ಸಣ್ಣ -ಅತಿ ಸಣ್ಣ-ದೊಡ್ಡ ರೈತರು ಎಂದು ವರ್ಗೀಕರಿಸದೆ/ ತಾರತಮ್ಯ ಮಾಡದೆ ಎಲ್ಲಾ ರೈತರ ರಾಗಿಯನ್ನು ಖರೀದಿಸಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು  ಸರ್ಕಾರಕ್ಕೆ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿಕೊಟ್ಟು ಸಮಸ್ಯೆ ಪರಿಹರಿಸುವಂತೆ ಮಾಜಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಆಗಿರುವ ಕೆ ಎಸ್ ಕಿರಣ್ ಕುಮಾರ್ ಒತ್ತಾಯಿಸಿದರು. ಹುಳಿಯಾರಿನ ಎಪಿಎಂಸಿ ಆವರಣದಲ್ಲಿನ ರಾಗಿ ಖರೀದಿ ಕೇಂದ್ರಕ್ಕೆ ಇಂದು ಭೇಟಿ ಕೊಟ್ಟು ರೈತರ ಸಮಸ್ಯೆ ಆಲಿಸಿ, ಸರ್ಕಾರದ ಮಾರ್ಗಸೂಚಿಯನ್ನು ಪರಿಶೀಲಿಸಿ ಅವರು ಮಾತನಾಡಿದರು. ತಾರತಮ್ಯ ಏಕೆ??? ರೈತರು ಬೆಳೆಯುವ ಬೆಳೆಯಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ನೀತಿಯ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ ಅವರು, ಜೋಳ ಬೆಳೆಯುವ ಪ್ರತಿ ರೈತರು

ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರ : ಸ್ಥಳೀಯರಿಗಷ್ಟೇ ಕಾಂಗ್ರೆಸ್ ಪಕ್ಷದ ಟಿಕೆಟನ್ನು ನೀಡಲಿ

ಹುಳಿಯಾರು : ಈ ಬಾರಿಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಥಳೀಯರಾದ ಕ್ಷೇತ್ರದವರಿಗೆ ಮಾತ್ರವೇ ಅವಕಾಶ ನೀಡುವಂತೆ ಕಾಂಗ್ರೆಸ್ ಪಕ್ಷದ ಹುಳಿಯಾರು ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಕಾರ್ಯಕರ್ತರು  ಒತ್ತಾಯಿಸಿದ್ದಾರೆ. ಹುಳಿಯಾರು ಪಟ್ಟಣ ಪಂಚಾಯಿತಿ ಸದಸ್ಯ ಎಸ್. ಆರ್.ಎಸ್ ದಯಾನಂದ್ ಅವರ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಈಗಾಗಲೇ ಮುಂದಿನ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ಕಳೆದ ಎರಡು ಚುನಾವಣೆಯಿಂದಲೂ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಾನಾ ಕಾರಣಗಳಿಂದ ಹೊರಗಿನವರಿಗೆ ಟಿಕೆಟ್ ಕೊಡುವ ಸಂಸ್ಕೃತಿ ನಡೆಯುತ್ತಿದ್ದು ,ಈ ಚುನಾವಣೆಯಲ್ಲಿ ವಲಸಿಗರಿಗೆ /ಹೊರಗಿನವರಿಗೆ ಮಣೆ ಹಾಕುವ ಬದಲು ಕಾಂಗ್ರೆಸ್ ಪಕ್ಷ ಮತ್ತು ಸಿದ್ಧಾಂತಕ್ಕೆ ನಿಷ್ಟರಾಗಿರುವ, ಚುನಾವಣೆಯಲ್ಲಿ ಗೆದ್ದೇ ಗೆಲ್ಲುವ ಹೋರಾಟ ಮನೋಭಾವ ಹೊಂದಿರುವ ಸಮರ್ಥರಾದ ಸ್ಥಳೀಯ ಅಭ್ಯರ್ಥಿಗಳಿಗಷ್ಟೆ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕೆಂದರೆ ಕ್ಷೇತ್ರದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ ಮಾತ್ರ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಾಧ್ಯ . ಈಗಾಗಲೇ ಚಿಕ್ಕನಾಯಕನಹಳ್ಳಿ

