ವಿಷಯಕ್ಕೆ ಹೋಗಿ

ಅಂತಾರಾಷ್ಟ್ರೀಯ ಮಹಿಳಾ ದಿನದ ಆಚರಣೆ ಯಾವಾಗ ಮತ್ತು ಎಲ್ಲಿಂದ ಪ್ರಾರಂಭವಾಯಿತು ಎಂದು ನಿಮಗೆ ತಿಳಿದಿದೆಯೇ? ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಮಾರ್ಚ್ 8 ರಂದು ಮಾತ್ರ ಏಕೆ ಆಚರಿಸಲಾಗುತ್ತದೆ..

ಮಹಿಳೆಯು  ಸಮಾಜದ ಶಕ್ತಿ . ಕುಟುಂಬದ ಕಣ್ಣು. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಿದ್ದಾಳೆ. ಹಿಂದಿನ ಕಾಲದಲ್ಲಿ ಬೆರಳೆಣಿಕೆಯಷ್ಟು ಮಹಿಳೆಯರು ಮಾತ್ರ ಮನೆಯಿಂದ ಹೊರಗೆ ಬಂದು ದುಡಿಯುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಹಿಳೆ ತಾನು ಎಲ್ಲವನ್ನೂ ನಿಭಾಯಿಸಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದಾಳೆ. ಗಡಿ ಕಾಯುವುದ್ರಿಂದ ಹಿಡಿದು ಕುಟುಂಬದ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬಲ್ಲ ಶಕ್ತಿ, ತಾಳ್ಮೆ, ಉತ್ಸಾಹ, ಧೈರ್ಯ ಮಹಿಳೆಗಿದೆ. ಪುರುಷರ ಸಮಾನವಾಗಿ ನಿಂತಿರುವ ಮಹಿಳೆಯರು ಅನೇಕ ಉನ್ನತ ಹುದ್ದೆಗಳನ್ನು ಸಂಭಾಳಿಸುತ್ತಿದ್ದಾರೆ.

ಮಹಿಳೆಯ ಹೋರಾಟ ಇಂದು-ನಿನ್ನೆಯದಲ್ಲ. ಸದಾ ತನ್ನ ಹಕ್ಕಿಗಾಗಿ ಮಹಿಳೆ ಕಾದಾಡಿದ್ದಾಳೆ. ಪ್ರಪಂಚ ಇಷ್ಟು ಮುಂದುವರೆದಿದ್ದರೂ ಮಹಿಳೆಗೆ ಸಿಗಬೇಕಾದ ಸ್ಥಾನ ಇನ್ನೂ ಸಂಪೂರ್ಣವಾಗಿ ಸಿಕ್ಕಿಲ್ಲ. ಪ್ರತಿ ವರ್ಷ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ. ಇಂದು ಅದರ ಇತಿಹಾಸ, ಮಹತ್ವದ ಬಗ್ಗೆ ತಿಳಿಯೋಣ.

ನಿರಂತರವಾಗಿ ತುಳಿತಕ್ಕೊಳಗಾಗ್ತಿರುವ, ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗ್ತಿರುವ ಅನೇಕ ಮಹಿಳೆಯರು ನಮ್ಮಲ್ಲಿದ್ದಾರೆ. ಅವರಿಗೆ ಧೈರ್ಯ ನೀಡಿ, ಮಹಿಳೆಗೆ ತನ್ನ ಹಕ್ಕಿನ ಪರಿಚಯ ಮಾಡಿಸಿ, ಆಕೆಯನ್ನು ಸ್ವಾವಲಂಬಿ ಮಾಡುವ ಉದ್ದೇಶದಿಂದ, ಆಕೆಯ ಜೀವನವನ್ನು ಸುಂದರಗೊಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ದಿನ (International Women's Day)ವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಮಾರ್ಚ್ 8 ರಂದು ಮಹಿಳಾ ದಿನಾಚರಣೆಯನ್ನು ವಿಶ್ವದ ಎಲ್ಲ ದೇಶಗಳಲ್ಲಿ  ಆಯೋಜಿಸಲಾಗುತ್ತದೆ. ಆದರೆ ಅಂತಾರಾಷ್ಟ್ರೀಯ ಮಹಿಳಾ ದಿನದ ಆಚರಣೆ ಯಾವಾಗ ಮತ್ತು ಎಲ್ಲಿಂದ ಪ್ರಾರಂಭವಾಯಿತು ಎಂದು ನಿಮಗೆ ತಿಳಿದಿದೆಯೇ? ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಮಾರ್ಚ್ 8 ರಂದು ಮಾತ್ರ ಏಕೆ ಆಚರಿಸಲಾಗುತ್ತದೆ..?

ಮಹಿಳಾ ದಿನಾಚರಣೆ ಇತಿಹಾಸ : 1908ರಲ್ಲಿ ಅಮೆರಿಕದಲ್ಲಿ ಕಾರ್ಮಿಕ ಚಳವಳಿ ನಡೆದಿತ್ತು. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದುಡಿಯುವ ಮಹಿಳೆಯರು ಪಾಲ್ಗೊಂಡಿದ್ದರು. ಸುಮಾರು 15,000 ಮಹಿಳೆಯರು ನ್ಯೂಯಾರ್ಕ್ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದರು ಮತ್ತು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ್ದರು. ತಮ್ಮ ಕೆಲಸದ ಅವಧಿಯನ್ನು ಕಡಿಮೆ ಮಾಡಬೇಕು ಮತ್ತು ವೇತನ ಶ್ರೇಣಿಯನ್ನು ಹೆಚ್ಚಿಸಬೇಕು ಎಂದು ಕಾರ್ಮಿಕ ಮಹಿಳೆಯರು ಒತ್ತಾಯಿಸಿದ್ದರು. ಮಹಿಳೆಯರಿಗೂ ಮತದಾನದ ಹಕ್ಕನ್ನು ನೀಡಬೇಕೆಂದು ಬೇಡಿಕೆಯಿಟ್ಟಿದ್ದರು.  ಮಹಿಳೆಯರ ಧ್ವನಿ ಅಂದಿನ ಸರ್ಕಾರದ ಕಿವಿಗೆ ಬಿದ್ದಿತ್ತು. ನಂತರ 1909 ರಲ್ಲಿ, ಚಳುವಳಿಯ ಒಂದು ವರ್ಷದ ನಂತರ, ಅಮೆರಿಕಾದ ಸಮಾಜವಾದಿ ಪಕ್ಷ  ಮಹಿಳಾ ದಿನವನ್ನು ಘೋಷಿಸಿತು.

