ವಿಷಯಕ್ಕೆ ಹೋಗಿ

ನ್ಯಾಕ್ ಪೀರ್ ಕಮಿಟಿಯಿಂದ ಬಿ.ಎಂ.ಎಸ್ ಕಾಲೇಜು ಬಗ್ಗೆ ಮೆಚ್ಚುಗೆ

ಹುಳಿಯಾರಿನ ಬಿ.ಎಂ.ಎಸ್.ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದ ನ್ಯಾಕ್ ತಂಡವು 2ನೇ ದಿನವಾದ ಬುಧವಾರ ಕೂಡ ಪರಿಶೀಲನೆ ನಡೆಸಿತು.

ಮೊದಲು ಕಾಲೇಜಿನ ಕಛೇರಿಗೆ ಭೇಟಿ ನೀಡಿ ಹಲವಾರು ದಾಖಲೆ ಪರಿಶೀಲಿಸಿದರು.ವಿದ್ಯಾರ್ಥಿಗಳ ಪ್ರವೇಶಾತಿ,ಕಾಲೇಜು ಸಂಗ್ರಹಿಸುವ ವಿವಿಧ ಶುಲ್ಕಗಳ ಮಾಹಿತಿ,ಪ್ರವೇಶಾತಿ ಸಮಯದಲ್ಲಿ ನೀಡಲಾಗುವ ಕಾಲೇಜು ಕೈಪಿಡಿ,ವಿದ್ಯಾರ್ಥಿಗಳಿಗೆ ನೀಡಲಾಗುವ ಶಿಷ್ಯವೇತನ, ಪರೀಕ್ಷಾ ಸಂಬಂಧಿತ ಶುಲ್ಕ,ಪ್ರವೇಶ ಪತ್ರ, ಅಂಕಪಟ್ಟಿ ವಿತರಣೆ....ಹೀಗೆ ಹಲವಾರು ವಿಷಯಗಳ ಕುರಿತು ದಾಖಲೆ ಪರಿಶೀಲಿಸಿದರು.ಕೆಲವು ಸಲಹೆ-ಸೂಚನೆ ನೀಡಿದರು.ಕಾಲೇಜು ಕೈಪಿಡಿ ಪುಸ್ತಕ ಆಕರ್ಷಣಿಯವಾಗಿರಲಿ ಎಂದು ಸಲಹೆ ನೀಡಿದರು.

IQAC ಸಂಚಾಲಕರಾದ ಡಾ.ಸುಷ್ಮಾ ಎಲ್.ಬಿರಾದಾರ್ ಅವರು ನ್ಯಾಕ್ ಪೀರ್ ತಂಡಕ್ಕೆ ಸೂಕ್ತ ದಾಖಲೆ ಒದಗಿಸಿ ಸ್ಪಷ್ಟನೆ ನೀಡಿದರು.ವೇಳಾಪಟ್ಟಿ ಪ್ರಕಾರ ಎಲ್ಲಾ ದಾಖಲೆಗಳ ಪರಿಶೀಲನೆ ಹಾಗೂ ಸ್ಪಷ್ಟನೆ ಪಡೆದ ನಂತರ ಮುಕ್ತಾಯ ಸಭೆ ಏರ್ಪಡಿಸಲಾಯಿತು.

ಈ ಸಭೆಯಲ್ಲಿ ನ್ಯಾಕ್ ಪೀರ್ ತಂಡದ ಸದಸ್ಯರು,ಪ್ರಾಂಶುಪಾಲರು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಭಾಗವಹಿಸಿದರು.IQAC ಸಂಚಾಲಕರಾದ ಡಾ.ಸುಷ್ಮಾ ಎಲ್ ಬಿರಾದಾರ್ ಸ್ವಾಗತಿಸಿದರು.