ಹುಳಿಯಾರಿನ ಬಿ.ಎಂ.ಎಸ್. ಪದವಿ ಕಾಲೇಜಿನಲ್ಲಿ "ಕನ್ನಡ ಗೀತೆಗಳ ಗಾಯನ ಸ್ಪರ್ಧೆ"

ಹುಳಿಯಾರು :67ನೇಯ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹುಳಿಯಾರಿನ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ "ಕನ್ನಡ ಗೀತೆಗಳ ಗಾಯನ ಸ್ಪರ್ಧೆ" ಯನ್ನು ಏರ್ಪಡಿಸಲಾಗಿತ್ತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಮೋಹನ್ ಕುಮಾರ್ ಮಿರ್ಲೆ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು "ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು. ಸ್ಪರ್ಧೆಯಲ್ಲಿ ಗೆಲ್ಲುವುದೇ ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ, ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಇಂತಹ ಸ್ಪರ್ಧೆಗಳು ಸಹಕಾರಿ" ಎಂದು ಅಭಿಪ್ರಾಯಪಟ್ಟರು.  ಸ್ಪರ್ಧೆಯಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದು, ಸುಹಾನಾ ಬಿ. ಪ್ರಥಮ ಸ್ಥಾನ, ಅರ್ಚನಾ ಟಿ. ದ್ವಿತೀಯ ಸ್ಥಾನ ಮತ್ತು ಐಶ್ವರ್ಯ ಕೆ.ಎಂ. ತೃತೀಯ ಸ್ಥಾನ ಗಳಿಸಿದರು.  ಕನ್ನಡ ಉಪನ್ಯಾಸಕರಾದ ಶ್ರೀ ಹೊನ್ನಪ್ಪ ಕೆ.ಎಸ್. ಸ್ವಾಗತಿಸಿದರು. ಮತ್ತೊಬ್ಬರು ಕನ್ನಡ ಉಪನ್ಯಾಸಕರಾದ ಶ್ರೀ ಚಂದ್ರಹಾಸ ಬಿ.ಆರ್. ನಿರೂಪಿಸಿದರು. ತೀರ್ಪುಗಾರರಾಗಿ ಡಾ. ಮೋಹನ್ ಕುಮಾರ್ ಮಿರ್ಲೆ, ಡಾ. ಜಯಶ್ರೀ ಬಿ. ಕದ್ರಿ ಹಾಗೂ ಪ್ರೊ. ಮಂಜುನಾಥ್ ಕೆ.ಎಸ್. ಕರ್ತವ್ಯ ನಿರ್ವಹಿಸಿದರು.  ಕಾರ್ಯಕ್ರಮದಲ್ಲಿ ಕಾಲೇಜಿನ ಅಧ್ಯಾಪಕರುಗಳಾದ ಪ್ರೊ. ಸಂಗೀತ ಪಿ., ಶ್ರೀಮತಿ ಲಾವಣ್ಯ ಪಿ.ಸಿ., ಶ್ರೀ ಕುಮಾ

ತಿರುಮಲಾಪುರದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ಮೊದಲನೇ ಕಾರ್ತಿಕ ಸೋಮವಾರದ ಪೂಜಾ ಕಾರ್ಯಕ್ರಮ

