ವಿಷಯಕ್ಕೆ ಹೋಗಿ

ಕೃಷಿ ಕಾಯ್ದೆಗಳ ವಾಪಸಾತಿಗಾಗಿ ಆಗ್ರಹಿಸಿ ಕಾಗೋಡಿನಿಂದ ಜುಂಜಪ್ಪನಗುಡ್ಡೆವರೆಗೆ ಬರುತ್ತಿರುವ ಜನಜಾಗೃತಿ ಜಾಥ ಇಂದು ಚಿಕ್ಕನಾಯಕನಹಳ್ಳಿ - ಹುಳಿಯಾರಿಗೆ

ಜನಾಂದೋಲನಗಳ ಮಹಾಮೈತ್ರಿ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ 3 ಕರಾಳ ಕೃಷಿ ಕಾಯ್ದೆಗಳ ವಾಪಸಾತಿಗಾಗಿ ಆಗ್ರಹಿಸಿ ಕಾಗೋಡಿನಿಂದ ಜುಂಜಪ್ಪನಗುಡ್ಡೆವರೆಗೆ ಬರುತ್ತಿರುವ ಜನಜಾಗೃತಿ ಜಾಥವು ಇಂದು ದಿನಾಂಕ 12-03-2022 ರಂದು ತಿಪಟೂರಿನಿಂದ ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ಜುಂಜಪ್ಪನಗುಡ್ಡೆವರೆಗೆ ಹಾದು ಹೋಗಲಿದ್ದು ಈ ಬಗ್ಗೆ ಗುರುವಾರ ಚಿಕ್ಕನಾಯಕನಹಳ್ಳಿ  ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕಿನ ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಗೋಷ್ಠಿಯಲ್ಲಿ ಸಿ.ಡಿ. ಚಂದ್ರಶೇಖರ್ ಮಾಜಿ ಪುರಸಭಾ ಅಧ್ಯಕ್ಷರು ಮಾತನಾಡಿ ಕರ್ನಾಟಕ ರಾಜ್ಯ ಸರ್ಕಾರದ ಮೂರು ಕರಾಳ ಕೃಷಿ ಕಾಯಿದೆಗಳ ಜಾರಿಯಿಂದ ರೈತರು ಕೃಷಿ ಕಾರ್ಮಿಕರು ಸ್ಥಳಿಯ ವ್ಯಾಪಾರಿಗಳು ಪಶುಪಾಲನೆ ಮಾಡುವ ಬುಡಕಟ್ಟು ಜನಾಂಗಗಳು ಹೀಗೆ ಹಲವಾರು ಸಮಾಜಗಳು ತೊಂದರೆಗೊಳಗಾಗುವುದರಿಂದ ಈ ಕಾನೂನುಗಳನ್ನು ಈಗಿರುವಂತೆ ಜಾರೀ ಮಾಡದೇ ಈ ಮೇಲೆ ಹೇಳಿದ ಎಲ್ಲರಿಗೂ ಅನಾನುಕೂಲವಾಗದಂತೆ ಸೂಕ್ತ ಮಾರ್ಪಾಡುಗಳನ್ನು ಮಾಡಿ ಜಾರಿ ಮಾಡಲು ಆಗ್ರಹಿಸಲು ಈ ಜಾಥಾ ನಡೆಯುತ್ತಿದೆ ಎಂದು ತಿಳಿಸಿದರು.

ಪ್ರಗತಿಪರ ಕೃಷಿಕ ಷಡಕ್ಷರಿ ಶಂಕರಲಿಂಗಪ್ಪ ಇವರು ಮಾತನಾಡಿ ಈ ಜಾಥವು ರಾಜ್ಯದ ಮೂರು ದಿಕ್ಕುಗಳಲ್ಲಿ ಪ್ರಾರಂಭವಾಗಿ ಇದೇ ತಿಂಗಳ ಹದಿನೈದರಂದು ಬೆಂಗಳೂರು ತಲುಪುವುದರ ಮೂಲಕ ಈ  ಜನ ಜಾಗೃತಿ ಜಾಥಾ ಒಗ್ಗೂಡುವುದೆಂದರು.

