ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಪಂಚಾಯಿತಿ ಸಭೆ ಮಂಗಳವಾರಕ್ಕೆ ಮುಂದೂಡಿದ ಅಧ್ಯಕ್ಷ ಕಿರಣ್ ಕುಮಾರ್

ಅಧಿಕಾರಿಗಳ ಮೌನ, ದಾಖಲೆಗಳ ಕೊರತೆ ಹಾಗೂ ಅಸಮರ್ಪಕ ಉತ್ತರಗಳಿಂದ ಬೇಸತ್ತು, ಸಭೆ ಮುಂದೂಡಿದ ಅಧ್ಯಕ್ಷ ಕಿರಣ ಕುಮಾರ್
ಹುಳಿಯಾರು:ಹುಳಿಯಾರು ಪಟ್ಟಣ ಪಂಚಾಯಿತಿಯ ಬಹುನಿರೀಕ್ಷಿತ ಇಂದಿನ ಪ್ರಥಮ ಸಭೆಯ ಆರಂಭದಿಂದಲೂ ಸದಸ್ಯರುಗಳಿಂದ ಪ್ರಶ್ನೆಗಳ ಸುರಿಮಳೆ, ಅದಕ್ಕೆ ಸಮರ್ಪಕ ಉತ್ತರ ನೀಡಬೇಕಾಗಿದ್ದ ಅಧಿಕಾರಿಗಳ ನಿರುತ್ತರ, ಹಾಗೂ ಸದಸ್ಯರುಗಳು ಕೇಳಿದ ಪ್ರಶ್ನೆಗಳಿಗೆ ದಾಖಲೆಗಳ ಕೊರತೆಯಿಂದ ತೀವ್ರ ಅಸಮಾಧಾನಗೊಂಡ ಅಧ್ಯಕ್ಷ ಕಿರಣ್ ಕುಮಾರ್ ಸಭೆಯನ್ನು ಏಕಾಏಕಿ ಮಂಗಳವಾರಕ್ಕೆ ಮುಂದೂಡಿದರು.

ಸಭೆಯ ಆರಂಭದ ಪ್ರಥಮದಲ್ಲಿಯೇ ಹಲವರು ಸದಸ್ಯರುಗಳು ಯಾವುದೇ ಸದಸ್ಯರುಗಳಿಗೆ ಪ್ರಮಾಣ ವಚನ ಪ್ರಮಾಣವಚನ ಭೋದಿಸದೆ ಸಭೆ ನಡೆಸುವ ಹಾಗಿಲ್ಲವೆಂದು ಸ್ಪಷ್ಟವಾದ ನಿರ್ದೇಶನ ಇದ್ದರೂ ಸಹ ನೀವು ಪ್ರಮಾಣ ವಚನ ಬೋಧಿಸಿದೆ ಸಭೆ ಹೇಗೆ ಕರೆಯುತ್ತೀರಿ, ಇದು ಕಾನೂನಿನ ಉಲ್ಲಂಘನೆ ಆಗುವುದಿಲ್ಲವೇ ಎಂದು ಆರಂಭಗೊಂಡ ಪ್ರಶ್ನೆಗಳ ಸುರಿಮಳೆ, ಸಂಜೆ 5:00 ರವರೆಗೂ ನಡೆದ ಸಭೆಯಲ್ಲಿ ಪ್ರತಿಧ್ವನಿಸುತ್ತಲೇ ಇತ್ತು. 
ನಂತರ ಮುಂದುವರೆದ ಸಭೆಯಲ್ಲಿ ಖರ್ಚಿನ ಲೆಕ್ಕಾಚಾರದಲ್ಲಿ ಬಿಲ್ ನೀಡಲು ವಿಫಲರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪ್ರಶ್ನೆ ಕೇಳಿದ ಸದಸ್ಯರಿಗೆ ಬಿಲ್ ಹುಡುಕುವ ನೆಪದಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಸಭೆಯಿಂದ ಆಚೆಗುಳಿದರು. ಇದರಿಂದ ಸಿಟ್ಟಿಗೆದ್ದ ಸದಸ್ಯರು ಅಧಿಕಾರಿಗಳು ನಿಮ್ಮ ಮಾತು ಕೇಳದಿದ್ದರೆ ಹೇಗೆ ಎಂದು ಅಧ್ಯಕ್ಷರ ವಿರುದ್ಧ ಹರಿಹಾಯ್ದರು.