ಹುಳಿಯಾರು ಸಮೀಪದ ಜೋಡಿ ತಿರುಮಲಾಪುರದಲ್ಲಿ ಕಾರ್ತಿಕ ಮಾಸದ ದೀಪೋತ್ಸವ ಆರಂಭವಾಗಿದ್ದು ಇಂದು ಕಾರ್ತಿಕ ಪ್ರಥಮ ಸೋಮವಾರ ಅಂಗವಾಗಿ ಸಂಧ್ಯಾಮಂಟಪದಲ್ಲಿನ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಋತ್ವಿಜರಿಂದ ಮಹಾನ್ಯಾಸಪೂರ್ವಕ,ಏಕವಾರ ರುದ್ರಾಭಿಷೇಕ, ಸಹಸ್ರನಾಮ ಬಿಲ್ವಾರ್ಚನೆ ನಡೆಯಿತು. ಶ್ರೀ ಚಂದ್ರಮೌಳೇಶ್ವರ ಸ್ವಾಮಿ, ಪಾರ್ವತಮ್ಮನವರು,ಸುಬ್ರಮಣ್ಯಸ್ವಾಮಿ, ಜ್ಯೋತಿರ್ಲಿಂಗೇಶ್ವರ ಸ್ವಾಮಿ ,ಕಾಶಿ ವಿಶ್ವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಜರುಗಿತು. ಮಹಾಮಂಗಳಾರತಿ ನಂತರ ಗ್ರಾಮಸ್ಥರು ಸೇರಿದಂತೆ ಆಗಮಿಸಿದ ಭಕ್ತಾಧಿಗಳಿಗೆ  ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನಸಂತರ್ಪಣೆ ಜರುಗಿತು.

ಹುಳಿಯಾರು ಕೆರೆ ಅಂಗಳದ ನಿವಾಸಿಗಳ ಬದುಕು ಮೂರಾಬಟ್ಟೆ

ಹುಳಿಯಾರು ಕೆರೆ ಅಂಗಳದ ನಿವಾಸಿಗಳ ಬದುಕು ಮೂರಾಬಟ್ಟೆ ... ಜಲಾವೃತಗೊಳ್ಳುತ್ತಿರುವ ಮನೆಯಿಂದಾಗಿ, ಮನೆ ಕಳೆದುಕೊಂಡು ಮುಂದೇನು ಎಂಬ ಆತಂಕದಲ್ಲಿ ನಿರಾಶ್ರಿತರು .. ------------- ✍️ವರದಿ :*ನರೇಂದ್ರಬಾಬು ಹುಳಿಯಾರು* ಹುಳಿಯಾರು :ಹುಳಿಯಾರು ಶಂಕರಾಪುರದ ಕೆರೆ ಅಂಗಳದಲ್ಲಿ ಮನೆ ಕಟ್ಟಿ ಜೀವನ ಸಾಗಿಸುತ್ತಿರುವವರಿಗೆ ಕಳೆದ ಎರಡು ದಶಕಗಳಿಂದಲೂ ಉದ್ಭವವಾಗದ ನೀರಿನ ಸಮಸ್ಯೆ ಇದೀಗ ಉಲ್ಬಣಗೊಂಡಿದ್ದು, ಮಳೆಯಿಂದಾಗಿ ಹುಳಿಯಾರು ಕೆರೆ ತುಂಬಿದಂತೆಲ್ಲ,ಕೆರೆಅಂಗಳದಲ್ಲಿರುವ ಮನೆಗಳೆಲ್ಲ ಜಲಾವೃತಗೊಳ್ಳುತ್ತಿದೆ. ದಿನೇ ದಿನೇ ಜಲಾವೃತಗೊಳ್ಳುತ್ತಿರುವ ಮನೆಗಳಲ್ಲಿ ವಾಸ ಮಾಡಲು ಸಾಧ್ಯವಾಗದೆ, ಬೇರೆ ಸ್ಥಳವು ಇಲ್ಲದೆ, ಕೆರೆ ಅಂಗಳದ ನಿವಾಸಿಗಳ ಬದುಕು ಮೂರಾ ಬಟ್ಟೆಯಾಗಿದೆ. ವಾಸ ಮಾಡಲು ಯೋಗ್ಯವಿಲ್ಲ : ಹುಳಿಯಾರು ಶಂಕರಾಪುರದ ಕೆರೆ ಅಂಗಳದಲ್ಲಿ ಹಲವಾರು ವರ್ಷಗಳಿಂದಲೂ ಸುಮಾರು ನೂರಕ್ಕೂ ಹೆಚ್ಚು ಬಡ ಹಾಗೂ ನಿರ್ಗತಿಕ ಕುಟುಂಬಗಳು ಯಾವುದೇ ಮೂಲಭೂತ ಸೌಕರ್ಯ ಇಲ್ಲದ, ವಾಸ ಮಾಡಲು ಯೋಗ್ಯವಲ್ಲದ ಸ್ಥಳದಲ್ಲಿ,ಹೀನಾಯ ಸ್ಥಿತಿಯಲ್ಲಿ ಗುಡಿಸಲು ಹಾಗೂ ತಗಡಿನ ಶೆಡ್ಡಿನ ಮನೆ ನಿರ್ಮಾಣ ಮಾಡಿಕೊಂಡಿದ್ದು, ಅಲ್ಲಿಯೇ ವಾಸವಾಗಿದ್ದುಕೊಂಡು ಹೇರ್ ಪಿನ್, ಕೂದಲು, ಛತ್ರಿ ರಿಪೇರಿ, ಬೀಗ ರಿಪೇರಿ ಹೀಗೆ ಸಣ್ಣ ಪುಟ್ಟ ವ್ಯಾಪಾರ ಮತ್ತು ಕೂಲಿ ನಾಲಿ ಮಾಡಿಕೊಂಡು, ಅದರಿಂದ ಬರುವ ಪುಡಿಗಾಸಿನಿಂದಲೇ ಕುಟುಂಬ ಪೋಷಿಸುತ್ತಿದ್ದಾರೆ. ಇಲ್ಲ