ಮಾರ್ಚ್ 9 ರಂದು ಶಿವಮೊಗ್ಗ ಜಿಲ್ಲೆಯ ಕಾಗೋಡಿನಿಂದ ಪ್ರಾರಂಭವಾದ  ಈ ಮಾರ್ಗದ ಜಾಥವು ಸಾಗರ-ಸೊರಬ-ಶಿಕಾರಿಪುರ-ಹೊನ್ನಾಳಿ-ಹೊಸನಗರ...
10 ರಂದು  ಕುಪ್ಪಳಿ ತೀರ್ಥಹಳ್ಳಿ ಶಿವಮೊಗ್ಗ ಭದ್ರಾವತಿ
11 ರಂದು ತರೀಕೆರೆ  ಕಡೂರು ಅರಸೀಕೆರೆ ತಿಪಟೂರು ತಲುಪಿ
12 ರಂದುಬೆಳಿಗ್ಗೆ ತಿಪಟೂರು
ಮಧ್ಯಾಹ್ನ ಒಂದು ಗಂಟೆಗೆ ಕೆ.ಬಿ.ಕ್ರಾಸ್ನಲ್ಲಿ ಸಾರ್ವಜನಿಕ ಸಭೆ ಸೇರಿ
ನಂತರ ತರಬೇನಹಳ್ಳಿ ಷಡಕ್ಷರಿ ಶಂಕರಲಿಂಗಪ್ಪ ಇವರ ತೋಟದಲ್ಲಿ ತುಸು ವಿಶ್ರಾಂತಿ ಪಡೆದು
ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ  2:30 ಕ್ಕೆ ಸಾರ್ವಜನಿಕ ಸಭೆ ಸೇರಿ
ಸಂಜೆ 4 ಗಂಟೆಗೆ ಹುಳಿಯಾರಿನಲ್ಲಿ ಸಭೆ ಸೇರಿ
ಶಿರಾದ ಜುಂಜಪ್ಪನ ಗುಡ್ಡೆಯಲ್ಲಿ ವಾಸ್ತವ್ಯ ಮಾಡಿ

ಮಾರ್ಚ್ 13 ರಂದು ಬೆಳಿಗ್ಗೆ ಬಸವಕಲ್ಯಾಣದಿಂದ ಬರುವ ಜಾಥಾದೊಂದಿಗೆ ಸೇರಿಕೊಂಡು,
ಮಲೆಮಹದೇಶ್ವರ ಬೆಟ್ಟದಿಂದ  ಹೊರಟ
ಮತ್ತೊಂದು ಜಾಥಾದೊಂದಿಗೆ
ಬೆಂಗಳೂರಿಗೆ ಮಾರ್ಚ್ 15 ರಂದು ತಲುಪುವುದೆಂದು ತಿಳಿಸಿದರು.

ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ ರೈತರು, ಕೂಲಿ ಕಾರ್ಮಿಕರು, ಬಡವರು, ದಮನಿತರ ಪರವಾಗಿರುವ ಕಾನೂನುಗಳನ್ನು ತರುವುದರ ಮೂಲಕ ಕರ್ನಾಟಕ ರಾಜ್ಯ ಸರ್ಕಾರವು ಸಹಕರಿಸಬೇಕೆಂದರು. ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮಕ್ಕೆ ತಾಲೂಕಿನ ಹಲವಾರು ಸಂಘ ಸಂಸ್ಥೆಗಳು ಸಹಕರಿಸಲಿವೆ ಎಂದು ತಿಳಿಸಿದರು‌.

ಮೊಹಮ್ಮದ್ ಹುಸೇನ್ ಗುಂಡಣ್ಣ ಮಾತನಾಡಿ ಈ ಸಂದರ್ಭದಲ್ಲಿ ಪಟ್ಟಣದಿಂದ  ಮಧ್ಯಾಹ್ನ 12 ಗಂಟೆಗೆ ನೂರಾರು ಬೈಕ್ ಸವಾರರು ಚಿಕ್ಕನಾಯಕನಹಳ್ಳಿ ಪಟ್ಟಣದ ನೆಹರೂ ಸರ್ಕಲ್ ನಿಂದ ಬೈಕ್ ಜಾಥಾ ಹೊರಟು ಕೇಬೀಕ್ರಾಸಿಗೆ ತಲುಪಿ  ತಿಪಟೂರಿನ ಜಾಥಾವನ್ನು ಸ್ವಾಗತಿಸಿ ಚಿಕ್ಕನಾಯಕನಹಳ್ಳಿ ಪಟ್ಟಣಕ್ಕೆ ಕರೆತರುವುದರ  ಮೂಲಕ ಈ ಜಾಥಾಕ್ಕೆ ಸಹಕಾರ ಕೊಡುವುದಾಗಿ ತಿಳಿಸಿದರು.

ತಾಲೂಕಿನ ರೈತಸಂಘದ ಅಧ್ಯಕ್ಷರಾದ ಹೊನ್ನೆಬಾಗಿ ಉಮೇಶ್ ಹಾಗೂ ಆಮ್ ಆದ್ಮೀ ಪಕ್ಷದ ಅಧ್ಯಕ್ಷರಾದ ಲಿಂಗರಾಜು ಮಾತನಾಡಿ ಈ ಜಾಥಾಕ್ಕೆ ತಾಲೂಕಿನ ಎಲ್ಲಾ ಸಂಘ ಸಂಸ್ಥೆಗಳು ರೈತರು ಸಾರ್ವಜನಿಕರು ಸಹಕಾರಕೊಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಾಕೀರ್ ಹುಸೇನ್ ಮತ್ತಿತರರು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...