ನ್ಯಾಕ್ ತಂಡದ ಮುಖ್ಯಸ್ಥರಾದ ಡಾ.ಕೇಸರಿ ಲಾಲ್ ವರ್ಮಾರವರು ಕಾಲೇಜಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಹೋಬಳಿ ಪ್ರದೇಶದಲ್ಲಿದ್ದರೂ ಇಲ್ಲಿನ ಪ್ರಾಂಶುಪಾಲರು ಹಾಗೂ ಅಧ್ಯಾಪಕರ ಪರಿಶ್ರಮದಿಂದ ಕಾಲೇಜು ಉತ್ತಮ ಬೆಳವಣಿಗೆ ಕಂಡಿದೆ.ಗ್ರಾಮೀಣ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದೀರಿ.ನಿಮ್ಮ ವಿದ್ಯಾರ್ಥಿಗಳು ಸಮಾಜದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ.ಕಾಲೇಜಿನ ಕೀರ್ತಿ ಎಲ್ಲೆಡೆ ಹರಡಲಿ ಎಂದು ಹಾರೈಸಿದರು.ತಮ್ಮ ಅಭಿಪ್ರಾಯ ಮಂಡನೆಯಲ್ಲಿ ವಿಶೇಷವಾಗಿ  ಡಾ.ಲೋಕೇಶ ನಾಯ್ಕ ಹಾಗೂ ಪ್ರೊ.ಶಿವಯ್ಯ ಅವರ ನೇತೃತ್ವದಲ್ಲಿ ನೀಡಿದ ಆತಿಥ್ಯದ ಬಗ್ಗೆ ಕೊಂಡಾಡಿದರು.
ನ್ಯಾಕ್ ತಂಡದ ಮತ್ತೊಬ್ಬ ಸದಸ್ಯರಾದ ಡಾ.ಜಾವೇದ್ ಅಖ್ತರ್ ಮಾತನಾಡಿ,ಕಾಲೇಜಿನ ಸಿಬ್ಬಂದಿಗಳ ಕಠಿಣ ಪರಿಶ್ರಮ,ಕಾಲೇಜಿನ ಹಾಗೂ ವಿದ್ಯಾರ್ಥಿಗಳ ಬಗೆಗಿನ ಕಾಳಜಿ,ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರು ಸಮಾಜದ ಆಸ್ತಿ.ಸಮಾಜಕ್ಕೆ ಒಳ್ಳೆಯ ಪ್ರಜೆಗಳು ನೀಡುವುದು ನಮ್ಮ ಕರ್ತವ್ಯ. ನಾವು ನಂಬಿರುವ ದೇವರಿಗೆ ನಾವು ಮಾಡಿರುವ ಕೆಲಸದ ಲೆಕ್ಕ ಒಪ್ಪಿಸಬೇಕಾಗುತ್ತದೆ.ಹೀಗಾಗಿ ನಮ್ಮ ನಮ್ಮ ಆತ್ಮಸಾಕ್ಷಿಯಿಂದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ನ್ಯಾಕ್ ತಂಡದ ಮತ್ತೊಬ್ಬ ಸದಸ್ಯ ಡಾ.ಪ್ರಕಾಶ್ ಬನ್ಮೇರು ಅಧ್ಯಾಪಕರೊಂದಿಗೆ ಅನೌಪಚಾರಿಕವಾಗಿ ಮಾತನಾಡುತ್ತಾ, ಅಧ್ಯಾಪಕರು ಸಂಶೋಧನಾ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಬೇಕು.ಹೆಚ್ಚು ಲೇಖನ,ಪುಸ್ತಕ ಪ್ರಕಟಿಸಬೇಕು ಎಂದು ಸಲಹೆ ನೀಡಿದರು.ಕಾಲೇಜಿಗೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯಗಳು ಒದಗಿಸುವಂತೆ ಕಾಲೇಜು ಅಭಿವೃದ್ಧಿ ಸಮಿತಿಗೆ ಒತ್ತಾಯಿಸಬೇಕು ಎಂದು ಕಿವಿಮಾತು ಹೇಳಿದರು.ನ್ಯಾಕ್ ನ ಮಾದರಿಗೆ ಅನುಗುಣವಾಗಿ ದಾಖಲೆಗಳ ನಿರ್ವಹಣೆ ಮಾಡಿದ್ದಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಗ್ರೇಡ್ ಪಡೆಯಲು ಅನುಕೂಲವಾಗಬಹುದು ಎಂದು ತಿಳಿಸಿದರು. 

ಪ್ರಾಂಶುಪಾಲರಾದ ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ ನಮ್ಮ ಕಾಲೇಜಿನಲ್ಲಿ ಎಲ್ಲಾ ಸಿಬ್ಬಂದಿಗಳು ಒಂದು ತಂಡವಾಗಿ ಕೆಲಸ ಮಾಡಿದ್ದೇವೆ.ಅದು ನಮ್ಮ ಯಶಸ್ಸಿನ ಮೂಲಮಂತ್ರ ಎಂದು ಅಭಿಪ್ರಾಯಪಟ್ಟರು.

IQAC ಸಹ ಸಂಚಾಲಕರಾದ ಶ್ರೀ  ಮಲ್ಲಿಕಾರ್ಜುನರವರು ಎಲ್ಲರಿಗೂ ವಂದಿಸಿದರು.

---------------------------------

ಜಾಹಿರಾತು

ಹುಳಿಯಾರಿನಲ್ಲಿ ವೈದ್ಯಕೀಯ ಸೇವೆಗೆ ಹೆಸರಾಗಿರುವ ಕಲ್ಬತರು ಆಸ್ಪತ್ರೆಗೆ ಪ್ರತಿ ಶುಕ್ರವಾರ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು,  ಬಂಜೆತನ ನಿವಾರಣಾ ತಜ್ಞರು, ಭೇಟಿ ಸೌಲಭ್ಯ ಕಲ್ಪಿಸಲಾಗಿದೆ.  

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.