ಹುಳಿಯಾರಿನ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಜಾಗತಿಕ ಕೈ ತೊಳೆಯುವ ದಿನ"(Global Hand Washing Day) ಆಚರಣೆ

ಹುಳಿಯಾರು, ಕೆಂಕೆರೆಯ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ಜಾಗತಿಕ ಕೈ ತೊಳೆಯುವ ದಿನ”Global Hand Washing Day)ವನ್ನು ಕಾಲೇಜಿನ ರೆಡ್ ಕ್ರಾಸ್ ಘಟಕ ಹಾಗೂ ಐಕ್ಯುಎಸಿ ಸಹಯೋಗದೊಂದಿಗೆ ಆಚರಿಸಲಾಯಿತು.  ಕಾಲೇಜಿನ ವಿದ್ಯಾರ್ಥಿಗಳಿಗೆ ಕೈ ತೊಳೆಯುವ ಪ್ರಾಮುಖ್ಯತೆ ಹಾಗೂ Transaction ಕಾಪಾಡಿಕೊಳ್ಳಲು ಕೈ ತೊಳೆಯುವುದು ಬಹಳ ಅಗತ್ಯವೆಂದು ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.  ರೆಡ್ ಕ್ರಾಸ್ ಘಟಕದ ಸಂಚಾಲಕರಾದ ಶ್ರೀಮತಿ ಸಂಗೀತ.ಪಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಾಗತಿಕ ಕೈ ತೊಳೆಯುವ ದಿನವನ್ನು ಅಂತರರಾಷ್ಟ್ರೀಯ ನೈರ್ಮಲ್ಯ ವರ್ಷವಾದ 2008 ರಲ್ಲಿ  ಎಲ್ಲರಲ್ಲೂ ಸಾಬೂನಿನಿಂದ ಕೈ ತೊಳೆಯುವ ಅಭ್ಯಾಸ ಬೆಳೆಸುವುದು ಹಾಗೂ ಇದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳ ಕುರಿತು ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆರಂಭಿಸಲಾಯಿತು ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಗ್ರಂಥಪಾಲಕರಾದ ಡಾ. ಲೋಕೇಶ್ ನಾಯಕ್ ಅವರು ಮಾತನಾಡಿ ವಿದ್ಯಾರ್ಥಿಗಳು ಕೈ ನೈರ್ಮಲ್ಯದ ಕುರಿತು ತಮ್ಮ ಮನೆಯಲ್ಲಿ ಹಾಗೂ ಸುತ್ತಮುತ್ತಲಿನವರಲ್ಲಿ ಅರಿವು ಮೂಡಿಸಬೇಕೆಂದು ಹೇಳಿದರು.  ಐಕ್ಯೂಎಸಿ ಸಂಚಾಲಕರಾದ ಪ್ರೊ. ಮಂಜುನಾಥ್ ಅವರು ಮಾತನಾಡಿ ಕೊರೋನ, ಅತಿಸಾರ, ನ್ಯೂಮೋನಿಯಾದಂತಹ ರೋಗಗಳ ವಿರುದ್ಧ ರಕ್ಷಿಸುವಲ್ಲಿ ಕೈ ನೈರ್ಮಲ್ಯ ಬಹಳ ಮಹತ್ವದ್ದು ಎಂದರು.  ಕನ್ನ

