ವಿಷಯಕ್ಕೆ ಹೋಗಿ

ಹುಳಿಯಾರು ಪಪಂ:ನಾಪತ್ತೆಯಾಗಿದ್ದ MR ಕಡತ ಕಚೇರಿಗೆ ಹಿಂದಿರುಗಿಸಿದ ಬಿಲ್ ಕಲೆಕ್ಟರ್

ಹುಳಿಯಾರು ಪಪಂ:ನಾಪತ್ತೆಯಾಗಿದ್ದ MR ಕಡತ ಹಿಂದಿರುಗಿಸಿದ ಬಿಲ್ ಕಲೆಕ್ಟರ್
ಪೊಲೀಸ್ ಠಾಣೆಗೆ ದೂರು ನೀಡುವ ಮೊದಲೇ ಪತ್ತೆಯಾದ  MR ಪುಸ್ತಕ
ಕಚೇರಿಯಿಂದ ನಾಪತ್ತೆಯಾಗಿದ್ದ MR ಕಡತವನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷರಿಗೆ ಹಿಂತಿರುಗಿಸುತ್ತಿರುವ ಪಟ್ಟಣ ಪಂಚಾಯಿತಿ ಸಿಬ್ಬಂದಿ
ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಎಂಆರ್ ಪುಸ್ತಕ ನಾಪತ್ತೆಯಾಗಿದ್ದು, ಇದೇ ಪುಸ್ತಕದಿಂದ ಹಲವಾರು ಅಕ್ರಮ ಖಾತೆಗಳನ್ನು ಲಕ್ಷಾಂತರ ರೂಪಾಯಿ ರೂಪಾಯಿ ಹಣ ಪಡೆದು ಮಾಡಲಾಗಿದೆ ಎಂಬ ಆರೋಪ ಪಂಚಾಯತಿಯ ಪ್ರಥಮ ಸಭೆಯಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಗಿ, ಕಡತ ನಾಪತ್ತೆಯಾಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ನಿರ್ಧರಿಸಿ ಇನ್ನೇನು ಹೊರಡಬೇಕು ಎನ್ನುವ ಸಮಯದಲ್ಲಿ ಕಡತದ ಸುಳಿವು ಪತ್ತೆಯಾಗಿ,ಇದಕ್ಕೆ ಕಾರಣರಾದವರು ಸಭೆಯಲ್ಲಿ ಕೈಮುಗಿದು ಕ್ಷಮೆ ಕೇಳಿದ ಪ್ರಕರಣ ಹುಳಿಯಾರು ಪಟ್ಟಣ ಪಂಚಾಯಿತಿಯಲ್ಲಿ ಜರುಗಿದೆ.
ನಡೆದಿದ್ದೇನು ರಂಗಯ್ಯ ಬಿನ್ ಲೇಟ್ ನರಸಿಂಹಯ್ಯ ಎಂಬವರಿಗೆ ಸೇರಿದ ಆರ್‌ಸಿಸಿ ಮನೆಗೆ ಮಾಡಿರುವ ಖಾತೆ ಅಕ್ರಮವಾಗಿದೆ ಎಂದು ಹಾಗೂ ಇದನ್ನು 2018 -19 ನೇ ಸಾಲಿನಲ್ಲಿ ವಿತರಿಸಲಾಗಿದ್ದು ಆಗ ಪಟ್ಟಣ ಪಂಚಾಯಿತಿ ಅಸ್ತಿತ್ವದಲ್ಲಿತ್ತು. ಸದ್ಯ ವಿತರಿಸಲಾಗಿರುವ ನಮೂನೆ 11ರಲ್ಲಿ ಇರುವ ಸಹಿಯು ಈ ಹಿಂದೆ 2016 ನೇ ಸಾಲಿನಲ್ಲಿ ಹುಳಿಯಾರು ಗ್ರಾಮ ಪಂಚಾಯಿತಿಯಲ್ಲಿ PDO ಆಗಿ ಕಾರ್ಯನಿರ್ವಹಿಸಿದ್ದ ಸಿದ್ದರಾಮಯ್ಯನವರದಾಗಿದ್ದು ಇದು ಹೇಗೆ ಸಾಧ್ಯ, PDO ಸಿದ್ದರಾಮಯ್ಯನವರ ಸಹಿ ನಕಲು ಮಾಡಿರುವವರು ಯಾರು, ಸದರಿ MR ಪುಸ್ತಕ ಎಲ್ಲಿದೆ, ಖಾತೆ ಮಾಡಿಕೊಟ್ಟಿರುವವರು ಯಾರು, ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಹುಳಿಯಾರು ಪಟ್ಟಣ ಪಂಚಾಯಿತಿ ಪ್ರಥಮ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆದು ಇದೇ ಕಾರಣಕ್ಕಾಗಿಯೇ ಸಭೆ ಮುಂದೂಡಲ್ಪಟ್ಟಿತ್ತು.
