ವಿಷಯಕ್ಕೆ ಹೋಗಿ

ವಿದ್ಯುತ್ ವಿತರಣಾ ಕೇಂದ್ರದ ಯೋಜನೆ ಬಗ್ಗೆ ತಕರಾರಿಲ್ಲ ,ಆದರೆ ಡಿಂಕನಹಳ್ಳಿಯ ಯೋಜಿತ ಸ್ಥಳದಲ್ಲಿ ಮಾತ್ರ ಬೇಡ : ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು ಆಗ್ರಹ

ರೈತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು
ಹುಳಿಯಾರು: ಹೋಬಳಿಯ ಕೋರಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿಂಕನಹಳ್ಳಿಯಲ್ಲಿ ಉದ್ದೇಶಿತ 400 ಕೆವಿ ವಿದ್ಯುತ್ ಸ್ವಿಚ್ಚಿಂಗ್ ಸ್ಟೇಷನ್ ಸ್ಥಾಪಿಸುವುದರ ಬಗ್ಗೆ ರೈತರು ವಿರೋಧ ವ್ಯಕ್ತಪಡಿಸಿದ್ದು, ಸುಮಾರು 300ರಷ್ಟು ರೈತರು ತಮ್ಮ ಸಮಸ್ಯೆಗಳ ಬಗ್ಗೆ ಮಾಜಿ ಶಾಸಕ ಸಿ.ಬಿ ಸುರೇಶ್ ಬಾಬು ಅವರ ಬಳಿ ತಮ್ಮ ಅಹವಾಲು ಸಲ್ಲಿಸಿ, ಸಾಧಕಬಾಧಕಗಳ ಬಗ್ಗೆ ಚರ್ಚೆ ನಡೆಸಿದ ಘಟನೆ ಡಿಂಕನಹಳ್ಳಿ ತೋಟದ ಆವರಣದಲ್ಲಿ  ಮಂಗಳವಾರ ಜರುಗಿತು.
ಸಮಸ್ಯೆ ಏನು:ಡಿಂಕನಹಳ್ಳಿಯಲ್ಲಿ 400 ಕೆವಿ ಸ್ವಿಚಿಂಗ್ ಸ್ಟೇಷನ್ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಸದರಿ ಯೋಜನೆಗೆ ಅಗತ್ಯವಿರುವ ಜಮೀನು ನೀಡಲು ಗ್ರಾಮಸ್ಥರು ತಕರಾರು ತೆಗೆದಿದ್ದು, ಹಾಲಿ ಯೋಜನೆಗೆ ಉದ್ದೇಶಿಸಲಾಗಿರುವ ಭೂಮಿ ಕೃಷಿ ಯೋಗ್ಯವಾಗಿದ್ದು,ಈ ಭೂಮಿಯನ್ನು ಸ್ವಾಧೀನಪಡಿಸಿಕೊಂಡಲ್ಲಿ ರೈತರುಗಳ ಜೀವನಕ್ಕೆ ತೊಂದರೆಯಾಗಲಿದ್ದು,ಇದರ ಬದಲು  ಇಲ್ಲಿಯೇ ಆಗಲಿ ಅಥವಾ ತಾಲೂಕಿನ ಬೇರೆ ಎಲ್ಲಿಯಾದರೂ ಆಗಲೇ ಕೃಷಿಗೆ ಯೋಗ್ಯವಲ್ಲದ ಬಂಜರು ಭೂಮಿಯನ್ನು ಆಯ್ಕೆ ಮಾಡಿಕೊಂಡು ಯೋಜನೆ ಅನುಷ್ಠಾನಗೊಳಿಸುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದು ಇದಕ್ಕಾಗಿ ಮಾಜಿ ಶಾಸಕರು ತಮ್ಮ ಹೋರಾಟಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಹಲವರು ರೈತರ ಇಲ್ಲಿನ ಸಮಸ್ಯೆಗಳ ಬಗ್ಗೆ ಮಾತನಾಡಿ ಯೋಜನೆಗೆ ಭೂಮಿ ನೀಡಲು ರೈತರು ವಿರೋಧ  ವ್ಯಕ್ತಪಡಿಸಿದ್ದು ಈಗಾಗಲೇ ಹಲವು ರೈತರು ಜಿಲ್ಲಾಧಿಕಾರಿಗಳಿಗೆ ನಾನು ಭೂಮಿಯನ್ನು ನೀಡಲು ಒಪ್ಪಿರುವುದಿಲ್ಲ ಎಂದು ತಕರಾರು ಅರ್ಜಿ ಸಲ್ಲಿಸಿದ್ದಾರೆ. ಡಿಂಕನಹಳ್ಳಿ ಗ್ರಾಮದ ಶಾಲೆಯ ಮುಂಭಾಗದ ಸರ್ವೇ ನಂಬರ್ 45, 46, 47 ರಲ್ಲಿ 400ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ಸಂಬಂಧಿಸಿದಂತೆ ತಹಸೀಲ್ದಾರ್ ಕಚೇರಿಯಲ್ಲಿ, ಜಿಲ್ಲಾಧಿಕಾರಿಗಳ ಸಭೆಯಲ್ಲಿ ಭೂಮಾಲಿಕರ ರೈತರ ಸಭೆ ಕರೆದಿದ್ದು ಸಭೆಗೆ ಹಾಜರಾದ ರೈತರ ಸಹಿಯನ್ನು ತೋರಿಸಿ ರೈತರುಗಳು ಭೂಮಿ ನೀಡಲು ಒಪ್ಪಿರುತ್ತಾರೆ ಎಂದು ದಾಖಲೆ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.