ಹುಳಿಯಾರಿನಲ್ಲಿ ವಿಶ್ವ ಕೈ ತೊಳೆಯುವ ದಿನ ಆಚರಣೆ

ಹುಳಿಯಾರಿನ ಪ್ರಾಥಮಿಕ ಆರೋಗ್ಯ ಕೇಂದ್ರ  ಮತ್ತು ಪಟ್ಟಣ ಪಂಚಾಯಿತಿ ಹುಳಿಯಾರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಕೈತೊಳೆಯುವ ದಿನವನ್ನು ಆಚರಿಸಲಾಯಿತು .   ಹುಳಿಯಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವೆಂಕಟರಾಮಯ್ಯ ಮಾತನಾಡಿ ಕೈ ತೊಳೆದುಕೊಳ್ಳುವ ಬಗ್ಗೆ ಜನರಿಗೆ ಮನವರಿಕೆ ಮಾಡಿ ಜಾಗೃತಿ ಉಂಟುಮಾಡಿದ್ದರು. ಮುಂದುವರೆದು ಮಾತನಾಡಿದ ಅವರು ಮಾನವನಿಗೆ ಬರುವ ಹಲವು ರೋಗಗಳಲ್ಲಿ ಕೈ ತೊಳೆಯದೆ ಆಹಾರ ಸೇವಿಸುವುದೇ ಕಾರಣ. ಕೈತೊಳೆಯದೆ ಆಹಾರ ಸ್ವೀಕರಿಸುವುದರಿಂದ ಅನೇಕ ವೈರಸ್ ಮತ್ತು ಬ್ಯಾಕ್ಟೀರಿಯಗಳು ನಮಗೆ ಗೊತ್ತಿಲ್ಲದಂತೆ ಬಾಯಿಯ ಮೂಲಕ ದೇಹಕ್ಕೆ ಸೇರಿ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಕೈ ತೊಳೆಯುವುದು ಹಾಗೂ ಶುಚಿತ್ವ ಕಾಪಾಡಿಕೊಳ್ಳುವುದು ಅಗತ್ಯ ಈ ಬಗ್ಗೆ ಜಾಗೃತಿ ಮೂಡಿಸಲು ವಿಶ್ವ ಕೈ ತೊಳೆಯುವ ದಿನ ಆಚರಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಕೈ ತೊಳೆಯುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷತೆ ಮಾಡಿ ತೋರಿಸಲಾಯಿತು ನೌಕರರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಭೂತಪ್ಪ ಕಂದಾಯ ಅಧಿಕಾರಿ ಪ್ರದೀಪ್, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಗಣೇಶ್ ಸೇರಿದಂತೆ ಹಲವರಿದ್ದರು.