ನಂತರ ಹಾಗೂಹೀಗೂ ಆರಂಭವಾದ ಸಭೆಯಲ್ಲಿ ನಕಲಿ ಸಹಿ ಹಾಕಿ ಖಾತೆ ಮಾಡಿಕೊಟ್ಟಿರುವ ಬಗ್ಗೆ ಆರೋಪಗಳ ಸುರಿಮಳೆಯೇ ನಡೆಯಿತು. ತಮ್ಮ ಸಹಿಯನ್ನು ಪೋರ್ಜರಿ ಮಾಡಿರುವ ಬಗ್ಗೆ ಮಾಹಿತಿ ನೀಡಲು ಖುದ್ದು ಹಿಂದಿನ ಪಿಡಿಓ ಸಿದ್ದರಾಮಯ್ಯನವರೇ ಸಭೆಗೆ ಆಗಮಿಸಿದ್ದರು.ಆಗ ಉತ್ತರಿಸಬೇಕಿದ್ದ ಇಬ್ಬರು ಸಿಬ್ಬಂದಿಗಳು  ಸ್ಥಳದಿಂದಲೇ ಪರಾರಿಯಾಗಿದ್ದು ಮತ್ತಷ್ಟು ಗೊಂದಲ ಸೃಷ್ಟಿಸಲು ಕಾರಣವಾಯಿತು. ಪಿಡಿಓ ಅವರ ಸ್ಪಷ್ಟನೆಗೆ ನೌಕರರ ಉತ್ತರ ಕೇಳಬೇಕಾಗಿದ್ದ ಮುಖ್ಯಾಧಿಕಾರಿ ಇದು ನಮ್ಮ ಸಮಯದಲ್ಲಿ ಆಗಿರುವ ದಾಖಲೆಗಳಲ್ಲ,ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳಿದ ಮಾತು ಸಭೆಯಲ್ಲಿ ಮತ್ತಷ್ಟು ಗೋಜಲು ಸೃಷ್ಟಿಸಿತು.
ತದನಂತರ ನವಂಬರ್ ಮಾಹೆಯ ಜಮಾ ಖರ್ಚಿನ ಲೆಕ್ಕದಲ್ಲಿ ಹತ್ತು ಸಾವಿರ ರೂಪಾಯಿ ಬಾಡಿಗೆ ಎಂದು ಬರೆದಿರುವ ವಿಚಾರಕ್ಕೆ ಸ್ಪಷ್ಟೀಕರಣ ಕೇಳಿದ ಸದಸ್ಯರುಗಳು, ಈ ಬಗ್ಗೆ ಗಂಟೆಗಟ್ಟಲೆ ಪ್ರಶ್ನೆಗಳ ಸುರಿಮಳೆಗೈದರು. ಮಳಿಗೆ ಹರಾಜು ಪ್ರಕ್ರಿಯೆ ಕೋರ್ಟ್ನಲ್ಲಿ ಇರುವುದರಿಂದ ಇದಕ್ಕೆ ಉತ್ತರಿಸಿದಲ್ಲಿ ಕೋರ್ಟ್ ನಿಂದನೆ ಎದುರಿಸಬೇಕಾಗುತ್ತದೆ, ಹಾಗಾಗಿ ಇದಕ್ಕೆ ಯಾವುದೇ ಉತ್ತರ ನೀಡಲು ನಾನು ಸಿದ್ಧನಿಲ್ಲ ಎಂದು ಮುಖ್ಯಾಧಿಕಾರಿಗಳು ಮೌನ ವಹಿಸಿದ್ದರಿಂದ ಮತ್ತಷ್ಟು ಉದ್ವಿಗ್ನಗೊಂಡ ಸದಸ್ಯರು ಹೃದಯ ವಿಚಾರಕ್ಕೆ ಗಂಟೆಗಟ್ಟಲೆ ಜಟಾಪಟಿ ನಡೆಸಿದರು. 
ಅಧ್ಯಕ್ಷ ಕಿರಣ್ ಕುಮಾರ್ ಸಹ ಮುಖ್ಯಾಧಿಕಾರಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಮರ್ಪಕ ಉತ್ತರ ನೀಡಲು ಆಗ್ರಹಿಸಿದ್ದಾಗ್ಯೂ ಸಹ ಗೋಜಲು ಬಗೆಹರಿಯದೆ, ಬೇಸತ್ತ ಅಧ್ಯಕ್ಷರು ಸಭೆಯನ್ನು ಮಂಗಳವಾರಕ್ಕೆ ಮುಂದೂಡಿದರು.
ನನಗೆ ಅವಮಾನ ಮಾಡಲೆಂದೇ ಇಂತಹ ವರ್ತನೆ ತೋರುತ್ತಿದೀರಾ ಎಂದು ರೊಚ್ಚಿಗೆದ್ದ ಅಧ್ಯಕ್ಷರು ಮಂಗಳವಾರದ ಸಭೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅಷ್ಟರೊಳಗೆ ನೀವು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ನಾನೇ ಖುದ್ದಾಗಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಸಮರ್ಪಕ ಮಾಹಿತಿ ನೀಡುವುದಾಗಿ ಸದಸ್ಯರುಗಳಿಗೆ ಭರವಸೆ ನೀಡಿ ಇಂದಿನ ಸಭೆಯನ್ನು ಮುಂದೂಡಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಶೃತಿ ಸನತ್ ಸೇರಿದಂತೆ ಒಟ್ಟು 16ಜನ ಸದಸ್ಯರುಗಳು ಹಾಗೂ ಮೂರು ಜನ ನಾಮಿನಿ ಸದಸ್ಯರುಗಳು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...