ಸದರಿ ಭೂಮಿಯು ಫಲವತ್ತಾದ, ಸಂಪದ್ಭರಿತವಾದ ಕೃಷಿಯೋಗ್ಯ ಭೂಮಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 234ಕ್ಕೆ ಹೊಂದಿಕೊಂಡಿದ್ದು ಬೆಲೆಬಾಳುವ ಆಸ್ತಿ ಆಗಿರುತ್ತದೆ. ಸದರಿ ಸದರಿ ಭೂಮಿಯ ಪಕ್ಕ ಶಾಲೆ, ಡೈರಿ ಹಾಗೂ ವಾಸದ ಮನೆಗಳಿದ್ದು ಸುತ್ತಾ ಎಂಟು ಹಳ್ಳಿಗಳು ಇದರ ವ್ಯಾಪ್ತಿಗೆ ಒಳಪಡುತ್ತದೆ.ಸ್ಥಳದಲ್ಲಿ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಿದಲ್ಲಿ ಇಲ್ಲಿನ ನಿವಾಸಿಗಳಿಗೆ ಆರೋಗ್ಯ ಸಮಸ್ಯೆ ಎದುರಾಗುತ್ತದೆ ಎಂದು ಸಮಸ್ಯೆ ಬಿಚ್ಚಿಟ್ಟರು.

ಸ್ವಿಚ್ಚಿಂಗ್ ಸ್ಟೇಷನ್ ಸ್ಥಾಪಿಸಲು ಭೂಸ್ವಾಧೀನಕ್ಕೆ ಮುಂದಾಗಿದ್ದು, 2019 ರಿಂದಲೂ ಇದಕ್ಕೆ ಗ್ರಾಮಸ್ಥರ ವಿರೋಧವಿದ್ದು ಸದರಿ ಗ್ರಾಮದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ ಕೋರಿ ಈಗಾಗಲೇ 17 ಮಂದಿ ತಿಪಟೂರಿನ ಭೂಸ್ವಾಧೀನಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಪ್ರತಿವಾದಿ ಮಾಡಿ ಪ್ರಕರಣ ದಾಖಲಿಸಿದ್ದಾರೆ.ಸ್ಥಾವರ ಸ್ಥಾಪಿಸುವ ಸ್ಥಳದಿಂದ 400ರಿಂದ 800 ಮೀಟರ್ ಅಂತರದಲ್ಲಿ ಡಿಂಕನಹಳ್ಳಿ,ಅರಳಿಕೆರೆ,ಸಾಲಾಪುರ, ಅಜ್ಜನ ಪಾಳ್ಯ, ಮೋಟಿಹಳ್ಳಿ, ಚಿಕ್ಕ ಎಣ್ಣೆಗೆರೆ, ದೊಡ್ಡ ಎಣ್ಣೆಗೆರೆ, ಉಪ್ಪಿನ ಕಟ್ಟೆ, ಕೋರಗೆರೆ, ಹನುಮಂತಪುರ, ಎಮ್ಮೆಹಟ್ಟಿ,ಅರಳಿಕೆರೆ ಕಾಲೋನಿ ಹೀಗೆ ಹತ್ತು-ಹನ್ನೆರಡು ಹಳ್ಳಿಗಳಿದ್ದು ಸ್ಥಾವರ ಇಲ್ಲಿಯೇ ಸ್ಥಾಪಿಸಿದಲ್ಲಿ ಸುಮಾರು ಐದು ಸಾವಿರ ಕುಟುಂಬಗಳಿಗೆ  ತೊಂದರೆ ಉಂಟಾಗಲಿದೆ. ಹತ್ತಿರದಲ್ಲಿಯೇ ಇರುವ ಶಾಲೆಗೆ, ಕೆಎಂಎಫ್ ಹಾಲಿನ ಡೈರಿಗೆ, ಕೃಷಿಗೆ ಜೀವನಾಧಾರವಾಗಿರುವ ತೆಂಗು ಅಡಿಕೆಗೆ ತೊಂದರೆಯಾಗಲಿದೆ ಎಂದು ಸುಮಾರು ರೈತರು ದೂರಿದರು.
