ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಪಂಚಾಯಿತಿ ಸಭೆ ಮಂಗಳವಾರಕ್ಕೆ ಮುಂದೂಡಿದ ಅಧ್ಯಕ್ಷ ಕಿರಣ್ ಕುಮಾರ್

ಅಧಿಕಾರಿಗಳ ಮೌನ, ದಾಖಲೆಗಳ ಕೊರತೆ ಹಾಗೂ ಅಸಮರ್ಪಕ ಉತ್ತರಗಳಿಂದ ಬೇಸತ್ತು, ಸಭೆ ಮುಂದೂಡಿದ ಅಧ್ಯಕ್ಷ ಕಿರಣ ಕುಮಾರ್
ಹುಳಿಯಾರು:ಹುಳಿಯಾರು ಪಟ್ಟಣ ಪಂಚಾಯಿತಿಯ ಬಹುನಿರೀಕ್ಷಿತ ಇಂದಿನ ಪ್ರಥಮ ಸಭೆಯ ಆರಂಭದಿಂದಲೂ ಸದಸ್ಯರುಗಳಿಂದ ಪ್ರಶ್ನೆಗಳ ಸುರಿಮಳೆ, ಅದಕ್ಕೆ ಸಮರ್ಪಕ ಉತ್ತರ ನೀಡಬೇಕಾಗಿದ್ದ ಅಧಿಕಾರಿಗಳ ನಿರುತ್ತರ, ಹಾಗೂ ಸದಸ್ಯರುಗಳು ಕೇಳಿದ ಪ್ರಶ್ನೆಗಳಿಗೆ ದಾಖಲೆಗಳ ಕೊರತೆಯಿಂದ ತೀವ್ರ ಅಸಮಾಧಾನಗೊಂಡ ಅಧ್ಯಕ್ಷ ಕಿರಣ್ ಕುಮಾರ್ ಸಭೆಯನ್ನು ಏಕಾಏಕಿ ಮಂಗಳವಾರಕ್ಕೆ ಮುಂದೂಡಿದರು.

ಸಭೆಯ ಆರಂಭದ ಪ್ರಥಮದಲ್ಲಿಯೇ ಹಲವರು ಸದಸ್ಯರುಗಳು ಯಾವುದೇ ಸದಸ್ಯರುಗಳಿಗೆ ಪ್ರಮಾಣ ವಚನ ಪ್ರಮಾಣವಚನ ಭೋದಿಸದೆ ಸಭೆ ನಡೆಸುವ ಹಾಗಿಲ್ಲವೆಂದು ಸ್ಪಷ್ಟವಾದ ನಿರ್ದೇಶನ ಇದ್ದರೂ ಸಹ ನೀವು ಪ್ರಮಾಣ ವಚನ ಬೋಧಿಸಿದೆ ಸಭೆ ಹೇಗೆ ಕರೆಯುತ್ತೀರಿ, ಇದು ಕಾನೂನಿನ ಉಲ್ಲಂಘನೆ ಆಗುವುದಿಲ್ಲವೇ ಎಂದು ಆರಂಭಗೊಂಡ ಪ್ರಶ್ನೆಗಳ ಸುರಿಮಳೆ, ಸಂಜೆ 5:00 ರವರೆಗೂ ನಡೆದ ಸಭೆಯಲ್ಲಿ ಪ್ರತಿಧ್ವನಿಸುತ್ತಲೇ ಇತ್ತು. 
ನಂತರ ಮುಂದುವರೆದ ಸಭೆಯಲ್ಲಿ ಖರ್ಚಿನ ಲೆಕ್ಕಾಚಾರದಲ್ಲಿ ಬಿಲ್ ನೀಡಲು ವಿಫಲರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪ್ರಶ್ನೆ ಕೇಳಿದ ಸದಸ್ಯರಿಗೆ ಬಿಲ್ ಹುಡುಕುವ ನೆಪದಲ್ಲಿ ಒಂದು ಗಂಟೆಗೂ ಹೆಚ್ಚು ಸಮಯ ಸಭೆಯಿಂದ ಆಚೆಗುಳಿದರು. ಇದರಿಂದ ಸಿಟ್ಟಿಗೆದ್ದ ಸದಸ್ಯರು ಅಧಿಕಾರಿಗಳು ನಿಮ್ಮ ಮಾತು ಕೇಳದಿದ್ದರೆ ಹೇಗೆ ಎಂದು ಅಧ್ಯಕ್ಷರ ವಿರುದ್ಧ ಹರಿಹಾಯ್ದರು.
