ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಪಂಚಾಯಿತಿ ಮಳಿಗೆಯ ಕೋರ್ಟ್ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಿ: ಎಸ್ಆರ್‌ಎಸ್ ದಯಾನಂದ್

ಹುಳಿಯಾರು ಪಟ್ಟಣ ಪಂಚಾಯಿತಿಗೆ ಸೇರಿದ 52 ಮಳಿಗೆಗಗಳಿಗೂ ಕೋರ್ಟ್ ತಡೆಯಾಜ್ಞೆ ಇದೆ ಎಂದು ಅಧಿಕಾರಿಗಳು ಕಳೆದ ಮೂರು ವರ್ಷದಿಂದಲೂ ಹೇಳುತ್ತಾ ಬಂದಿದ್ದು, ಇದರಿಂದಾಗಿ ಪಂಚಾಯ್ತಿಗೆ ಬರಬೇಕಿದ್ದ ಲಕ್ಷಾಂತರ ರೂಪಾಯಿ ಆದಾಯದ ಮೂಲಕ್ಕೆ ಕುತ್ತಾಗಿದ್ದು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಈ ಕೂಡಲೇ ಸಂಬಂಧಿಸಿದ ವಕೀಲರನ್ನು ಸಂಪರ್ಕಿಸಿ ತಡೆಯಾಜ್ಞೆ ತೆರವು ಮಾಡಿಸಲು ಕ್ರಮಕೈಗೊಳ್ಳಿ ಎಂದು ಪಟ್ಟಣ ಪಂಚಾಯಿತಿ ಸದಸ್ಯ ಎಸ್ಆರ್‌ಎಸ್ ದಯಾನಂದ್ ಸೇರಿದಂತೆ ಹಲವು ಸದಸ್ಯರು ಆಗ್ರಹಿಸಿದರು.
ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಬುಧವಾರ ನಡೆದ ಪ್ರಥಮ ಸಾಮಾನ್ಯ ಸಭೆಯಲ್ಲಿ ಪಂಚಾಯಿತಿ ಮಳಿಗೆಗಳ ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಹುಳಿಯಾರು ಪಟ್ಟಣ ಪಂಚಾಯಿತಿ ಮಳಿಗೆಯ ಕೋರ್ಟ್ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಿ

ಹುಳಿಯಾರು ಪಟ್ಟಣ ಪಂಚಾಯಿತಿಗೆ ಸೇರಿದ 52 ಮಳಿಗೆಗಳಿದ್ದು, ಕಳೆದ ಹಲವು ದಶಕಗಳಿಂದಲೂ ಹರಾಜು ಪ್ರಕ್ರಿಯೆ ನಡೆಯದೆ, ಆಗ ಹರಾಜಿನಲ್ಲಿ ಕೊಂಡಿದ್ದ ವರ್ತಕರುಗಳೇ ಈಗಲೂ ಮುಂದುವರೆದಿದ್ದು, ಪಂಚಾಯಿತಿ ಕರಾರಿನ ಅವಧಿ ಮುಗಿದಿದ್ದ ಇವರನ್ನು ತೆರವುಗೊಳಿಸಿ ಮರು ಹರಾಜು ಪ್ರಕ್ರಿಯೆ ಮಾಡುವ ಸಂದರ್ಭದಲ್ಲಿ ಇವರುಗಳು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದ ಸಂಬಂಧ ಇದುವರೆಗೂ ಪಂಚಾಯಿತಿಗೆ ಲಕ್ಷಾಂತರ ರೂಪಾಯಿ ಆದಾಯಕ್ಕೆ ಕುತ್ತು ಬಂದಿದೆ. ಅಧಿಕಾರಿಗಳು ಹರಾಜು ಪ್ರಕ್ರಿಯೆ ತೆರವು ಮಾಡಿಸುವಲ್ಲಿ ನಿರಾಸಕ್ತಿ ತಾಳಿದ್ದು, ಕಳೆದ ಮೂರು ವರ್ಷಗಳಿಂದಲೂ ತಡೆಯಾಜ್ಞೆ ತೆರವುಗೊಳಿಸಲು ಮುಂದಾಗದ ಪರಿಣಾಮ ಅದೇ ವ್ಯಾಪಾರಿಗಳು ಇದುವರೆಗೂ ಮುಂದುವರೆದಿದ್ದು ಈಗಲಾದರೂ ಕೋರ್ಟ್ ತಡೆಯಾಜ್ಞೆ ತೆರವುಗೊಳಿಸಲು ಮುಂದಾಗಿ ಮಳಿಗೆದಾರರನ್ನು ತೆರವುಗೊಳಿಸಬೇಕೆಂದು  ದಯಾನಂದ್, ಫ್ರೂಟ್ ಸಿದ್ದಿಕ್, ಗೀತಾ ಅಶೋಕ್ ಬಾಬು, ರಾಜು ಬಡಗಿ, ದಸ್ತಗೀರ್ ಸಾಬ, ಜಹೀರ್ ಸಾಬ್ ,ಮಹಮದ್ ಜುಬೇರ್ ಮತ್ತಿತರರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರನ್ನು ಒತ್ತಾಯಿಸಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್ ಅವರನ್ನು ಯಾವಾಗ ಈ ಬಗ್ಗೆ ಪ್ರಶ್ನಿಸಿದರೂ ಸಹ ಕೋರ್ಟ್ ನಲ್ಲಿ ತಡೆಯಾಜ್ಞೆ ಇರುವ ವಿಚಾರವಾಗಿರುವುದರಿಂದ ನಾನು  ಪ್ರತಿಕ್ರಿಯೆ ನೀಡಲಾರೆ ಎನ್ನುವ ಸಬೂಬು ಹೇಳುತ್ತಲೇ ಬಂದಿದ್ದಾರೆ.ಆದರೆ ಬಾಡಿಗೆಯನ್ನು ಯಾರ ಗಮನಕ್ಕೂ ಬಾರದಂತೆ ಮೂರು ಸಾವಿರ ರೂಪಾಯಿಗೆ ಏರಿಕೆ ಮಾಡಿ ಪಟ್ಟಣ ಪಂಚಾಯಿತಿ ಖಾತೆಗೆ ಬ್ಯಾಂಕ್ ಮೂಲಕ ಜಮಾವಣೆ ಮಾಡಿಸಿಕೊಳ್ಳುತ್ತಾ ಬಂದಿದ್ದು ಇದು ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದಂತಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ಮಳಿಗೆ ವಿಚಾರ ಪ್ರಸ್ತಾಪ ಮಾಡಿದಾಗಲೆಲ್ಲಾ ಸದಸ್ಯರುಗಳಿಗೆ ತಪ್ಪು ಮಾಹಿತಿ ನೀಡುತ್ತ ಬಂದಿರುವ ಮುಖ್ಯಾಧಿಕಾರಿಗಳು ಒಟ್ಟು 52 ಮಳೆಗೆಗಳ ಪೈಕಿ ಕೇವಲ 22 ಮಳಿಗೆಗೆ  ತಡೆಯಾಜ್ಞೆ ಇದ್ದರೂ ಸಹ ಉಳಿದ ಮಳಿಗೆಗಳನ್ನು ಹರಾಜು ಮಾಡಲು ಮುಂದಾಗದಿರುವುದು ಅನುಮಾನಕ್ಕೆ ಕಾರಣವಾಗಿದೆ.