ಇದಕ್ಕೆ ಸ್ಪಂದಿಸಿದ ಮಾಜಿ ಶಾಸಕ ಸಿ.ಬಿ. ಸುರೇಶ್ ಬಾಬು ಕ್ಷೇತ್ರದ ಜನತೆಗೆ ಸಮಸ್ಯೆ ಆದಲ್ಲಿ ಅವರಿಗೆ ಬೆಂಬಲವಾಗಿ ನಿಲ್ಲಬೇಕು ಎನ್ನುವ ಉದ್ದೇಶದಿಂದ ತಾವಿಲ್ಲಿಗೆ ಬಂದಿದ್ದು,ಡಿಂಕನಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ 400ಕೆವಿ ಸ್ವಿಚಿಂಗ್ ಸ್ಟೇಷನ್‌ಗೆ ನಮ್ಮದಾಗಲಿ,ಇಲ್ಲಿನ ರೈತರದ್ದಾಗಲಿ ಯಾವುದೇ ವಿರೋಧವಿಲ್ಲ, ಆದರೆ ಉದ್ದೇಶಿತ ಸ್ಥಳದ ಮೊದಲು ಬೇರೆಡೆ ಸ್ಥಾಪಿಸಿ ಎನ್ನುವುದಷ್ಟೆ ನಮ್ಮ ಕೋರಿಕೆ.ಯೋಜನೆಯ ಉದ್ದೇಶಿತ ಸ್ಥಳದ ಬಗ್ಗೆ ಮಾತ್ರವೇ ನಮ್ಮದು ತಕರಾರಿದ್ದು ಇಲ್ಲಿಯೇ ಆಗಲಿ ಅಥವಾ ತಾಲೂಕಿನ ಯಾವುದೇ ಸ್ಥಳದಲ್ಲಿಯೇ ಆಗಲಿ  ಬಯಲು ಪ್ರದೇಶದಲ್ಲಿನ ಬರಡು ಭೂಮಿಯಲ್ಲಿ ಮಾಡಿ ಎನ್ನುವುದು ನಮ್ಮ ಅಹವಾಲಾಗಿದೆ. ಇಲ್ಲಿನ ರೈತರಿಗೆ ತಾತ ಮುತ್ತಾತನ ಕಾಲದಿಂದಲೂ ಅಂಗೈಯಷ್ಟು ಜಮೀನಿದ್ದು ಇಲ್ಲಿನ ಜನರು ಇದನ್ನೇ ನಂಬಿ ಜೀವನ ಸಾಗಿಸುತ್ತಿದ್ದು, ಇವರನ್ನು ಇಲ್ಲಿಂದ ಒಕ್ಕಲೆಬ್ಬಿಸ ಬೇಡಿ ಎನ್ನುವುದಷ್ಟೇ ನಮ್ಮ ಬೇಡಿಕೆ.
ಹಾಗಾಗಿ ಸಚಿವರು ತಮ್ಮ ವೈಯಕ್ತಿಕ ನಿಲುವನ್ನು ಬದಲಿಸಿ ಇಲ್ಲಿನ ನಿವಾಸಿಗಳ ಕ್ಷೇಮಾಭಿವೃದ್ಧಿಯನ್ನಷ್ಟೇ ಗಮನದಲ್ಲಿಟ್ಟುಕೊಂಡು ಸದರಿ ಯೋಜನೆಯನ್ನು ಬೇರೆಡೆಗೆ ಸ್ಥಳಾಂತರಿಸಲು ಮುಂದಾಗಬೇಕು ಎಂದರು.
