ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಪಂಚಾಯಿತಿ ಸಭೆ ಮಂಗಳವಾರಕ್ಕೆ ಮುಂದೂಡಿದ ಅಧ್ಯಕ್ಷ ಕಿರಣ್ ಕುಮಾರ್

ಅಧಿಕಾರಿಗಳ ಮೌನ, ದಾಖಲೆಗಳ ಕೊರತೆ ಹಾಗೂ ಅಸಮರ್ಪಕ ಉತ್ತರಗಳಿಂದ ಬೇಸತ್ತು, ಸಭೆ ಮುಂದೂಡಿದ ಅಧ್ಯಕ್ಷ ಕಿರಣ ಕುಮಾರ್
ಹುಳಿಯಾರು:ಹುಳಿಯಾರು ಪಟ್ಟಣ ಪಂಚಾಯಿತಿಯ ಬಹುನಿರೀಕ್ಷಿತ ಇಂದಿನ ಪ್ರಥಮ ಸಭೆಯ ಆರಂಭದಿಂದಲೂ ಸದಸ್ಯರುಗಳಿಂದ ಪ್ರಶ್ನೆಗಳ ಸುರಿಮಳೆ, ಅದಕ್ಕೆ ಸಮರ್ಪಕ ಉತ್ತರ ನೀಡಬೇಕಾಗಿದ್ದ ಅಧಿಕಾರಿಗಳ ನಿರುತ್ತರ, ಹಾಗೂ ಸದಸ್ಯರುಗಳು ಕೇಳಿದ ಪ್ರಶ್ನೆಗಳಿಗೆ ದಾಖಲೆಗಳ ಕೊರತೆಯಿಂದ ತೀವ್ರ ಅಸಮಾಧಾನಗೊಂಡ ಅಧ್ಯಕ್ಷ ಕಿರಣ್ ಕುಮಾರ್ ಸಭೆಯನ್ನು ಏಕಾಏಕಿ ಮಂಗಳವಾರಕ್ಕೆ ಮುಂದೂಡಿದರು.

ಸಭೆಯ ಆರಂಭದ ಪ್ರಥಮದಲ್ಲಿಯೇ ಹಲವರು ಸದಸ್ಯರುಗಳು ಯಾವುದೇ ಸದಸ್ಯರುಗಳಿಗೆ ಪ್ರಮಾಣ ವಚನ ಪ್ರಮಾಣವಚನ ಭೋದಿಸದೆ ಸಭೆ ನಡೆಸುವ ಹಾಗಿಲ್ಲವೆಂದು ಸ್ಪಷ್ಟವಾದ ನಿರ್ದೇಶನ ಇದ್ದರೂ ಸಹ ನೀವು ಪ್ರಮಾಣ ವಚನ ಬೋಧಿಸಿದೆ ಸಭೆ ಹೇಗೆ ಕರೆಯುತ್ತೀರಿ, ಇದು ಕಾನೂನಿನ ಉಲ್ಲಂಘನೆ ಆಗುವುದಿಲ್ಲವೇ ಎಂದು ಆರಂಭಗೊಂಡ ಪ್ರಶ್ನೆಗಳ ಸುರಿಮಳೆ, ಸಂಜೆ 5:00 ರವರೆಗೂ ನಡೆದ ಸಭೆಯಲ್ಲಿ ಪ್ರತಿಧ್ವನಿಸುತ್ತಲೇ ಇತ್ತು. 
ನಂತರ ಮುಂದುವರೆದ ಸಭೆಯಲ್ಲಿ ಖರ್ಚಿನ ಲೆಕ್ಕಾಚಾರದಲ್ಲಿ ಬಿಲ್ ನೀಡಲು ವಿಫಲರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪ್ರಶ್ನೆ ಕೇಳಿದ ಸದಸ್ಯರಿಗೆ ಬಿಲ್ ಹುಡುಕುವ ನೆಪದಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಸಭೆಯಿಂದ ಆಚೆಗುಳಿದರು. ಇದರಿಂದ ಸಿಟ್ಟಿಗೆದ್ದ ಸದಸ್ಯರು ಅಧಿಕಾರಿಗಳು ನಿಮ್ಮ ಮಾತು ಕೇಳದಿದ್ದರೆ ಹೇಗೆ ಎಂದು ಅಧ್ಯಕ್ಷರ ವಿರುದ್ಧ ಹರಿಹಾಯ್ದರು.
