ವಿಷಯಕ್ಕೆ ಹೋಗಿ

ಕೃಷಿ ಕಾಯ್ದೆಗಳ ವಾಪಸಾತಿಗಾಗಿ ಆಗ್ರಹಿಸಿ ಕಾಗೋಡಿನಿಂದ ಜುಂಜಪ್ಪನಗುಡ್ಡೆವರೆಗೆ ಬರುತ್ತಿರುವ ಜನಜಾಗೃತಿ ಜಾಥ ಇಂದು ಚಿಕ್ಕನಾಯಕನಹಳ್ಳಿ - ಹುಳಿಯಾರಿಗೆ

ಜನಾಂದೋಲನಗಳ ಮಹಾಮೈತ್ರಿ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ 3 ಕರಾಳ ಕೃಷಿ ಕಾಯ್ದೆಗಳ ವಾಪಸಾತಿಗಾಗಿ ಆಗ್ರಹಿಸಿ ಕಾಗೋಡಿನಿಂದ ಜುಂಜಪ್ಪನಗುಡ್ಡೆವರೆಗೆ ಬರುತ್ತಿರುವ ಜನಜಾಗೃತಿ ಜಾಥವು ಇಂದು ದಿನಾಂಕ 12-03-2022 ರಂದು ತಿಪಟೂರಿನಿಂದ ಚಿಕ್ಕನಾಯಕನಹಳ್ಳಿ ಮಾರ್ಗವಾಗಿ ಜುಂಜಪ್ಪನಗುಡ್ಡೆವರೆಗೆ ಹಾದು ಹೋಗಲಿದ್ದು ಈ ಬಗ್ಗೆ ಗುರುವಾರ ಚಿಕ್ಕನಾಯಕನಹಳ್ಳಿ  ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕಿನ ಹಲವಾರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಗೋಷ್ಠಿಯಲ್ಲಿ ಸಿ.ಡಿ. ಚಂದ್ರಶೇಖರ್ ಮಾಜಿ ಪುರಸಭಾ ಅಧ್ಯಕ್ಷರು ಮಾತನಾಡಿ ಕರ್ನಾಟಕ ರಾಜ್ಯ ಸರ್ಕಾರದ ಮೂರು ಕರಾಳ ಕೃಷಿ ಕಾಯಿದೆಗಳ ಜಾರಿಯಿಂದ ರೈತರು ಕೃಷಿ ಕಾರ್ಮಿಕರು ಸ್ಥಳಿಯ ವ್ಯಾಪಾರಿಗಳು ಪಶುಪಾಲನೆ ಮಾಡುವ ಬುಡಕಟ್ಟು ಜನಾಂಗಗಳು ಹೀಗೆ ಹಲವಾರು ಸಮಾಜಗಳು ತೊಂದರೆಗೊಳಗಾಗುವುದರಿಂದ ಈ ಕಾನೂನುಗಳನ್ನು ಈಗಿರುವಂತೆ ಜಾರೀ ಮಾಡದೇ ಈ ಮೇಲೆ ಹೇಳಿದ ಎಲ್ಲರಿಗೂ ಅನಾನುಕೂಲವಾಗದಂತೆ ಸೂಕ್ತ ಮಾರ್ಪಾಡುಗಳನ್ನು ಮಾಡಿ ಜಾರಿ ಮಾಡಲು ಆಗ್ರಹಿಸಲು ಈ ಜಾಥಾ ನಡೆಯುತ್ತಿದೆ ಎಂದು ತಿಳಿಸಿದರು.

ಪ್ರಗತಿಪರ ಕೃಷಿಕ ಷಡಕ್ಷರಿ ಶಂಕರಲಿಂಗಪ್ಪ ಇವರು ಮಾತನಾಡಿ ಈ ಜಾಥವು ರಾಜ್ಯದ ಮೂರು ದಿಕ್ಕುಗಳಲ್ಲಿ ಪ್ರಾರಂಭವಾಗಿ ಇದೇ ತಿಂಗಳ ಹದಿನೈದರಂದು ಬೆಂಗಳೂರು ತಲುಪುವುದರ ಮೂಲಕ ಈ  ಜನ ಜಾಗೃತಿ ಜಾಥಾ ಒಗ್ಗೂಡುವುದೆಂದರು.

ಮಾರ್ಚ್ 9 ರಂದು ಶಿವಮೊಗ್ಗ ಜಿಲ್ಲೆಯ ಕಾಗೋಡಿನಿಂದ ಪ್ರಾರಂಭವಾದ  ಈ ಮಾರ್ಗದ ಜಾಥವು ಸಾಗರ-ಸೊರಬ-ಶಿಕಾರಿಪುರ-ಹೊನ್ನಾಳಿ-ಹೊಸನಗರ...
10 ರಂದು  ಕುಪ್ಪಳಿ ತೀರ್ಥಹಳ್ಳಿ ಶಿವಮೊಗ್ಗ ಭದ್ರಾವತಿ
11 ರಂದು ತರೀಕೆರೆ  ಕಡೂರು ಅರಸೀಕೆರೆ ತಿಪಟೂರು ತಲುಪಿ
12 ರಂದುಬೆಳಿಗ್ಗೆ ತಿಪಟೂರು
ಮಧ್ಯಾಹ್ನ ಒಂದು ಗಂಟೆಗೆ ಕೆ.ಬಿ.ಕ್ರಾಸ್ನಲ್ಲಿ ಸಾರ್ವಜನಿಕ ಸಭೆ ಸೇರಿ
ನಂತರ ತರಬೇನಹಳ್ಳಿ ಷಡಕ್ಷರಿ ಶಂಕರಲಿಂಗಪ್ಪ ಇವರ ತೋಟದಲ್ಲಿ ತುಸು ವಿಶ್ರಾಂತಿ ಪಡೆದು
ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ  2:30 ಕ್ಕೆ ಸಾರ್ವಜನಿಕ ಸಭೆ ಸೇರಿ
ಸಂಜೆ 4 ಗಂಟೆಗೆ ಹುಳಿಯಾರಿನಲ್ಲಿ ಸಭೆ ಸೇರಿ
ಶಿರಾದ ಜುಂಜಪ್ಪನ ಗುಡ್ಡೆಯಲ್ಲಿ ವಾಸ್ತವ್ಯ ಮಾಡಿ

ಮಾರ್ಚ್ 13 ರಂದು ಬೆಳಿಗ್ಗೆ ಬಸವಕಲ್ಯಾಣದಿಂದ ಬರುವ ಜಾಥಾದೊಂದಿಗೆ ಸೇರಿಕೊಂಡು,
ಮಲೆಮಹದೇಶ್ವರ ಬೆಟ್ಟದಿಂದ  ಹೊರಟ
ಮತ್ತೊಂದು ಜಾಥಾದೊಂದಿಗೆ
ಬೆಂಗಳೂರಿಗೆ ಮಾರ್ಚ್ 15 ರಂದು ತಲುಪುವುದೆಂದು ತಿಳಿಸಿದರು.

ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಮಂಜುನಾಥ್ ಮಾತನಾಡಿ ರೈತರು, ಕೂಲಿ ಕಾರ್ಮಿಕರು, ಬಡವರು, ದಮನಿತರ ಪರವಾಗಿರುವ ಕಾನೂನುಗಳನ್ನು ತರುವುದರ ಮೂಲಕ ಕರ್ನಾಟಕ ರಾಜ್ಯ ಸರ್ಕಾರವು ಸಹಕರಿಸಬೇಕೆಂದರು. ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮಕ್ಕೆ ತಾಲೂಕಿನ ಹಲವಾರು ಸಂಘ ಸಂಸ್ಥೆಗಳು ಸಹಕರಿಸಲಿವೆ ಎಂದು ತಿಳಿಸಿದರು‌.

ಮೊಹಮ್ಮದ್ ಹುಸೇನ್ ಗುಂಡಣ್ಣ ಮಾತನಾಡಿ ಈ ಸಂದರ್ಭದಲ್ಲಿ ಪಟ್ಟಣದಿಂದ  ಮಧ್ಯಾಹ್ನ 12 ಗಂಟೆಗೆ ನೂರಾರು ಬೈಕ್ ಸವಾರರು ಚಿಕ್ಕನಾಯಕನಹಳ್ಳಿ ಪಟ್ಟಣದ ನೆಹರೂ ಸರ್ಕಲ್ ನಿಂದ ಬೈಕ್ ಜಾಥಾ ಹೊರಟು ಕೇಬೀಕ್ರಾಸಿಗೆ ತಲುಪಿ  ತಿಪಟೂರಿನ ಜಾಥಾವನ್ನು ಸ್ವಾಗತಿಸಿ ಚಿಕ್ಕನಾಯಕನಹಳ್ಳಿ ಪಟ್ಟಣಕ್ಕೆ ಕರೆತರುವುದರ  ಮೂಲಕ ಈ ಜಾಥಾಕ್ಕೆ ಸಹಕಾರ ಕೊಡುವುದಾಗಿ ತಿಳಿಸಿದರು.

ತಾಲೂಕಿನ ರೈತಸಂಘದ ಅಧ್ಯಕ್ಷರಾದ ಹೊನ್ನೆಬಾಗಿ ಉಮೇಶ್ ಹಾಗೂ ಆಮ್ ಆದ್ಮೀ ಪಕ್ಷದ ಅಧ್ಯಕ್ಷರಾದ ಲಿಂಗರಾಜು ಮಾತನಾಡಿ ಈ ಜಾಥಾಕ್ಕೆ ತಾಲೂಕಿನ ಎಲ್ಲಾ ಸಂಘ ಸಂಸ್ಥೆಗಳು ರೈತರು ಸಾರ್ವಜನಿಕರು ಸಹಕಾರಕೊಡಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಾಕೀರ್ ಹುಸೇನ್ ಮತ್ತಿತರರು ಭಾಗವಹಿಸಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...