ವಿಷಯಕ್ಕೆ ಹೋಗಿ

ಹುಳಿಯಾರು ಪಟ್ಟಣ ಪಂಚಾಯಿತಿ ಸಭೆಯಲ್ಲಿ ಮುಗಿಯದ ಮಳಿಗೆ ವಿವಾದ

ಹುಳಿಯಾರು ಪಟ್ಟಣ ಪಂಚಾಯಿತಿ ಸಭೆಯಲ್ಲಿ ಮುಗಿಯದ ಮಳಿಗೆ ವಿವಾದ
ಮಳಿಗೆ ವಿಚಾರದ ಬಗ್ಗೆ ಮೌನ ಮುರಿಯದ ಮುಖ್ಯಾಧಿಕಾರಿ
ಹುಳಿಯಾರು ಪಟ್ಟಣ ಪಂಚಾಯಿತಿಗೆ ಸೇರಿದ ಮಳಿಗೆಗಳ ಮರು ಹರಾಜಿಗೆ ತಡೆಯಾಜ್ಞೆ ಇರುವುದನ್ನೇ ನೆಪಮಾಡಿಕೊಂಡು ಕಳೆದ ಮೂರು ವರ್ಷಗಳಿಂದಲೂ ಹಾಲಿ ಮಳಿಗೆದಾರರನ್ನೇ ಮುಂದುವರಿಸಿಕೊಂಡು ಬರುತ್ತಿರುವ ಬಗ್ಗೆ ಹುಳಿಯಾರು ಪಟ್ಟಣ ಪಂಚಾಯಿತಿ ಸಭೆಯಲ್ಲಿ ಸದಸ್ಯರುಗಳ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು ಮುಖ್ಯಾಧಿಕಾರಿಗಳು ಹರಾಜು ಪ್ರಕ್ರಿಯೆಗೆ ಮುಂದಾಗದೆ,ಕೋರ್ಟ್ ತಡೆಯಾಜ್ಞೆಯನ್ನು ಸಹ ತೆರವು ಮಾಡಿಸದೆ ಕಾಲಹರಣ ಮಾಡುತ್ತಿದ್ದು ಇದರಿಂದ ಪಂಚಾಯಿತಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಹುಳಿಯಾರು ಪಟ್ಟಣ ಪಂಚಾಯಿತಿಯ ಮೊದಲನೆಯ ಸಭೆಯ ಮುಂದುವರೆದ ಇಂದಿನ ಸಭೆಯಲ್ಲಿಯೂ ಮರುಕಳಿಸಿತು.
ಸಭೆಯ ಆರಂಭದಲ್ಲೇ ಪಟ್ಟಣ ಪಂಚಾಯಿತಿ ನಾಮಿನಿ ಸದಸ್ಯೆ ಗೀತಾ ಅಶೋಕ್ ಬಾಬು ಮಳಿಗೆ ವಿಚಾರವಾಗಿ ಪಟ್ಟಣ ಪಂಚಾಯಿತಿಯ ಕ್ರಮದ ಬಗ್ಗೆ ತಮ್ಮ ತೀವ್ರ ಆಕ್ಷೇಪಣೆ ವ್ಯಕ್ತಪಡಿಸಿದರು. ಮಳಿಗೆಯ ಸ್ಥಿತಿಗತಿ ಏನಾಗಿದೆ ಎಂಬುದರ ಬಗ್ಗೆ ಎಲ್ಲಾ ಸದಸ್ಯರಿಗೂ ಸಂಪೂರ್ಣ ಕಡತ ತೋರಿಸುವಂತೆಯೂ, ಹಾಗೂ ಮಳಿಗೆಯ ಕೋರ್ಟ್ ಪ್ರಕ್ರಿಯೆಯನ್ನು ನಿರ್ವಹಿಸುತ್ತಿರುವ ವಕೀಲರ ಮಾಹಿತಿಯನ್ನು ಒದಗಿಸುವಂತೆಯೂ ಪಟ್ಟುಹಿಡಿದರು. ಸರ್ಕಾರಿ ವಕೀಲರನ್ನು ನೇಮಿಸಿಕೊಳ್ಳುವುದರ ಬದಲು ಖಾಸಗಿ ವಕೀಲರನ್ನು ನೇಮಿಸಿಕೊಂಡಿರುವುದರ ಬಗ್ಗೆ ವಿವರಣೆ ಕೇಳಿದರು.