ಅಲ್ಲದೆ ₹1000 ಇದ್ದ ಬಾಡಿಗೆಯನ್ನು ₹3000ಕ್ಕೆ ಯಾರ ಗಮನಕ್ಕೂ ಬಾರದಂತೆ ಏರಿಕೆ ಮಾಡಿದ್ದು ಇದನ್ನು ಪ್ರಶ್ನಿಸಿದರೆ ಮೌನವಾಗಿರುತ್ತಾರೆ. ದಿನ ಸಭೆಯಲ್ಲಿ ಈ ಬಗ್ಗೆ ಪ್ರಶ್ನಿಸಿದರು ಸಹ ಈ ಬಗ್ಗೆ ನನಗೇನು ತಿಳಿದಿಲ್ಲ ಎನ್ನುತ್ತಾರೆ. ಪಟ್ಟಣ ಪಂಚಾಯಿತಿ ಖಾತೆ ಆನ್ಲೈನಿನಲ್ಲಿ ಇದ್ದು ಮಳಿಗೆದಾರರು ಅದರ ಮೂಲಕ ಹಣ ಕಟ್ಟಿದ್ದಾರೆ ಎಂದು ತಿಳಿಸುವ ಇವರು, ಕೋರ್ಟ್ ನಲ್ಲಿ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಮಳಿಗೆ ಬಾಡಿಗೆಯನ್ನು ಪ್ರತ್ಯೇಕವಾಗಿ ಇಡಬೇಕಾಗಿತ್ತು. ಅಂಗಡಿಗಳನ್ನು ಮರು ಹರಾಜು ಮಾಡುವ ನಿಟ್ಟಿನಲ್ಲಿ ಈ ಕೂಡಲೇ ಸಂಬಂಧಪಟ್ಟ ವಕೀಲರುಗಳನ್ನು ಸಂಪರ್ಕಿಸಿ  ಮುಂದಿನ ಮಂಗಳವಾರದ ಸಭೆಯಲ್ಲಿ ಪೂರಮಾಹಿತಿಯನ್ನು ನೀಡಬೇಕೆಂದು ಅವರು ಒತ್ತಾಯಿಸಿದರು.
ರಾಜು ಬಡಗಿ ಮಾತನಾಡಿ ಪಂಚಾಯಿತಿಗೆ ಸೇರಿದ ಹಲವು ವಾಣಿಜ್ಯ ಮಳಿಗೆಗಳು ಕಳೆದ ಮೂವತ್ತು ನಲವತ್ತು ವರ್ಷಗಳ ಹಿಂದೆ ನಿರ್ಮಾಣ ಮಾಡಿದ್ದು ಇದೀಗ ಕೆಲವೊಂದು ಮಳಿಗೆಗಳು ಶಿಥಿಲಾವಸ್ಥೆ ತಲುಪಿದೆ.ಅಲ್ಲಿನ ವ್ಯಾಪಾರಿಗಳು ಜೀವಭಯದಿಂದ ವ್ಯಾಪಾರ ಮಾಡುವ ಸ್ಥಿತಿ ಇದೆ.ಹಾಗಾಗಿ ಪಿಡಬ್ಲ್ಯೂಡಿ ಇಂಜಿನಿಯರ್ ಮೂಲಕ ಕಟ್ಟಡದ ಗುಣಮಟ್ಟವನ್ನು ಪರೀಕ್ಷೆ ಮಾಡಿಸಿ ಶಿಥಿಲವಾಗಿದ್ದ  ಅವುಗಳನ್ನು ಕೆಡವಿಸಿ ಹೊಸದಾಗಿ ವಾಣಿಜ್ಯ ಮಳಿಗೆ ನಿರ್ಮಿಸಲು ನಿರ್ಣಯ ಕೈಗೊಳ್ಳಲು ಒತ್ತಾಯಿಸಿದರು.
ಪಟ್ಟಣ ಪಂಚಾಯಿತಿಗೆ ಸೇರಿದ ಮಳಿಗೆಗಳ ವಿಚಾರವಾಗಿ ಪೂರ್ಣ ಮಾಹಿತಿಯನ್ನು ಮುಂದಿನ ಸಭೆಯಲ್ಲಿ ನೀಡುವಂತೆ ಅಧ್ಯಕ್ಷ ಕಿರಣ್‌ ಕುಮಾರ್ ಅಧಿಕಾರಿಗಳಿಗೆ ಆದೇಶಿಸಿದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...