ನಂತರ ಹಾಗೂಹೀಗೂ ಆರಂಭವಾದ ಸಭೆಯಲ್ಲಿ ನಕಲಿ ಸಹಿ ಹಾಕಿ ಖಾತೆ ಮಾಡಿಕೊಟ್ಟಿರುವ ಬಗ್ಗೆ ಆರೋಪಗಳ ಸುರಿಮಳೆಯೇ ನಡೆಯಿತು. ತಮ್ಮ ಸಹಿಯನ್ನು ಪೋರ್ಜರಿ ಮಾಡಿರುವ ಬಗ್ಗೆ ಮಾಹಿತಿ ನೀಡಲು ಖುದ್ದು ಹಿಂದಿನ ಪಿಡಿಓ ಸಿದ್ದರಾಮಯ್ಯನವರೇ ಸಭೆಗೆ ಆಗಮಿಸಿದ್ದರು.ಆಗ ಉತ್ತರಿಸಬೇಕಿದ್ದ ಇಬ್ಬರು ಸಿಬ್ಬಂದಿಗಳು  ಸ್ಥಳದಿಂದಲೇ ಪರಾರಿಯಾಗಿದ್ದು ಮತ್ತಷ್ಟು ಗೊಂದಲ ಸೃಷ್ಟಿಸಲು ಕಾರಣವಾಯಿತು. ಪಿಡಿಓ ಅವರ ಸ್ಪಷ್ಟನೆಗೆ ನೌಕರರ ಉತ್ತರ ಕೇಳಬೇಕಾಗಿದ್ದ ಮುಖ್ಯಾಧಿಕಾರಿ ಇದು ನಮ್ಮ ಸಮಯದಲ್ಲಿ ಆಗಿರುವ ದಾಖಲೆಗಳಲ್ಲ,ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳಿದ ಮಾತು ಸಭೆಯಲ್ಲಿ ಮತ್ತಷ್ಟು ಗೋಜಲು ಸೃಷ್ಟಿಸಿತು.
ತದನಂತರ ನವಂಬರ್ ಮಾಹೆಯ ಜಮಾ ಖರ್ಚಿನ ಲೆಕ್ಕದಲ್ಲಿ ಹತ್ತು ಸಾವಿರ ರೂಪಾಯಿ ಬಾಡಿಗೆ ಎಂದು ಬರೆದಿರುವ ವಿಚಾರಕ್ಕೆ ಸ್ಪಷ್ಟೀಕರಣ ಕೇಳಿದ ಸದಸ್ಯರುಗಳು, ಈ ಬಗ್ಗೆ ಗಂಟೆಗಟ್ಟಲೆ ಪ್ರಶ್ನೆಗಳ ಸುರಿಮಳೆಗೈದರು. ಮಳಿಗೆ ಹರಾಜು ಪ್ರಕ್ರಿಯೆ ಕೋರ್ಟ್ನಲ್ಲಿ ಇರುವುದರಿಂದ ಇದಕ್ಕೆ ಉತ್ತರಿಸಿದಲ್ಲಿ ಕೋರ್ಟ್ ನಿಂದನೆ ಎದುರಿಸಬೇಕಾಗುತ್ತದೆ, ಹಾಗಾಗಿ ಇದಕ್ಕೆ ಯಾವುದೇ ಉತ್ತರ ನೀಡಲು ನಾನು ಸಿದ್ಧನಿಲ್ಲ ಎಂದು ಮುಖ್ಯಾಧಿಕಾರಿಗಳು ಮೌನ ವಹಿಸಿದ್ದರಿಂದ ಮತ್ತಷ್ಟು ಉದ್ವಿಗ್ನಗೊಂಡ ಸದಸ್ಯರು ಹೃದಯ ವಿಚಾರಕ್ಕೆ ಗಂಟೆಗಟ್ಟಲೆ ಜಟಾಪಟಿ ನಡೆಸಿದರು. 
ಅಧ್ಯಕ್ಷ ಕಿರಣ್ ಕುಮಾರ್ ಸಹ ಮುಖ್ಯಾಧಿಕಾರಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸಮರ್ಪಕ ಉತ್ತರ ನೀಡಲು ಆಗ್ರಹಿಸಿದ್ದಾಗ್ಯೂ ಸಹ ಗೋಜಲು ಬಗೆಹರಿಯದೆ, ಬೇಸತ್ತ ಅಧ್ಯಕ್ಷರು ಸಭೆಯನ್ನು ಮಂಗಳವಾರಕ್ಕೆ ಮುಂದೂಡಿದರು.
ನನಗೆ ಅವಮಾನ ಮಾಡಲೆಂದೇ ಇಂತಹ ವರ್ತನೆ ತೋರುತ್ತಿದೀರಾ ಎಂದು ರೊಚ್ಚಿಗೆದ್ದ ಅಧ್ಯಕ್ಷರು ಮಂಗಳವಾರದ ಸಭೆಯಲ್ಲಿ ಪೂರ್ಣ ಮಾಹಿತಿಯೊಂದಿಗೆ ಸಭೆಗೆ ಆಗಮಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಅಷ್ಟರೊಳಗೆ ನೀವು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ನಾನೇ ಖುದ್ದಾಗಿ ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ ಸಮರ್ಪಕ ಮಾಹಿತಿ ನೀಡುವುದಾಗಿ ಸದಸ್ಯರುಗಳಿಗೆ ಭರವಸೆ ನೀಡಿ ಇಂದಿನ ಸಭೆಯನ್ನು ಮುಂದೂಡಿದರು.
ಸಭೆಯಲ್ಲಿ ಉಪಾಧ್ಯಕ್ಷೆ ಶೃತಿ ಸನತ್ ಸೇರಿದಂತೆ ಒಟ್ಟು 16ಜನ ಸದಸ್ಯರುಗಳು ಹಾಗೂ ಮೂರು ಜನ ನಾಮಿನಿ ಸದಸ್ಯರುಗಳು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.