ಅಂದು ನಡೆದ ಚರ್ಚೆಯಲ್ಲಿ ಒಟ್ಟು ಸರಿಸುಮಾರು 60 ಖಾತೆಗಳು ನಕಲಿ ಆಗಿರಬಹುದು ಎಂಬುದು ವಿವಾದಕ್ಕೆ ಕಾರಣವಾಗಿ, ಸದರಿ ಎಂಆರ್ ಪುಸ್ತಕ ಪಟ್ಟಣ ಪಂಚಾಯಿತಿಯ ಕಡತಗಳ ದಾಖಲೆಯಲ್ಲಿ ಇಲ್ಲದಿರುವುದು, ಹಾಗೂ ಅದೇ ಎಂಆರ್ ಪುಸ್ತಕದಿಂದ ಪಟ್ಟಣ ಪಂಚಾಯಿತಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿರುವುದು ಸಮಸ್ಯೆ ಇನ್ನಷ್ಟು ಬಿಗಡಾಯಿಸಲು ಕಾರಣವಾಗಿತ್ತು.
ಈ ಹಿಂದೆ ಹುಳಿಯಾರು ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಗೆ ಮೇಲ್ದರ್ಜೆಗೇರಿ, ಕಡತಗಳ ಹಸ್ತಾಂತರ ಸಮಯದಲ್ಲಿ ಈ ಕಡತ ನಮಗೆ ಒಪ್ಪಿಸಿಲ್ಲ ಎಂಬುದು ಮುಖ್ಯಾಧಿಕಾರಿಗಳ ವಾದವಾಗಿದ್ದು, ಹಾಗಾಗಿ ನಕಲಿ ಖಾತೆಗೂ ನನಗೂ ಸಂಬಂಧವಿಲ್ಲ ಎಂದು ಮೌನಕ್ಕೆ ಶರಣಾಗಿದ್ದರು. ಅಲ್ಲದೆ ಆ ಸಮಯದಲ್ಲಿ PDO ಆಗಿದ್ದ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಈ ಬಗ್ಗೆ ವಾಸ್ತವಾಂಶ ಏನು ಎಂಬುದರ ಬಗ್ಗೆ ಸ್ಪಷ್ಟನೆ ಸಹ ಕೇಳಿರುವುದರಿಂದ, ಇದಕ್ಕೂ ತಮಗೂ ಸಂಬಂಧವಿಲ್ಲದಂತೆ ಮೌನವಹಿಸಿ ಕುಳಿತಿದ್ದರು.
ಮಹತ್ವದ ಕಡತ ನಾಪತ್ತೆಯಾಗಿರುವುದು ಒಂದೆಡೆಯಾದರೆ, ಇದೇ ಸೀರಿಯಲ್ ನಂಬರ್ ನಲ್ಲಿ ಹಣ ಪಡೆದು ಅಕ್ರಮ ಖಾತೆ ಮಾಡಿಕೊಟ್ಟಿರುವುದು ಕೂಡ ಬಯಲಿಗೆ ಬಂದ ಹಿನ್ನೆಲೆಯಲ್ಲಿ , ನಾಪತ್ತೆಯಾದ ಕಡತದ ಹಿಂದಿರುವ ವ್ಯಕ್ತಿಗಳು ಯಾರು ಎಂಬುದನ್ನು ಪತ್ತೆ ಮಾಡಬೇಕು ಹಾಗೂ ಅವರು ಮಾಡಿಕೊಟ್ಟಿರುವ ಅಕ್ರಮ ಖಾತೆಗಳನ್ನು ರದ್ದು ಮಾಡಬೇಕು ಎಂಬುದು ಚರ್ಚಿತವಾಗಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ಪ್ರಕರಣವನ್ನು ಮೇಲಾಧಿಕಾರಿಗಳಿಗೆ ವರ್ಗಾವಣೆ ಮಾಡಲು ನಿರ್ಧರಿಸಲಾಯಿತು.