ತೀವ್ರ ಗದ್ದಲ ಏರ್ಪಟ್ಟ ನಂತರ ಮೌನ ಮುರಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್, ಸ್ಥಳೀಯ ಸಂಸ್ಥೆಗಳಲ್ಲಿ  ಸರ್ಕಾರಿ ವಕೀಲರನ್ನು ನೇಮಿಸಿಕೊಳ್ಳಲು ಅವಕಾಶವಿಲ್ಲ ಎಂದಿದ್ದಕ್ಕೆ, ಸಭೆಗೆ ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಸದಸ್ಯರುಗಳಾದ ದಯಾನಂದ್, ಸಿದ್ದಿಕ್ ,ದಸ್ತಗೀರ್, ಜಹೀರ್ ಸಾಬ್,ಬಿ.ಬಿ.ಫಾತೀಮಾ, ಬಡಗಿ ರಾಜು, ಚಂದ್ರಶೇಖರ್, ಜುಬೇರ್ ಮೊದಲಾದ ಸದಸ್ಯರು ಮುಖ್ಯಾಧಿಕಾರಿಗಳ ಮೇಲೆ ಗರಂ ಆಗಿ ಸದ್ಯ ಮಳಿಗೆಗಳ ಕಡತವನ್ನು ನಿರ್ವಹಿಸುತ್ತಿರುವ ವಕೀಲರ ಬದಲಿಗೆ ತಾವು ಬೇರೊಬ್ಬ ವಕೀಲರನ್ನು ನೇಮಿಸುವುದಾಗಿ ತಿಳಿಸಿ ಈ ಬಗ್ಗೆ ನಿರ್ಣಯ ಕೈಗೊಳ್ಳುವಂತೆ ಒತ್ತಾಯಿಸಿದರು.
ಮಳಿಗೆ ಕಟ್ಟಿದಾಗಿನಿಂದ ಇದುವರೆಗೂ ಮರು ಹರಾಜು ಮಾಡದಿರುವ ಬಗ್ಗೆ ವಾಗ್ವಾದ ನಡೆಯಿತು.ಮುಖ್ಯಾಧಿಕಾರಿಯಾದ ಮಂಜುನಾಥ್ ಮಳಿಗೆಗಳ ವಿಚಾರ ಪ್ರಸ್ತಾಪ ಮಾಡಿದಾಗಲೆಲ್ಲ ವಿಚಾರ ಕೋರ್ಟಿನಲ್ಲಿದ್ದು ನಾನು ಮಾತನಾಡುವ ಹಾಗಿಲ್ಲ ಎನ್ನುತ್ತಿದ್ದವರು, ಇದೀಗ ಕೋರ್ಟಲ್ಲಿ ತಡೆಯಾಜ್ಞೆ ಇದ್ದಾಗ್ಯೂ ಸಹ ಯಾರ ಗಮನಕ್ಕೂ ತರದೇ ಏಕಾಏಕಿ ಬಾಡಿಗೆಯನ್ನು ಹೆಚ್ಚಳ ಮಾಡಿ ಕಟ್ಟಿಸಿಕೊಳ್ಳುತ್ತಿರುವುದು ಬಗ್ಗೆ ಸದಸ್ಯ ದಯಾನಂದ್ ಆಕ್ಷೇಪ ವ್ಯಕ್ತಪಡಿಸಿ ಈ ಬಗ್ಗೆ ಸಭೆಗೆ ಉತ್ತರ ನೀಡುವಂತೆ ಒತ್ತಾಯಿಸಿದರು.