ಇಂದು ಚಿಕ್ಕನಾಯಕನಹಳ್ಳಿಯ ನೆಹರು ಸರ್ಕಲ್‌ನಲ್ಲಿ ಒಂದು ದಿನದ ಜನಾಗ್ರಹ ಉಪವಾಸ ಸತ್ಯಾಗ್ರಹ

"ಮೌಲ್ಶಾಧಾರಿತ ರಾಜಕಾರಣ, ಭ್ರಷ್ಠಾಚಾರ ಮುಕ್ತ ಆಡಳಿತಕ್ಕಾಗಿ" ಕರ್ನಾಟಕ ರಾಷ್ರ್ಟಸಮಿತಿ ಪಕ್ಷ ಮತ್ತು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯು ಇಂದು ದಿನಾಂಕ 02-10-2022ರ ಗಾಂಧೀಜಯಂತಿಯಂದು ಚಿಕ್ಕನಾಯಕನಹಳ್ಳಿಯ ನೆಹರು ಸರ್ಕಲ್‌ನಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4ರವರೆಗೆ.   ಈ ಕೆಳಕಂಡ ಸಮಸ್ಶೆಗಳ ಪರಿಹಾರಕ್ಕಾಗಿ.     1.ಸರ್ಕಾರಿಕಛೇರಿಗಳಲ್ಲಿನ ವ್ಶಾಪಕ ಭ್ರಷ್ಠಾಚಾರ. 2.ಅಕ್ರಮ ಮದ್ಶಮಾರಾಟ.   3.ಸರ್ಕಾರಿ ಕಾಮಗಾರಿಗಳಲ್ಲಿನ ಅಪಾರದರ್ಶಕತೆ ಮತ್ತು ಕಳಪೆಗುಣಮಟ್ಟ.  4."ಭಾರತಮಾಲಾ ರಸ್ತೆ ಯೋಜನೆ"ಗಾಗಿ ರೈತರ ಭೂಮಿವಶಪಡಿಸಿಕೊಳ್ಳುವುದನ್ನು ವಿರೋಧಿಸಿ.   5.ಗಣಿಭಾಧಿತಪ್ರದೇಶಕ್ಕೆ ಮೀಸಲಾದ ಹಣ ಕಂಟ್ರಾಕ್ಟ್ ದಂಧೆಗೆ ದುರ್ಬಳಕೆಯಾಗುವುದನ್ನು ವಿರೋಧಿಸಿ. 6.ರೈತರ ಭೂಮಿಯ ಹಕ್ಕನ್ನು ಭ್ರಷ್ಠ ಕಂದಾಯ ಇಲಾಖೆ ಅಧಿಕಾರಿಗಳಿಂದ ರಕ್ಷಿಸುವ ಬಗ್ಗೆ. 7.ನ್ಶಾಯಬೆಲೆ ಅಂಗಡಿಗಳಲ್ಲಿ ಬಡವರ ಪಾಲಿಗೆ ಕನ್ನಹಾಕುವುದನ್ನು ವಿರೋಧಿಸಿ. 8.ಚಳ್ಳಕೆರೆ - ಹಿರಿಯೂರು-ಹುಳಿಯಾರು- ಚಿಕ್ಕನಾಯಕನಹಳ್ಳಿ- ಕಿಬ್ಬನಹಳ್ಳಿಕ್ರಾಸ್-ತುರುವೇಕೇರೆ- ಚೆನ್ನರಾಯಪಟ್ಟಣ ರೈಲು ಮಾರ್ಗ ಅನುಷ್ಠಾನಕ್ಕಾಗಿ. 9.ಸರ್ಕಾರಿ ಕಾಮಗಾರಿಗಳಲ್ಲಿನ ಅಪಾರದರ್ಶತೆˌ ವಿವಿಧ ಯೋಜನೆಗಳಿಗಾಗಿ ರೈತರ ಭೂಮಿಯನ್ನು ಬಲವಂತವಾಗಿ ವಶಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ. 10.ಎತ್ತಿನಹೊಳೆ ಯೋಜನೆಯ ಅವೈಙ್ಞಾನಿಕ ಕಾಮಗಾರಿ ವಿರೋಧಿಸಿ. ಒಂದು ದಿನದ ಜನಾಗ್ರಹ

ಹುಳಿಯಾರಿನ ಭಾವನ ರಾಜ್ಯಮಟ್ಟಕ್ಕೆ ಆಯ್ಕೆ

ಹುಳಿಯಾರಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ. N.T.ಭಾವನ ದಿ. 27.9.2022 ರಂದು ತುಮಕೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ  ಉದ್ದ ಜಿಗಿತ ಮತ್ತು ತ್ರಿವಿಧ ಜಿಗಿತ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ . ವಿಜೇತ ವಿದ್ಯಾರ್ಥಿನಿಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಿ.ಬಿ. ಪರಮೇಶ್ವರ ,ಕ್ರೀಡಾ ಕಾರ್ಯದರ್ಶಿ ಟಿ.ಎಂ.ಶಿವಣ್ಣ, ಸಿ.ಜಿ.ಶೈಲಜ ಹಾಗೂ ಉಪನ್ಯಾಸಕರುಗಳು ಅಭಿನಂದಿಸಿದ್ದಾರೆ.