ವಿಷಯಕ್ಕೆ ಹೋಗಿ

ಹುಳಿಯಾರು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ 50ನೇ ವರ್ಷದ ಜಾತ್ರಾ ಮಹೋತ್ಸವ ಏ.18ರಿಂದ 23ರವರೆಗೆ

ಹುಳಿಯಾರು ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 50ನೇ ವರ್ಷದ ಸುವರ್ಣಮಹೋತ್ಸವದ ಜಾತ್ರಾ ಮಹೋತ್ಸವದ ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲು ಇಂದು ಹುಳಿಯಾರಿನ ಎಲ್ಲಾ ದೇವಸ್ಥಾನದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಪಟ್ಟಣದ ವಿವಿಧ ಸಂಘಟನೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಹಾಗೂ ಎಲ್ಲಾ ಸಮಾಜಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದ ಗುಂಚಿ ಗೌಡರುಗಳ ಸಭೆಯನ್ನು ದೇವಸ್ಥಾನದಲ್ಲಿ ಕರೆಯಲಾಗಿತ್ತು.
 50ನೇ ವರ್ಷದ ಸುವರ್ಣಮಹೋತ್ಸವದ ಜಾತ್ರಾ ಮಹೋತ್ಸವದದ ಜಾತ್ರೆಯನ್ನು  ಅಚ್ಚಳಿಯದಂತೆ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು. ಜಾತ್ರಾ ಮಹೋತ್ಸವಕ್ಕೆ ಸುತ್ತಮುತ್ತಲ ಹಳ್ಳಿಗಳ ಎಲ್ಲಾ ಒಂಬತ್ತು ದೇವರುಗಳನ್ನು ಕರೆಸುವುದು ಸೇರಿದಂತೆ ,ಅನ್ನ ಸಂತರ್ಪಣೆ, ಮೂರು ದಿನಗಳ ಕಾಲದ ಉಪಹಾರ, ಆರ್ಕೆಸ್ಟ್ರಾ, ದೇವಾಲಯಕ್ಕೆ ಹೂವಿನ ಅಲಂಕಾರ, ರಾಜಬೀದಿಯಲ್ಲಿ ವಿದ್ಯುದ್ದೀಪ ಅಲಂಕಾರದ ಬಗ್ಗೆ ಚರ್ಚಿಸಲಾಯಿತು. ಗ್ರಾಮದ ಪ್ರತಿ ಮನೆಗೂ ರೂ200 ರಸೀತಿ ಹಾಕಲು ತೀರ್ಮಾನಿಸಲಾಯಿತು. ಜಾತ್ರಾ ಮಹೋತ್ಸವದ ಯಶಸ್ಸಿಗೆ ಪ್ರತಿಯೊಬ್ಬರು ಕೈಜೋಡಿಸಲು ಮನವಿ ಮಾಡಲಾಯಿತು.
ದಿನಾಂಕ 18/4/2022ನೇ ಸೋಮವಾರದಿಂದ 23/4/2022ನೇ ಶನಿವಾರದವರೆಗೆ ಒಂದು ವಾರಗಳ ಕಾಲ ಜಾತ್ರೆಯನ್ನು ನಡೆಯಲಿದ್ದು,

ದಿನಾಂಕ 18/4/22ನೇ ಸೋಮವಾರ ರಾತ್ರಿ ಅಮ್ಮನವರ ಮಧುವಣಗಿತ್ತಿ ಶಾಸ್ತ್ರ, 

ದಿನಾಂಕ 19/4/22ನೇ ಮಂಗಳವಾರ ಆರತಿ ಬಾನ,

ದಿನಾಂಕ 20/4/22ನೇ ಬುಧವಾರ ರಾತ್ರಿ ಹುಳಿಯಾರಿನ ಪ್ರಮುಖ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ,ರಾತ್ರಿ 11ಘಂಟೆಗೆ ಅಮ್ಮನವರ ಕೂಡುಭೇಟಿ ಕಾರ್ಯಕ್ರಮ,

ದಿನಾಂಕ 21/4/22ನೇ ಗುರುವಾರ ಬೆಳಗ್ಗೆ 6ಘಂಟೆಯಿಂದ ಕಳಸೋತ್ಸವ, ಸಂಜೆ 7ಘಂಟೆಗೆ ಸಂಗೀತ ರಸ ಸಂಜೆ ಕಾರ್ಯಕ್ರಮ,

ದಿನಾಂಕ 22/4/22ನೇ ಶುಕ್ರವಾರ ಮಧ್ಯಾಹ್ನ 12ಘಂಟೆಗೆ ಬ್ರಹ್ಮ ರಥೋತ್ಸವ,ಸಂಜೆ 6 ಘಂಟೆಗೆ ರಾಜಬೀದಿಗಳಲ್ಲಿ ಹೆಸರಾಂತ ಜನಪದ ಕಲಾತಂಡಗಳೊಂದಿಗೆ ಅಮ್ಮನವರ ಉತ್ಸವ ಕಾರ್ಯಕ್ರಮ.

ದಿನಾಂಕ 23/4/22 ನೇ ಶನಿವಾರ ಮಧ್ಯಾಹ್ನ ಸಿಡಿ ಕಾರ್ಯಕ್ರಮದೊಂದಿಗೆ 50ನೇ ವರ್ಷದ ಜಾತ್ರಾ ತೆರೆ ಎಳೆಯಲು ತೀರ್ಮಾನಿಸಲಾಯಿತು. 
ಸಭೆಯಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಧರ್ಮದರ್ಶಿ,ಕನ್ವಿನಿಯರ್,ಗುಂಚಿಗೌಡರುಗಳು,ಹುಳಿಯಾರಿನ ಎಲ್ಲಾ ಕನ್ನಡ ಪರಸಂಘಟನೆಗಳ ಪಧಾದಿಕಾರಿಗಳು,ವಿವಿಧ ದೇವಸ್ಥಾನಗಳ ಅಧ್ಯಕ್ಷರು-ಪದಾಧಿಕಾರಿಗಳು, ಮ್ಯಾಕ್ಸಿಕ್ಯಾಬ್ ಚಾಲಕರ ಸಂಘದ ಪದಾಧಿಕಾರಿಗಳು,ಗ್ರಾಮದ ಮುಖಂಡರುಗಳು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...