ನಂತರ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಎಂಆರ್ ಪುಸ್ತಕ ಕಚೇರಿಯಲ್ಲಿಯೇ ಇದೆ,ಬೀರುವಿನಲ್ಲಿ ನಾವು ನೋಡಿ ಇಂತಹವರಿಗೆ ಕೊಟ್ಟಿದ್ದೇವೆ ಎಂದು ತಿಳಿಸಲಾಗಿ, ಕಡೆಗೆ MR ಪುಸ್ತಕ ನಮ್ಮ ಮನೆಯಲ್ಲಿದೆ, ದಾಖಲೆ ಪರಿಶೀಲಿಸಲು ಅದನ್ನು ಮನೆಗೆ ಕೊಂಡೊಯ್ದಿದ್ದೆ ಎಂದು ಬಿಲ್ ಕಲೆಕ್ಟರ್ ವೆಂಕಟೇಶ್ ಅವರು ತಮ್ಮ ಮನೆಗೆ ತೆರಳಿ ಎಂಆರ್ ಪುಸ್ತಕವನ್ನು ಸಭೆಯಲ್ಲಿ ಎಲ್ಲರೆದುರಿಗೂ ಅಧ್ಯಕ್ಷರಿಗೆ ಹಸ್ತಾಂತರಿಸಿದರು.
ಈ ಬಗ್ಗೆ ನಡೆದ ಸುದೀರ್ಘ ಚರ್ಚೆಯಲ್ಲಿ ನಾನು ಹಾಗೂ ಮತ್ತೋರ್ವ ಬಿಲ್ ಕಲೆಕ್ಟರ್ ಕೃಷ್ಣಮೂರ್ತಿ ಇದನ್ನು ಬಳಸಿದ್ದು,ನಾವು ಕೇವಲ ನಮೂನೆ-11 ಮಾತ್ರ ನೀಡಿದ್ದು, ಖಾತೆ ಮಾಗಿಲ್ಲ, ದಯವಿಟ್ಟು ನಮ್ಮ ತಪ್ಪನ್ನು ಮನ್ನಿಸಿ ಎಂದು ಎಲ್ಲರಿಗೂ ಕೈಮುಗಿದು ಕ್ಷಮೆ ಯಾಚಿಸಿದರು.
ಮಾತೆತ್ತಿದರೆ ಕಾನೂನು ಪಾಠಮಾಡುವ ಮುಖ್ಯಾಧಿಕಾರಿಗಳು ಪಂಚಾಯಿತಿಯಲ್ಲಿ ಸಮರ್ಪಕವಾಗಿ ಲೆಕ್ಕ ನಿರ್ವಹಣೆ ಹಾಗೂ ಕಡತ ನಿರ್ವಹಣೆ ಮಾಡಲು ವಿಫಲರಾಗಿದ್ದು, ಪಂಚಾಯಿತಿಯ ಯಾವೊಬ್ಬ ಸದಸ್ಯರಿಗೂ ಗೌರವ ಕೊಡದೆ,ಯಾರ ಪ್ರಶ್ನೆಗೆ ಉತ್ತರಿಸದೆ ಉಡಾಫೆ ಮನೋಭಾವ ತೋರಿಸುತ್ತಾ,ತಾವು ಮಾಡಿದ್ದೇ ಸರಿ ಎಂಬ ಧೋರಣೆ ಹೊಂದಿದ್ದು ಇವರನ್ನು ವರ್ಗಾವಣೆ ಮಾಡಬೇಕೆಂದು ಸದಸ್ಯರು ಒತ್ತಾಯಿಸಿದರು. ಅಲ್ಲದೆ ಅಕ್ರಮ ಖಾತೆ ಮಾಡಿಕೊಟ್ಟಿರುವ ಪಂಚಾಯಿತಿ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಇವರಿಗೆ ಕುಮ್ಮಕ್ಕು ಕೊಟ್ಟವರು ಯಾರು ಎಂಬುದು ತಿಳಿಯಬೇಕು ಹಾಗೂ ಮಾಡಿಕೊಟ್ಟಿರುವ ಖಾತೆಯನ್ನು ರದ್ದುಪಡಿಸಬೇಕು ಎಂದು ನಡಾವಳಿ ಬರೆಸಿದರು.

ಒಟ್ಟಾರೆ ಎರಡು ದಿನಗಳ ಸಭಾ ನಡವಳಿಕೆ ಹಾಗೂ ಬೆಳವಣಿಗೆ ಗಮನಿಸಿದಲ್ಲಿ ಎಂಆರ್ ಕಡತ ನಾಪತ್ತೆಯಾಗಿದಿದ್ದು ಯಾರ ಬಳಿ ಇತ್ತು ಎಂಬುದು ಕೆಲವರಿಗೆ ತಿಳಿದಿದ್ದರೂ ಸಹ ಯಾರೊಬ್ಬರೂ ಈ ಬಗ್ಗೆ ಬಾಯಿ ಬಿಡದೆ ಚರ್ಚಿಸುತ್ತಿದ್ದಿದ್ದು ಏಕೆಂಬುದೇ ಯಕ್ಷ ಪ್ರಶ್ನೆಯಾಗಿ ಉಳಿದಿದೆ???

ವರದಿ:ನರೇಂದ್ರಬಾಬು ಹುಳಿಯಾರು


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...