ನಂತರ ಹಾಗೂಹೀಗೂ ಆರಂಭವಾದ ಸಭೆಯಲ್ಲಿ ನಕಲಿ ಸಹಿ ಹಾಕಿ ಖಾತೆ ಮಾಡಿಕೊಟ್ಟಿರುವ ಬಗ್ಗೆ ಆರೋಪಗಳ ಸುರಿಮಳೆಯೇ ನಡೆಯಿತು. ತಮ್ಮ ಸಹಿಯನ್ನು ಪೋರ್ಜರಿ ಮಾಡಿರುವ ಬಗ್ಗೆ ಮಾಹಿತಿ ನೀಡಲು ಖುದ್ದು ಹಿಂದಿನ ಪಿಡಿಓ ಸಿದ್ದರಾಮಯ್ಯನವರೇ ಸಭೆಗೆ ಆಗಮಿಸಿದ್ದರು.ಆಗ ಉತ್ತರಿಸಬೇಕಿದ್ದ ಇಬ್ಬರು ಸಿಬ್ಬಂದಿಗಳು  ಸ್ಥಳದಿಂದಲೇ ಪರಾರಿಯಾಗಿದ್ದು ಮತ್ತಷ್ಟು ಗೊಂದಲ ಸೃಷ್ಟಿಸಲು ಕಾರಣವಾಯಿತು. ಪಿಡಿಓ ಅವರ ಸ್ಪಷ್ಟನೆಗೆ ನೌಕರರ ಉತ್ತರ ಕೇಳಬೇಕಾಗಿದ್ದ ಮುಖ್ಯಾಧಿಕಾರಿ ಇದು ನಮ್ಮ ಸಮಯದಲ್ಲಿ ಆಗಿರುವ ದಾಖಲೆಗಳಲ್ಲ,ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳಿದ ಮಾತು ಸಭೆಯಲ್ಲಿ ಮತ್ತಷ್ಟು ಗೋಜಲು ಸೃಷ್ಟಿಸಿತು.
ತದನಂತರ ನವಂಬರ್ ಮಾಹೆಯ ಜಮಾ ಖರ್ಚಿನ ಲೆಕ್ಕದಲ್ಲಿ ಹತ್ತು ಸಾವಿರ ರೂಪಾಯಿ ಬಾಡಿಗೆ ಎಂದು ಬರೆದಿರುವ ವಿಚಾರಕ್ಕೆ ಸ್ಪಷ್ಟೀಕರಣ ಕೇಳಿದ ಸದಸ್ಯರುಗಳು, ಈ ಬಗ್ಗೆ ಗಂಟೆಗಟ್ಟಲೆ ಪ್ರಶ್ನೆಗಳ ಸುರಿಮಳೆಗೈದರು. ಮಳಿಗೆ ಹರಾಜು ಪ್ರಕ್ರಿಯೆ ಕೋರ್ಟ್ನಲ್ಲಿ ಇರುವುದರಿಂದ ಇದಕ್ಕೆ ಉತ್ತರಿಸಿದಲ್ಲಿ ಕೋರ್ಟ್ ನಿಂದನೆ ಎದುರಿಸಬೇಕಾಗುತ್ತದೆ, ಹಾಗಾಗಿ ಇದಕ್ಕೆ ಯಾವುದೇ ಉತ್ತರ ನೀಡಲು ನಾನು ಸಿದ್ಧನಿಲ್ಲ ಎಂದು ಮುಖ್ಯಾಧಿಕಾರಿಗಳು ಮೌನ ವಹಿಸಿದ್ದರಿಂದ ಮತ್ತಷ್ಟು ಉದ್ವಿಗ್ನಗೊಂಡ ಸದಸ್ಯರು ಹೃದಯ ವಿಚಾರಕ್ಕೆ ಗಂಟೆಗಟ್ಟಲೆ ಜಟಾಪಟಿ ನಡೆಸಿದರು. 
ಅಧ್ಯಕ್ಷ ಕಿರಣ್ ಕುಮಾರ್ ಸಹ ಮುಖ್ಯಾಧಿಕಾರಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಮರ್ಪಕ ಉತ್ತರ ನೀಡಲು ಆಗ್ರಹಿಸಿದ್ದಾಗ್ಯೂ ಸಹ ಗೋಜಲು ಬಗೆಹರಿಯದೆ, ಬೇಸತ್ತ ಅಧ್ಯಕ್ಷರು ಸಭೆಯನ್ನು ಮಂಗಳವಾರಕ್ಕೆ ಮುಂದೂಡಿದರು.
ನನಗೆ ಅವಮಾನ ಮಾಡಲೆಂದೇ ಇಂತಹ ವರ್ತನೆ ತೋರುತ್ತಿದೀರಾ ಎಂದು ರೊಚ್ಚಿಗೆದ್ದ ಅಧ್ಯಕ್ಷರು ಮಂಗಳವಾರದ ಸಭೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅಷ್ಟರೊಳಗೆ ನೀವು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ನಾನೇ ಖುದ್ದಾಗಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಸಮರ್ಪಕ ಮಾಹಿತಿ ನೀಡುವುದಾಗಿ ಸದಸ್ಯರುಗಳಿಗೆ ಭರವಸೆ ನೀಡಿ ಇಂದಿನ ಸಭೆಯನ್ನು ಮುಂದೂಡಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಶೃತಿ ಸನತ್ ಸೇರಿದಂತೆ ಒಟ್ಟು 16ಜನ ಸದಸ್ಯರುಗಳು ಹಾಗೂ ಮೂರು ಜನ ನಾಮಿನಿ ಸದಸ್ಯರುಗಳು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...