*ಭಾರತದಲ್ಲಿ ಮಹಿಳೆಯರ ರಕ್ಷಣೆ*
ನಮ್ಮ ಭವ್ಯ ಭಾರತದ ಸಂವಿಧಾನದಲ್ಲಿಯೂ ಮಹಿಳೆಯರ ರಕ್ಷಣೆಗಾಗಿ ಹಲವಾರು ಉಪಬಂಧಗಳನ್ನು ಕಲ್ಪಿಸಲಾಗಿದೆ...
ಅವುಗಳೆಂದರೆ.
ವಿಧಿ 14 ರ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು,ವಿಧಿ 15 ರ ಪ್ರಕಾರ ಧರ್ಮ ಜಾತಿ ಲಿಂಗ ಜನ್ಮಸ್ಥಳ ಭಾಷೆಯ ಆಧಾರದ ಮೇಲೆ ತಾರತಮ್ಯ ಮಾಡುವ ಹಾಗಿಲ್ಲ.
ವಿಧಿ 16 ರ ಪ್ರಕಾರ ಸಾರ್ವಜನಿಕ ಹುದ್ದೆಗಳನ್ನು ಹೊಂದಲು ತಾರತಮ್ಯ ಮಾಡುವ ಹಾಗಿಲ್ಲ, ವಿಧಿ 39(ಅ) ಪ್ರಕಾರ ಸ್ತ್ರೀ ಅಥವಾ ಪುರುಷರೆಂಬ ಬೇಧ ಭಾವವಿಲ್ಲದೇ ಜೀವನಕ್ಕೆ ಅವಶ್ಯಕವಾದ ಸಾಧನಗಳನ್ನು ಒದಗಿಸಲು ನೀತಿ ಜಾರಿ,1961 ರ ಪ್ರಸೂತಿ ಸೌಲಭ್ಯ ಕಾಯ್ದೆ ಜಾರಿ,1955 ರ ಹಿಂದೂ ವಿವಾಹ ಅಧಿನಿಯಮದಲ್ಲಿ ವಿಚ್ಛೇದನದ ಪರಿಕಲ್ಪನೆ ಜಾರಿ, 1971 ರಲ್ಲಿ ಸಮಾನ ವೇತನ ಕಾಯ್ದೆ ಜಾರಿ, 1961 ರ ವರದಕ್ಷಿಣೆ ನಿಷೇಧ ಕಾಯ್ದೆ, ಇನ್ನೂ ಮುಂತಾದವುಗಳು...

ಇಷ್ಟೆಲ್ಲ ಮಹಿಳೆಯರ ಪರ ರಕ್ಷಣಾ ಕಾನೂನುಗಳು ಇದ್ದರೂ ಕೂಡ ನಮ್ಮ ದೇಶದಲ್ಲಿ ನಿರಂತರವಾಗಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿಯಾದ ವಿಷಯವಾಗಿದೆ. ಬಹುತೇಕ ಹಳ್ಳಿಗಳ  ದೇಶವಾದ ನಮ್ಮ ಭಾರತದಲ್ಲಿ ಇಂದಿಗೂ ಗ್ರಾಮೀಣ ಪ್ರದೇಶಗಳಲ್ಲಿ ಎಷ್ಟೋ ಬಲಾತ್ಕಾರಗಳು,ಅತ್ಯಾಚಾರಗಳೂ ನಡೆದರೂ ಎಷ್ಟೋ ಪ್ರಕರಣಗಳು  ದಾಖಲಾಗದೇ ಇರುವುದನ್ನ ನಾವು ಕಾಣಬಹುದಾಗಿದೆ.ಆಗಾಗಿ ಪ್ರಜ್ಞಾವಂತ ನಾಗರೀಕರಾದ ನಾವು ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಯಲು ಮತ್ತು ಆಕೆಗೆ ಸಿಗಬೇಕಾದ ನ್ಯಾಯದ ಪರವಾಗಿ ನಿಂತು ಆಕೆಯನ್ನು ಸಶಕ್ತಳನ್ನಾಗಿ ಮಾಡುವಂತಹ ಕರ್ತವ್ಯ ನಮ್ಮ ಮೇಲಿದೆ.ಆಗ ಮಾತ್ರ ಈ ದಿನದ ಆಚರಣೆಗೂ ಸಾರ್ಥಕತೆ ಸಿಕ್ಕಂತಾಗುತ್ತದೆ...

ಲೇಖಕರು: ಪ್ರಶಾಂತ್ ದಸೂಡಿ.
ಕಾನೂನು ವಿದ್ಯಾರ್ಥಿ,ಸುಫಿಯಾ ಕಾನೂನು ಮಹಾವಿದ್ಯಾಲಯ,ತುಮಕೂರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...