ಯೋಜನೆಗೆ ಅನೇಕ ರೈತರು ಭೂಮಿ ನೀಡಿಲ್ಲ, ಭೂಮಿ ನೀಡಿರುವ ಬಗ್ಗೆ ಯಾವುದೇ  ದಾಖಲೆಗಳಿಗೆ ಸಹಿ ಸಹ ಹಾಕಿಲ್ಲ. ಹಾಗಾಗಿ ಅವರವರ ಜಮೀನನ್ನು ಆಬದ್ದು ಮಾಡಿಕೊಳ್ಳಿ ಇದಕ್ಕೆ ಪೊಲೀಸರು ಯಾಕೆ ತಕರಾರು ಮಾಡುತ್ತಾರೆ ಎಂದು ಪ್ರಶ್ನಿಸಿದರು.
ಸದರಿ ಸಭೆಯಲ್ಲಿ ಅರಳಿಕೆರೆ ಗಂಗಾಧರಪ್ಪ,ಡಿಂಕನಹಳ್ಳಿ ಮಾಸ್ಟರ್ ರಾಜಣ್ಣ,ಅರಳಿಕೆರೆ ಪ್ರಕಾಶ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯೆ ಹೇಮಕ್ಕ ಮಾತನಾಡಿದರು.ಈ ಸಂದರ್ಭದಲ್ಲಿ ಹಂದನಕೆರೆ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರಾಮಚಂದ್ರಪ್ಪ, ದೊಡ್ಡ ಎಣ್ಣೆಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯಾ ಮಂಜುನಾಥ್, ಉಪಾಧ್ಯಕ್ಷೆ ಅನುಸೂಯಮ್ಮ,ಸದಸ್ಯರಾದ ಕಾವ್ಯ ಸೇರಿದಂತೆ ಸುತ್ತಲಿನ ಹತ್ತಾರು ಹಳ್ಳಿಯ ನೂರಾರು ರೈತರು ಪಾಲ್ಗೊಂಡಿದ್ದರು
-----------------------------
ಇಲ್ಲಿನ ರೈತರ ಸಮಸ್ಯೆಗೆ ನಾವು ಸ್ಪಂದಿಸಿದ್ದು ಕಾನೂನು ರೀತಿಯ ಹೋರಾಟಕ್ಕೆ ನಾವು ಸಿದ್ಧರಿದ್ದು ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿಗಳಾದ ದೇವೇಗೌಡರ ಗಮನಕ್ಕೆ ಸಹ ಈ ಜನರ ಸಮಸ್ಯೆ ತಂದಿದ್ದು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಳೆ ನಡೆಯಲಿರುವ ಸೆಷನ್ ನಲ್ಲಿ ಮುಖ್ಯಮಂತ್ರಿಗಳಿಗೆ ಚರ್ಚಿಸಿ ಇದಕ್ಕೊಂದು ಪರಿಹಾರ ಕಂಡುಕೊಳ್ಳಲಿದ್ದುಅಲ್ಲಿಯವರೆಗೂ ಸಮಾಧಾನದಿಂದಿರಿ:ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು
---------------------------
ಫೋನ್ ಮುಖಾಂತರ ಕುಮಾರಸ್ವಾಮಿ ಮನವಿ: ಡಿಂಕನಹಳ್ಳಿ ರೈತರ ಸಮಸ್ಯೆ ಬಗ್ಗೆ ಮಾಜಿ ಶಾಸಕ ಸುರೇಶ್ ಬಾಬು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಸುಮಾರು 300 ರಷ್ಟು ನೆರೆದಿದ್ದ ರೈತರ ಸಮ್ಮುಖದಲ್ಲಿ ಫೋನ್ ಮುಖಾಂತರ ಚರ್ಚಿಸಿದ್ದು, ಕುಮಾರಸ್ವಾಮಿಯವರು ಸಹ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ, ಈ ಬಗ್ಗೆ ತಾವು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಇದಕ್ಕೊಂದು ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.
--------------------------
ಸದರಿ ಸ್ಥಳದಲ್ಲಿರುವ ನಮ್ಮ ಜಮೀನುಗಳಿಂದ ರೈತರು ಆಬದ್ದು ಮಾಡಲು ಹೋದರೆ ಪೊಲೀಸರು ತಡೆಯುತ್ತಿದ್ದಾರೆ. ಮಳೆಗಾಲದಲ್ಲಿ ಕೃಷಿ ಭೂಮಿ ಹಸನು ಮಾಡಲು ಹೋದರೂ ಕೂಡ ತಡೆಯುಂಟುಮಾಡುತ್ತಿದ್ದಾರೆ.ನಮ್ಮ ಜಮೀನಿನಲ್ಲಿ ನಾವು ಮಣ್ಣು ತೆಗೆಯಲು ಹೋದರು ಬಿಡುತ್ತಿಲ್ಲ: ಗ್ರಾಮಸ್ಥರ ದೂರು









ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.