ವಿಷಯಕ್ಕೆ ಹೋಗಿ

ಕೃಷಿ ಕಾಯ್ದೆಗಳ ವಾಪಸಾತಿಗಾಗಿ ಆಗ್ರಹಿಸಿ ಕಾಗೋಡಿನಿಂದ ಜುಂಜಪ್ಪನಗುಡ್ಡೆವರೆಗೆ ಬರುತ್ತಿರುವ ಜನಜಾಗೃತಿ ಜಾಥ ಇಂದು ಚಿಕ್ಕನಾಯಕನಹಳ್ಳಿ - ಹುಳಿಯಾರಿಗೆ

ಜನಾಂದೋಲನಗಳ ಮಹಾಮೈತ್ರಿ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ 3 ಕರಾಳ ಕೃಷಿ ಕಾಯ್ದೆಗಳ ವಾಪಸಾತಿಗಾಗಿ ಆಗ್ರಹಿಸಿ ಕಾಗೋಡಿನಿಂದ ಜುಂಜಪ್ಪನಗುಡ್ಡೆವರೆಗೆ ಬರುತ್ತಿರುವ ಜನಜಾಗೃತಿ ಜಾಥವು ಇಂದು ದಿನಾಂಕ 12-03-2022 ರಂದು ತಿಪಟೂರಿನಿಂದ ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ಜುಂಜಪ್ಪನಗುಡ್ಡೆವರೆಗೆ ಹಾದು ಹೋಗಲಿದ್ದು ಈ ಬಗ್ಗೆ ಗುರುವಾರ ಚಿಕ್ಕನಾಯಕನಹಳ್ಳಿ  ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕಿನ ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಗೋಷ್ಠಿಯಲ್ಲಿ ಸಿ.ಡಿ. ಚಂದ್ರಶೇಖರ್ ಮಾಜಿ ಪುರಸಭಾ ಅಧ್ಯಕ್ಷರು ಮಾತನಾಡಿ ಕರ್ನಾಟಕ ರಾಜ್ಯ ಸರ್ಕಾರದ ಮೂರು ಕರಾಳ ಕೃಷಿ ಕಾಯಿದೆಗಳ ಜಾರಿಯಿಂದ ರೈತರು ಕೃಷಿ ಕಾರ್ಮಿಕರು ಸ್ಥಳಿಯ ವ್ಯಾಪಾರಿಗಳು ಪಶುಪಾಲನೆ ಮಾಡುವ ಬುಡಕಟ್ಟು ಜನಾಂಗಗಳು ಹೀಗೆ ಹಲವಾರು ಸಮಾಜಗಳು ತೊಂದರೆಗೊಳಗಾಗುವುದರಿಂದ ಈ ಕಾನೂನುಗಳನ್ನು ಈಗಿರುವಂತೆ ಜಾರೀ ಮಾಡದೇ ಈ ಮೇಲೆ ಹೇಳಿದ ಎಲ್ಲರಿಗೂ ಅನಾನುಕೂಲವಾಗದಂತೆ ಸೂಕ್ತ ಮಾರ್ಪಾಡುಗಳನ್ನು ಮಾಡಿ ಜಾರಿ ಮಾಡಲು ಆಗ್ರಹಿಸಲು ಈ ಜಾಥಾ ನಡೆಯುತ್ತಿದೆ ಎಂದು ತಿಳಿಸಿದರು.

ಪ್ರಗತಿಪರ ಕೃಷಿಕ ಷಡಕ್ಷರಿ ಶಂಕರಲಿಂಗಪ್ಪ ಇವರು ಮಾತನಾಡಿ ಈ ಜಾಥವು ರಾಜ್ಯದ ಮೂರು ದಿಕ್ಕುಗಳಲ್ಲಿ ಪ್ರಾರಂಭವಾಗಿ ಇದೇ ತಿಂಗಳ ಹದಿನೈದರಂದು ಬೆಂಗಳೂರು ತಲುಪುವುದರ ಮೂಲಕ ಈ  ಜನ ಜಾಗೃತಿ ಜಾಥಾ ಒಗ್ಗೂಡುವುದೆಂದರು.