ಈ ವೇಳೆ ಮುಖ್ಯಾಧಿಕಾರಿ ಮಂಜುನಾಥ್  ಮಳಿಗೆದಾರರು ಪಂಚಾಯಿತಿಗೆ ನೇರವಾಗಿ ಬಂದು ಬಾಡಿಗೆ ಪಾವತಿ ಮಾಡುತ್ತಿಲ್ಲ.ಆನ್ಲೈನ್ನಲ್ಲಿ ಬಾಡಿಗೆ ಪಾವತಿ ಮಾಡಲು ಅವಕಾಶವಿರುವುದರಿಂದ ಅವರುಗಳು ಆನ್ಲೈನ್ನಲ್ಲಿ ಬಾಡಿಗೆ ಪಾವತಿಸುತ್ತಿದ್ದು ನಮಗೂ ಅದಕ್ಕೂ ಸಂಬಂಧವಿಲ್ಲ, ನಾವ್ಯಾರೂ ಬಾಡಿಗೆ ಪಾವತಿ ಮಾಡುವಂತೆ ಅವರನ್ನು ಕೇಳಲಿಲ್ಲ ಎಂದು ಸಮಜಾಯಿಷಿ ನೀಡಿದ್ದು ಸಭೆಯಲ್ಲಿ ಕೋಲಾಹಲ ಸೃಷ್ಠಿಸಲು ಕಾರಣವಾಯಿತು.
ಮಳಿಗೆ ಕೇಸ್ ಹೈಕೋರ್ಟಿನಲ್ಲಿ ಇದ್ದು ಇದರ ಬಗ್ಗೆ ಪರಿಶೀಲನೆ ಮಾಡಿದಾಗ ಪೆಂಡಿಂಗ್ ಎಂದೇ ಕಳೆದ ಹಲವಾರು ತಿಂಗಳಲ್ಲಿನಿಂದಲೂ ಬರುತ್ತಿದೆ, ಇದು ನಿಜಾನಾ ಎಂದು ಗೀತಾ ಅಶೋಕ್ ಬಾಬು ಪ್ರಶ್ನಿಸಿದಾಗ ಸದ್ಯ ಕರೋನ ಪರಿಸ್ಥಿತಿ ಇರುವುದರಿಂದ ಕೋರ್ಟಿನಲ್ಲಿ ಹೆಚ್ಚಿನ ಕೇಸ್‌ಗಳು ನಡೆಯುತ್ತಿಲ್ಲ, ಹಾಗಾಗಿ ಈ ಪರಿಸ್ಥಿತಿ ಇದೆ ಕಂದಾಯಾಧಿಕಾರಿ ಪ್ರದೀಪ್ ಮಾಹಿತಿ ನೀಡಿದರು.
ಸಭೆಯಲ್ಲಿ ಗಂಟೆಗಟ್ಟಲೆ ಮಳಿಗೆಯ ವಿಚಾರವಾಗಿ ವಾದ-ವಿವಾದ ನಡೆದು ಕಡೆಗೆ ಮತ್ತೊಬ್ಬ ಸದಸ್ಯ ಹೇಮಂತ್ ಮಳಿಗೆ ವಿಚಾರವಾಗಿಯೇ ಮತ್ತೊಂದು ವಿಶೇಷ ಸಭೆ ಕರೆದು,ಅಂದು ಎಲ್ಲವನ್ನು ತೀರ್ಮಾನ ಮಾಡೋಣ, ಬೇರೆ ವಕೀಲರನ್ನು ನೇಮಿಸಿ ಕೊಳ್ಳೋಣ ಎಂದು ಸಮಾಧಾನಪಡಿಸಿ ವಿವಾದಕ್ಕೆ ತೆರೆ ಎಳೆದರು.






ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...