ಮಾರ್ಚ್ 9 ರಂದು ಶಿವಮೊಗ್ಗ ಜಿಲ್ಲೆಯ ಕಾಗೋಡಿನಿಂದ ಪ್ರಾರಂಭವಾದ  ಈ ಮಾರ್ಗದ ಜಾಥವು ಸಾಗರ-ಸೊರಬ-ಶಿಕಾರಿಪುರ-ಹೊನ್ನಾಳಿ-ಹೊಸನಗರ...
10 ರಂದು  ಕುಪ್ಪಳಿ ತೀರ್ಥಹಳ್ಳಿ ಶಿವಮೊಗ್ಗ ಭದ್ರಾವತಿ
11 ರಂದು ತರೀಕೆರೆ  ಕಡೂರು ಅರಸೀಕೆರೆ ತಿಪಟೂರು ತಲುಪಿ
12 ರಂದುಬೆಳಿಗ್ಗೆ ತಿಪಟೂರು
ಮಧ್ಯಾಹ್ನ ಒಂದು ಗಂಟೆಗೆ ಕೆ.ಬಿ.ಕ್ರಾಸ್ನಲ್ಲಿ ಸಾರ್ವಜನಿಕ ಸಭೆ ಸೇರಿ
ನಂತರ ತರಬೇನಹಳ್ಳಿ ಷಡಕ್ಷರಿ ಶಂಕರಲಿಂಗಪ್ಪ ಇವರ ತೋಟದಲ್ಲಿ ತುಸು ವಿಶ್ರಾಂತಿ ಪಡೆದು
ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ  2:30 ಕ್ಕೆ ಸಾರ್ವಜನಿಕ ಸಭೆ ಸೇರಿ
ಸಂಜೆ 4 ಗಂಟೆಗೆ ಹುಳಿಯಾರಿನಲ್ಲಿ ಸಭೆ ಸೇರಿ
ಶಿರಾದ ಜುಂಜಪ್ಪನ ಗುಡ್ಡೆಯಲ್ಲಿ ವಾಸ್ತವ್ಯ ಮಾಡಿ

ಮಾರ್ಚ್ 13 ರಂದು ಬೆಳಿಗ್ಗೆ ಬಸವಕಲ್ಯಾಣದಿಂದ ಬರುವ ಜಾಥಾದೊಂದಿಗೆ ಸೇರಿಕೊಂಡು,
ಮಲೆಮಹದೇಶ್ವರ ಬೆಟ್ಟದಿಂದ  ಹೊರಟ
ಮತ್ತೊಂದು ಜಾಥಾದೊಂದಿಗೆ
ಬೆಂಗಳೂರಿಗೆ ಮಾರ್ಚ್ 15 ರಂದು ತಲುಪುವುದೆಂದು ತಿಳಿಸಿದರು.

ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ ರೈತರು, ಕೂಲಿ ಕಾರ್ಮಿಕರು, ಬಡವರು, ದಮನಿತರ ಪರವಾಗಿರುವ ಕಾನೂನುಗಳನ್ನು ತರುವುದರ ಮೂಲಕ ಕರ್ನಾಟಕ ರಾಜ್ಯ ಸರ್ಕಾರವು ಸಹಕರಿಸಬೇಕೆಂದರು. ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮಕ್ಕೆ ತಾಲೂಕಿನ ಹಲವಾರು ಸಂಘ ಸಂಸ್ಥೆಗಳು ಸಹಕರಿಸಲಿವೆ ಎಂದು ತಿಳಿಸಿದರು‌.

ಮೊಹಮ್ಮದ್ ಹುಸೇನ್ ಗುಂಡಣ್ಣ ಮಾತನಾಡಿ ಈ ಸಂದರ್ಭದಲ್ಲಿ ಪಟ್ಟಣದಿಂದ  ಮಧ್ಯಾಹ್ನ 12 ಗಂಟೆಗೆ ನೂರಾರು ಬೈಕ್ ಸವಾರರು ಚಿಕ್ಕನಾಯಕನಹಳ್ಳಿ ಪಟ್ಟಣದ ನೆಹರೂ ಸರ್ಕಲ್ ನಿಂದ ಬೈಕ್ ಜಾಥಾ ಹೊರಟು ಕೇಬೀಕ್ರಾಸಿಗೆ ತಲುಪಿ  ತಿಪಟೂರಿನ ಜಾಥಾವನ್ನು ಸ್ವಾಗತಿಸಿ ಚಿಕ್ಕನಾಯಕನಹಳ್ಳಿ ಪಟ್ಟಣಕ್ಕೆ ಕರೆತರುವುದರ  ಮೂಲಕ ಈ ಜಾಥಾಕ್ಕೆ ಸಹಕಾರ ಕೊಡುವುದಾಗಿ ತಿಳಿಸಿದರು.

ತಾಲೂಕಿನ ರೈತಸಂಘದ ಅಧ್ಯಕ್ಷರಾದ ಹೊನ್ನೆಬಾಗಿ ಉಮೇಶ್ ಹಾಗೂ ಆಮ್ ಆದ್ಮೀ ಪಕ್ಷದ ಅಧ್ಯಕ್ಷರಾದ ಲಿಂಗರಾಜು ಮಾತನಾಡಿ ಈ ಜಾಥಾಕ್ಕೆ ತಾಲೂಕಿನ ಎಲ್ಲಾ ಸಂಘ ಸಂಸ್ಥೆಗಳು ರೈತರು ಸಾರ್ವಜನಿಕರು ಸಹಕಾರಕೊಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಾಕೀರ್ ಹುಸೇನ್ ಮತ್ತಿತರರು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.